Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಪೇಂದ್ರ ಹೊಸ ಚಿತ್ರಕ್ಕೆ ರಾಮ್​ ಗೋಪಾಲ್ ವರ್ಮ ನಿರ್ದೇಶನ; ಗ್ಯಾಂಗ್​ಸ್ಟರ್​ ಕಥೆಯಲ್ಲಿ ಉಪ್ಪಿ

ಸಿನಿಮಾಗಳನ್ನು ರಾ ಆಗಿ ಮಾಡೋಕೆ ಆರ್​ಜಿವಿ ಎತ್ತಿದ ಕೈ. ಕ್ರೈಮ್​ ಥ್ರಿಲ್ಲರ್​ ಮಾದರಿಯ ಹಲವು ಸಿನಿಮಾಗಳನ್ನು ಮಾಡಿದ್ದಾರೆ. ಈಗ ಅವರು ಗ್ಯಾಂಗ್​ಸ್ಟರ್​ ಕಥೆ ಹೇಳುತ್ತಿರುವುದರಿಂದ ಸಹಜವಾಗಿಯೇ ಕುತೂಹಲ ಹುಟ್ಟಿದೆ.

ಉಪೇಂದ್ರ ಹೊಸ ಚಿತ್ರಕ್ಕೆ ರಾಮ್​ ಗೋಪಾಲ್ ವರ್ಮ ನಿರ್ದೇಶನ; ಗ್ಯಾಂಗ್​ಸ್ಟರ್​ ಕಥೆಯಲ್ಲಿ ಉಪ್ಪಿ
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on:Mar 25, 2022 | 4:20 PM

ರಾಮ್​ ಗೋಪಾಲ್​ ವರ್ಮ (Ram Gopal Varma) ಅವರು ನಿರ್ದೇಶನದಲ್ಲಿ ದೊಡ್ಡ ಮಟ್ಟದ ಹೆಸರು ಮಾಡಿದ್ದಾರೆ. ಅವರು ಸ್ಯಾಂಡಲ್​​ವುಡ್​ ಸ್ಟಾರ್ ನಟರ ಜತೆ ಕನ್ನಡದಲ್ಲೂ ಸಿನಿಮಾ ಮಾಡಿದ್ದಾರೆ. ಈಗ ಉಪೇಂದ್ರ (Upendra) ಜತೆ ಆರ್​ಜಿವಿ (RJV) ಕೈ ಜೋಡಿಸಿದ್ದಾರೆ. ಇಬ್ಬರೂ ಸೇರಿ ಹೊಸ ಸಿನಿಮಾ ಮಾಡುತ್ತಿದ್ದು, ಈ ಬಗ್ಗೆ ಅಧಿಕೃತ ಘೋಷಣೆ ಆಗಿದೆ. ಟ್ವಿಟರ್​ನಲ್ಲಿ ರಾಮ್​ ಗೋಪಾಲ್ ವರ್ಮ ಈ ಬಗ್ಗೆ ಅನೌನ್ಸ್​ಮೆಂಟ್​ ಮಾಡಿದ್ದಾರೆ. ವಿಶೇಷ ಎಂದರೆ, ಭಾರತದ ದೊಡ್ಡ ಗ್ಯಾಂಗ್​ಸ್ಟರ್​ ಕಥೆಯನ್ನು ಸಿನಿಮಾದಲ್ಲಿ ಹೇಳಲಾಗುತ್ತಿದೆ. ಸಿನಿಮಾ ಬಗ್ಗೆ ರಿಲೀಸ್ ಆಗಿರುವ ಚಿಕ್ಕ ವಿಡಿಯೋ ತುಣುಕು ಸಾಕಷ್ಟು ಕುತೂಹಲ ಹುಟ್ಟುಹಾಕಿದೆ.

ಸಿನಿಮಾಗಳನ್ನು ರಾ ಆಗಿ ಮಾಡೋಕೆ ಆರ್​ಜಿವಿ ಎತ್ತಿದ ಕೈ. ಕ್ರೈಮ್​ ಥ್ರಿಲ್ಲರ್​ ಮಾದರಿಯ ಹಲವು ಸಿನಿಮಾಗಳನ್ನು ಮಾಡಿದ್ದಾರೆ. ಈಗ ಅವರು ಗ್ಯಾಂಗ್​ಸ್ಟರ್​ ಕಥೆ ಹೇಳುತ್ತಿರುವುದರಿಂದ ಸಹಜವಾಗಿಯೇ ಕುತೂಹಲ ಹುಟ್ಟಿದೆ. ‘ನನ್ನ ಹೊಸ ಸಿನಿಮಾ ಘೋಷಿಸಲು ಸಂತೋಷವಾಗುತ್ತಿದೆ. ಭಾರತದ ಕ್ರಿಮಿನಲ್ ಇತಿಹಾಸದಲ್ಲಿ ವಿಸ್ಮಯಕಾರಿಯಾಗಿ ಹಾಗೂ ವಿಶಿಷ್ಟ ದರೋಡೆಕೋರ ಎನಿಸಿಕೊಂಡಿರುವ ವ್ಯಕ್ತಿಯ ಜೀವನ ಆಧರಿಸಿ ಸಿನಿಮಾ ಸಿದ್ಧಗೊಳ್ಳುತ್ತಿದೆ. ಇದಕ್ಕೆ ‘ಆರ್​’ ಎಂದು ಶೀರ್ಷಿಕೆ ಇಡಲಾಗಿದೆ. ಈ ಚಿತ್ರವನ್ನು ಎ ಸ್ಕ್ವೇರ್ ಪ್ರೊಡಕ್ಷನ್ಸ್ ನಿರ್ಮಿಸಲಿದೆ’ ಎಂದು ರಾಮ್​ ಗೋಪಾಲ್​ ವರ್ಮ ಬರೆದುಕೊಂಡಿದ್ದಾರೆ.

ಹಂಚಿಕೊಂಡಿರುವ ಸಣ್ಣ ವಿಡಿಯೋ ತುಣುಕಿನಲ್ಲಿ ಉಪೇಂದ್ರ ಅವರು ಚಾಕು ಹಿಡಿದು ಕಾಣಿಸಿಕೊಂಡಿದ್ದಾರೆ. ಅಲ್ಲದೆ, ವಿಡಿಯೋದಲ್ಲಿ ಅವರು ಚಾಕುಗೆ ಮುತ್ತು ಕೊಡುತ್ತಿದ್ದಾರೆ. ಮುಳ್ಳು ಬೇಲಿಗಳ ಮಧ್ಯೆ ‘ಆರ್​’ ಚಿತ್ರದ ಶೀರ್ಷಿಕೆ ಇದೆ. ಅಲ್ಲದೆ, ಬ್ಯಾಕ್​ಗ್ರೌಂಡ್​ನಲ್ಲಿ ರಕ್ತದ ಕಲೆ ಇದೆ. ಈ ಮೂಲಕ ಸಿನಿಮಾದಲ್ಲಿ ರಕ್ತದೋಕುಳಿ ಇರಲಿದೆ ಎಂಬುದು ಪಕ್ಕಾ ಆಗಿದೆ.

ಈ ಮೊದಲು ರಾಮ್​ ಗೋಪಾಲ್​ ವರ್ಮ ಅವರು ಶಿವರಾಜ್​ಕುಮಾರ್​ಗೆ ಆ್ಯಕ್ಷನ್​ ಕಟ್​ ಹೇಳಿದ್ದರು. ‘ಕಿಲ್ಲಿಂಗ್​ ವೀರಪ್ಪನ್​’ ಸಿನಿಮಾ ಆರ್​ಜಿವಿ ಅವರ ಮೊದಲ ಕನ್ನಡ ಸಿನಿಮಾ. ತೆಲುಗು ಭಾಷೆಯಲ್ಲೂ ಚಿತ್ರ ರಿಲೀಸ್ ಆಗಿತ್ತು. ಆ ಬಳಿಕ ಡಾಲಿ ಧನಂಜಯ ನಟನೆಯ ‘ಭೈರವ ಗೀತ’ ಚಿತ್ರವನ್ನು ಆರ್​ಜಿವಿ ನಿರ್ಮಾಣ ಮಾಡಿದ್ದರು. ಇದು ಕನ್ನಡ ಹಾಗೂ ತೆಲುಗು ಭಾಷೆಯಲ್ಲಿ ರಿಲೀಸ್​ ಆಗಿತ್ತು. ಈಗ ಉಪೇಂದ್ರ ಜತೆ ಅವರು ಸಿನಿಮಾ ಮಾಡುತ್ತಿರುವುದು ವಿಶೇಷ. ಈ ಚಿತ್ರದಲ್ಲಿ ಯಾರೆಲ್ಲ ನಟಿಸಲಿದ್ದಾರೆ? ಇದು ಯಾರ ಬಗ್ಗೆ ಮಾಡುತ್ತಿರುವ ಸಿನಿಮಾ, ತಾಂತ್ರಿಕ ವರ್ಗ ಹೇಗಿರಲಿದೆ ಎಂಬ ವಿಚಾರ ಇನ್ನಷ್ಟೇ ತಿಳಿದುಬರಬೇಕಿದೆ.

ಇದನ್ನೂ ಓದಿ: ಹುಡುಗಿಯ​ ಅಂಗದ ಬಗ್ಗೆ ಮಾತನಾಡಿ ಕಾಫಿ ಶಾಪ್​ನಲ್ಲಿ ಕೆನ್ನೆಗೆ ಏಟು ತಿಂದ ರಾಮ್​ ಗೋಪಾಲ್​ ವರ್ಮಾ

‘ಪುನೀತ್​ ಸಾವಿನಿಂದ ಕಟು ಸತ್ಯ ಬಯಲಾಗಿದೆ’: ಆತಂಕದಲ್ಲೇ ಅನಿಸಿಕೆ ಹಂಚಿಕೊಂಡ ರಾಮ್​ ಗೋಪಾಲ್​ ವರ್ಮಾ

Published On - 2:33 pm, Fri, 25 March 22

‘ಮೇ 9ಕ್ಕೆ ತಂದೆ ಕನಸು ನನಸಾಗುತ್ತೆ, ನನ್ನ ಹೊಸ ಜೀವನ ಶುರು’: ಚಂದನ್ ಶೆಟ್ಟಿ
‘ಮೇ 9ಕ್ಕೆ ತಂದೆ ಕನಸು ನನಸಾಗುತ್ತೆ, ನನ್ನ ಹೊಸ ಜೀವನ ಶುರು’: ಚಂದನ್ ಶೆಟ್ಟಿ
ಕೇವಲ 10 ರನ್​​ಗಳಿಂದ ಶತಕ ವಂಚಿತರಾದ ಶುಭ್​ಮನ್ ಗಿಲ್
ಕೇವಲ 10 ರನ್​​ಗಳಿಂದ ಶತಕ ವಂಚಿತರಾದ ಶುಭ್​ಮನ್ ಗಿಲ್
ಮಂಗಳೂರು: ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದ ಮುಂಭಾಗ ಬೆಂಕಿ ಆಟ
ಮಂಗಳೂರು: ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದ ಮುಂಭಾಗ ಬೆಂಕಿ ಆಟ
ರಾಂಬನ್‌ನಲ್ಲಿ ಭೂಕುಸಿತ; ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಬಂದ್
ರಾಂಬನ್‌ನಲ್ಲಿ ಭೂಕುಸಿತ; ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಬಂದ್
ತಾನೇ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿ ದೂರು ನೀಡಿದ ವಿಂಗ್ ಕಮಾಂಡರ್: ವಿಡಿಯೋ
ತಾನೇ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿ ದೂರು ನೀಡಿದ ವಿಂಗ್ ಕಮಾಂಡರ್: ವಿಡಿಯೋ
ದಾಖಲಾತಿ ಹೆಚ್ಚಳಕ್ಕೆ ಸರ್ಕಾರಿ ಶಾಲೆ ಶಿಕ್ಷಕರಿಂದ ಡಿಫರೆಂಟ್ ಕ್ಯಾಂಪೇನ್
ದಾಖಲಾತಿ ಹೆಚ್ಚಳಕ್ಕೆ ಸರ್ಕಾರಿ ಶಾಲೆ ಶಿಕ್ಷಕರಿಂದ ಡಿಫರೆಂಟ್ ಕ್ಯಾಂಪೇನ್
ಮೋದಿ ತಾತ ಕೊಟ್ಟ ನವಿಲುಗರಿ ಹಿಡಿದು ಕುಣಿದಾಡಿದ ಜೆಡಿ ವ್ಯಾನ್ಸ್ ಮಕ್ಕಳು
ಮೋದಿ ತಾತ ಕೊಟ್ಟ ನವಿಲುಗರಿ ಹಿಡಿದು ಕುಣಿದಾಡಿದ ಜೆಡಿ ವ್ಯಾನ್ಸ್ ಮಕ್ಕಳು
ಓಂ ಪ್ರಕಾಶ್​ ಹತ್ಯೆ: ಏನಿದು ಸ್ಕಿಜೋಫ್ರೇನಿಯಾ ರೋಗ? ಎಷ್ಟು ಡೇಂಜರ್​?
ಓಂ ಪ್ರಕಾಶ್​ ಹತ್ಯೆ: ಏನಿದು ಸ್ಕಿಜೋಫ್ರೇನಿಯಾ ರೋಗ? ಎಷ್ಟು ಡೇಂಜರ್​?
ಕಾರು ಅಡ್ಡಗಟ್ಟಿ ಮಧ್ಯದ ಬೆರಳು ತೋರಿಸಿ ನಿಂದಿನಿಸಿದ ಆಟೋ ಚಾಲಕ
ಕಾರು ಅಡ್ಡಗಟ್ಟಿ ಮಧ್ಯದ ಬೆರಳು ತೋರಿಸಿ ನಿಂದಿನಿಸಿದ ಆಟೋ ಚಾಲಕ
ನಾಸಿಕ್‌ನಲ್ಲಿ ಕುಡಿಯುವ ನೀರಿಗಾಗಿ ಜೀವವನ್ನೇ ಪಣಕ್ಕಿಟ್ಟು ಬಾವಿಗಿಳಿದ ಮಹಿಳೆ
ನಾಸಿಕ್‌ನಲ್ಲಿ ಕುಡಿಯುವ ನೀರಿಗಾಗಿ ಜೀವವನ್ನೇ ಪಣಕ್ಕಿಟ್ಟು ಬಾವಿಗಿಳಿದ ಮಹಿಳೆ