AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ರಾಮಾಯಣ’ದ ಇಂಗ್ಲೀಷ್ ಮತ್ತು ಹಿಂದಿ ಆವೃತ್ತಿಯಲ್ಲಿ ಇರಲಿದೆ ಭಿನ್ನತೆ

‘ರಾಮಾಯಣ’ ಸಿನಿಮಾವು ಭಾರತದ ಈ ವರೆಗಿನ ಅತಿ ದೊಡ್ಡ ಬಜೆಟ್​​ ಸಿನಿಮಾ ಎನ್ನಲಾಗುತ್ತಿದೆ. ಈ ಸಿನಿಮಾನಲ್ಲಿ ರಣ್​​ಬೀರ್ ಕಪೂರ್, ಯಶ್, ಸಾಯಿ ಪಲ್ಲವಿ ಅವರುಗಳು ಮುಖ್ಯವಾದ ಪಾತ್ರಗಳಲ್ಲಿ ನಟಿಸಿದ್ದಾರೆ. ಸಿನಿಮಾವನ್ನು ಅಂತರಾಷ್ಟ್ರೀಯ ಮಟ್ಟದಲ್ಲಿ ಭಾರಿ ಅದ್ಧೂರಿಯಾಗಿ ರಿಲೀಸ್ ಮಾಡಲು ಚಿತ್ರತಂಡ ಯೋಜಿಸಿದೆ. ಆದರೆ ಸಿನಿಮಾದ ಭಾರತೀಯ ಆವೃತ್ತಿಗೂ ಇಂಗ್ಲೀಷ್ ಆವೃತ್ತಿಗೂ ಸಾಕಷ್ಟು ಭಿನ್ನತೆ ಇರಲಿದೆಯಂತೆ. ಏನದು?

‘ರಾಮಾಯಣ’ದ ಇಂಗ್ಲೀಷ್ ಮತ್ತು ಹಿಂದಿ ಆವೃತ್ತಿಯಲ್ಲಿ ಇರಲಿದೆ ಭಿನ್ನತೆ
Ramayana Movie
ಮಂಜುನಾಥ ಸಿ.
|

Updated on:Sep 19, 2026 | 5:25 PM

Share

ಮುಖ್ಯಾಂಶಗಳು

  • ರಾಮಾಯಣ ಸಿನಿಮಾದ ಅಪ್​​ಡೇಟ್
  • ಭಾರತದ ಭಾರಿ ಬಜೆಟ್ ಸಿನಿಮಾ ರಾಮಾಯಣ
  • ಈ ಸಿನಿಮಾದ ಇಂಗ್ಲೀಷ್ ಆವೃತ್ತಿ ಭಿನ್ನವಾಗಿರಲಿದೆ.

ರಣ್​​ಬೀರ್ ಕಪೂರ್, ಯಶ್ ಮತ್ತು ಸಾಯಿ ಪಲ್ಲವಿ ನಟನೆ ಮಾಡಿರುವ ಬಹು ನಿರೀಕ್ಷಿತ ‘ರಾಮಾಯಣ’ ಸಿನಿಮಾ ಭಾರತೀಯ ಚಿತ್ರರಂಗದ ಬಹು ನಿರೀಕ್ಷಿತ ಸಿನಿಮಾ ಆಗಿದೆ. ಈ ಸಿನಿಮಾವನ್ನು ಅಂತರಾಷ್ಟ್ರೀಯ ಮಟ್ಟದಲ್ಲಿ ಬಹು ದೊಡ್ಡ ಮಟ್ಟದಲ್ಲಿ ರಿಲೀಸ್ ಮಾಡಲು ಚಿತ್ರತಂಡ ಸಜ್ಜಾಗಿದೆ. ಇದೇ ಕಾರಣಕ್ಕೆ ವಿದೇಶಿ ಮಾರುಕಟ್ಟೆಯನ್ನೇ ಗಮನದಲ್ಲಿರಿಸಿಕೊಂಡು ಸಿನಿಮಾದ ಪ್ರಚಾರ ಮಾಡಲಾಗುತ್ತಿದೆ. ಅಲ್ಲದೆ, ಸಿನಿಮಾದ ಇಂಗ್ಲೀಷ್ ಆವೃತ್ತಿಯನ್ನು ಬಹು ಜಾಗರೂಕತೆಯಿಂದ ವಿನ್ಯಾಸ ಮಾಡಲಾಗುತ್ತಿದೆ. ಸಿನಿಮಾದ ಫೈನಲ್ ಕಟ್ ಈಗಾಗಲೇ ರೆಡಿ ಆಗಿದ್ದು, ಸಿನಿಮಾದ ಭಾರತೀಯ ಆವೃತ್ತಿಗಿಂತಲೂ ಸಾಕಷ್ಟು ಭಿನ್ನವಾಗಿ ಇಂಗ್ಲೀಷ್ ಆವೃತ್ತಿಯನ್ನು ರೂಪುಗೊಳಿಸಲಾಗಿದೆಯಂತೆ.

ವರದಿಗಳ ಪ್ರಕಾರ, ‘ರಾಮಾಯಣ’ದ ಇಂಗ್ಲಿಷ್ ಆವೃತ್ತಿಯು ಹಿಂದಿ ಆವೃತ್ತಿಗಿಂತ ಸುಮಾರು 30 ನಿಮಿಷಗಳಷ್ಟು ಕಡಿಮೆ ಅವಧಿಯನ್ನು ಹೊಂದಿರಲಿದೆ. ಭಾರತೀಯ ಭಾಷೆಗಳಲ್ಲಿ ಬಿಡುಗಡೆ ಮಾಡಲಾಗುವ ಆವೃತ್ತಿಯಲ್ಲಿ ಹಾಡುಗಳು ಪ್ರಧಾನ ಪಾತ್ರ ವಹಿಸಲಿವೆ ಆದರೆ ಇದೇ ಸಿನಿಮಾದ ಅಂತಾರಾಷ್ಟ್ರೀಯ ಆವೃತ್ತಿಯು ಯಾವುದೇ ಹಾಡುಗಳನ್ನು ಒಳಗೊಂಡಿರುವುದಿಲ್ಲ.

ವಿದೇಶಿ ಪ್ರೇಕ್ಷಕರ ಅಭಿರುಚಿಗೆ ತಕ್ಕಂತೆ ‘ರಾಮಾಯಣ’ದ ಅಂತಾರಾಷ್ಟ್ರೀಯ ಕಟ್ ಅನ್ನು ಚಿತ್ರತಂಡ ರೂಪಿಸುತ್ತಿದೆ. ಹಿಂದಿ ಆವೃತ್ತಿಯನ್ನು ಕೇವಲ ಇಂಗ್ಲಿಷ್‌ಗೆ ಡಬ್ ಮಾಡುವ ಬದಲು, ಸಾಕಷ್ಟು ವ್ಯತ್ಯಾಸಗಳನ್ನು ತರಲಾಗಿದೆ. ವಿದೇಶಿ ಸಿನಿಮಾಗಳ ಅವಧಿಗೆ ಹೊಂದಿಸಲೆಂದು ಸಿನಿಮಾದ ಅವಧಿಯನ್ನು ಕಿರಿದು ಮಾಡಲಾಗಿದೆ. ಹಾಡುಗಳನ್ನು ತೆಗೆಯುವ ಜೊತೆಗೆ ಕೆಲವು ಸಂಭಾಷಣೆಗಳನ್ನು ಸಹ ತೆಗೆಯಲಾಗಿದೆ. ಕೆಲ ದೃಶ್ಯಗಳನ್ನು ಸಹ ಕತ್ತರಿಸಲಾಗಿದೆ. ಇದರಿಂದಾಗಿ ಇಂಗ್ಲಿಷ್ ಭಾಷೆಯ ಆವೃತ್ತಿಯು ಹಿಂದಿ ಕಟ್‌ಗಿಂತ ಗಮನಾರ್ಹವಾಗಿ ಚಿಕ್ಕದಾಗಲಿದೆ.

ಇದನ್ನೂ ಓದಿ:ಈ ವಾರ ಒಟಿಟಿಗೆ ಬಂದಿವೆ ಸೂಪರ್ ಹಿಟ್ ಸಿನಿಮಾಗಳು: ಇಲ್ಲಿದೆ ಪಟ್ಟಿ

ಭಾರತೀಯ ವೀಕ್ಷಕರಿಗೆ ಸಂಗೀತವು ಚಿತ್ರದ ಪ್ರಮುಖ ಭಾಗವಾಗಿ ಮುಂದುವರಿಯಲಿದೆ. ಹಿಂದಿ ಮತ್ತು ಇತರ ಭಾರತೀಯ ಭಾಷೆಯ ಆವೃತ್ತಿಗಳು ಹಾಡುಗಳು ಹಾಗೂ ಸಂಗೀತದ ಅನುಕ್ರಮಗಳನ್ನು ಉಳಿಸಿಕೊಳ್ಳುವ ನಿರೀಕ್ಷೆಯಿದೆ. ಈ ಸಿನಿಮಾಕ್ಕೆ ಆಸ್ಕರ್ ವಿಜೇತ ಸಂಗೀತ ನಿರ್ದೇಶಕರಾದ ಎಆರ್ ರೆಹಮಾನ್ ಮತ್ತು ಹಾನ್ಸ್ ಜೀಮರ್ ಅವರುಗಳು ಜಂಟಿಯಾಗಿ ಸಂಗೀತ ನೀಡಿದ್ದಾರೆ. ಸಿನಿಮಾದ ಹಾಡು, ಸಂಗೀತದ ಕೆಲವು ಬಿಟ್​ಗಳು ಈಗಾಗಲೇ ಹರಿದಾಡುತ್ತಿದ್ದು, ಸಾಕಷ್ಟು ವೈರಲ್ ಆಗಿವೆ.

ಸಿನಿಮಾದ ಮುಖ್ಯ ನಿರ್ಮಾಪಕ ನಮಿತ್ ಮಲ್ಹೋತ್ರಾ ಅವರು ‘ರಾಮಾಯಣ’ ಸಿನಿಮಾಕ್ಕೆ ಸುಮಾರು 2000 ಕೋಟಿ ಬಜೆಟ್ ನಿಗದಿಪಡಿಸಿದ್ದು, ಸಿನಿಮಾ ಅನ್ನು ಎರಡು ಭಾಗಗಳಲ್ಲಿ ನಿರ್ಮಾಣ ಮಾಡುತ್ತಿದ್ದಾರೆ. ಸಿನಿಮಾದ ಮೊದಲ ಭಾಗ ಇದೇ ನವೆಂಬರ್ ತಿಂಗಳಲ್ಲಿ ದೀಪಾವಳಿ ಹಬ್ಬದಂದು ರಿಲೀಸ್ ಆಗಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:01 pm, Sat, 19 September 26

Follow Us
ಬಿಸಿಯೂಟ ಮೆನುಗೆ ಚಿಕನ್ ಬಿರಿಯಾನಿ ಸೇರ್ಪಡೆಗೆ ತಮಿಳುನಾಡು ಸರ್ಕಾರ ಚಿಂತನೆ
ಬಿಸಿಯೂಟ ಮೆನುಗೆ ಚಿಕನ್ ಬಿರಿಯಾನಿ ಸೇರ್ಪಡೆಗೆ ತಮಿಳುನಾಡು ಸರ್ಕಾರ ಚಿಂತನೆ
ವಂದೇ ಮಾತರಂ ಎರಡೇ ಚರಣ ಹಾಡಿದ್ದಕ್ಕೆ ಬಿಜೆಪಿ ಶಾಸಕ ಅಸಮಾಧಾನ
ವಂದೇ ಮಾತರಂ ಎರಡೇ ಚರಣ ಹಾಡಿದ್ದಕ್ಕೆ ಬಿಜೆಪಿ ಶಾಸಕ ಅಸಮಾಧಾನ
ಬಳ್ಳಾರಿ: 2 ತಿಂಗಳಿನಿಂದ ವೇತನವಿಲ್ಲದೆ ಬಿಸಿಯೂಟ ಕಾರ್ಯಕರ್ತರ ಪರದಾಟ!
ಬಳ್ಳಾರಿ: 2 ತಿಂಗಳಿನಿಂದ ವೇತನವಿಲ್ಲದೆ ಬಿಸಿಯೂಟ ಕಾರ್ಯಕರ್ತರ ಪರದಾಟ!
ಭಾರತೀಯ ವಾಯುಪಡೆಗೆ ಹೆಚ್ಎಎಲ್ ನಿರ್ಮಿತ ಯುದ್ಧ ವಿಮಾನಗಳ ಹಸ್ತಾಂತರ
ಭಾರತೀಯ ವಾಯುಪಡೆಗೆ ಹೆಚ್ಎಎಲ್ ನಿರ್ಮಿತ ಯುದ್ಧ ವಿಮಾನಗಳ ಹಸ್ತಾಂತರ
ಕೆಪಿಎಸ್​ಸಿ ಹಗರಣ: ಜ್ಞಾನೇಂದ್ರ ಕುಮಾರ್, ಕನ್ನಾಳೆ ಬಂಧಿಸಿದ ಇಡಿ
ಕೆಪಿಎಸ್​ಸಿ ಹಗರಣ: ಜ್ಞಾನೇಂದ್ರ ಕುಮಾರ್, ಕನ್ನಾಳೆ ಬಂಧಿಸಿದ ಇಡಿ
ನಾನು ಈಗ ವೆಜ್​ಟೇರಿಯನ್, ಅಶೋಕಣ್ಣಂಗೆ ಫ್ರೆಶ್ ಮೀನು ಕಳಿಸ್ತೀನಿ: ಡಿಕೆಶಿ
ನಾನು ಈಗ ವೆಜ್​ಟೇರಿಯನ್, ಅಶೋಕಣ್ಣಂಗೆ ಫ್ರೆಶ್ ಮೀನು ಕಳಿಸ್ತೀನಿ: ಡಿಕೆಶಿ
ಬಂದರು ಪ್ರದೇಶದಲ್ಲಿ ಬೋಟ್ ಹತ್ತಿ ಸಮುದ್ರಕ್ಕಿಳಿದೇ ಬಿಟ್ರು ಸಿಎಂ ಡಿಕೆಶಿ
ಬಂದರು ಪ್ರದೇಶದಲ್ಲಿ ಬೋಟ್ ಹತ್ತಿ ಸಮುದ್ರಕ್ಕಿಳಿದೇ ಬಿಟ್ರು ಸಿಎಂ ಡಿಕೆಶಿ
ಸಿಎಂ ಡಿಕೆ ಶಿವಕುಮಾರ್ ಮಂಗಳೂರು ಮೀನುಗಾರಿಕೆ ಬಂದರಿಗೆ ದಿಢೀರ್ ಭೇಟಿ
ಸಿಎಂ ಡಿಕೆ ಶಿವಕುಮಾರ್ ಮಂಗಳೂರು ಮೀನುಗಾರಿಕೆ ಬಂದರಿಗೆ ದಿಢೀರ್ ಭೇಟಿ
ಬೆಂಗಳೂರಿನ ಸುಧಾಮ ನಗರದಲ್ಲಿ ಬೆಂಕಿ ಅವಘಡ: ಸುಟ್ಟು ಕರಕಲಾದ ಕಟ್ಟಡ!
ಬೆಂಗಳೂರಿನ ಸುಧಾಮ ನಗರದಲ್ಲಿ ಬೆಂಕಿ ಅವಘಡ: ಸುಟ್ಟು ಕರಕಲಾದ ಕಟ್ಟಡ!
ಟಿ ನರಸೀಪುರದಲ್ಲಿ ಮಸೀದಿ ಮುಂದೆಯೇ ಗಣೇಶ ಮೆರವಣಿಗೆ, ಪಟಾಕಿ ಸಿಡಿಸಿ ಸಂಭ್ರಮ
ಟಿ ನರಸೀಪುರದಲ್ಲಿ ಮಸೀದಿ ಮುಂದೆಯೇ ಗಣೇಶ ಮೆರವಣಿಗೆ, ಪಟಾಕಿ ಸಿಡಿಸಿ ಸಂಭ್ರಮ