AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಡೇಂಜರಸ್​’ ಹುಡುಗಿಯರನ್ನು ಬೆಂಗಳೂರಿಗೆ ಕರೆತಂದು ಪರಿಚಯ ಮಾಡಿಸಿದ ರಾಮ್​ ಗೋಪಾಲ್ ವರ್ಮಾ

Khatra Dangerous: ‘ಖತ್ರಾ ಡೇಂಜರಸ್​’ ಸಿನಿಮಾ ಕುರಿತು ಮಾಹಿತಿ ಹಂಚಿಕೊಳ್ಳಲು ನಿರ್ದೇಶಕ ರಾಮ್​ ಗೋಪಾಲ್​ ವರ್ಮಾ ಅವರು ಇತ್ತೀಚೆಗೆ ಬೆಂಗಳೂರಿಗೆ ಬಂದಿದ್ದರು. ಚಿತ್ರದಲ್ಲಿ ನೈನಾ ಗಂಗೂಲಿ ಮತ್ತು ಅಪ್ಸರಾ ರಾಣಿ ನಟಿಸಿದ್ದಾರೆ.

‘ಡೇಂಜರಸ್​’ ಹುಡುಗಿಯರನ್ನು ಬೆಂಗಳೂರಿಗೆ ಕರೆತಂದು ಪರಿಚಯ ಮಾಡಿಸಿದ ರಾಮ್​ ಗೋಪಾಲ್ ವರ್ಮಾ
ನೈನಾ ಗಂಗೂಲಿ, ರಾಮ್​ ಗೋಪಾಲ್​ ವರ್ಮಾ, ಅಪ್ಸರಾ ರಾಣಿ
TV9 Web
| Edited By: |

Updated on:Mar 31, 2022 | 4:05 PM

Share

ಒಂದು ಕಾಲದಲ್ಲಿ ಹಲವು ಸೂಪರ್​ ಹಿಟ್​ ಸಿನಿಮಾಗಳನ್ನು ನೀಡಿದವರು ನಿರ್ದೇಶಕ ರಾಮ್​ ಗೋಪಾಲ್​​ ವರ್ಮಾ. ಈಗಲೂ ಅವರು ಡಿಫರೆಂಟ್​ ಪ್ರಯತ್ನಗಳ ಮೂಲಕ ಗಮನ ಸೆಳೆಯುತ್ತಾರೆ. ರಾಮ್​ ಗೋಪಾಲ್​ ವರ್ಮಾ (Ram Gopal Varma) ಸಿನಿಮಾ ಮಾಡುತ್ತಾರೆ ಎಂದರೆ ಅದು ವಿವಾದ ಮಾಡುತ್ತದೆ ಅಥವಾ ವಿಭಿನ್ನವಾಗಿ ಇರುತ್ತದೆ ಎಂಬುದರಲ್ಲಿ ಅನುಮಾನವೇ ಬೇಡ. ಈಗ ಅವರು ಹೊಸದೊಂದು ಚಿತ್ರಕ್ಕೆ ಆ್ಯಕ್ಷನ್​-ಕಟ್​ ಹೇಳಿದ್ದಾರೆ. ಈ ಚಿತ್ರದ ಹೆಸರು ‘ಖತ್ರಾ ಡೇಂಜರಸ್​’. ಈಗಾಗಲೇ ಪೋಸ್ಟರ್​ ಮತ್ತು ಟ್ರೇಲರ್​ಗಳ ಮೂಲಕ ಈ ಚಿತ್ರ ಸಖತ್​ ಸದ್ದು ಮಾಡುತ್ತಿದೆ. ಹತ್ತು ಹಲವು ಕಾರಣಗಳಿಂದ ‘ಖತ್ರಾ ಡೇಂಜರಸ್​’ ಸಿನಿಮಾ ನಿರೀಕ್ಷೆ ಮೂಡಿಸಿದೆ. ಈ ಚಿತ್ರದಲ್ಲಿ ನೈನಾ ಗಂಗೂಲಿ, ಅಪ್ಸರಾ ರಾಣಿ (Apsara Rani), ರಾಜ್​ಪಾಲ್​ ಯಾದವ್​ ಮುಂತಾದವರು ನಟಿಸಿದ್ದಾರೆ. ಟ್ರೇಲರ್​ ನೋಡಿದರೆ ಇದು ಸಲಿಂಗ ಕಾಮದ ಕುರಿತಾದ ಸಿನಿಮಾ ಎನಿಸುವುದು ಸಹಜ. ಆದರೆ ಇನ್ನಷ್ಟು ಆಳವಾದ ವಿಚಾರಗಳನ್ನು ಇಟ್ಟುಕೊಂಡು ರಾಮ್​ ಗೋಪಾಲ್​ ವರ್ಮಾ ಅವರು ‘ಖತ್ರಾ ಡೇಂಜರಸ್​’ (Khatra Dangerous Movie) ಚಿತ್ರವನ್ನು ಕಟ್ಟಿಕೊಟ್ಟಿದ್ದಾರಂತೆ. ಈ ಸಿನಿಮಾ ಈಗ ಬಿಡುಗಡೆಗೆ ಸಜ್ಜಾಗಿದೆ. ಏ.8ರಂದು ಚಿತ್ರಮಂದಿರಗಳಲ್ಲಿ ಇದು ತೆರೆ ಕಾಣಲಿದೆ.

‘ಖತ್ರಾ ಡೇಂಜರಸ್​’ ಸಿನಿಮಾ ಕುರಿತು ಮಾಹಿತಿ ಹಂಚಿಕೊಳ್ಳಲು ನಿರ್ದೇಶಕ ರಾಮ್​ ಗೋಪಾಲ್​ ವರ್ಮಾ ಅವರು ಇತ್ತೀಚೆಗೆ ಬೆಂಗಳೂರಿಗೆ ಬಂದಿದ್ದರು. ತಮ್ಮ ಜೊತೆ ಚಿತ್ರದ ಪ್ರಮುಖ ಪಾತ್ರಧಾರಿಗಳಾದ ನೈನಾ ಗಂಗೂಲಿ ಮತ್ತು ಅಪ್ಸರಾ ರಾಣಿ ಅವರನ್ನೂ ಕರೆದುಕೊಂಡು ಬಂದು ಪಾತ್ರ ಪರಿಚಯ ಮಾಡಿಸಿದರು. ಕ್ರೈಂ ಥ್ರಿಲ್ಲರ್​ ಕಥಾಹಂದರ ಹೊಂದಿರುವ ಭಾರತದ ಮೊದಲ ಲೆಸ್ಬಿಯನ್​ ಸಿನಿಮಾ ಎಂದು ಚಿತ್ರತಂಡ ಹೇಳಿಕೊಂಡಿದೆ. ಪರಸ್ಪರ ಪ್ರೇಮ-ಕಾಮ ಹೊಂದಿರುವ ಹುಡುಗಿಯರಾಗಿ ನೈನಾ ಗಂಗೂಲಿ ಮತ್ತು ಅಪ್ಸರಾ ರಾಣಿ ಅವರು ನಟಿಸಿದ್ದಾರೆ.

‘ಹುಡುಗ-ಹುಡುಗಿ ಪ್ರೀತಿ ಮಾಡುತ್ತಿದ್ದಾಗ ಜನರು ಅದನ್ನು ಪ್ರಶ್ನೆ ಮಾಡುವುದಿಲ್ಲ. ಆದರೆ ಇಬ್ಬರು ಹುಡುಗಿಯರು ಪರಸ್ಪರ ಪ್ರೀತಿಸಿದಾಗ ಪ್ರಶ್ನೆ ಎದುರಾಗುತ್ತದೆ. ಅವರಿಬ್ಬರ ಪ್ರೀತಿಯನ್ನು ಈ ಸಿನಿಮಾ ಪ್ರಶ್ನೆ ಮಾಡುವುದಿಲ್ಲ. ಸಮಾಜದಲ್ಲಿ ಅಂಥ ಜನರು ಇದ್ದಾರೆ. ಅವರಲ್ಲಿಯೂ ಹಲವು ಕಥೆಗಳಿವೆ. ಲೆಸ್ಬಿಯನ್​ ಕುರಿತು ಕೆಲವು ಸಿನಿಮಾಗಳು ಬಂದಿವೆ. ಆದರೆ ನಮ್ಮ ಚಿತ್ರದ ಕಥೆ ಭಿನ್ನವಾಗಿದೆ’ ಎಂದು ರಾಮ್​ ಗೋಪಾಲ್​ ವರ್ಮಾ ಹೇಳಿದ್ದಾರೆ.

‘ಇಂಥ ಚಿತ್ರಕ್ಕೆ ನಟಿಯರನ್ನು ಒಪ್ಪಿಸುವುದು ಕಷ್ಟ ಎಂದುಕೊಂಡು ಮೊದಲು ಅಪ್ಸರಾ ಅವರನ್ನು ಸಂಪರ್ಕಿಸಿದೆ. ಈ ವಿಚಾರದಲ್ಲಿ ನಿರ್ಧಾರ ತೆಗೆದುಕೊಳ್ಳಲು ಅವರು ಹಿಂದೇಟು ಹಾಕಲಿಲ್ಲ. ಇದೊಂದು ಸವಾಲಿನ ಪಾತ್ರ ಎಂದುಕೊಂಡು ಒಪ್ಪಿಕೊಂಡರು. ಆದರೆ ನೈನಾ ಗಂಗೂಲಿ ಅವರು ಒಪ್ಪಿಕೊಳ್ಳಲು ಸ್ವಲ್ಪ ಸಮಯ ತೆಗೆದುಕೊಂಡರು’ ಎಂದರು ರಾಮ್​ ಗೋಪಾಲ್​ ವರ್ಮಾ. ಟ್ರೇಲರ್​ ಮತ್ತು ಹಾಡುಗಳಲ್ಲಿ ನೈನಾ ಗಂಗೂಲಿ ಮತ್ತು ಅಪ್ಸರಾ ರಾಣಿ ಅವರು ಸಖತ್​ ಹಾಟ್​ ಆಗಿ ಕಾಣಿಸಿಕೊಂಡಿದ್ದಾರೆ.

‘ಈ ಕಥೆ ಕೇಳಿದಾಗ ನನಗೆ ನಂಬಿಕೆ ಮೂಡಿತು. ಸವಾಲಿನ ಪಾತ್ರ ಆದ್ದರಿಂದ ಒಪ್ಪಿಕೊಂಡೆ. ಈ ಚಿತ್ರ ತೆರೆಕಂಡ ಬಳಿಕ ಇದೇ ರೀತಿಯ ಕಾನ್ಸೆಪ್ಟ್​ ಮೇಲೆ ಇನ್ನಷ್ಟು ಸಿನಿಮಾಗಳು ಬರಲಿವೆ ಅಂತ ಅಂದುಕೊಂಡಿದ್ದೇನೆ. ರಾಮ್​ ಗೋಪಾಲ್​ ವರ್ಮಾ ಜೊತೆ ಕೆಲಸ ಮಾಡಿ ತುಂಬ ಕಲಿಯಲು ಸಿಕ್ಕಿತು’ ಎಂದು ಅಪ್ಸರಾ ರಾಣಿ ಹೇಳಿದ್ದಾರೆ.

ಇತ್ತೀಚೆಗೆ ‘ಆರ್​ಆರ್​ಆರ್​’ ಸಿನಿಮಾ ಬಿಡುಗಡೆ ಆಯಿತು. ರಾಜಮೌಳಿ ನಿರ್ದೇಶನದ ಆ ಚಿತ್ರದಲ್ಲಿ ರಾಮ್​ ಚರಣ್​ ಮತ್ತು ಜ್ಯೂ. ಎನ್​ಟಿಆರ್​ ನಟಿಸಿದ್ದಾರೆ. ಅದರ ಬಗ್ಗೆ ಸೋಶಿಯಲ್​ ಮೀಡಿಯಾದಲ್ಲಿ ಪ್ರಸ್ತಾಪಿಸಿರುವ ರಾಮ್​ ಗೋಪಾಲ್​ ವರ್ಮಾ ಅವರು ಹೀಗೊಂದು ಟ್ವೀಟ್​ ಮಾಡಿದ್ದಾರೆ. ತಮ್ಮ ಸಿನಿಮಾದ ನಾಯಕಿಯ ಫೋಟೋ ಹಂಚಿಕೊಂಡು, ‘ರಾಜಮೌಳಿ ಸರ್​.. ನಿಮ್ಮ ಬಳಿ ಡೇಂಜರಸ್​ ಗಂಡಸರು ಇದ್ದರೆ ನನ್ನ ಬಳಿ ಡೇಂಜರಸ್​ ಹೆಂಗಸರು ಇದ್ದಾರೆ’ ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ:

4 ತಪ್ಪು ಕಲ್ಪನೆಗಳನ್ನು ಅಳಿಸಿಹಾಕಿದೆ ‘ದಿ ಕಾಶ್ಮೀರ್​ ಫೈಲ್ಸ್​’; ಪರಿಪರಿಯಾಗಿ ವಿಶ್ಲೇಷಣೆ ಮಾಡಿದ ಆರ್​ಜಿವಿ

‘ಕೆಜಿಎಫ್​ 2’, ಉಪೇಂದ್ರ ಮತ್ತು ಸ್ಯಾಂಡಲ್​ವುಡ್​ ಬಗ್ಗೆ ರಾಮ್​ ಗೋಪಾಲ್​ ವರ್ಮಾ ಹೇಳೋದು ಏನು?

Published On - 4:04 pm, Thu, 31 March 22

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್