AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ರಾಮಾಯಣ’ ಚಿತ್ರದ ಬಿಡುಗಡೆ ಮುಂದೂಡಿಕೆ? ವದಂತಿಗಳಿಗೆ ತೆರೆ ಎಳೆದ ಚಿತ್ರತಂಡ!

Ramayana movie: ಸಿನಿಮಾವನ್ನು ಹಾಲಿವುಡ್​​ ಮಾದರಿಯಲ್ಲಿ ನಿರ್ಮಾಣ ಮಾಡಿರುವುದಾಗಿ ಮಾತ್ರವಲ್ಲದೆ, ಭಾರತದಿಂದ ವಿಶ್ವ ಸಿನಿಮಾ ರಂಗಕ್ಕಾಗಿ ನಿರ್ಮಾಣ ಮಾಡಲಾಗಿರುವ ಸಿನಿಮಾ ಎಂದು ನಿರ್ಮಾಪಕ ನಮಿತ್ ಮಲ್ಹೋತ್ರಾ ಪದೇ ಪದೇ ಹೇಳಿದ್ದಾರೆ. ಸಿನಿಮಾದ ಪ್ರಚಾರವನ್ನು ಈಗಾಗಲೇ ಆರಂಭಿಸಲಾಗಿದೆ. ಆದರೆ ಇದೀಗ ಹರಿದಾಡುತ್ತಿರುವ ಸುದ್ದಿಗಳ ಪ್ರಕಾರ, ಸಿನಿಮಾದ ಬಿಡುಗಡೆ ಮುಂದೂಡಲಾಗಿದೆ ಎನ್ನಲಾಗುತ್ತಿದೆ.

‘ರಾಮಾಯಣ’ ಚಿತ್ರದ ಬಿಡುಗಡೆ ಮುಂದೂಡಿಕೆ? ವದಂತಿಗಳಿಗೆ ತೆರೆ ಎಳೆದ ಚಿತ್ರತಂಡ!
Ramayana Movie
ಮಂಜುನಾಥ ಸಿ.
|

Updated on: Jun 14, 2026 | 5:56 PM

Share

ರಣ್​​ಬೀರ್ ಕಪೂರ್ (Ranbir Kapoor), ಯಶ್, ಸಾಯಿ ಪಲ್ಲವಿ ಇನ್ನೂ ಹಲವು ಸ್ಟಾರ್ ನಟ, ನಟಿಯರು ನಟಿಸಿ ಭಾರಿ ಬಜೆಟ್​​ನಲ್ಲಿ ನಿರ್ಮಾಣ ಮಾಡಲಾಗಿರುವ ‘ರಾಮಾಯಣ’ ಸಿನಿಮಾ ಭಾರತೀಯ ಚಿತ್ರರಂಗದ ಅತ್ಯಂತ ನಿರೀಕ್ಷೆಯ ಸಿನಿಮಾಗಳಲ್ಲಿ ಒಂದಾಗಿದೆ. ಸಿನಿಮಾವನ್ನು ಹಾಲಿವುಡ್​​ ಮಾದರಿಯಲ್ಲಿ ನಿರ್ಮಾಣ ಮಾಡಿರುವುದಾಗಿ ಮಾತ್ರವಲ್ಲದೆ, ಭಾರತದಿಂದ ವಿಶ್ವ ಸಿನಿಮಾ ರಂಗಕ್ಕಾಗಿ ನಿರ್ಮಾಣ ಮಾಡಲಾಗಿರುವ ಸಿನಿಮಾ ಎಂದು ನಿರ್ಮಾಪಕ ನಮಿತ್ ಮಲ್ಹೋತ್ರಾ ಪದೇ ಪದೇ ಹೇಳಿದ್ದಾರೆ. ಸಿನಿಮಾದ ಪ್ರಚಾರವನ್ನು ಈಗಾಗಲೇ ಆರಂಭಿಸಲಾಗಿದೆ. ಆದರೆ ಇದೀಗ ಹರಿದಾಡುತ್ತಿರುವ ಸುದ್ದಿಗಳ ಪ್ರಕಾರ, ಸಿನಿಮಾದ ಬಿಡುಗಡೆ ಮುಂದೂಡಲಾಗಿದೆ ಎನ್ನಲಾಗುತ್ತಿದೆ.

‘ರಾಮಾಯಣ’ ಸಿನಿಮಾದ ಟೀಸರ್ ಬಿಡುಗಡೆ ವಿಳಂಬವಾಗಿತ್ತು, ಆ ಬಳಿಕ ಬಿಡುಗಡೆ ಆದ ಟೀಸರ್​​ನಲ್ಲಿ ಸಿನಿಮಾದ ಬಿಡುಗಡೆ ದಿನಾಂಕ ಘೋಷಿಸಲಾಗಿತ್ತು. ಇದೇ ವರ್ಷದ ದೀಪಾವಳಿಗೆ ಸಿನಿಮಾದ ಮೊದಲ ಭಾಗ ರಿಲೀಸ್ ಆಗಲಿದೆ ಎನ್ನಲಾಯ್ತು. ಆದರೆ ಇದೀಗ ಹರಿದಾಡುತ್ತಿರುವ ಕೆಲ ಸುದ್ದಿಗಳ ಪ್ರಕಾರ ಸಿನಿಮಾದ ಬಿಡುಗಡೆ ತಡವಾಗಲಿದೆಯಂತೆ. ಅಂತರಾಷ್ಟ್ರೀಯ ಯುದ್ಧ ಪರಿಸ್ಥಿತಿಯ ಜೊತೆಗೆ ಸಿನಿಮಾದ ಕೆಲ ಭಾಗಗಳ ಮರು ವಿಎಫ್​​ಎಕ್ಸ್ ಮತ್ತು ಮರು ಚಿತ್ರೀಕರಣ ಸಹ ಮಾಡಲಾಗುತ್ತಿದೆ ಎಂಬ ಸುದ್ದಿಗಳು ಅಲ್ಲಲ್ಲಿ ಕೇಳಿ ಬರುತ್ತಿವೆ.

ಆದರೆ ಚಿತ್ರತಂಡ ಹೇಳಿರವಂತೆ ಅದೆಲ್ಲ ಸುಳ್ಳು ಸುದ್ದಿ ಎನ್ನಲಾಗಿದ್ದು, ಸಿನಿಮಾವು ಈ ಹಿಂದೆಯೇ ನಿಗದಿ ಪಡಿಸಿರುವಂತೆ ದೀಪಾವಳಿ ಹಬ್ಬದಂದೇ ಬಿಡುಗಡೆ ಆಗಲಿದೆಯೆಂತೆ. ಹಿಂದಿ ಮಾತ್ರವಲ್ಲದೆ, ಕನ್ನಡ, ತೆಲುಗು, ತಮಿಳು, ಮಲಯಾಳಂ ಸೇರಿದಂತೆ ಕೆಲ ವಿದೇಶಿ ಭಾಷೆಗಳಲ್ಲಿಯೂ ಡಬ್ ಆಗಿ ಸಿನಿಮಾ ಬಿಡುಗಡೆ ಆಗಲಿದೆ. ‘ರಾಮಾಯಣ’ ಸಿನಿಮಾದ ಪ್ರಚಾರ ಭಾರತದಲ್ಲಿ ಇನ್ನೂ ಅಧಿಕೃತವಾಗಿ ಆರಂಭವಾಗಿಲ್ಲ, ಆದರೆ ಅದೂ ಸಹ ಶೀಘ್ರವೇ ಆರಂಭ ಆಗಲಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ.

ಇದನ್ನೂ ಓದಿ:‘ಅನಿಮಲ್ ಪಾರ್ಕ್’ ಚಿತ್ರೀಕರಣ ಯಾವಾಗ: ಬಾಯ್ಬಿಟ್ಟ ರಣ್​​ಬೀರ್ ಕಪೂರ್

ರಣಬೀರ್ ಕಪೂರ್ ಶ್ರೀರಾಮನಾಗಿ, ಸಾಯಿ ಪಲ್ಲವಿ ಸೀತೆಯಾಗಿ ಮತ್ತು ಯಶ್ ರಾವಣನಾಗಿ ಕಾಣಿಸಿಕೊಳ್ಳುತ್ತಿರುವ ಈ ಸಿನಿಮಾ ನಮಿತ್ ಮಲ್ಹೋತ್ರಾ ಅವರ ಅತ್ಯಂತ ಮಹತ್ವಾಕಾಂಕ್ಷೆಯ ಸಿನಿಮಾ ಆಗಿದೆ. ಆಸ್ಕರ್ ವಿಜೇತ ಹಾಲಿವುಡ್ ಸಂಗೀತ ನಿರ್ದೇಶಕ ಹ್ಯಾನ್ಸ್ ಝಿಮ್ಮರ್ ಮತ್ತು ಎಆರ್ ರೆಹಮಾನ್ ಒಟ್ಟಿಗೆ ಈ ಸಿನಿಮಾಕ್ಕೆ ಸಂಗೀತ ನೀಡುತ್ತಿರುವುದು ವಿಶೇಷ. ಈ ಚಿತ್ರವನ್ನು ಜಾಗತಿಕ ಮಟ್ಟದ ಪ್ರೇಕ್ಷಕರನ್ನು ಗಮನದಲ್ಲಿಟ್ಟುಕೊಂಡು ಅತ್ಯಾಧುನಿಕ ವಿಎಫ್‌ಎಕ್ಸ್ ತಂತ್ರಜ್ಞಾನದೊಂದಿಗೆ ತಯಾರಿಸಲಾಗುತ್ತಿದೆ. ಚಿತ್ರದ ಕೆಲಸಗಳು ವೇಗವಾಗಿ ನಡೆಯುತ್ತಿದ್ದು, ಬಿಡುಗಡೆಯ ದಿನಾಂಕದಲ್ಲಿ ಯಾವುದೇ ಬದಲಾವಣೆಗಳಿಲ್ಲ ಎನ್ನಲಾಗಿದೆ. ಸಿನಿಮಾದ ಮೊದಲ ಭಾಗ ಈ ವರ್ಷ ದೀಪಾವಳಿಗೆ ಬಿಡುಗಡೆ ಆದರೆ ಎರಡನೇ ಭಾಗ ಮುಂದಿನ ವರ್ಷದ ದೀಪಾವಳಿಗೆ ಬಿಡುಗಡೆ ಆಗಲಿದೆ. ಸಿನಿಮಾ ಅನ್ನು ನಿತೇಶ್ ತಿವಾರಿ ನಿರ್ದೇಶನ ಮಾಡಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಇಂದು ಈ ರಾಶಿಯವರು ತಮ್ಮ ಕುಟುಂಬದ ಕಡೆ ಹೆಚ್ಚಿನ ಗಮನ ಕೊಡಬೇಕು
ಇಂದು ಈ ರಾಶಿಯವರು ತಮ್ಮ ಕುಟುಂಬದ ಕಡೆ ಹೆಚ್ಚಿನ ಗಮನ ಕೊಡಬೇಕು
ಬಿಜೆಪಿ ಸಭೆ: ಶಾಸಕರ ಮೇಲೆ ವಿಶ್ವಾಸ ಇಟ್ಟಿದ್ದೇ ತಪ್ಪಾಯ್ತು ಎಂದ ಅಶೋಕ್
ಬಿಜೆಪಿ ಸಭೆ: ಶಾಸಕರ ಮೇಲೆ ವಿಶ್ವಾಸ ಇಟ್ಟಿದ್ದೇ ತಪ್ಪಾಯ್ತು ಎಂದ ಅಶೋಕ್
ರಾಮ ಮಂದಿರದ ದೇಣಿಗೆ ಲೂಟಿ: ಕದ್ದ ಹಣದಲ್ಲಿ ಪ್ರೇಮ ಪುರಾಣ, ಲವರ್​ಗೆ ಗಿಫ್ಟ್!
ರಾಮ ಮಂದಿರದ ದೇಣಿಗೆ ಲೂಟಿ: ಕದ್ದ ಹಣದಲ್ಲಿ ಪ್ರೇಮ ಪುರಾಣ, ಲವರ್​ಗೆ ಗಿಫ್ಟ್!
ಕೆ ಸುಧಾಕರ್‌ ಜೊತೆಗಿನ ವೈಮನಸಿನ ಬಗ್ಗೆ ಬಿಜೆಪಿ ಸಭೆಯಲ್ಲಿ ಚರ್ಚೆ ಆಯ್ತಾ?
ಕೆ ಸುಧಾಕರ್‌ ಜೊತೆಗಿನ ವೈಮನಸಿನ ಬಗ್ಗೆ ಬಿಜೆಪಿ ಸಭೆಯಲ್ಲಿ ಚರ್ಚೆ ಆಯ್ತಾ?
ವಿಶ್ವ ವಿಖ್ಯಾತ ಜೋಗ್ ಫಾಲ್ಸ್ ಗೆ ರಾಜಕಳೆ
ವಿಶ್ವ ವಿಖ್ಯಾತ ಜೋಗ್ ಫಾಲ್ಸ್ ಗೆ ರಾಜಕಳೆ
ಸಿಪಿ ಯೋಗೇಶ್ವರ್ ಪುತ್ರನ ಸಿನಿಮಾಕ್ಕೆ ಕ್ಲ್ಯಾಪ್ ಮಾಡಿದ ಸಿಎಂ ಡಿಕೆಶಿ
ಸಿಪಿ ಯೋಗೇಶ್ವರ್ ಪುತ್ರನ ಸಿನಿಮಾಕ್ಕೆ ಕ್ಲ್ಯಾಪ್ ಮಾಡಿದ ಸಿಎಂ ಡಿಕೆಶಿ
SIR ವೇಳೆ ಕುಸಿದುಬಿದ್ದ BLO, ಬೇಡಿಕೊಂಡ್ರೂ ಕೇಳಿಲ್ಲ ಎಂದು ಶಿಕ್ಷಕಿ ಅಳಲು
SIR ವೇಳೆ ಕುಸಿದುಬಿದ್ದ BLO, ಬೇಡಿಕೊಂಡ್ರೂ ಕೇಳಿಲ್ಲ ಎಂದು ಶಿಕ್ಷಕಿ ಅಳಲು
ಈ ಬಾರಿ ತುಂಬಿದ ಕರ್ನಾಟಕದ ಮೊದಲ ಡ್ಯಾಂನ ಭೋರ್ಗರೆತ ಹೇಗಿದೆ ನೋಡಿ
ಈ ಬಾರಿ ತುಂಬಿದ ಕರ್ನಾಟಕದ ಮೊದಲ ಡ್ಯಾಂನ ಭೋರ್ಗರೆತ ಹೇಗಿದೆ ನೋಡಿ
ರೈಲಿಗೆ ಬಾಂಬ್ ಬೆದರಿಕೆ: ಪ್ರಯಾಣಿಕರನ್ನ ಕೆಳಗಿಳಿಸಿ ತಪಾಸಣೆ, ಓರ್ವ ವಶಕ್ಕೆ!
ರೈಲಿಗೆ ಬಾಂಬ್ ಬೆದರಿಕೆ: ಪ್ರಯಾಣಿಕರನ್ನ ಕೆಳಗಿಳಿಸಿ ತಪಾಸಣೆ, ಓರ್ವ ವಶಕ್ಕೆ!
ಸಿಎಂ ಡಿ.ಕೆ. ಶಿವಕುಮಾರ್ ಭೇಟಿಯಾದ ನಟ ರಿಷಬ್ ಶೆಟ್ಟಿ; ಕಾರಣ ಏನು?
ಸಿಎಂ ಡಿ.ಕೆ. ಶಿವಕುಮಾರ್ ಭೇಟಿಯಾದ ನಟ ರಿಷಬ್ ಶೆಟ್ಟಿ; ಕಾರಣ ಏನು?