AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಯಶ್ ಫೆನಾಮಿನಲ್ ಆ್ಯಕ್ಟರ್, ಅವರ ಜೊತೆ ನಟಿಸಿದ್ದು ಅದ್ಭುತ ಅನುಭವ’; ಕಾಜಲ್

ಬಹುನಿರೀಕ್ಷಿತ 'ರಾಮಾಯಣ' ಚಿತ್ರದಲ್ಲಿ ಯಶ್ ಅವರನ್ನು 'ಅದ್ಭುತ ನಟ' ಎಂದು ಕಾಜಲ್ ಅಗರ್ವಾಲ್ ಶ್ಲಾಘಿಸಿದ್ದಾರೆ. ರಾವಣ-ಮಂಡೋದರಿಯಾಗಿ ಯಶ್-ಕಾಜಲ್ ಜೋಡಿ ಮೊದಲ ಭಾಗದ ಚಿತ್ರೀಕರಣ ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಅವರ ತೆರೆ ಮೇಲಿನ ಕೆಮಿಸ್ಟ್ರಿ ಬಗ್ಗೆ ಭಾರಿ ನಿರೀಕ್ಷೆಯಿದೆ. ಈ ಮಹಾಕಾವ್ಯವು ಭಾರತೀಯ ಸಿನೆಮಾದ ಇತಿಹಾಸದಲ್ಲಿ ಅತಿದೊಡ್ಡ ಬಜೆಟ್ ಚಿತ್ರಗಳಲ್ಲಿ ಒಂದಾಗಲಿದೆ.

‘ಯಶ್ ಫೆನಾಮಿನಲ್ ಆ್ಯಕ್ಟರ್, ಅವರ ಜೊತೆ ನಟಿಸಿದ್ದು ಅದ್ಭುತ ಅನುಭವ’; ಕಾಜಲ್
ಕಾಜಲ್-ಯಶ್
ರಾಜೇಶ್ ದುಗ್ಗುಮನೆ
|

Updated on:Jun 20, 2026 | 11:00 AM

Share

ಬಹುನಿರೀಕ್ಷಿತ ‘ರಾಮಾಯಣ’ ಸಿನಿಮಾದಲ್ಲಿ (Ramayana Movie) ರಾಕಿಂಗ್ ಸ್ಟಾರ್ ಯಶ್ ಅವರು ನಟಿಸಿದ್ದಾರೆ. ರಣಬೀರ್​ ಕಪೂರ್, ಸಾಯಿ ಪಲ್ಲವಿ ಸೇರಿದಂತೆ ದೊಡ್ಡ ಅಭಿಮಾನಿ ಬಳಗವೇ ಚಿತ್ರದಲ್ಲಿ ಇದೆ. ಈ ಕಾರಣದಿಂದಲೇ ದಕ್ಷಿಣದವರಿಗೆ ಸಿನಿಮಾ ಬಗ್ಗೆ ಸಾಕಷ್ಟು ನಿರೀಕ್ಷೆ ಮೂಡಿದೆ. ಈ ಚಿತ್ರದಲ್ಲಿ ನಟಿಸಿರುವ ಸೌತ್ ಸಿನಿರಂಗದ ಸ್ಟಾರ್ ನಟಿ ಕಾಜಲ್ ಅಗರ್ವಾಲ್, ಅವರ ನಟನಾ ಕೌಶಲ್ಯವನ್ನು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ಯಶ್ ಅವರನ್ನು ಒಬ್ಬ ‘ಫೆನಾಮಿನಲ್ ಆ್ಯಕ್ಟರ್’ ಎಂದು ಕರೆದಿರುವ ಕಾಜಲ್, ಅವರ ಜೊತೆ ಕೆಲಸ ಮಾಡಿದ ಅನುಭವವನ್ನು ಬಿಚ್ಚಿಟ್ಟಿದ್ದಾರೆ.

ನಿಖಿಲ್ ದ್ವಿವೇದಿ ನಿರ್ಮಾಣದ ಹಾಗೂ ನಿತೇಶ್ ತಿವಾರಿ ನಿರ್ದೇಶನದ ಈ ಮಹಾಕಾವ್ಯ ಆಧಾರಿತ ಸಿನಿಮಾದಲ್ಲಿ ರಾಕಿಂಗ್ ಸ್ಟಾರ್ ಯಶ್ ಅವರು ಲಂಕಾಧಿಪತಿ ರಾವಣನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಇನ್ನು ನಟಿ ಕಾಜಲ್ ಅಗರ್ವಾಲ್ ಅವರು ರಾವಣನ ಪತ್ನಿ ಮಂಡೋದರಿ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ.

ಮೊದಲ ಭಾಗದ ಶೂಟಿಂಗ್ ಕಂಪ್ಲೀಟ್!

ಚಿತ್ರದ ಪ್ರಗತಿಯ ಬಗ್ಗೆ ಮಾತನಾಡಿರುವ ಕಾಜಲ್ ಅಗರ್ವಾಲ್, ‘ಯಶ್ ನಿಜಕ್ಕೂ ಒಬ್ಬ ಅದ್ಭುತ ನಟ. ನಾವು ಈಗಾಗಲೇ ಸಿನಿಮಾದ ಮೊದಲ ಭಾಗದ ಚಿತ್ರೀಕರಣವನ್ನು ಯಶಸ್ವಿಯಾಗಿ ಮುಗಿಸಿದ್ದೇವೆ. ಸದ್ಯಕ್ಕೆ ಫಸ್ಟ್ ಪಾರ್ಟ್ ಮಾತ್ರ ಶೂಟ್ ಆಗಿದ್ದು, ಎರಡನೇ ಭಾಗದ ಶೂಟಿಂಗ್ ಇನ್ನಷ್ಟೇ ಆರಂಭವಾಗಬೇಕಿದೆ’ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ:  ‘ರಾಮಾಯಣ’, ‘ವಾರಣಾಸಿ’ ಚಿತ್ರಗಳ ಬಜೆಟ್ ಒಂದು ಗಿಮಿಕ್ ಎಂದ ಮನೋಜ್ ಬಾಜಪೇಯಿ

ರಾವಣ ಹಾಗೂ ಮಂಡೋದರಿಯಾಗಿ ಯಶ್ ಮತ್ತು ಕಾಜಲ್ ಜೋಡಿ ತೆರೆಮೇಲೆ ಹೇಗೆ ಅಬ್ಬರಿಸಲಿದೆ ಎಂದು ನೋಡಲು ಸಿನಿರಸಿಕರು ಈಗಿನಿಂದಲೇ ಕಾತುರರಾಗಿದ್ದಾರೆ. ರಾವಣನ ಭಾಗದ ದೃಶ್ಯಗಳು ಎರಡನೇ ಪಾರ್ಟ್​​​ನಲ್ಲಿ ಹೆಚ್ಚಾಗಿ ಬರಲಿವೆ. ಹೀಗಾಗಿ, ಯಶ್​-ಕಾಜಲ್ ಕಾಂಬಿನೇಷನ್ ‘ರಾಮಾಯಣ 2’ ಚಿತ್ರದಲ್ಲಿ ಹೆಚ್ಚಾಗಿ ಇರಲಿದೆ. ಭಾರಿ ಬಜೆಟ್‌ನಲ್ಲಿ ಸಿದ್ಧವಾಗುತ್ತಿರುವ ಈ ಚಿತ್ರವು ಭಾರತೀಯ ಸಿನಿಮಾ ಇತಿಹಾಸದಲ್ಲೇ ಅತ್ಯಂತ ದೊಡ್ಡ ಸಿನಿಮಾಗಳಲ್ಲಿ ಒಂದಾಗಲಿದೆ ಎಂದು ನಿರೀಕ್ಷಿಸಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 10:54 am, Sat, 20 June 26

Follow Us
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್