AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮಾಯಣಕ್ಕಾಗಿ ಮದ್ಯ ಹಾಗೂ ಮಾಂಸ ಸೇವನೆ ಬಿಟ್ಟ ರಣಬೀರ್ ಕಪೂರ್; ಪಬ್ಲಿಸಿಟಿ ಸ್ಟಂಟ್?

ರಣಬೀರ್ ಕಪೂರ್ ಅವರು ರಾಮನ ಪಾತ್ರ ಮಾಡುತ್ತಿರುವ ಬಗ್ಗೆ ಸಾಕಷ್ಟು ಅಪಸ್ವರ ಕೇಳಿ ಬಂದಿತ್ತು. ನಟಿ ಕಂಗನಾ ಕೂಡ ಈ ಬಗ್ಗೆ ಟೀಕೆ ಮಾಡಿದ್ದರು. ಈ ವಿಚಾರದಲ್ಲಿ ರಣಬೀರ್ ಕಪೂರ್ ಅವರು ಗಂಭೀರವಾಗಿ ಸ್ವೀಕರಿಸಿದಂತಿದೆ. ಅವರು ರಾಮನ ಪಾತ್ರ ಮಾಡಲು ಮಾಂಸ ಸೇವನೆ ಹಾಗೂ ಮದ್ಯಪಾನ ತೊರೆದಿದ್ದಾರಂತೆ.

ರಾಮಾಯಣಕ್ಕಾಗಿ ಮದ್ಯ ಹಾಗೂ ಮಾಂಸ ಸೇವನೆ ಬಿಟ್ಟ ರಣಬೀರ್ ಕಪೂರ್; ಪಬ್ಲಿಸಿಟಿ ಸ್ಟಂಟ್?
ರಣಬೀರ್
ರಾಜೇಶ್ ದುಗ್ಗುಮನೆ
|

Updated on: Oct 10, 2023 | 11:30 AM

Share

ರಾಮಾಯಣ ಆಧರಿಸಿ ಸಿದ್ಧವಾದ ‘ಆದಿಪುರುಷ್’ (Adipurush Movie) ದೊಡ್ಡ ಮಟ್ಟದಲ್ಲಿ ಫ್ಲಾಪ್ ಆಯಿತು. ಈ ಚಿತ್ರದಿಂದ ಪ್ರಭಾಸ್ ವೃತ್ತಿ ಜೀವನಕ್ಕೆ ಹಿನ್ನಡೆ ಆಯಿತು. ಈಗ ಬಾಲಿವುಡ್​ನಲ್ಲಿ ಮತ್ತೊಂದು ರಾಮಾಯಣದ ಕುರಿತ ಸಿನಿಮಾ ನಿರ್ಮಾಣಕ್ಕೆ ಸಿದ್ಧತೆ ನಡೆಯುತ್ತಿದೆ. ನಿತೀಶ್ ತಿವಾರಿ ಅವರು ರಾಮಾಯಾಣವನ್ನು ಮೂರು ಭಾಗದಲ್ಲಿ ತೆರೆಮೇಲೆ ತರುತ್ತಿದ್ದಾರೆ. ರಾಮನ ಪಾತ್ರದಲ್ಲಿ ರಣಬೀರ್ ಕಪೂರ್, ಸೀತೆಯ ಪಾತ್ರದಲ್ಲಿ ಸಾಯಿ ಪಲ್ಲವಿ ಕಾಣಿಸಿಕೊಂಡರೆ, ಯಶ್ ರಾವಣನಾಗಿ ಆರ್ಭಟಿಸಲಿದ್ದಾರೆ ಎಂದು ವರದಿ ಆಗಿದೆ. ಈಗ ಆಹಾರ ಕ್ರಮ ಬದಲಿಸಿಕೊಳ್ಳಲು ರಣಬೀರ್ ಕಪೂರ್ ನಿರ್ಧರಿಸಿದ್ದಾರೆ.

ರಣಬೀರ್ ಕಪೂರ್ ಅವರು ರಾಮನ ಪಾತ್ರ ಮಾಡುತ್ತಿರುವ ಬಗ್ಗೆ ಸಾಕಷ್ಟು ಅಪಸ್ವರ ಕೇಳಿ ಬಂದಿತ್ತು. ನಟಿ ಕಂಗನಾ ಕೂಡ ಈ ಬಗ್ಗೆ ಟೀಕೆ ಮಾಡಿದ್ದರು. ಈ ವಿಚಾರದಲ್ಲಿ ರಣಬೀರ್ ಕಪೂರ್ ಅವರು ಗಂಭೀರವಾಗಿ ಸ್ವೀಕರಿಸಿದಂತಿದೆ. ಅವರು ರಾಮನ ಪಾತ್ರ ಮಾಡಲು ಮಾಂಸ ಸೇವನೆ ಹಾಗೂ ಮದ್ಯಪಾನ ತೊರೆದಿದ್ದಾರಂತೆ. ಶೂಟಿಂಗ್ ಮುಗಿಯುವವರೆಗೂ ಅವರು ಇದೇ ರೀತಿ ಇರಲಿದ್ದಾರೆ.

ಬೇರೆಯವರು ಹೇಳಿದ್ದಾರೆ ಎನ್ನುವ ಕಾರಣಕ್ಕೆ ರಣಬೀರ್ ಕಪೂರ್ ಬದಲಾಗುತ್ತಿದ್ದಾರಾ ಅಥವಾ ಇದೊಂದು ಪಬ್ಲಿಸಿಟಿ ಸ್ಟಂಟ್? ಇದಕ್ಕೆ ಉತ್ತರವೂ ಸಿಕ್ಕಿದೆ. ‘ಶೂಟಿಂಗ್ ಶುರುವಾದ ಬಳಿಕ ರಣಬೀರ್ ಅವರು ಸಂಪೂರ್ಣವಾಗಿ ಆಲ್ಕೋಹಾಲ್ ತೊರೆಯಲಿದ್ದಾರೆ. ಮಾಂಸವನ್ನೂ ಮುಟ್ಟುವುದಿಲ್ಲ. ಇದೆಲ್ಲ ಪಬ್ಲಿಸಿಟಿ ಸ್ಟಂಟ್ ಅಲ್ಲ. ತಮ್ಮನ್ನು ತಾವು ಶುದ್ಧವಾಗಿಟ್ಟುಕೊಳ್ಳಬೇಕು ಎನ್ನುವ ಕಾರಣಕ್ಕೆ ಅವರು ಈ ರೀತಿ ಮಾಡುತ್ತಿದ್ದಾರೆ’ ಎಂದು ಮೂಲಗಳು ಹೇಳಿರುವುದಾಗಿ ವರದಿ ಆಗಿದೆ.

ಇದನ್ನೂ ಓದಿ: ‘ಬ್ರಹ್ಮಾಸ್ತ್ರ 2’ ಸೆಟ್ಟೇರಿತಾ? ವೈರಲ್ ಆಗುತ್ತಿದೆ ದೀಪಿಕಾ-ರಣಬೀರ್ ಕಪೂರ್ ಪೋಸ್ಟರ್

ರಣಬೀರ್ ಕಪೂರ್ ಅವರು ‘ಅನಿಮಲ್’ ಸಿನಿಮಾ ಪ್ರಚಾರದಲ್ಲಿ ಬ್ಯುಸಿ ಆಗಿದ್ದಾರೆ. ಈ ಚಿತ್ರವನ್ನು ‘ಅರ್ಜುನ್ ರೆಡ್ಡಿ’ ಖ್ಯಾತಿಯ ಸಂದೀಪ್ ರೆಡ್ಡಿ ವಂಗಾ ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾದಲ್ಲಿ ಅನಿಲ್ ಕಪೂರ್, ರಶ್ಮಿಕಾ ಮಂದಣ್ಣ ಮೊದಲಾದವರು ನಟಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ