AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ರಾಮಾಯಣ’ ಸಿನಿಮಾಗೆ ಇನ್ನೂ ಶುರುವಾಗಿಲ್ಲ ಪ್ರಚಾರ; ಕಾರಣವೇನು?

ರಣಬೀರ್ ಕಪೂರ್ ಹಾಗೂ ಯಶ್ ಅಭಿನಯದ 'ರಾಮಾಯಣ' ಸಿನಿಮಾದ ಪ್ರಚಾರ ಕಾರ್ಯ ಇನ್ನೂ ಆರಂಭವಾಗದಿರುವುದು ಚಿತ್ರರಂಗದಲ್ಲಿ ಅಚ್ಚರಿ ಮೂಡಿಸಿದೆ. 'ಟಾಕ್ಸಿಕ್' ಸಿನಿಮಾ ನಿರೀಕ್ಷಿತ ಮಟ್ಟದ ಯಶಸ್ಸು ಕಂಡಿಲ್ಲ. ಇದು ಅಂತಹ ದೊಡ್ಡ ಬದಲಾವಣೆ ಮಾಡೋದಿಲ್ಲ ಎನ್ನಲಾಗುತ್ತಿದೆ. ಆ ಬಗ್ಗೆ ಇಲ್ಲಿದೆ ವಿವರ.

‘ರಾಮಾಯಣ’ ಸಿನಿಮಾಗೆ ಇನ್ನೂ ಶುರುವಾಗಿಲ್ಲ ಪ್ರಚಾರ; ಕಾರಣವೇನು?
ರಣಬೀರ್
 ಶ್ರೀಲಕ್ಷ್ಮೀ ಎಚ್
| Edited By: |

Updated on:Sep 05, 2026 | 11:22 AM

Share

ಮುಖ್ಯಾಂಶಗಳು

  • ‘ರಾಮಾಯಣ' ಪ್ರಚಾರಕ್ಕೆ ಸಿಗದ ವೇಗ
  • ಪ್ರೇಕ್ಷಕರಲ್ಲಿ ಮೂಡಿದ ಕುತೂಹಲ
  • ಬ್ಯುಸಿನೆಸ್ ಡೀಲ್ಸ್ ಒತ್ತಡದಲ್ಲಿ ಚಿತ್ರತಂಡ 

ಭಾರತೀಯ ಚಿತ್ರರಂಗದ ಅತ್ಯಂತ ದುಬಾರಿ ಬಜೆಟ್‌ನ ‘ರಾಮಾಯಣ’ ಸಿನಿಮಾದ ಪ್ರಚಾರ ಕಾರ್ಯ ಇನ್ನೂ ವೇಗ ಪಡೆದುಕೊಂಡಿಲ್ಲ. ದೀಪಾವಳಿ ಹಬ್ಬಕ್ಕೆ ಸಿನಿಮಾ ಬಿಡುಗಡೆಯಾಗಲಿದೆ ಎಂಬ ವರದಿಗಳಿದ್ದರೂ ಚಿತ್ರತಂಡ ಸೌಂಡ್ ಮಾಡುತ್ತಿಲ್ಲ. ಇಷ್ಟು ದೊಡ್ಡ ಮಟ್ಟದ ಸಿನಿಮಾಗೆ ಸೂಕ್ತ ಪ್ರಚಾರ ಸಿಗದಿರುವುದು ಪ್ರೇಕ್ಷಕರಲ್ಲಿ ಹಾಗೂ ಚಿತ್ರರಂಗದಲ್ಲಿ ಭಾರೀ ಆಶ್ಚರ್ಯ ಮೂಡಿಸಿದೆ.

ಈ ಬೃಹತ್ ದೃಶ್ಯಕಾವ್ಯವನ್ನು ನಿರ್ದೇಶಕ ನಿತೇಶ್ ತಿವಾರಿ ನಿರ್ದೇಶಿಸುತ್ತಿದ್ದಾರೆ. ನಮಿತ್ ಮಲ್ಹೋತ್ರಾ ಇದನ್ನು ಅತ್ಯಂತ ಭಾರಿ ಬಜೆಟ್‌ನಲ್ಲಿ ಎರಡು ಭಾಗಗಳಾಗಿ ನಿರ್ಮಿಸುತ್ತಿದ್ದಾರೆ. ಚಿತ್ರದಲ್ಲಿ ರಣಬೀರ್ ಕಪೂರ್, ಸಾಯಿ ಪಲ್ಲವಿ, ಯಶ್ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದಾರೆ.

ಚಿತ್ರತಂಡ ಪ್ರಸ್ತುತ ಸಿನಿಮಾದ ಬ್ಯುಸಿನೆಸ್ ಡೀಲ್‌ಗಳ ಒತ್ತಡದಲ್ಲಿದೆ ಎಂದು ಹಿಂದಿ ಮಾಧ್ಯಮಗಳು ವರದಿ ಮಾಡಿವೆ. ವ್ಯಾಪಾರ ವಹಿವಾಟುಗಳ ಲೆಕ್ಕಾಚಾರ ಪೂರ್ಣಗೊಳ್ಳದ ಕಾರಣ ಪ್ರಚಾರ ತಡವಾಗುತ್ತಿದೆ. ಇದುವೇ ಪ್ರಚಾರ ಕಾರ್ಯ ಮುಂದೂಡಲ್ಪಡಲು ಪ್ರಮುಖ ಕಾರಣ ಎಂದು ಹೇಳಲಾಗುತ್ತಿದೆ.

ರಾಕಿಂಗ್ ಸ್ಟಾರ್ ಯಶ್ ಅಭಿನಯದ ‘ಟಾಕ್ಸಿಕ್’ ಸಿನಿಮಾದ ಫಲಿತಾಂಶಕ್ಕಾಗಿ ಚಿತ್ರತಂಡ ಕಾಯುತ್ತಿತ್ತು. ‘ರಾಮಾಯಣ’ ಚಿತ್ರದಲ್ಲಿ ಯಶ್ ರಾವಣನ ಪಾತ್ರ ಮಾಡಿದ್ದಾರೆ. ಆದರೆ ‘ಟಾಕ್ಸಿಕ್’ ಸಿನಿಮಾ ನಿರೀಕ್ಷಿತ ಮಟ್ಟದ ಯಶಸ್ಸು ಕಂಡಿಲ್ಲ. ಇದು ಅಂತಹ ಪ್ರಭಾವ ಬೀರುತ್ತಿಲ್ಲ ಎನ್ನಲಾಗುತ್ತಿದೆ.

ಇದನ್ನೂ ಓದಿ: ‘ರಾಮಾಯಣ’ ಹಂಚಿಕೆಗೆ ಮುಂದಾದ ದಿಲ್ ರಾಜು: ಎಷ್ಟು ಕೋಟಿ ಆಫರ್?

ಸಿನಿಮಾದ ಪ್ರಚಾರಕ್ಕೆ ರಣಬೀರ್ ಕಪೂರ್ ಹಾಗೂ ಯಶ್ ಇಬ್ಬರ ಕ್ರೇಜ್ ಬಳಸಿಕೊಳ್ಳಲು ಯೋಜಿಸಲಾಗಿತ್ತು. ಇನ್ನು ಕೇವಲ ಎರಡು ತಿಂಗಳು ಮಾತ್ರ ಬಾಕಿ ಇರುವಾಗ ಚಿತ್ರತಂಡ ತಕ್ಷಣ ಪ್ರಚಾರದಂಗಳಕ್ಕೆ ಇಳಿಯಬೇಕಿದೆ. ಪ್ರೇಕ್ಷಕರಲ್ಲಿ ನಿರೀಕ್ಷೆ ಹೆಚ್ಚಿಸಲು ತಂಡಕ್ಕೆ ಈಗ ಬಲವಾದ ಪ್ರಚಾರದ ಪ್ಲಾನ್ ಅಗತ್ಯವಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 11:21 am, Sat, 5 September 26

Follow Us
10 ದಿನಗಳ ಮೊದಲೇ ಬೆಳಗಾವಿಯಲ್ಲಿ ಗಣೇಶೋತ್ಸವದ ಸಂಭ್ರಮ!
10 ದಿನಗಳ ಮೊದಲೇ ಬೆಳಗಾವಿಯಲ್ಲಿ ಗಣೇಶೋತ್ಸವದ ಸಂಭ್ರಮ!
‘ಟಾಕ್ಸಿಕ್’ ಸಿನಿಮಾಗಾಗಿ ಯಶ್ ವರ್ಕೌಟ್ ಎಷ್ಟು ಕಠಿಣವಾಗಿತ್ತು ನೋಡಿ
‘ಟಾಕ್ಸಿಕ್’ ಸಿನಿಮಾಗಾಗಿ ಯಶ್ ವರ್ಕೌಟ್ ಎಷ್ಟು ಕಠಿಣವಾಗಿತ್ತು ನೋಡಿ
ಬೆಂಗಳೂರಿನ 64 ಪಿಜಿಗಳ ಮೇಲೆ ಆಹಾರ ಇಲಾಖೆಯ ದಿಢೀರ್ ದಾಳಿ!
ಬೆಂಗಳೂರಿನ 64 ಪಿಜಿಗಳ ಮೇಲೆ ಆಹಾರ ಇಲಾಖೆಯ ದಿಢೀರ್ ದಾಳಿ!
ಸವದತ್ತಿಯಲ್ಲಿ ವಿಬಿಜಿ ರಾಮ್ ಜಿ ಕಾಮಗಾರಿ ವೇಳೆ ಕಾರ್ಮಿಕರಿಗೆ ನಿಧಿ ಪತ್ತೆ
ಸವದತ್ತಿಯಲ್ಲಿ ವಿಬಿಜಿ ರಾಮ್ ಜಿ ಕಾಮಗಾರಿ ವೇಳೆ ಕಾರ್ಮಿಕರಿಗೆ ನಿಧಿ ಪತ್ತೆ
ಕೃಷ್ಣ ಜನ್ಮಾಷ್ಟಮಿ 2026: ಉಡುಪಿ ಶ್ರೀಕೃಷ್ಣ ಮಠದಲ್ಲಿ ಅರ್ಘ್ಯ ಪ್ರದಾನ
ಕೃಷ್ಣ ಜನ್ಮಾಷ್ಟಮಿ 2026: ಉಡುಪಿ ಶ್ರೀಕೃಷ್ಣ ಮಠದಲ್ಲಿ ಅರ್ಘ್ಯ ಪ್ರದಾನ
ಬೆಂಗಳೂರು: ಅಕ್ರಮವಾಗಿ ಸಾಗಿಸುತ್ತಿದ್ದ ಭಾರಿ ಪ್ರಮಾಣದ ಸ್ಫೋಟಕ ಜಪ್ತಿ
ಬೆಂಗಳೂರು: ಅಕ್ರಮವಾಗಿ ಸಾಗಿಸುತ್ತಿದ್ದ ಭಾರಿ ಪ್ರಮಾಣದ ಸ್ಫೋಟಕ ಜಪ್ತಿ
ಇಂದು ಈ ರಾಶಿಯವರಿಗಿದೆ ಐದು ಗ್ರಹಗಳ ಶುಭಫಲ!
ಇಂದು ಈ ರಾಶಿಯವರಿಗಿದೆ ಐದು ಗ್ರಹಗಳ ಶುಭಫಲ!
ಕಣ್ಣೀರಿಡುತ್ತಾ ಕೆಎಸ್‌ಆರ್‌ಟಿಸಿ ಬಸ್​​ಗೆ ಮುತ್ತನ್ನಿಟ್ಟ ಕೇರಳದ ಚಾಲಕ
ಕಣ್ಣೀರಿಡುತ್ತಾ ಕೆಎಸ್‌ಆರ್‌ಟಿಸಿ ಬಸ್​​ಗೆ ಮುತ್ತನ್ನಿಟ್ಟ ಕೇರಳದ ಚಾಲಕ
ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ದಕ್ಷಿಣದ ಗೋವರ್ಧನಗಿರಿ ಎಂದು ಕರೆಯುವುದೇಕೆ
ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ದಕ್ಷಿಣದ ಗೋವರ್ಧನಗಿರಿ ಎಂದು ಕರೆಯುವುದೇಕೆ
ಟಿವಿ9 ಇಂಪ್ಯಾಕ್ಟ್: 8 ವರ್ಷದಿಂದ ಆಗದ ಕೆಲಸ ಕೇವಲ ಹತ್ತು ದಿನದಲ್ಲೇ ಆಯ್ತು!
ಟಿವಿ9 ಇಂಪ್ಯಾಕ್ಟ್: 8 ವರ್ಷದಿಂದ ಆಗದ ಕೆಲಸ ಕೇವಲ ಹತ್ತು ದಿನದಲ್ಲೇ ಆಯ್ತು!