AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸಲಾರ್’ ರಿಲೀಸ್ ಡೇಟ್​ನಲ್ಲಿ ಬರುತ್ತಿದೆ ಶ್ರೀಲೀಲಾ ಸಿನಿಮಾ; ಪ್ರಮೋಷನ್​ಗೆ ಭರ್ಜರಿ ಪ್ಲಾನ್

ರಾಮ್ ಪೋತಿನೇನಿ ಹಾಗೂ ಶ್ರೀಲೀಲಾ ಅವರು ‘ಸ್ಕಂದ’ ಸಿನಿಮಾದಲ್ಲಿ ಒಟ್ಟಾಗಿ ನಟಿಸಿದ್ದಾರೆ. ಈ ಚಿತ್ರ ಗಣೇಶ ಚತುರ್ಥಿ ಪ್ರಯುಕ್ತ ಸೆಪ್ಟೆಂಬರ್ 15ರಂದು ಬಿಡುಗಡೆ ಆಗುವುದರಲ್ಲಿತ್ತು. ಆದರೆ, ಚಿತ್ರಕ್ಕೆ ದೊಡ್ಡ ಮಟ್ಟದ ಪ್ರಚಾರ ನೀಡಿಲ್ಲ. ಈ ಕಾರಣದಿಂದಲೋ ಏನೋ ನಿರ್ಮಾಪಕರು ಸಿನಿಮಾ ರಿಲೀಸ್ ದಿನಾಂಕವನ್ನು ಮುಂದಕ್ಕೆ ಹಾಕಿಕೊಂಡಿದ್ದಾರೆ.

‘ಸಲಾರ್’ ರಿಲೀಸ್ ಡೇಟ್​ನಲ್ಲಿ ಬರುತ್ತಿದೆ ಶ್ರೀಲೀಲಾ ಸಿನಿಮಾ; ಪ್ರಮೋಷನ್​ಗೆ ಭರ್ಜರಿ ಪ್ಲಾನ್
ಸ್ಕಂದ ಟೀಂ-ಸಲಾರ್
ರಾಜೇಶ್ ದುಗ್ಗುಮನೆ
|

Updated on:Sep 05, 2023 | 7:32 AM

Share

‘ಸಲಾರ್’ ಸಿನಿಮಾದ (Salaar Movie) ರಿಲೀಸ್ ಡೇಟ್ ಮುಂದಕ್ಕೆ ಹೋಗಿರುವುದು ಬಹುತೇಕ ಖಚಿತ ಎನ್ನಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 28ರಂದು ಸಿನಿಮಾ ರಿಲೀಸ್ ಮಾಡಲು ದಕ್ಷಿಣ ಭಾರತದ ಕೆಲ ನಿರ್ಮಾಪಕರು ಆಸಕ್ತಿ ತೋರಿಸುತ್ತಿದ್ದಾರೆ. ಶ್ರೀಲೀಲಾ (Sreeleela) ಹಾಗೂ ರಾಮ್ ಪೋತಿನೇನಿ ನಟನೆಯ ‘ಸ್ಕಂದ’ ಸಿನಿಮಾ ಸೆಪ್ಟೆಂಬರ್ 15ಕ್ಕೆ ಬಿಡುಗಡೆ ಆಗಬೇಕಿತ್ತು. ಆದರೆ, ಈಗ ತಂಡ ಸಿನಿಮಾ ರಿಲೀಸ್ ದಿನಾಂಕವನ್ನು ಎರಡು ವಾರ ಮುಂದಕ್ಕೆ ಹಾಕಿದೆ. ಅರ್ಥಾತ್, ಸೆಪ್ಟೆಂಬರ್ 28ರಂದು ಚಿತ್ರ ರಿಲೀಸ್ ಮಾಡಲು ಪ್ಲ್ಯಾನ್ ರೂಪಿಸಿಕೊಂಡಿದೆ.

ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ಸೆಪ್ಟೆಂಬರ್ 28ರಂದು ‘ಸಲಾರ್’ ರಿಲೀಸ್ ಆಗಬೇಕಿತ್ತು. ಆದರೆ, ಚಿತ್ರತಂಡ ಈ ನಿರ್ಧಾರದಿಂದ ಹಿಂದಕ್ಕೆ ಸರಿದಿದೆ. ಅಮೆರಿಕದಲ್ಲಿ ಆನ್​ಲೈನ್​ ಬುಕಿಂಗ್​ಗೆ ಅವಕಾಶ ನೀಡಲಾಗಿತ್ತು. ಆದರೆ, ಅಲ್ಲಿನ ಹಂಚಿಕೆದಾರರಿಗೆ ಸಿನಿಮಾ ರಿಲೀಸ್ ದಿನಾಂಕ ಪೋಸ್ಟ್​ಪೋನ್ ಆದ ಬಗ್ಗೆ ಮಾಹಿತಿ ನೀಡಲಾಗಿದ್ದು, ಬುಕಿಂಗ್​ ಆಯ್ಕೆಯಿಂದ ‘ಸಲಾರ್’ ಸಿನಿಮಾವನ್ನು ತೆಗೆಯಲಾಗಿದೆ. ಹೀಗಾಗಿ, ಸಿನಿಮಾ ರಿಲೀಸ್ ಮುಂದಕ್ಕೆ ಹೋಗೋದು ಬಹುತೇಕ ಖಚಿತವಾಗಿದೆ.

ರಾಮ್ ಪೋತಿನೇನಿ ಹಾಗೂ ಶ್ರೀಲೀಲಾ ಅವರು ‘ಸ್ಕಂದ’ ಸಿನಿಮಾದಲ್ಲಿ ಒಟ್ಟಾಗಿ ನಟಿಸಿದ್ದಾರೆ.  ಬಯೋಪತಿ ಶ್ರೀನು ನಿರ್ದೇಶನದ ಈ ಚಿತ್ರ ಗಣೇಶ ಚತುರ್ಥಿ ಪ್ರಯುಕ್ತ ಸೆಪ್ಟೆಂಬರ್ 15ರಂದು ಬಿಡುಗಡೆ ಆಗುವುದರಲ್ಲಿತ್ತು. ಆದರೆ, ಚಿತ್ರಕ್ಕೆ ದೊಡ್ಡ ಮಟ್ಟದ ಪ್ರಚಾರ ನೀಡಿಲ್ಲ. ಈ ಕಾರಣದಿಂದಲೋ ಏನೋ ನಿರ್ಮಾಪಕರು ಸಿನಿಮಾ ರಿಲೀಸ್ ದಿನಾಂಕವನ್ನು ಮುಂದಕ್ಕೆ ಹಾಕಿಕೊಂಡಿದ್ದಾರೆ.

ಸೆಪ್ಟೆಂಬರ್ 28ರಂದು ‘ಸ್ಕಂದ’ ಸಿನಿಮಾ ತೆರೆಗೆ ಬರಲಿದೆ. ಕನ್ನಡದ ನಟಿ ಶ್ರೀಲೀಲಾಗೆ ಟಾಲಿವುಡ್​ನಲ್ಲಿ ಭರ್ಜರಿ ಬೇಡಿಕೆ ಸೃಷ್ಟಿ ಆಗಿದೆ. ಆರಕ್ಕೂ ಅಧಿಕ ಸಿನಿಮಾಗಳನ್ನು ಒಪ್ಪಿಕೊಂಡು ನಟಿಸುತ್ತಿದ್ದಾರೆ. ಅವರ ಮಾರುಕಟ್ಟೆ ಹೆಚ್ಚಿರುವುದರಿಂದ ನಿರ್ಮಾಪಕರು ಕೂಡ ಚಿತ್ರಕ್ಕೆ ಹೆಚ್ಚಿನ ಪ್ರಚಾರ ನೀಡಲು ನಿರ್ಧರಿಸಿದ್ದಾರೆ.

ಇದನ್ನೂ ಓದಿ: ‘ಆರ್​​ಪಿ ಎಂದರೆ ರಿಷಬ್ ಪಂತ್ ಅಲ್ಲ’; ಬಹುದಿನಗಳ ವದಂತಿ ಬಗ್ಗೆ ಮೌನ ಮುರಿದ ನಟಿ ಊರ್ವಶಿ ರೌಟೇಲಾ

‘ಸ್ಕಂದ’ ಚಿತ್ರದ ಟ್ರೇಲರ್ ಈಗಾಗಲೇ ರಿಲೀಸ್ ಆಗಿದೆ. ಆದರೆ, ಇದಕ್ಕೆ ಮಿಶ್ರಪ್ರತಿಕ್ರಿಯೆ ವ್ಯಕ್ತವಾಗಿದೆ. ಈ ಮೊದಲು ರಿಲೀಸ್ ಆದ ಬಯೋಪತಿ ಶ್ರೀನು ನಿರ್ದೇಶನದ ‘ವಿನಯ ವಿಧೇಯ ರಾಮ’ ಚಿತ್ರಕ್ಕೆ ಈ ಸಿನಿಮಾನ ಹೋಲಿಕೆ ಮಾಡುತ್ತಿದ್ದಾರೆ. ಈ ಚಿತ್ರ ಬಾಕ್ಸ್ ಆಫೀಸ್​ನಲ್ಲಿ ಡಿಸಾಸ್ಟರ್ ಎನಿಸಿಕೊಂಡಿತ್ತು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:15 am, Tue, 5 September 23

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ