AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೀಕ್ ಆಯ್ತು ‘ರಾಮಾಯಣ’ ಸಿನಿಮಾ ಟ್ರೈಲರ್, ಸಿನಿಪ್ರಿಯರು ಹೇಳಿದ್ದೇನು?

Ramayana movie: ರಣ್​​ಬೀರ್ ಕಪೂರ್, ಯಶ್ ಹಾಗೂ ಇಡೀ ಚಿತ್ರತಂಡ ವಿದೇಶಗಳಲ್ಲಿ ಭರ್ಜರಿಯಾಗಿ ಸಿನಿಮಾದ ಪ್ರಚಾರ ಮಾಡುತ್ತಿದ್ದಾರೆ. ಇತ್ತೀಚೆಗಷ್ಟೆ ಸ್ಯಾನ್ ಡಿಯಾಗೊನಲ್ಲಿ ನಡೆದ ಕಾಮಿಕಾನ್​​ನಲ್ಲಿ ಸಹ ಚಿತ್ರತಂಡ ಭಾಗವಹಿಸಿತ್ತು. ಕಾಮಿಕಾನ್​​ನಲ್ಲಿ ಸಿನಿಮಾದ ಅನ್ ರಿಲೀಸ್ಡ್ ಟ್ರೈಲರ್ ಪ್ರದರ್ಶಿಸಲಾಯ್ತು. ಆದರೆ ಇದೀಗ ಆನ್​​ಲೈನ್​​​ನಲ್ಲಿ ಟ್ರೈಲರ್ ಲೀಕ್ ಆಗಿದೆ.

ಲೀಕ್ ಆಯ್ತು ‘ರಾಮಾಯಣ’ ಸಿನಿಮಾ ಟ್ರೈಲರ್, ಸಿನಿಪ್ರಿಯರು ಹೇಳಿದ್ದೇನು?
Ramayana Trailer
ಮಂಜುನಾಥ ಸಿ.
|

Updated on: Jul 25, 2026 | 10:43 PM

Share

ರಾಮಾಯಣ’ (Ramayana) ಭಾರತದ ಈ ವರೆಗಿನ ಅತಿ ಹೆಚ್ಚು ಬಜೆಟ್ ಸಿನಿಮಾ ಎನಿಸಿಕೊಂಡಿದೆ. ಸಿನಿಮಾ ಅನ್ನು ವಿಶ್ವ ಮಟ್ಟದಲ್ಲಿ ಬಲು ಅದ್ಧೂರಿಯಾಗಿ ಬಿಡುಗಡೆ ಮಾಡಲು ಚಿತ್ರತಂಡ ರೆಡಿಯಾಗಿದೆ. ರಣ್​​ಬೀರ್ ಕಪೂರ್, ಯಶ್ ಹಾಗೂ ಇಡೀ ಚಿತ್ರತಂಡ ವಿದೇಶಗಳಲ್ಲಿ ಭರ್ಜರಿಯಾಗಿ ಸಿನಿಮಾದ ಪ್ರಚಾರ ಮಾಡುತ್ತಿದ್ದಾರೆ. ಇತ್ತೀಚೆಗಷ್ಟೆ ಸ್ಯಾನ್ ಡಿಯಾಗೊನಲ್ಲಿ ನಡೆದ ಕಾಮಿಕಾನ್​​ನಲ್ಲಿ ಸಹ ಚಿತ್ರತಂಡ ಭಾಗವಹಿಸಿತ್ತು. ಕಾಮಿಕಾನ್​​ನಲ್ಲಿ ಸಿನಿಮಾದ ಅನ್ ರಿಲೀಸ್ಡ್ ಟ್ರೈಲರ್ ಪ್ರದರ್ಶಿಸಲಾಯ್ತು. ಆದರೆ ಇದೀಗ ಆನ್​​ಲೈನ್​​​ನಲ್ಲಿ ಟ್ರೈಲರ್ ಲೀಕ್ ಆಗಿದೆ.

‘ರಾಮಾಯಣ ಪಾರ್ಟ್ 1’ ಟ್ರೇಲರ್ ಆನ್‌ಲೈನ್‌ನಲ್ಲಿ ಸೋರಿಕೆಯಾಗಿದೆ. ರಣಬೀರ್ ಕಪೂರ್, ಸಾಯಿ ಪಲ್ಲವಿ, ಯಶ್ ಮತ್ತು ರಕುಲ್ ಪ್ರೀತ್ ಸಿಂಗ್ ಅವರನ್ನೊಳಗೊಂಡ ದೃಶ್ಯಗಳು ತುಂಡು ತುಂಡಾಗಿ ಹಲವಾರು ಬಾರಿ ಆನ್‌ಲೈನ್‌ನಲ್ಲಿ ಸೋರಿಕೆಯಾಗಿದೆ. ಕೆಲ ನೆಟ್ಟಿಗರು ಈ ವರೆಗೆ ಲೀಕ್ ಆಗಿರುವ ವಿಡಿಯೋಗಳನ್ನೆಲ್ಲ ಸಂಪಾದಿಸಿ ಎಲ್ಲ ಬಿಡಿ ದೃಶ್ಯಗಳನ್ನು ಜೋಡಿಸಿ ಪೂರ್ಣ ಟ್ರೈಲರ್ ಅನ್ನೇ ಮಾಡಿ ಹಂಚಿಕೊಂಡಿದ್ದಾರೆ.

ಜುಲೈ 18 ರಂದು ಹೊಸ ದೆಹಲಿಯಲ್ಲಿ ನಡೆದ ‘ಪ್ರಥಮ ಸಂಕಲ್ಪ’ ಕಾರ್ಯಕ್ರಮದಲ್ಲಿ ರಾಮಾಯಣದ ಟ್ರೇಲರ್ ಅನ್ನು ಪ್ರದರ್ಶಿಸಲಾಯಿತು, ಅದರ ನಂತರ ಅದರ ಕೆಲವು ತುಣುಕುಗಳು ಆನ್‌ಲೈನ್‌ನಲ್ಲಿ ಸೋರಿಕೆಯಾಗಿದ್ದವು. ಕಾಮಿಕ್-ಕಾನ್‌ನಲ್ಲಿ ಪ್ರದರ್ಶನಗೊಂಡ ನಂತರವೂ ಕ್ಲಿಪ್‌ಗಳು ಆನ್‌ಲೈನ್‌ನಲ್ಲಿ ಹರಿದಾಡಿದವು. ಅಂದಿನಿಂದ, ಎಕ್ಸ್ ಬಳಕೆದಾರರೊಬ್ಬರು ಸೋರಿಕೆಯಾದ ಕ್ಲಿಪ್‌ಗಳನ್ನು ಒಟ್ಟುಗೂಡಿಸಿ 2 ನಿಮಿಷಗಳ ಟ್ರೇಲರ್ ಮಾಡಿದ್ದಾರೆ. ಅಂತಿಮ ಟ್ರೇಲರ್ ಹೀಗೆಯೇ ಇರುತ್ತದೆಯೇ ಎಂಬುದು ತಿಳಿದಿಲ್ಲವಾದರೂ, ಕೆಲವು ಅಭಿಮಾನಿಗಳು ಈಗ ನೆಟ್ಟಿಗ ಮಾಡಿರುವ ಟ್ರೈಲರ್ ನೋಡಿ ಪ್ರಭಾವಿತರಾಗಿದ್ದಾರೆ. ಬೇಗನೆ ಟ್ರೈಲರ್ ಬಿಡುಗಡೆ ಮಾಡುವಂತೆ ಒತ್ತಾಯಿಸಿದ್ದಾರೆ.

ಇದನ್ನೂ ಓದಿ:‘ರಾಮಾಯಣ’ ಸಿನಿಮಾಕ್ಕೆ ಎರಡು ವರ್ಷ ತಯಾರಿ, ರಣ್​​ಬೀರ್ ಕಪೂರ್ ಮಾಹಿತಿ

‘ರಾಮಾಯಣ’ ಸಿನಿಮಾದ ಟ್ರೈಲ್ ಮೊನ್ನೆ ಬಿಡುಗಡೆ ಆಗಬೇಕಿತ್ತು. ಆದರೆ ಅನಿವಾರ್ಯ ಕಾರಣಗಳಿಂದಾಗಿ ಟ್ರೈಲರ್ ಬಿಡುಗಡೆ ಮುಂದೂಡಲ್ಪಟ್ಟಿದೆ. ವಿದ್ಯಾರ್ಥಿಗಳ ಮೇಲೆ ಆದ ಹಲ್ಲೆಯ ಕಾರಣಕ್ಕೆ ಟ್ರೈಲರ್ ಬಿಡುಗಡೆ ಮುಂದೂಡಲಾಗಿದೆ ಎನ್ನಲಾಗಿತ್ತು. ಆದರೆ ಸಿನಿಮಾದ ನಿರ್ಮಾಪಕ ಹಂಚಿಕೊಂಡಿದ್ದ ಪೋಸ್ಟ್​​​ನಲ್ಲಿ ವಿದ್ಯಾರ್ಥಿಗಳ ಮೇಲಿನ ಹಲ್ಲೆಯ ಉಲ್ಲೇಖ ಇರಲಿಲ್ಲ. ಅನಿವಾರ್ಯ ಕಾರಣಗಳಿಂದಾಗಿ ಟ್ರೈಲರ್ ಬಿಡುಗಡೆ ಮುಂದೂಡಿರುವುದಾಗಿ ಮಾತ್ರವೇ ಇತ್ತು.

‘ರಾಮಾಯಣ’ ಸಿನಿಮಾನಲ್ಲಿ ರಣ್​​ಬೀರ್ ಕಪೂರ್ ರಾಮನ ಪಾತ್ರದಲ್ಲಿ, ಯಶ್​​ ರಾವಣನಾಗಿ, ಸಾಯಿ ಪಲ್ಲವಿ ಸೀತೆಯಾಗಿ, ಸನ್ನಿ ಡಿಯೋಲ್ ಹನುಂತನ ಪಾತ್ರದಲ್ಲಿ ನಟಿಸಿದ್ದಾರೆ. ಸಿನಿಮಾಕ್ಕೆ ನಮಿತ್ ಮಲ್ಹೋತ್ರಾ ಬಂಡವಾಳ ಹೂಡಿದ್ದಾರೆ. ಸಿನಿಮಾ ನಿರ್ದೇಶನ ಮಾಡಿರುವುದು ನಿತೀಶ್ ತಿವಾರಿ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಇದು ಸರ್ಕಾರಕ್ಕೆ ವಿದ್ಯಾರ್ಥಿಗಳು, ವಿಪಕ್ಷದ ಎಚ್ಚರಿಕೆ; ರಾಹುಲ್ ಗಾಂಧಿ
ಇದು ಸರ್ಕಾರಕ್ಕೆ ವಿದ್ಯಾರ್ಥಿಗಳು, ವಿಪಕ್ಷದ ಎಚ್ಚರಿಕೆ; ರಾಹುಲ್ ಗಾಂಧಿ
ಅತ್ತ ಪ್ರಧಾನ್ ರಾಜೀನಾಮೆ: ಇತ್ತ ರಾಜ್ಯದ ಸಂಪುಟ ವಿಸ್ತರಣೆ ಸನ್ನಿಹಿತ
ಅತ್ತ ಪ್ರಧಾನ್ ರಾಜೀನಾಮೆ: ಇತ್ತ ರಾಜ್ಯದ ಸಂಪುಟ ವಿಸ್ತರಣೆ ಸನ್ನಿಹಿತ
ಸರ್ಕಾರ ಸಿಜೆಪಿಯ ಎಲ್ಲಾ ಬೇಡಿಕೆಗಳನ್ನೂ ಒಪ್ಪಿಕೊಂಡಿದೆ; ಸಚಿವ ಜೆ.ಪಿ ನಡ್ಡಾ
ಸರ್ಕಾರ ಸಿಜೆಪಿಯ ಎಲ್ಲಾ ಬೇಡಿಕೆಗಳನ್ನೂ ಒಪ್ಪಿಕೊಂಡಿದೆ; ಸಚಿವ ಜೆ.ಪಿ ನಡ್ಡಾ
ಬರದ ಬಗ್ಗೆ ಈಗಾಗಲೇ ಪ್ರಧಾನಿ ಮೋದಿ ಸಹ ಎಚ್ಚರಿಕೆ ನೀಡಿದ್ದಾರೆ ಎಂದ ಡಿಕೆಶಿ
ಬರದ ಬಗ್ಗೆ ಈಗಾಗಲೇ ಪ್ರಧಾನಿ ಮೋದಿ ಸಹ ಎಚ್ಚರಿಕೆ ನೀಡಿದ್ದಾರೆ ಎಂದ ಡಿಕೆಶಿ
ಸಿಜೆಪಿ ಜೊತೆಗಿನ ಕೇಂದ್ರದ ಸಂಧಾನ ಸಕ್ಸಸ್, ಜಿರಳೆ ಪಾರ್ಟಿ ಹೋರಾಟ ವಾಪಸ್!
ಸಿಜೆಪಿ ಜೊತೆಗಿನ ಕೇಂದ್ರದ ಸಂಧಾನ ಸಕ್ಸಸ್, ಜಿರಳೆ ಪಾರ್ಟಿ ಹೋರಾಟ ವಾಪಸ್!
10 ವರ್ಷ ಜೈಲು, 10 ಕೋಟಿ ರೂ ದಂಡ ಎಂದ ಸಚಿವ ಜೋಶಿ
10 ವರ್ಷ ಜೈಲು, 10 ಕೋಟಿ ರೂ ದಂಡ ಎಂದ ಸಚಿವ ಜೋಶಿ
ದೆಹಲಿಯಲ್ಲಿ ಸಿಜೆಪಿ ವಕ್ತಾರರ ಜೊತೆ ಕೇಂದ್ರ ಸರ್ಕಾರದ 3ನೇ ಸುತ್ತಿನ ಮಾತುಕತೆ
ದೆಹಲಿಯಲ್ಲಿ ಸಿಜೆಪಿ ವಕ್ತಾರರ ಜೊತೆ ಕೇಂದ್ರ ಸರ್ಕಾರದ 3ನೇ ಸುತ್ತಿನ ಮಾತುಕತೆ
ಪ್ರಧಾನ್ ರಾಜೀನಾಮೆ ಕ್ರೆಡಿಟ್ ಬಗ್ಗೆ ಬಿಕೆ ಹರಿಪ್ರಸಾದ್ ಹೇಳಿದ್ದಿಷ್ಟು
ಪ್ರಧಾನ್ ರಾಜೀನಾಮೆ ಕ್ರೆಡಿಟ್ ಬಗ್ಗೆ ಬಿಕೆ ಹರಿಪ್ರಸಾದ್ ಹೇಳಿದ್ದಿಷ್ಟು
ಪ್ರಧಾನ್ ರಾಜೀನಾಮೆ ನೀಡಿದ್ರೂ ಸಿಜೆಪಿಗಿಲ್ಲ ಸಮಾಧಾನ
ಪ್ರಧಾನ್ ರಾಜೀನಾಮೆ ನೀಡಿದ್ರೂ ಸಿಜೆಪಿಗಿಲ್ಲ ಸಮಾಧಾನ
ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಹಿನ್ನೆಲೆ CJP ಬೆಂಬಲಿಗರ ಸಂಭ್ರಮಾಚರಣೆ
ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಹಿನ್ನೆಲೆ CJP ಬೆಂಬಲಿಗರ ಸಂಭ್ರಮಾಚರಣೆ