RGV Twitter: ‘ರಾಜಮೌಳಿ ಹತ್ಯೆಗೆ ಸಂಚು ನಡೆದಿದೆ, ತಂಡ ಸಿದ್ಧವಾಗಿದೆ’; ರಾಮ್​ ಗೋಪಾಲ್​ ವರ್ಮಾ ಹೇಳಿಕೆ

Rajamouli | Ram Gopal Varma: ‘ರಾಜಮೌಳಿ ಅವರೇ.. ದಯವಿಟ್ಟು ಭದ್ರತೆ ಹೆಚ್ಚಿಸಿಕೊಳ್ಳಿ. ನಿಮ್ಮನ್ನು ಹತ್ಯೆ ಮಾಡಲು ತಂಡ ರಚಿಸಿಕೊಳ್ಳಲಾಗಿದೆ’ ಎಂದು ರಾಮ್​ ಗೋಪಾಲ್​ ವರ್ಮಾ ಟ್ವೀಟ್​ ಮಾಡಿದ್ದಾರೆ.

RGV Twitter: ‘ರಾಜಮೌಳಿ ಹತ್ಯೆಗೆ ಸಂಚು ನಡೆದಿದೆ, ತಂಡ ಸಿದ್ಧವಾಗಿದೆ’; ರಾಮ್​ ಗೋಪಾಲ್​ ವರ್ಮಾ ಹೇಳಿಕೆ
ಎಸ್ಎಸ್ ರಾಜಮೌಳಿ, ರಾಮ್ ಗೋಪಾಲ್ ವರ್ಮಾ
Follow us
|

Updated on: Jan 24, 2023 | 8:46 PM

ನಿರ್ದೇಶಕ ರಾಮ್​ ಗೋಪಾಲ್​ ವರ್ಮಾ (Ram Gopal Varma) ಇದ್ದಲ್ಲಿ ಕಾಂಟ್ರವರ್ಸಿ ಸಹಜ. ಒಂದಿಲ್ಲೊಂದು ವಿಚಾರದಲ್ಲಿ ಅವರು ಸುದ್ದಿ ಆಗುತ್ತಲೇ ಇರುತ್ತಾರೆ. ಈಗ ಅವರು ರಾಜಮೌಳಿ (SS Rajamouli) ಬಗ್ಗೆ ಸರಣಿ ಟ್ವೀಟ್​ ಮಾಡಿದ್ದಾರೆ. ಒಮ್ಮೆಲೆ ನೋಡಿದರೆ ಶಾಕ್​ ಆಗುವಂತಹ ವಿಚಾರವನ್ನು ಅವರು ಪೋಸ್ಟ್​ ಮಾಡಿದ್ದಾರೆ. ಆದರೆ ಇದು ತಮಾಷೆಗಾಗಿ! ‘ರಾಜಮೌಳಿ ಅವರ ಹತ್ಯೆ ನಡೆಸಲು ತಂಡ ಸಿದ್ಧವಾಗಿದೆ’ ಎಂದು ರಾಮ್​ ಗೋಪಾಲ್​ ವರ್ಮಾ ಟ್ವೀಟ್​ (Ram Gopal Varma Tweet) ಮಾಡಿದ್ದಾರೆ. ಆ ತಂಡದಲ್ಲಿ ತಾವೂ ಇರುವುದಾಗಿ ಅವರು ತಿಳಿಸಿದ್ದಾರೆ. ಇದೆಲ್ಲವನ್ನೂ ಅವರು ತಮಾಷೆಗಾಗಿ ಹೇಳಿದ್ದು ಅಂತ ಗೊತ್ತಾದ ತಕ್ಷಣ ರಾಜಮೌಳಿ ಅಭಿಮಾನಿಗಳು ಸಮಾಧಾನಗೊಂಡಿದ್ದಾರೆ. ರಾಮ್​ ಗೋಪಾಲ್​ ವರ್ಮಾ ಮಾಡಿದ ಈ ಟ್ವೀಟ್​ ವೈರಲ್​ ಆಗಿದೆ.

ನಿರ್ದೇಶಕ ಎಸ್​ಎಸ್​ ರಾಜಮೌಳಿ ಅವರಿಗೆ ವಿಶ್ವಾದ್ಯಂತ ಅಭಿಮಾನಿಗಳು ಇದ್ದಾರೆ. ಅವರು ವಿಶ್ವಮಟ್ಟದಲ್ಲಿ ಖ್ಯಾತಿ ಪಡೆದಿದ್ದಾರೆ. ‘ಬಾಹುಬಲಿ’, ‘ಆರ್​ಆರ್​ಆರ್​’ ಮುಂತಾದ ಸಿನಿಮಾಗಳಿಂದಾಗಿ ಅವರ ಜನಪ್ರಿಯತೆ ಹೆಚ್ಚಾಗಿದೆ. ಇತ್ತೀಚೆಗೆ ‘ಆರ್​ಆರ್​ಆರ್​’ ಸಿನಿಮಾದ ‘ನಾಟು ನಾಟು..’ ಹಾಡು ‘ಗೋಲ್ಡನ್​ ಗ್ಲೋಬ್​ 2023’ ಅವಾರ್ಡ್​ ಪಡೆದುಕೊಂಡ ನಂತರ ಬೇರೆ ಬೇರೆ ದೇಶಗಳ ಜನರು ತೆಲುಗು ಚಿತ್ರರಂಗದತ್ತ ತಿರುಗಿ ನೋಡುವಂತಾಗಿದೆ. ಇಷ್ಟೆಲ್ಲ ಜನಪ್ರಿಯತೆ ಸಿಕ್ಕಿರುವುದರಿಂದ ಕೆಲವು ನಿರ್ದೇಶಕರಿಗೆ ಹೊಟ್ಟೆಕಿಚ್ಚು ಆಗಿದೆಯಂತೆ. ಆದ್ದರಿಂದಲೇ ರಾಜಮೌಳಿ ಅವರನ್ನು ಹತ್ಯೆ ಮಾಡುವ ಸಂಚು ನಡೆದಿದೆ ಎಂದು ರಾಮ್​ ಗೋಪಾಲ್​ ವರ್ಮಾ ಅವರು ಟ್ವೀಟ್​ ಮಾಡಿದ್ದಾರೆ.

ಇದನ್ನೂ ಓದಿ
Image
SS Rajamouli: ​ಅಮೆರಿಕಾದಲ್ಲಿ ‘ಆರ್​ಆರ್​ಆರ್’ಗೆ ವಿಶೇಷ ಮನ್ನಣೆ: ರಾಜಮೌಳಿಗೆ ಅತ್ಯುತ್ತಮ ನಿರ್ದೇಶಕ ಪ್ರಶಸ್ತಿ
Image
Rajamouli: ‘ಸ್ಟಾರ್​ ವಾರ್ಸ್​’ ನಿರ್ದೇಶಕನ ಭೇಟಿ ಆದ ರಾಜಮೌಳಿ; ಹಾಲಿವುಡ್​ ಅಂಗಳದಲ್ಲೂ ಭರ್ಜರಿ ಹವಾ
Image
ರಾಜಮೌಳಿ ಕಾಲಿಗೆ ನಮಸ್ಕರಿಸಿದ ರಣಬೀರ್ ಕಪೂರ್; ಪಬ್ಲಿಸಿಟಿ ಸ್ಟಂಟ್ಸ್ ಎಂದ ನೆಟ್ಟಿಗರು
Image
ಕೊನೇ ಕ್ಷಣದಲ್ಲಿ ಅಮಿತ್ ಶಾ ಭೇಟಿಯಿಂದ ಹಿಂದೆ ಸರಿದ ರಾಜಮೌಳಿ? ಇದಕ್ಕಿದೆ ದೊಡ್ಡ ಕಾರಣ

‘ರಾಜಮೌಳಿ ಅವರೇ ದಯವಿಟ್ಟು ಭದ್ರತೆ ಹೆಚ್ಚಿಸಿಕೊಳ್ಳಿ. ಭಾರತದ ಕೆಲವು ನಿರ್ದೇಶಕರು ಹೊಟ್ಟೆಕಿಚ್ಚಿನಿಂದಾಗಿ ನಿಮ್ಮನ್ನು ಹತ್ಯೆ ಮಾಡಲು ತಂಡ ರಚಿಸಿಕೊಂಡಿದ್ದಾರೆ. ಅದರಲ್ಲಿ ನಾನೂ ಕೂಡ ಇದ್ದೇನೆ. ನಾನು ಈಗ ಕುಡಿದಿರುವುದರಿಂದ ಈ ರಹಸ್ಯವನ್ನು ಬಾಯಿಬಿಡುತ್ತಿದ್ದೇನೆ’ ಎಂದು ರಾಮ್​ ಗೋಪಾಲ್​​ ವರ್ಮಾ ಟ್ವೀಟ್​ ಮಾಡಿದ್ದಾರೆ. ಅವರು ಈ ಪೋಸ್ಟ್​ಗೆ ನೆಟ್ಟಿಗರು ಬಗೆಬಗೆಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ.

ಆಸ್ಕರ್​ ನಿರೀಕ್ಷೆಯಲ್ಲಿ ‘ಆರ್​ಆರ್​ಆರ್’ ಚಿತ್ರದ ‘ನಾಟು ನಾಟು..’ ಸಾಂಗ್​:

ಜಾಗತಿಕ ಮಟ್ಟದಲ್ಲಿ ‘ಆರ್​ಆರ್​ಆರ್​’ ಸಿನಿಮಾ ಶೈನ್​ ಆಗುತ್ತಿದೆ. ಸಾವಿರಾರು ಕೋಟಿ ರೂಪಾಯಿ ಕಲೆಕ್ಷನ್​ ಮಾಡಿದ ಈ ಚಿತ್ರ ಈಗ ಆಸ್ಕರ್​ ಪ್ರಶಸ್ತಿ ಪಡೆಯುವ ಸಾಧ್ಯತೆ ದಟ್ಟವಾಗಿದೆ. ಮಂಗಳವಾರ (ಜ.24) ಆಸ್ಕರ್​ ಪ್ರಶಸ್ತಿಯ ನಾಮಿನೇಷನ್​ ಲಿಸ್ಟ್​ ಪ್ರಕಟ ಆಗಿದೆ. ‘ಆರ್​ಆರ್​ಆರ್​’ ಚಿತ್ರದ ‘ನಾಟು ನಾಟು..’ ಹಾಡು ಅತ್ಯುತ್ತಮ ಒರಿಜಿನಲ್​ ಸಾಂಗ್​ ವಿಭಾಗಕ್ಕೆ ನಾಮಿನೇಟ್​ ಆಗಿದೆ.

ಇದನ್ನೂ ಓದಿ: SS Rajamouli: ‘RRR ಬಾಲಿವುಡ್​ ಚಿತ್ರವಲ್ಲ’: ರಾಜಮೌಳಿ ಹೇಳಿಕೆಗೆ ಹಿಂದಿ ಮಂದಿ ಅಸಮಾಧಾನ

ರಾಜಮೌಳಿಗೆ ಹಾಲಿವುಡ್​ ಆಫರ್​:

‘ಅವತಾರ್​ 2’ ಸಿನಿಮಾದ ನಿರ್ದೇಶಕ ಜೇಮ್ಸ್​ ಕ್ಯಾಮೆರಾನ್​ ಅವರನ್ನು ರಾಜಮೌಳಿ ಇತ್ತೀಚೆಗೆ ಭೇಟಿ ಆಗಿದ್ದರು. ಈ ಭೇಟಿಯ ಸಂದರ್ಭದಲ್ಲಿ ‘ಆರ್​ಆರ್​ಆರ್​’ ಚಿತ್ರದ ಬಗ್ಗೆ ಕ್ಯಾಮೆರಾನ್​ ಹಲವು ವಿಚಾರಗಳನ್ನು ಮಾತನಾಡಿದರು. ರಾಜಮೌಳಿಯ ಕೆಲಸವನ್ನು ಅವರು ಮೆಚ್ಚಿಕೊಂಡರು. ‘ಒಂದು ವೇಳೆ ಹಾಲಿವುಡ್​ನಲ್ಲಿ ಸಿನಿಮಾ ಮಾಡುವುದಾದರೆ ಬನ್ನಿ ಮಾತಾಡೋಣ’ ಎಂದು ರಾಜಮೌಳಿಗೆ ಜೇಮ್ಸ್​ ಕ್ಯಾಮೆರಾನ್​ ಆಫರ್​ ನೀಡಿದರು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
‘ಉಪೇಂದ್ರ’ ಸಿನಿಮಾ ನೋಡಿ ಉಪ್ಪಿ ಭಾವುಕ; ಏನು ಹೇಳಿದ್ರು?
‘ಉಪೇಂದ್ರ’ ಸಿನಿಮಾ ನೋಡಿ ಉಪ್ಪಿ ಭಾವುಕ; ಏನು ಹೇಳಿದ್ರು?