AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮನ ಪಾತ್ರಧಾರಿ, ಬಿಜೆಪಿ ಅಭ್ಯರ್ಥಿ ಅರುಣ್​ ಗೋವಿಲ್​ ಜಯಭೇರಿ; ಸಿಕ್ಕ ಮತ ಎಷ್ಟು?

‘ರಾಮಾಯಣ’ ಸೀರಿಯಲ್​ನಲ್ಲಿ ಅರುಣ್​ ಗೋವಿಲ್​ ಅವರು ರಾಮನ ಪಾತ್ರ ನಿಭಾಯಿಸುವ ಮೂಲಕ ಮನೆಮಾತಾಗಿದ್ದರು. 2021ರಲ್ಲಿ ಅವರು ಬಿಜೆಪಿಗೆ ಸೇರ್ಪಡೆ ಆಗಿದ್ದರು. ಈ ಬಾರಿ ಅವರಿಗೆ ಮೊದಲ ಸಲ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಅವಕಾಶ ಸಿಕ್ಕಿತು. ಮೀರತ್​ ಕ್ಷೇತ್ರದಿಂದ ಕಣಕ್ಕೆ ಇಳಿದಿದ್ದ ಅವರು ಗೆಲುವು ಪಡೆದಿದ್ದಾರೆ.

ರಾಮನ ಪಾತ್ರಧಾರಿ, ಬಿಜೆಪಿ ಅಭ್ಯರ್ಥಿ ಅರುಣ್​ ಗೋವಿಲ್​ ಜಯಭೇರಿ; ಸಿಕ್ಕ ಮತ ಎಷ್ಟು?
ಅರುಣ್​ ಗೋವಿಲ್​
ಮದನ್​ ಕುಮಾರ್​
|

Updated on: Jun 04, 2024 | 10:58 PM

Share

ಎಂದಿನಂತೆ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ (Lok Sabha Election) ಹಲವು ಸೆಲೆಬ್ರಿಟಿಗಳು ತಮ್ಮ ಅದೃಷ್ಟ ಪರೀಕ್ಷೆ ಮಾಡಿಕೊಂಡರು. ಆ ಪೈಕಿ ಕಂಗನಾ ರಣಾವತ್​, ಅರುಣ್​ ಗೋವಿಲ್​, ಹೇಮಾ ಮಾಲಿನಿ ಮುಂತಾದವರಿಗೆ ಜಯ ಸಿಕ್ಕಿದೆ. ಉತ್ತರ ಪ್ರದೇಶದ ಮೀರತ್​ ಕ್ಷೇತ್ರದಿಂದ ಜನಪ್ರಿಯ ನಟ ಅರುಣ್​ ಗೋವಿಲ್​ ಅವರು ಬಿಜೆಪಿ (BJP) ಅಭ್ಯರ್ಥಿಯಾಗಿ ಚುನಾವಣೆಯ ಕಣಕ್ಕೆ ಇಳಿದಿದ್ದರು. ಇದು ಅವರ ಮೊದಲ ಚುನಾವಣೆ. ಚೊಚ್ಚಲ ಪ್ರಯತ್ನದಲ್ಲೇ ಅರುಣ್​ ಗೋವಿಲ್​ (Arun Govil) ಅವರು ಜಯಭೇರಿ ಬಾರಿಸಿದ್ದಾರೆ. 10,585 ಮತಗಳ ಅಂತರದಿಂದ ಅವರು ಗೆಲುವು ಸಾಧಿಸಿದ್ದಾರೆ.

1987ರಲ್ಲಿ ದೂರದರ್ಶನದಲ್ಲಿ ಪ್ರಸಾರವಾದ ‘ರಾಮಾಯಣ’ ಧಾರಾವಾಹಿಯಲ್ಲಿ ಅರುಣ್​ ಗೋವಿಲ್​ ಅವರು ರಾಮನ ಪಾತ್ರ ಮಾಡುವ ಮೂಲಕ ಮನೆಮಾತಾಗಿದ್ದರು. 2021ರಲ್ಲಿ ಅವರು ಬಿಜೆಪಿಗೆ ಸೇರ್ಪಡೆ ಆಗಿದ್ದರು. ಈ ಬಾರಿ ಅವರಿಗೆ ಮೊದಲ ಸಲ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಅವಕಾಶ ಸಿಕ್ಕಿತು. ಒಟ್ಟು 5,46,469 ಮತಗಳನ್ನು ಪಡೆಯುವ ಮೂಲಕ ಅವರು ಗೆದ್ದಿದ್ದಾರೆ.

ಇದನ್ನೂ ಓದಿ: ‘ಆತನ ಅಹಂಕಾರ ಮುರಿದಿದ್ದಕ್ಕೆ ಧನ್ಯವಾದ’: ಚಾರ್ ಸೌ ಪಾರ್ ಬಗ್ಗೆ ಪ್ರಕಾಶ್ ರಾಜ್ ಪ್ರತಿಕ್ರಿಯೆ

ಅರುಣ್​ ಗೋವಿಲ್​ ವಿರುದ್ಧ ಸಮಾಜವಾದಿ ಪಾರ್ಟಿಯ ಸುನೀತಾ ವರ್ಮಾ ಅವರು 5,35,884 ಮತಗಳನ್ನು ಪಡೆದಿದ್ದಾರೆ. ಅವರಿಗಿಂತಲೂ 10,585 ಹೆಚ್ಚು ಮತಗಳನ್ನು ಪಡೆಯುವ ಮೂಲಕ ಅರುಣ್​ ಗೋವಿಲ್​ ಅವರು ಗೆಲುವು ಕಂಡಿದ್ದಾರೆ. ಈಗ ಅವರಿಗೆ 66 ವರ್ಷ ವಯಸ್ಸು. ಸಂಸದನಾಗಿರುವ ಅವರಿಗೆ ಅಭಿಮಾನಿಗಳು ಅಭಿನಂದನೆ ಸಲ್ಲಿಸುತ್ತಿದ್ದಾರೆ.

ಸಿನಿಮಾದಲ್ಲಿ ಮೋದಿ ಪಾತ್ರ:

ಅರುಣ್​ ಗೋವಿಲ್​ ಅವರು ‘ರಾಮಾಯಣ’ ಧಾರಾವಾಹಿಯಲ್ಲಿ ರಾಮನ ಪಾತ್ರ ಮಾಡಿ ಜನರ ಮನ ಗೆದ್ದಿದ್ದರು. ಕೊವಿಡ್​ ಲಾಕ್​ಡೌನ್​ ಸಮಯದಲ್ಲಿ ಈ ಸೀರಿಯಲ್​ ಮರುಪ್ರಸಾರ ಕಂಡಿತ್ತು. ಆಗಲೂ ಅದನ್ನು ಜನರು ಅಷ್ಟೇ ಆಸಕ್ತಿಯಿಂದ ವೀಕ್ಷಿಸಿದ್ದರು. ಈ ವರ್ಷ ಫೆಬ್ರವರಿಯಲ್ಲಿ ಬಿಡುಗಡೆಯಾದ ‘ಆರ್ಟಿಕಲ್​ 370’ ಸಿನಿಮಾದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಪಾತ್ರವನ್ನು ಅರುಣ್​ ಗೋವಿಲ್​ ನಿಭಾಯಿಸಿದ್ದರು. ಆ ಸಿನಿಮಾ ಯಶಸ್ಸು ಕಂಡ ಬೆನ್ನಲ್ಲೇ ಅವರಿಗೆ ಮೀರತ್​ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಟಿಕೆಟ್​ ಸಿಕ್ಕಿತು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ