AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೋಕಸಭಾ ಚುನಾವಣೆ: ಪವನ್​ ಕಲ್ಯಾಣ್​ ಎದುರು ರಾಮ್​ ಗೋಪಾಲ್​ ವರ್ಮಾ ಸ್ಪರ್ಧೆ

ಅನೇಕ ಸೆಲೆಬ್ರಿಟಿಗಳು ಲೋಕಸಭಾ ಚುನಾವಣೆಯ ಕಣಕ್ಕೆ ಇಳಿಯುತ್ತಿದ್ದಾರೆ. ನಟ ಪವನ್​ ಕಲ್ಯಾಣ್​ ಎದುರು ನಿರ್ದೇಶಕ ರಾಮ್​ ಗೋಪಾಲ್​ ವರ್ಮಾ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ. ಇಷ್ಟು ದಿನ ಸುಮ್ಮನಿದ್ದ ಆರ್​ಜಿವಿ ಅವರು ಈಗ ಏಕಾಏಕಿ ರಾಜಕೀಯಕ್ಕೆ ಪ್ರವೇಶಿಸಲು ನಿರ್ಧರಿಸಿದ್ದಾರೆ. ಅವರ ಈ ಘೋಷಣೆಯಿಂದ ಎಲ್ಲರಿಗೂ ಅಚ್ಚರಿ ಆಗಿದೆ.

ಲೋಕಸಭಾ ಚುನಾವಣೆ: ಪವನ್​ ಕಲ್ಯಾಣ್​ ಎದುರು ರಾಮ್​ ಗೋಪಾಲ್​ ವರ್ಮಾ ಸ್ಪರ್ಧೆ
ರಾಮ್​ ಗೋಪಾಲ್​ ವರ್ಮಾ, ಪವನ್​ ಕಲ್ಯಾಣ್​
ಮದನ್​ ಕುಮಾರ್​
|

Updated on: Mar 14, 2024 | 9:34 PM

Share

ಯಾವಾಗಲೂ ವಿವಾದದಿಂದಲೇ ಸುದ್ದಿ ಆಗುವ ನಿರ್ದೇಶಕ ರಾಮ್​ ಗೋಪಾಲ್​ ವರ್ಮಾ (Ram Gopal Varma) ಅವರು ಈಗ ರಾಜಕೀಯಕ್ಕೆ ಎಂಟ್ರಿ ನೀಡುತ್ತಿದ್ದಾರೆ. ಈ ಬಗ್ಗೆ ಅವರು ಸೋಶಿಯಲ್​ ಮೀಡಿಯಾದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಇಷ್ಟು ದಿನ ಸಿನಿಮಾಗಳ ನಿರ್ದೇಶನ ಮತ್ತು ನಿರ್ಮಾಣದಲ್ಲಿ ಬ್ಯುಸಿ ಆಗಿದ್ದ ಅವರು ಈಗ ಏಕಾಏಕಿ ರಾಜಕೀಯದ ಬಗ್ಗೆ ಆಸಕ್ತಿ ತೋರಿಸಿದ್ದಾರೆ. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ (Lok Sabha Election) ಅವರು ಸ್ಪರ್ಧಿಸಲಿದ್ದಾರೆ. ಅಚ್ಚರಿ ಏನೆಂದರೆ, ನಟ ಹಾಗೂ ಜನಸೇನಾ ಪಕ್ಷದ ಮುಖಂಡ ಪವನ್​ ಕಲ್ಯಾಣ್​ (Pawan Kalyan) ವಿರುದ್ಧ ರಾಮ್​ ಗೋಪಾಲ್​ ವರ್ಮಾ ಕಣಕ್ಕೆ ಇಳಿಯಲಿದ್ದಾರೆ!

ಜನಸೇನಾ ಪಕ್ಷದ ಮುಖಂಡ ಪವನ್​ ಕಲ್ಯಾಣ್​ ಅವರು ಆಂಧ್ರದ ಪಿಠಾಪುರಂ ಕ್ಷೇತ್ರದಿಂದ ಸ್ಪರ್ಧಿಸುವ ಘೋಷಣೆ ಆಗಿದೆ. ಅದರ ಬೆನ್ನಲ್ಲೇ ರಾಮ್​ ಗೋಪಾಲ್​ ವರ್ಮಾ ಅವರು ತಮ್ಮ ರಾಜಕೀಯ ಪ್ರವೇಶದ ಬಗ್ಗೆ ಬ್ರೇಕಿಂಗ್​ ನ್ಯೂಸ್​ ನೀಡಿದ್ದಾರೆ. ಕೆಲವರು ಈ ನಿರ್ಧಾರದ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ. ಅಂಥವರಿಗೂ ರಾಮ್​ ಗೋಪಾಲ್​ ವರ್ಮಾ ಉತ್ತರ ನೀಡಿದ್ದಾರೆ. ‘ನಾನು ತುಂಬ ಗಂಭೀರವಾಗಿದ್ದೇನೆ’ ಎಂದು ಅವರು ಪೋಸ್ಟ್​ ಮಾಡಿದ್ದಾರೆ.

ರಾಮ್​ ಗೋಪಾಲ್​ ವರ್ಮಾ ಎಕ್ಸ್​ ಪೋಸ್ಟ್:

‘ಸಡನ್​ ನಿರ್ಧಾರ. ಪಿಠಾಪುರಂ ಲೋಕಸಭಾ ಕ್ಷೇತ್ರದಿಂದ ನಾನು ಸ್ಪರ್ಧಿಸುತ್ತೇನೆ ಎಂಬುದನ್ನು ತಿಳಿಸಲು ಸಂತೋಷವಾಗುತ್ತಿದೆ’ ಎಂದು ರಾಮ್​ ಗೋಪಾಲ್​ ವರ್ಮಾ ಅವರು ಎಕ್ಸ್​ (ಟ್ವಿಟರ್​) ಖಾತೆಯಲ್ಲಿ ಬರೆದುಕೊಂಡಿದ್ದಾರೆ. ಆದರೆ ಈ ಬಗ್ಗೆ ಅವರು ಹೆಚ್ಚಿನ ಮಾಹಿತಿ ನೀಡಿಲ್ಲ. ‘ನೀವು ಯಾವ ಪಕ್ಷದಿಂದ ಸ್ಪರ್ಧಿಸುತ್ತೀರಿ’ ಎಂದು ನೆಟ್ಟಿಗರು ಪ್ರಶ್ನೆ ಮಾಡಿದ್ದಾರೆ. ಅದಕ್ಕೆ ರಾಮ್​ ಗೋಪಾಲ್​ ವರ್ಮಾ ಉತ್ತರ ನೀಡಿಲ್ಲ.

ಇದನ್ನೂ ಓದಿ: ಪೂನಂ ಪಾಂಡೆ ಮಾಡಿದ್ದು ಸರಿ ಎಂದು ಬೆಂಬಲಕ್ಕೆ ನಿಂತ ರಾಮ್​ ಗೋಪಾಲ್​ ವರ್ಮಾ

ಪಿಠಾಪುರಂ ಕ್ಷೇತ್ರದಲ್ಲಿ ಜನಸೇನಾ ಪಕ್ಷ, ಭಾರತೀಯ ಜನತಾ ಪಕ್ಷ ಹಾಗೂ ತೆಲುಗು ದೇಶಂ ಪಕ್ಷ ಮೈತ್ರಿ ಮಾಡಿಕೊಂಡಿವೆ. ಆ ಕ್ಷೇತ್ರದಲ್ಲಿ ಜನಸೇನಾ ಪಕ್ಷದಿಂದ ಪವನ್​ ಕಲ್ಯಾಣ್​ ಅವರು ಸ್ಪರ್ಧಿಸಲಿದ್ದಾರೆ. ಅದೇ ಕ್ಷೇತ್ರದಲ್ಲಿ ತಾವು ಚುನಾವಣೆಗೆ ನಿಲ್ಲವುದಾಗಿ ರಾಮ್​ ಗೋಪಾಲ್​ ವರ್ಮಾ ಅವರು ಘೋಷಿಸಿರುವುದು ಅಚ್ಚರಿ ಮೂಡಿಸಿದೆ. ಹಲವು ಸಂದರ್ಭಗಳಲ್ಲಿ ರಾಮ್​ ಗೋಪಾಲ್​ ವರ್ಮಾ ಅವರ ಮಾತುಗಳನ್ನು ಗಂಭೀರವಾಗಿ ತೆಗೆದುಕೊಳ್ಳಲು ಆಗುವುದಿಲ್ಲ. ಹಾಗಂತ ಅವರನ್ನು ನಿರ್ಲಕ್ಷಿಸಲು ಕೂಡ ಸಾಧ್ಯವಿಲ್ಲ. ಒಟ್ಟಿನಲ್ಲಿ ಅವರ ಈ ಘೋಷಣೆಯಿಂದ ಹೊಸ ಚರ್ಚೆ ಶುರುವಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!