AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಮಲ್ ಹಾಸನ್ ಬಳಿಕ ಕನ್ನಡಿಗರನ್ನು ಕೆಣಕಿದ ನಿರ್ದೇಶಕ ರಾಮ್ ಗೋಪಾಲ್ ವರ್ಮಾ

ಕನ್ನಡ ಭಾಷೆ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿರುವ ಕಮಲ್ ಹಾಸನ್ ಅವರು ಕರುನಾಡ ಜನತೆಯ ಕೆಂಗಣ್ಣಿಗೆ ಗುರಿ ಆಗಿದ್ದಾರೆ. ಅವರ ಸಿನಿಮಾವನ್ನು ಬ್ಯಾನ್ ಮಾಡಬೇಕು ಎಂಬುದು ಹೊಸ ರೀತಿ ಗೂಂಡಾಗಿರಿ ಎಂದು ರಾಮ್ ಗೋಪಾಲ್ ವರ್ಮಾ ಹೇಳಿದ್ದಾರೆ. ಆ ಮೂಲಕ ಅವರು ಕೂಡ ಕನ್ನಡಿಗರನ್ನು ಕೆಣಕಿದ್ದಾರೆ.

ಕಮಲ್ ಹಾಸನ್ ಬಳಿಕ ಕನ್ನಡಿಗರನ್ನು ಕೆಣಕಿದ ನಿರ್ದೇಶಕ ರಾಮ್ ಗೋಪಾಲ್ ವರ್ಮಾ
Ram Gopal Varma, Kamal Haasan
ಮದನ್​ ಕುಮಾರ್​
|

Updated on: Jun 02, 2025 | 6:21 PM

Share

ನಟ ಕಮಲ್ ಹಾಸನ್ (Kamal Haasan) ವಿರುದ್ಧ ಕರ್ನಾಟಕದಾದ್ಯಂತ ವಿರೋಧ ವ್ಯಕ್ತವಾಗುತ್ತಿದೆ. ಅವರ ಸಿನಿಮಾವನ್ನು ಬ್ಯಾನ್ ಮಾಡಬೇಕು ಎಂಬ ಒತ್ತಾಯ ಕೇಳಿಬಂದಿದೆ. ಕಮಲ್ ಹಾಸನ್ ಅಭಿನಯದ ‘ಥಗ್ ಲೈಫ್’ (Thug Life) ಸಿನಿಮಾ ಜೂನ್ 5ರಂದು ಬಿಡುಗಡೆ ಆಗಬೇಕಿದೆ. ಆದರೆ ಈ ಸಿನಿಮಾವನ್ನು ಕರ್ನಾಟಕದಲ್ಲಿ ತೆರೆ ಕಾಣಿಸಲು ಬಿಡಬಾರದು ಎಂದು ಕನ್ನಡಪರ ಸಂಘಟನೆಗಳು ಪಟ್ಟು ಹಿಡಿದಿವೆ. ‘ತಮಿಳಿನಿಂದಲೇ ಕನ್ನಡ ಹುಟ್ಟಿದ್ದು’ ಎಂದು ಕಮಲ್ ಹಾಸನ್ ಹೇಳಿದ್ದೇ ಈ ವಿವಾದಕ್ಕೆ ಕಾರಣ. ಈಗ ಈ ಎಲ್ಲ ಘಟನೆಗಳ ಬಗ್ಗೆ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಪ್ರತಿಕ್ರಿಯಿಸಿದ್ದಾರೆ. ಕಮಲ್ ಬಳಿಕ ರಾಮ್ ಗೋಪಾಲ್ ವರ್ಮಾ (Ram Gopal Varma) ಕೂಡ ಕನ್ನಡಿಗರನ್ನು ಕೆಣಕಿದ್ದಾರೆ.

ಸೋಶಿಯಲ್ ಮೀಡಿಯಾದಲ್ಲಿ ರಾಮ್ ಗೋಪಾಲ್ ವರ್ಮಾ ಅವರು ಆ್ಯಕ್ಟೀವ್ ಆಗಿರುತ್ತಾರೆ. ತಮಗೆ ಸಂಬಂಧ ಇಲ್ಲದ ವಿಚಾರಕ್ಕೂ ಅವರು ಪ್ರತಿಕ್ರಿಯೆ ನೀಡಿ ವಿವಾದ ಸೃಷ್ಟಿಸುತ್ತಾರೆ. ಕರ್ನಾಟಕದಲ್ಲಿ ಕಮಲ್ ಹಾಸನ್ ನಟನೆಯ ಸಿನಿಮಾವನ್ನು ಬ್ಯಾನ್ ಮಾಡಬೇಕು ಎಂಬ ಒತ್ತಾಯ ಕೇಳಿಬಂದಿರುವುದನ್ನು ರಾಮ್ ಗೋಪಾಲ್ ವರ್ಮಾ ಅವರು ಖಂಡಿಸಿದ್ದಾರೆ.

‘ಅಸಹಿಷ್ಣುತೆಯೇ ಪ್ರಜಾಪ್ರಭುತ್ವದ ಹೊಸ ಹೆಸರು. ಸತ್ಯಾಂಶ ಏನೇ ಇದ್ದರೂ ಕೂಡ, ಕಮಲ್ ಹಾಸನ್ ಕ್ಷಮೆ ಕೇಳದಿದ್ದರೆ ಕರ್ನಾಟಕದಲ್ಲಿ ಥಗ್​ ಲೈಫ್ ಸಿನಿಮಾವನ್ನು ಬ್ಯಾನ್ ಮಾಡಬೇಕು ಅಂತ ಬೆದರಿಕೆ ಹಾಕುವುದು ಹೊಸ ಥರದ ಗೂಂಡಾಗಿರಿ’ ಎಂದು ರಾಮ್ ಗೋಪಾಲ್ ವರ್ಮಾ ಟ್ವೀಟ್ ಮಾಡಿದ್ದಾರೆ. ಆದರೆ ಕೂಡಲೇ ಅದನ್ನು ಅವರು ಡಿಲೀಟ್ ಮಾಡಿದ್ದಾರೆ.

ಇದನ್ನೂ ಓದಿ
Image
ಕನ್ನಡದ ಬಗ್ಗೆ ಕಮಲ್ ಹಾಸನ್​ ಹೇಳಿಕೆ, ನಟ ಜಗ್ಗೇಶ್​ರಿಂದ ಪಾಠ
Image
ರಾಜ್ಯಸಭೆಗೆ ಕಮಲ್ ಹಾಸನ್; ಮೇಲ್ಮನೆ ಪ್ರವೇಶಕ್ಕೆ ನಾಮ ನಿರ್ದೇಶನ
Image
ಕಮಲ್ ಹಾಸನ್ ವಿವಾದ: ಕನ್ನಡಿಗರ ಕೆರಳಿಸಿದ ನಟನ​ ಚಿತ್ರಕ್ಕೆ ಸಂಕಷ್ಟ
Image
ಸೋನು ನಿಗಮ್ ಬೆನ್ನಲ್ಲೇ ಕಮಲ್ ಹಾಸನ್ ವಿವಾದ: ಕೆರಳಿ ಕೆಂಡವಾದ ಕನ್ನಡಿಗರು

ಸದ್ಯಕ್ಕಂತೂ ಕಮಲ್ ಹಾಸನ್ ಅವರು ಕ್ಷಮೆ ಕೇಳುವ ಮನಸ್ಸು ಮಾಡಿಲ್ಲ. ಸಿನಿಮಾ ಬ್ಯಾನ್ ಮಾಡಬಾರದು ಎಂದು ಅವರು ಕೋರ್ಟ್ ಮೊರೆ ಹೋಗಿದ್ದಾರೆ. ಕರ್ನಾಟಕದಲ್ಲಿ ಅವರ ವಿರುದ್ಧ ಟೀಕೆ ವ್ಯಕ್ತವಾಗುತ್ತಿದೆ. ಭಾಷೆಯ ವಿಷಯ ಆದ್ದರಿಂದ ಅನೇಕ ಸೆಲೆಬ್ರಿಟಿಗಳು ಕೂಡ ಕಮಲ್ ಹಾಸನ್ ಅವರನ್ನು ಖಂಡಿಸುತ್ತಿದ್ದಾರೆ. ರಚಿತಾ ರಾಮ್, ಸಾಧು ಕೋಕಿಲ, ಸುಮಲತಾ ಅಂಬರೀಷ್, ಸಾ.ರಾ. ಗೋವಿಂದು, ವಸಿಷ್ಠ ಸಿಂಹ ಮುಂತಾದವರು ಕಮಲ್ ಹೇಳಿಕೆಯನ್ನು ವಿರೋಧಿಸಿದ್ದಾರೆ.

ಇದನ್ನೂ ಓದಿ: ನಟಿ ಕಿಯಾರಾ ಬಿಕಿನಿ ಬಗ್ಗೆ ಕೆಟ್ಟದಾಗಿ ಪೋಸ್ಟ್ ಮಾಡಿದ ರಾಮ್ ಗೋಪಾಲ್ ವರ್ಮಾ

‘ಥಗ್ ಲೈಫ್’ ಸಿನಿಮಾಗೆ ಮಣಿರತ್ನಂ ಅವರು ನಿರ್ದೇಶನ ಮಾಡಿದ್ದಾರೆ. ನಿರ್ಮಾಣದಲ್ಲಿ ಕಮಲ್ ಹಾಸನ್ ಕೂಡ ಕೈ ಜೋಡಿಸಿದ್ದಾರೆ. ದೇಶದ ಪ್ರಮುಖ ನಗರಗಳಿಗೆ ತೆರಳಿ ಕಮಲ್ ಹಾಸನ್ ಅವರು ಪ್ರಚಾರ ಮಾಡಿದ್ದಾರೆ. ಆದರೆ ಕನ್ನಡದ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದರಿಂದ ಕರ್ನಾಟಕದಲ್ಲಿ ‘ಥಗ್ ಲೈಫ್’ ಸಿನಿಮಾಗೆ ವಿಘ್ನ ಎದುರಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ