AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಡುಗಡೆಗೆ 9 ತಿಂಗಳ ಮುಂಚೆಯೇ ಹೊರಬಿತ್ತು ‘ರಾಮಾಯಣ’ ಸಿನಿಮಾ ವಿಮರ್ಶೆ

Ramayana movie: ಆಸ್ಕರ್ ವಿಜೇತ ಹಾಲಿವುಡ್​ ವಿಎಫ್​​ಎಕ್ಸ್ ಸಂಸ್ಥೆಯಾದ ಡಿಎನ್​​ಇಜಿಯ ಸಿಇಓ ಆಗಿರುವ ನಮಿತ್ ಮಲ್ಹೋತ್ರಾ ಅವರು ‘ರಾಮಾಯಣ’ ಕತೆಯನ್ನು ಭಾರಿ ಅದ್ಧೂರಿಯಾಗಿ, ಇಡೀ ವಿಶ್ವವೇ ತಿರುಗಿ ನೋಡುವಂತೆ ನಿರ್ಮಿಸಿದ್ದಾರೆ ಎನ್ನಲಾಗುತ್ತಿದೆ. ‘ರಾಮಾಯಣ’ ಸಿನಿಮಾದ ಮೊದಲ ಭಾಗ ನವೆಂಬರ್ ತಿಂಗಳಲ್ಲಿ ಬಿಡುಗಡೆ ಆಗಲಿದೆ. ಆದರೆ ಸಿನಿಮಾ ಬಿಡುಗಡೆಗೆ ಇನ್ನೂ ಒಂಬತ್ತು ತಿಂಗಳು ಇರುವಾಗದೇ ಸಿನಿಮಾದ ರಿವ್ಯೂ (ವಿಮರ್ಶೆ) ಹೊರಬಿದ್ದಿದೆ.

ಬಿಡುಗಡೆಗೆ 9 ತಿಂಗಳ ಮುಂಚೆಯೇ ಹೊರಬಿತ್ತು ‘ರಾಮಾಯಣ’ ಸಿನಿಮಾ ವಿಮರ್ಶೆ
Ramayana Movie
ಮಂಜುನಾಥ ಸಿ.
|

Updated on:Mar 01, 2026 | 9:50 PM

Share

ರಣ್​​ಬೀರ್ ಕಪೂರ್ (Ranbir Kapoor) ಮತ್ತು ಯಶ್ ಒಟ್ಟಿಗೆ ನಟಿಸಿರುವ ‘ರಾಮಾಯಣ’ ಸಿನಿಮಾ ಭಾರತದ ಈ ವರೆಗಿನ ಅತಿ ದೊಡ್ಡ ಬಜೆಟ್​​ನ ಸಿನಿಮಾ ಎನ್ನಲಾಗುತ್ತಿದೆ. ಆಸ್ಕರ್ ವಿಜೇತ ಹಾಲಿವುಡ್​ ವಿಎಫ್​​ಎಕ್ಸ್ ಸಂಸ್ಥೆಯಾದ ಡಿಎನ್​​ಇಜಿಯ ಸಿಇಓ ಆಗಿರುವ ನಮಿತ್ ಮಲ್ಹೋತ್ರಾ ಅವರು ‘ರಾಮಾಯಣ’ ಕತೆಯನ್ನು ಭಾರಿ ಅದ್ಧೂರಿಯಾಗಿ, ಇಡೀ ವಿಶ್ವವೇ ತಿರುಗಿ ನೋಡುವಂತೆ ನಿರ್ಮಿಸಿದ್ದಾರೆ ಎನ್ನಲಾಗುತ್ತಿದೆ. ‘ರಾಮಾಯಣ’ ಸಿನಿಮಾದ ಮೊದಲ ಭಾಗ ನವೆಂಬರ್ ತಿಂಗಳಲ್ಲಿ ಬಿಡುಗಡೆ ಆಗಲಿದೆ. ಆದರೆ ಸಿನಿಮಾ ಬಿಡುಗಡೆಗೆ ಇನ್ನೂ ಒಂಬತ್ತು ತಿಂಗಳು ಇರುವಾಗದೇ ಸಿನಿಮಾದ ರಿವ್ಯೂ (ವಿಮರ್ಶೆ) ಹೊರಬಿದ್ದಿದೆ.

‘ರಾಮಾಯಣ’ ಸಿನಿಮಾದ ಮೊದಲ ಕಟ್ ಅಥವಾ ಆಕ್ಷನ್ ಕಟ್ ಆವೃತ್ತಿಯನ್ನು ಚಿತ್ರತಂಡವು ಈಗಾಗಲೇ ಆಯ್ದ ಕೆಲ ಪ್ರೇಕ್ಷಕರಿಗೆ ಪ್ರದರ್ಶಿಸಿದೆ. ಲಾಸ್ ಏಂಜಲ್ಸ್​​ನ ಸಿನೆಮಾರ್ಕ್ ವಿಸ್ತಾ ಸ್ಕ್ರೀನ್​​ನಲ್ಲಿ ಆಯ್ದ ಜನರಿಗೆ ಚಿತ್ರತಂಡವು ‘ರಾಮಾಯಣ’ ಸಿನಿಮಾವನ್ನು ಪ್ರದರ್ಶಿಸಿದೆ. ಈ ಗ್ರೂಪ್​​ನಲ್ಲಿ 18 ರಿಂದ 60 ವರ್ಷ ವಯಸ್ಸಿನ ಹಲವು ಕ್ಷೇತ್ರಗಳಿಗೆ ಸೇರಿದ ಪ್ರೇಕ್ಷಕರು ಇದ್ದರಂತೆ. ‘ರಾಮಾಯಣ’ ಸಿನಿಮಾದ ಫಸ್ಟ್ ಕಾಪಿಯನ್ನು ಪ್ರೇಕ್ಷಕರಿಗೆ ತೋರಿಸಲಾಗಿದ್ದು, ಅವರಿಂದ ಪ್ರತಿಕ್ರಿಯೆಗಳನ್ನು ಸಹ ಪಡೆಯಲಾಗಿದೆ.

‘ರಾಮಾಯಣ’ ಸಿನಿಮಾದ ಮೊದಲ ಕಟ್ ನೋಡಿದ ಪ್ರೇಕ್ಷಕರು ಸಿನಿಮಾವನ್ನು ಬಹಳ ಇಷ್ಟಪಟ್ಟಿದ್ದಾರೆ ಎನ್ನಲಾಗಿದೆ. ಸಿನಿಮಾದ ಅದ್ಧೂರಿತನ ಪ್ರೇಕ್ಷಕರಿಗೆ ಸಖತ್ ಇಷ್ಟವಾಯ್ತಂತೆ. ಅಲ್ಲದೆ ಕತೆಯಲ್ಲಿನ ಭಾವುಕ ಅಂಶಗಳು, ಹೀರೋಯಿಕ್ ಅಂಶಗಳು, ನೆಲಮೂಲದೊಟ್ಟಿಗೆ ಸಂಬಂಧ ಹೊಂದಿರುವಂತೆ ತೋರಿಸಲಾಗಿರುವ ಕತೆ ಎಲ್ಲವೂ ಪ್ರೇಕ್ಷಕರಿಗೆ ಇಷ್ಟವಾಯ್ತಂತೆ.

ಇದನ್ನೂ ಓದಿ:‘ಅನಿಮಲ್ ಪಾರ್ಕ್’ ಚಿತ್ರೀಕರಣ ಯಾವಾಗ: ಬಾಯ್ಬಿಟ್ಟ ರಣ್​​ಬೀರ್ ಕಪೂರ್

ಪ್ರೇಕ್ಷಕರ ಅಭಿಪ್ರಾಯಗಳನ್ನು ಸಂಗ್ರಹಿಸಿರುವ ಚಿತ್ರತಂಡ, ಪೋಸ್ಟ್ ಪ್ರೊಡಕ್ಷನ್​​ನಲ್ಲಿ ಕೆಲವು ತೀರ ಸಣ್ಣ-ಪುಟ್ಟ ಬದಲಾವಣೆಗಳನ್ನು ಮಾಡುತ್ತಿದೆ ಎನ್ನಲಾಗಿದೆ. ಸಿನಿಮಾ ಬಿಡುಗಡೆ ಇನ್ನೂ ಒಂಬತ್ತು ತಿಂಗಳು ಬಾಕಿ ಇದ್ದು, ವಿಎಫ್​​ಎಕ್ಸ್ ಮತ್ತು ಪೋಸ್ಟ್ ಪ್ರೊಡಕ್ಷನ್ ಕಾರ್ಯಗಳಿಗೆ ಈ ಸಮಯವನ್ನು ಚಿತ್ರತಂಡ ಬಳಸಿಕೊಳ್ಳಲಿದೆ.

‘ರಾಮಾಯಣ’ ಸಿನಿಮಾವನ್ನು ನಿತೇಶ್ ತಿವಾರಿ ನಿರ್ದೇಶನ ಮಾಡುತ್ತಿದ್ದಾರೆ. ಸಿನಿಮಾನಲ್ಲಿ ರಾಮನ ಪಾತ್ರದಲ್ಲಿ ರಣ್​​ಬೀರ್ ಕಪೂರ್, ರಾವಣನ ಪಾತ್ರದಲ್ಲಿ ನಟ ಯಶ್, ಸೀತಾಮಾತೆಯ ಪಾತ್ರದಲ್ಲಿ ಯಶ್ ನಟಿಸಿದ್ದಾರೆ. ಸನ್ನಿ ಡಿಯೋಲ್, ಕಾಜಲ್ ಅಗರ್ವಾಲ್ ಸೇರಿದಂತೆ ಇನ್ನೂ ಹಲವು ಖ್ಯಾತ ನಟ-ನಟಿಯರು ವಿವಿಧ ಪಾತ್ರಗಳಲ್ಲಿ ನಟಿಸಿದ್ದಾರೆ. ಸಿನಿಮಾ ಇದೇ ವರ್ಷ ದೀಪಾವಳಿ ಹಬ್ಬಕ್ಕೆ ಬಿಡುಗಡೆ ಆಗಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:49 pm, Sun, 1 March 26

Follow Us
Live: ಚಿತ್ರದುರ್ಗದಲ್ಲಿ ಬಿಎಸ್​ವೈ ಅಭಿಮಾನೋತ್ಸವ ನೇರ ಪ್ರಸಾರ
Live: ಚಿತ್ರದುರ್ಗದಲ್ಲಿ ಬಿಎಸ್​ವೈ ಅಭಿಮಾನೋತ್ಸವ ನೇರ ಪ್ರಸಾರ
ಬಿಎಸ್​​ವೈ ಅಭಿಮಾನೋತ್ಸವ: ಕಾರ್ಯಕರ್ತರು, ಅಭಿಮಾನಿಗಳಿಗೆ ಭರ್ಜರಿ ಭೋಜನ
ಬಿಎಸ್​​ವೈ ಅಭಿಮಾನೋತ್ಸವ: ಕಾರ್ಯಕರ್ತರು, ಅಭಿಮಾನಿಗಳಿಗೆ ಭರ್ಜರಿ ಭೋಜನ
ಕೆರೆ ಏರಿಯ ಮೇಲೆ ಮದುವೆ ದಿಬ್ಬಣದ ಬಸ್​​ ಪಲ್ಟಿ: ತಪ್ಪಿದ ಭಾರಿ ಅನಾಹುತ
ಕೆರೆ ಏರಿಯ ಮೇಲೆ ಮದುವೆ ದಿಬ್ಬಣದ ಬಸ್​​ ಪಲ್ಟಿ: ತಪ್ಪಿದ ಭಾರಿ ಅನಾಹುತ
ಬಿಜೆಪಿಯನ್ನು ಗೆಲ್ಲಿಸಿದ ಬಂಗಾಳದ ಜನತೆಗೆ ಪ್ರಧಾನಿ ಮೋದಿ ಶಿರ ಬಾಗಿ ನಮಸ್ಕಾರ
ಬಿಜೆಪಿಯನ್ನು ಗೆಲ್ಲಿಸಿದ ಬಂಗಾಳದ ಜನತೆಗೆ ಪ್ರಧಾನಿ ಮೋದಿ ಶಿರ ಬಾಗಿ ನಮಸ್ಕಾರ
ಇಂದು ಪ್ರಮಾಣವಚನ ಸ್ವೀಕರಿಸಿದ ಬಂಗಾಳದ ಬಿಜೆಪಿ ಸಚಿವರ ಪಟ್ಟಿ ಇಲ್ಲಿದೆ
ಇಂದು ಪ್ರಮಾಣವಚನ ಸ್ವೀಕರಿಸಿದ ಬಂಗಾಳದ ಬಿಜೆಪಿ ಸಚಿವರ ಪಟ್ಟಿ ಇಲ್ಲಿದೆ
ಬಿಜೆಪಿಯ ಹಿರಿಯ ಕಾರ್ಯಕರ್ತ ಮಖನಲಾಲ್ ಕಾಲಿಗೆರಗಿ ನಮಸ್ಕರಿಸಿದ ಪ್ರಧಾನಿ ಮೋದಿ
ಬಿಜೆಪಿಯ ಹಿರಿಯ ಕಾರ್ಯಕರ್ತ ಮಖನಲಾಲ್ ಕಾಲಿಗೆರಗಿ ನಮಸ್ಕರಿಸಿದ ಪ್ರಧಾನಿ ಮೋದಿ
ಕೊಲ್ಕತ್ತಾಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಕೊಲ್ಕತ್ತಾಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
Live: ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ; ಅಧಿಕಾರ ಸ್ವೀಕಾರ ಲೈವ್
Live: ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ; ಅಧಿಕಾರ ಸ್ವೀಕಾರ ಲೈವ್
ತುಂಗಭದ್ರ ನದಿಯಲ್ಲಿ ಕಾಣಿಸಿಕೊಳ್ತು ಬೃಹದಾಕಾರದ ಮೊಸಳೆ!
ತುಂಗಭದ್ರ ನದಿಯಲ್ಲಿ ಕಾಣಿಸಿಕೊಳ್ತು ಬೃಹದಾಕಾರದ ಮೊಸಳೆ!
ಕನ್ನಡದ ಯಾವ ಹೀರೋಗೆ ವಿಜಯ್ ತರಹ ಗೆಲ್ಲುವ ತಾಕತ್ತಿದೆ? ಉಪ್ಪಿ ಹೇಳಿದ್ದಿಷ್ಟು
ಕನ್ನಡದ ಯಾವ ಹೀರೋಗೆ ವಿಜಯ್ ತರಹ ಗೆಲ್ಲುವ ತಾಕತ್ತಿದೆ? ಉಪ್ಪಿ ಹೇಳಿದ್ದಿಷ್ಟು