AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ram Laxman Death: ಹೃದಯಾಘಾತದಿಂದ ರಾಮ್​ ಲಕ್ಷಣ್​ ನಿಧನ; ‘ಹಮ್​ ಆಪ್ಕೆ ಹೈ ಕೌನ್​’ ಚಿತ್ರದ ಸಂಗೀತ ನಿರ್ದೇಶಕ ಇನ್ನಿಲ್ಲ

ಕೆಲವೇ ದಿನಗಳ ಹಿಂದೆ ರಾಮ್​ ಲಕ್ಷಣ್ ಅವರು ಕೊವಿಡ್​ ಲಸಿಕೆಯ ಎರಡನೇ ಡೋಸ್​ ಪಡೆದುಕೊಂಡಿದ್ದರು. ನಂತರ ಅವರು ಬಹಳ ಸುಸ್ತಾದಂತೆ ಕಂಡರು. ಅದಕ್ಕಾಗಿ ವೈದ್ಯರು ಚಿಕಿತ್ಸೆ ನೀಡುತ್ತಿದ್ದರು ಎಂದು ಅವರ ಪುತ್ರ ತಿಳಿಸಿದ್ದಾರೆ.

Ram Laxman Death: ಹೃದಯಾಘಾತದಿಂದ ರಾಮ್​ ಲಕ್ಷಣ್​ ನಿಧನ; ‘ಹಮ್​ ಆಪ್ಕೆ ಹೈ ಕೌನ್​’ ಚಿತ್ರದ ಸಂಗೀತ ನಿರ್ದೇಶಕ ಇನ್ನಿಲ್ಲ
ಸಂಗೀತ ನಿರ್ದೇಶಕ ರಾಮ್​ಲಕ್ಷ್ಮಣ್​ (ವಿಜಯ್​ ಪಾಟೀಲ್​)
ಮದನ್​ ಕುಮಾರ್​
| Updated By: ರಾಜೇಶ್ ದುಗ್ಗುಮನೆ|

Updated on: May 22, 2021 | 3:34 PM

Share

ಬಾಲಿವುಡ್​ನಲ್ಲಿ ಹಲವು ಹಿಟ್​ ಸಿನಿಮಾಗಳಿಗೆ ಸಂಗೀತ ನಿರ್ದೇಶನ ಮಾಡುವ ಮೂಲಕ ಜನಪ್ರಿಯರಾಗಿದ್ದ ರಾಮ್​ ಲಕ್ಷ್ಮಣ್​​​ ಅವರು ಹೃದಯಾಘಾತದಿಂದ​ ನಿಧನರಾಗಿದ್ದಾರೆ. ಅವರ ಮೂಲ ಹೆಸರು ವಿಜಯ್​ ಪಾಟೀಲ್. ಹಮ್​ ಆಪ್ಕೆ ಹೈ ಕೌನ್​, ಮೈನೆ ಪ್ಯಾರ್​ ಕಿಯಾ ಮುಂತಾದ ಸೂಪರ್​ ಹಿಟ್​ ಸಿನಿಮಾಗಳು ಸೇರಿ 75ಕ್ಕೂ ಹೆಚ್ಚು ಚಿತ್ರಗಳಿಗೆ ಅವರು ಸಂಗೀತ ನಿರ್ದೇಶನ ಮಾಡಿದ್ದರು. 

ರಾಮ್​ಲಕ್ಷ್ಮಣ್​ ಅವರಿಗೆ 78 ವರ್ಷ ವಯಸ್ಸಾಗಿತ್ತು. ಅವರ ನಿಧನದ ಸುದ್ದಿಯನ್ನು ಪುತ್ರ ಅಮರ್​ ಖಚಿತಪಡಿಸಿದ್ದಾರೆ. ‘ಶನಿವಾರ ಮಧ್ಯ ರಾತ್ರಿ 2 ಗಂಟೆಗೆ ನಮ್ಮ ತಂದೆ ನಿಧನರಾದರು. ಅವರಿಗೆ ಹೃದಯಾಘಾತವಾಗಿತ್ತು. ಕೆಲವೇ ದಿನಗಳ ಹಿಂದೆ ಅವರು ಕೊವಿಡ್​ ಲಸಿಕೆಯ ಎರಡನೇ ಡೋಸ್​ ಪಡೆದುಕೊಂಡಿದ್ದರು. ನಂತರ ಅವರು ಬಹಳ ಸುಸ್ತಾದಂತೆ ಕಂಡರು. ಅದಕ್ಕಾಗಿ ವೈದ್ಯರು ಚಿಕಿತ್ಸೆ ನೀಡುತ್ತಿದ್ದರು’ ಎಂದು ಮಾಧ್ಯಮಗಳಿಗೆ ಅಮರ್​ ಪ್ರತಿಕ್ರಿಯೆ ನೋಡಿದ್ದಾರೆ.

ರಾಮ್​ ಲಕ್ಷ್ಮಣ್​ ನಿಧನಕ್ಕೆ ಗಾಯಕಿ ಲತಾ ಮಂಗೇಶ್ಕರ್​ ಸಂತಾಪ ಸೂಚಿಸಿದ್ದಾರೆ. ‘ಖ್ಯಾತ ಸಂಗೀತ ನಿರ್ದೇಶಕ, ಅಪ್ರತಿಮ ಪ್ರತಿಭಾವಂತ ರಾಮ್​ ಲಕ್ಷ್ಮಣ್​ (ವಿಜಯ್​ ಪಾಟೀಲ್​) ನಿಧನರಾದರು ಎಂಬುದು ಈಗತಾನೆ ತಿಳಿಯಿತು. ಈ ಸುದ್ದಿ ಕೇಳಿ ತುಂಬ ನೋವಾಗಿದೆ. ಅವರು ತುಂಬ ಒಳ್ಳೆಯ ವ್ಯಕ್ತಿ ಆಗಿದ್ದರು. ನಾನು ಅವರ ಸಂಗೀತ ನಿರ್ದೇಶನದಲ್ಲಿ ಹಾಡಿದ ಅನೇಕ ಹಾಡುಗಳು ತುಂಬ ಜನಪ್ರಿಯ ಆಗಿದ್ದವು. ಅವರಿಗೆ ನಾನು ಶ್ರದ್ಧಾಂಜಲಿ ಸಲ್ಲಿಸುತ್ತೇನೆ’ ಎಂದು ಲತಾ ಮಂಗೇಶ್ಕರ್​ ಟ್ವೀಟ್​ ಮಾಡಿದ್ದಾರೆ.

ಹಿಂದಿ, ಮರಾಠಿ, ಭೋಜಪುರಿ ಸೇರಿದಂತೆ 75ಕ್ಕೂ ಅಧಿಕ ಸಿನಿಮಾಗಳಿಗೆ ರಾಮ್​ ಲಕ್ಷ್ಮಣ್​ ಸಂಗೀತ ನೀಡಿದ್ದರು. ಚಿತ್ರರಂಗಕ್ಕೆ ಎಂಟ್ರಿ ನೀಡಿದಾಗ ವಿಜಯ್​ ಪಾಟೀಲ್​ ಎಂಬ ತಮ್ಮ ಮೂಲ ಹೆಸರನ್ನು ಲಕ್ಷಣ್​ ಎಂದು ಅವರು ಬದಲಾಯಿಸಿಕೊಂಡಿದ್ದರು. ಅವರ ಮ್ಯೂಸಿಕ್​ ಪಾರ್ಟ್ನರ್​ ಆಗಿದ್ದ ಸುರೇಂದ್ರ ಅವರು ರಾಮ್​ ಎಂದು ಹೆಸರು ಬದಲಾಯಿಸಿಕೊಂಡಿದ್ದರು. ಇಬ್ಬರೂ ಸೇರಿ ರಾಮ್ ​ಲಕ್ಷ್ಮಣ್​ ಎಂಬ ಹೆಸರಿನಿಂದ ಜನಪ್ರಿಯರಾಗಿದ್ದರು. ಆದರೆ 1977ರಲ್ಲಿ ರಾಮ್​ (ಸುರೇಂದ್ರ) ನಿಧನರಾದರು. ಆ ಬಳಿಕವೂ ವಿಜಯ್​ ಪಾಟೀಲ್​ ಅವರು ತಮ್ಮ ಹೆಸರನ್ನು ರಾಮ್​ ಲಕ್ಷ್ಮಣ್​ ಎಂದೇ ಮುಂದುವರಿಸಿದರು.

ಬಾಲಿವುಡ್​ನ ಖ್ಯಾತ ನಿರ್ಮಾಣ ಸಂಸ್ಥೆಯಾದ ರಾಜಶ್ರೀ ಪ್ರೊಡಕ್ಷನ್ಸ್​ ಕೂಡ ರಾಮ್​ ಲಕ್ಷ್ಮಣ್​ ನಿಧನಕ್ಕೆ ಕಂಬನಿ ಮಿಡಿದಿದೆ. ‘ಚಿತ್ರರಂಗಕ್ಕೆ ನೀವು ನೀಡಿದ ಕೊಡುಗೆಯನ್ನು ರಾಜಶ್ರೀ ಪ್ರೊಡಕ್ಷನ್ಸ್​ ಸದಾ ಸ್ಮರಿಸುತ್ತದೆ. ನಿಮ್ಮ ಆತ್ಮಕ್ಕೆ ಶಾಂತಿ ಸಿಗಲಿ’ ಎಂದು ಸಂಸ್ಥೆ ಹೇಳಿದೆ. ಬಾಲಿವುಡ್​ನ ಅನೇಕ ಸೆಲೆಬ್ರಿಟಿಗಳು ರಾಮ್​ಲಕ್ಷ್ಮಣ್​ ನಿಧನಕ್ಕೆ ಕಂಬನಿ ಮಿಡಿದಿದ್ದಾರೆ.

ಇದನ್ನೂ ಓದಿ:

BA Raju: ಹೃದಯಾಘಾತದಿಂದ ನಿರ್ಮಾಪಕ, ಪ್ರಚಾರಕ ಬಿಎ ರಾಜು ನಿಧನ; ಮಹೇಶ್​ ಬಾಬು ಸಂತಾಪ

ಹಾಸ್ಯ ನಟ ಅಯ್ಯಪ್ಪನ್​ ಗೋಪಿ ಹೃದಯಾಘಾತದಿಂದ ನಿಧನ; ಚಿತ್ರರಂಗಕ್ಕೆ ಮತ್ತೊಂದು ಆಘಾತ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ