RGV Twitter: ‘ರಾಜಮೌಳಿ ಹತ್ಯೆಗೆ ಸಂಚು ನಡೆದಿದೆ, ತಂಡ ಸಿದ್ಧವಾಗಿದೆ’; ರಾಮ್​ ಗೋಪಾಲ್​ ವರ್ಮಾ ಹೇಳಿಕೆ

|

Updated on: Jan 24, 2023 | 8:46 PM

Rajamouli | Ram Gopal Varma: ‘ರಾಜಮೌಳಿ ಅವರೇ.. ದಯವಿಟ್ಟು ಭದ್ರತೆ ಹೆಚ್ಚಿಸಿಕೊಳ್ಳಿ. ನಿಮ್ಮನ್ನು ಹತ್ಯೆ ಮಾಡಲು ತಂಡ ರಚಿಸಿಕೊಳ್ಳಲಾಗಿದೆ’ ಎಂದು ರಾಮ್​ ಗೋಪಾಲ್​ ವರ್ಮಾ ಟ್ವೀಟ್​ ಮಾಡಿದ್ದಾರೆ.

RGV Twitter: ‘ರಾಜಮೌಳಿ ಹತ್ಯೆಗೆ ಸಂಚು ನಡೆದಿದೆ, ತಂಡ ಸಿದ್ಧವಾಗಿದೆ’; ರಾಮ್​ ಗೋಪಾಲ್​ ವರ್ಮಾ ಹೇಳಿಕೆ
ಎಸ್ಎಸ್ ರಾಜಮೌಳಿ, ರಾಮ್ ಗೋಪಾಲ್ ವರ್ಮಾ
Follow us on

ನಿರ್ದೇಶಕ ರಾಮ್​ ಗೋಪಾಲ್​ ವರ್ಮಾ (Ram Gopal Varma) ಇದ್ದಲ್ಲಿ ಕಾಂಟ್ರವರ್ಸಿ ಸಹಜ. ಒಂದಿಲ್ಲೊಂದು ವಿಚಾರದಲ್ಲಿ ಅವರು ಸುದ್ದಿ ಆಗುತ್ತಲೇ ಇರುತ್ತಾರೆ. ಈಗ ಅವರು ರಾಜಮೌಳಿ (SS Rajamouli) ಬಗ್ಗೆ ಸರಣಿ ಟ್ವೀಟ್​ ಮಾಡಿದ್ದಾರೆ. ಒಮ್ಮೆಲೆ ನೋಡಿದರೆ ಶಾಕ್​ ಆಗುವಂತಹ ವಿಚಾರವನ್ನು ಅವರು ಪೋಸ್ಟ್​ ಮಾಡಿದ್ದಾರೆ. ಆದರೆ ಇದು ತಮಾಷೆಗಾಗಿ! ‘ರಾಜಮೌಳಿ ಅವರ ಹತ್ಯೆ ನಡೆಸಲು ತಂಡ ಸಿದ್ಧವಾಗಿದೆ’ ಎಂದು ರಾಮ್​ ಗೋಪಾಲ್​ ವರ್ಮಾ ಟ್ವೀಟ್​ (Ram Gopal Varma Tweet) ಮಾಡಿದ್ದಾರೆ. ಆ ತಂಡದಲ್ಲಿ ತಾವೂ ಇರುವುದಾಗಿ ಅವರು ತಿಳಿಸಿದ್ದಾರೆ. ಇದೆಲ್ಲವನ್ನೂ ಅವರು ತಮಾಷೆಗಾಗಿ ಹೇಳಿದ್ದು ಅಂತ ಗೊತ್ತಾದ ತಕ್ಷಣ ರಾಜಮೌಳಿ ಅಭಿಮಾನಿಗಳು ಸಮಾಧಾನಗೊಂಡಿದ್ದಾರೆ. ರಾಮ್​ ಗೋಪಾಲ್​ ವರ್ಮಾ ಮಾಡಿದ ಈ ಟ್ವೀಟ್​ ವೈರಲ್​ ಆಗಿದೆ.

ನಿರ್ದೇಶಕ ಎಸ್​ಎಸ್​ ರಾಜಮೌಳಿ ಅವರಿಗೆ ವಿಶ್ವಾದ್ಯಂತ ಅಭಿಮಾನಿಗಳು ಇದ್ದಾರೆ. ಅವರು ವಿಶ್ವಮಟ್ಟದಲ್ಲಿ ಖ್ಯಾತಿ ಪಡೆದಿದ್ದಾರೆ. ‘ಬಾಹುಬಲಿ’, ‘ಆರ್​ಆರ್​ಆರ್​’ ಮುಂತಾದ ಸಿನಿಮಾಗಳಿಂದಾಗಿ ಅವರ ಜನಪ್ರಿಯತೆ ಹೆಚ್ಚಾಗಿದೆ. ಇತ್ತೀಚೆಗೆ ‘ಆರ್​ಆರ್​ಆರ್​’ ಸಿನಿಮಾದ ‘ನಾಟು ನಾಟು..’ ಹಾಡು ‘ಗೋಲ್ಡನ್​ ಗ್ಲೋಬ್​ 2023’ ಅವಾರ್ಡ್​ ಪಡೆದುಕೊಂಡ ನಂತರ ಬೇರೆ ಬೇರೆ ದೇಶಗಳ ಜನರು ತೆಲುಗು ಚಿತ್ರರಂಗದತ್ತ ತಿರುಗಿ ನೋಡುವಂತಾಗಿದೆ. ಇಷ್ಟೆಲ್ಲ ಜನಪ್ರಿಯತೆ ಸಿಕ್ಕಿರುವುದರಿಂದ ಕೆಲವು ನಿರ್ದೇಶಕರಿಗೆ ಹೊಟ್ಟೆಕಿಚ್ಚು ಆಗಿದೆಯಂತೆ. ಆದ್ದರಿಂದಲೇ ರಾಜಮೌಳಿ ಅವರನ್ನು ಹತ್ಯೆ ಮಾಡುವ ಸಂಚು ನಡೆದಿದೆ ಎಂದು ರಾಮ್​ ಗೋಪಾಲ್​ ವರ್ಮಾ ಅವರು ಟ್ವೀಟ್​ ಮಾಡಿದ್ದಾರೆ.

ಇದನ್ನೂ ಓದಿ
SS Rajamouli: ​ಅಮೆರಿಕಾದಲ್ಲಿ ‘ಆರ್​ಆರ್​ಆರ್’ಗೆ ವಿಶೇಷ ಮನ್ನಣೆ: ರಾಜಮೌಳಿಗೆ ಅತ್ಯುತ್ತಮ ನಿರ್ದೇಶಕ ಪ್ರಶಸ್ತಿ
Rajamouli: ‘ಸ್ಟಾರ್​ ವಾರ್ಸ್​’ ನಿರ್ದೇಶಕನ ಭೇಟಿ ಆದ ರಾಜಮೌಳಿ; ಹಾಲಿವುಡ್​ ಅಂಗಳದಲ್ಲೂ ಭರ್ಜರಿ ಹವಾ
ರಾಜಮೌಳಿ ಕಾಲಿಗೆ ನಮಸ್ಕರಿಸಿದ ರಣಬೀರ್ ಕಪೂರ್; ಪಬ್ಲಿಸಿಟಿ ಸ್ಟಂಟ್ಸ್ ಎಂದ ನೆಟ್ಟಿಗರು
ಕೊನೇ ಕ್ಷಣದಲ್ಲಿ ಅಮಿತ್ ಶಾ ಭೇಟಿಯಿಂದ ಹಿಂದೆ ಸರಿದ ರಾಜಮೌಳಿ? ಇದಕ್ಕಿದೆ ದೊಡ್ಡ ಕಾರಣ

‘ರಾಜಮೌಳಿ ಅವರೇ ದಯವಿಟ್ಟು ಭದ್ರತೆ ಹೆಚ್ಚಿಸಿಕೊಳ್ಳಿ. ಭಾರತದ ಕೆಲವು ನಿರ್ದೇಶಕರು ಹೊಟ್ಟೆಕಿಚ್ಚಿನಿಂದಾಗಿ ನಿಮ್ಮನ್ನು ಹತ್ಯೆ ಮಾಡಲು ತಂಡ ರಚಿಸಿಕೊಂಡಿದ್ದಾರೆ. ಅದರಲ್ಲಿ ನಾನೂ ಕೂಡ ಇದ್ದೇನೆ. ನಾನು ಈಗ ಕುಡಿದಿರುವುದರಿಂದ ಈ ರಹಸ್ಯವನ್ನು ಬಾಯಿಬಿಡುತ್ತಿದ್ದೇನೆ’ ಎಂದು ರಾಮ್​ ಗೋಪಾಲ್​​ ವರ್ಮಾ ಟ್ವೀಟ್​ ಮಾಡಿದ್ದಾರೆ. ಅವರು ಈ ಪೋಸ್ಟ್​ಗೆ ನೆಟ್ಟಿಗರು ಬಗೆಬಗೆಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ.

ಆಸ್ಕರ್​ ನಿರೀಕ್ಷೆಯಲ್ಲಿ ‘ಆರ್​ಆರ್​ಆರ್’ ಚಿತ್ರದ ‘ನಾಟು ನಾಟು..’ ಸಾಂಗ್​:

ಜಾಗತಿಕ ಮಟ್ಟದಲ್ಲಿ ‘ಆರ್​ಆರ್​ಆರ್​’ ಸಿನಿಮಾ ಶೈನ್​ ಆಗುತ್ತಿದೆ. ಸಾವಿರಾರು ಕೋಟಿ ರೂಪಾಯಿ ಕಲೆಕ್ಷನ್​ ಮಾಡಿದ ಈ ಚಿತ್ರ ಈಗ ಆಸ್ಕರ್​ ಪ್ರಶಸ್ತಿ ಪಡೆಯುವ ಸಾಧ್ಯತೆ ದಟ್ಟವಾಗಿದೆ. ಮಂಗಳವಾರ (ಜ.24) ಆಸ್ಕರ್​ ಪ್ರಶಸ್ತಿಯ ನಾಮಿನೇಷನ್​ ಲಿಸ್ಟ್​ ಪ್ರಕಟ ಆಗಿದೆ. ‘ಆರ್​ಆರ್​ಆರ್​’ ಚಿತ್ರದ ‘ನಾಟು ನಾಟು..’ ಹಾಡು ಅತ್ಯುತ್ತಮ ಒರಿಜಿನಲ್​ ಸಾಂಗ್​ ವಿಭಾಗಕ್ಕೆ ನಾಮಿನೇಟ್​ ಆಗಿದೆ.

ಇದನ್ನೂ ಓದಿ: SS Rajamouli: ‘RRR ಬಾಲಿವುಡ್​ ಚಿತ್ರವಲ್ಲ’: ರಾಜಮೌಳಿ ಹೇಳಿಕೆಗೆ ಹಿಂದಿ ಮಂದಿ ಅಸಮಾಧಾನ

ರಾಜಮೌಳಿಗೆ ಹಾಲಿವುಡ್​ ಆಫರ್​:

‘ಅವತಾರ್​ 2’ ಸಿನಿಮಾದ ನಿರ್ದೇಶಕ ಜೇಮ್ಸ್​ ಕ್ಯಾಮೆರಾನ್​ ಅವರನ್ನು ರಾಜಮೌಳಿ ಇತ್ತೀಚೆಗೆ ಭೇಟಿ ಆಗಿದ್ದರು. ಈ ಭೇಟಿಯ ಸಂದರ್ಭದಲ್ಲಿ ‘ಆರ್​ಆರ್​ಆರ್​’ ಚಿತ್ರದ ಬಗ್ಗೆ ಕ್ಯಾಮೆರಾನ್​ ಹಲವು ವಿಚಾರಗಳನ್ನು ಮಾತನಾಡಿದರು. ರಾಜಮೌಳಿಯ ಕೆಲಸವನ್ನು ಅವರು ಮೆಚ್ಚಿಕೊಂಡರು. ‘ಒಂದು ವೇಳೆ ಹಾಲಿವುಡ್​ನಲ್ಲಿ ಸಿನಿಮಾ ಮಾಡುವುದಾದರೆ ಬನ್ನಿ ಮಾತಾಡೋಣ’ ಎಂದು ರಾಜಮೌಳಿಗೆ ಜೇಮ್ಸ್​ ಕ್ಯಾಮೆರಾನ್​ ಆಫರ್​ ನೀಡಿದರು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.