AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತಕ್ಕೂ ಮುನ್ನ ವಿದೇಶದಲ್ಲಿ ‘ರಾಮಾಯಣ’ ರಿಲೀಸ್; ಲೀಕ್ ಭೀತಿಯಲ್ಲಿ ಫ್ಯಾನ್ಸ್ ಅಪ್ಸೆಟ್

ರಣ್‌ಬೀರ್ ಕಪೂರ್ ಹಾಗೂ ಯಶ್ ಅಭಿನಯದ 'ರಾಮಾಯಣ' ಸಿನಿಮಾ ಭಾರತಕ್ಕಿಂತ ಎರಡು ದಿನ ಮುಂಚಿತವಾಗಿ ವಿದೇಶದಲ್ಲಿ ರಿಲೀಸ್ ಆಗಲಿದೆ. ನವೆಂಬರ್ 6ರಂದು ವಿದೇಶ ಹಾಗೂ ನವೆಂಬರ್ 8ಕ್ಕೆ ಭಾರತದಲ್ಲಿ ಬಿಡುಗಡೆಯಾಗುತ್ತಿದ್ದು, ಪೈರೆಸಿ ಮತ್ತು ಲೀಕ್ ಭೀತಿಯಿಂದ ಭಾರತೀಯ ಅಭಿಮಾನಿಗಳು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಭಾರತಕ್ಕೂ ಮುನ್ನ ವಿದೇಶದಲ್ಲಿ 'ರಾಮಾಯಣ' ರಿಲೀಸ್; ಲೀಕ್ ಭೀತಿಯಲ್ಲಿ ಫ್ಯಾನ್ಸ್ ಅಪ್ಸೆಟ್
ರಾಮಾಯಣ
ರಾಜೇಶ್ ದುಗ್ಗುಮನೆ
|

Updated on: Aug 08, 2026 | 9:27 AM

Share

ಮುಖ್ಯಾಂಶಗಳು

  • ವಿದೇಶದಲ್ಲಿ ಮುಂಚಿತವಾಗಿ 'ರಾಮಾಯಣ' ಧಮಾಕಾ
  • ಭಾರತದ ಪ್ರೇಕ್ಷಕರಿಗೆ ಎರಡೆರಡು ದಿನ ಕಾಯುವಿಕೆ
  • ಪೈರೆಸಿ ತಡೆಯಲು ಫ್ಯಾನ್ಸ್ ಮನವಿ

ಬಾಲಿವುಡ್ ನಟ ರಣ್‌ಬೀರ್ ಕಪೂರ್, ರಾಕಿಂಗ್ ಸ್ಟಾರ್ ಯಶ್ ಹಾಗೂ ಸಾಯಿ ಪಲ್ಲವಿ ಅಭಿನಯದ ಬೃಹತ್ ಬಜೆಟ್‌ನ ‘ರಾಮಾಯಣ’ ಸಿನಿಮಾದ ಬಿಡುಗಡೆ ಕುರಿತು ಪ್ರಮುಖ ಮಾಹಿತಿಯೊಂದು ಹೊರಬಿದ್ದಿದೆ. ಚಿತ್ರದ ನಿರ್ಮಾಪಕ ನಮಿತ್ ಮಲ್ಹೋತ್ರಾ ನೀಡಿರುವ ಹೇಳಿಕೆ ಇದೀಗ ಭಾರತೀಯ ಸಿನಿಮಾ ಪ್ರೇಮಿಗಳಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ‘ರಾಮಾಯಣ’ ಸಿನಿಮಾ ಭಾರತಕ್ಕಿಂತ ಎರಡು ದಿನ ಮುಂಚಿತವಾಗಿಯೇ ವಿದೇಶಗಳಲ್ಲಿ ತೆರೆಕಾಣಲಿದೆ.

ವಿದೇಶದಲ್ಲಿ ನವೆಂಬರ್ 6, ಭಾರತದಲ್ಲಿ ನವೆಂಬರ್ 8

ನಿರ್ಮಾಪಕ ನಮಿತ್ ಮಲ್ಹೋತ್ರಾ ತಿಳಿಸಿರುವ ಪ್ರಕಾರ, ‘ರಾಮಾಯಣ’ ಚಿತ್ರವು ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ನವೆಂಬರ್ 6 ಶುಕ್ರವಾರದಂದು ಬಿಡುಗಡೆಯಾಗಲಿದೆ. ಆದರೆ ಭಾರತದಲ್ಲಿ ನವೆಂಬರ್ 8ರ ಭಾನುವಾರ ಚಿತ್ರವನ್ನು ತೆರೆಗೆ ತರಲು ಚಿತ್ರತಂಡ ನಿರ್ಧರಿಸಿದೆ. ವಿದೇಶಗಳಲ್ಲಿ ಶುಕ್ರವಾರ ಸಿನಿಮಾ ರಿಲೀಸ್ ಮಾಡುವ ಪದ್ಧತಿ ಇರುವುದರಿಂದ ಈ ನಿರ್ಧಾರ ತಳೆಯಲಾಗಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಲೀಕ್ ಭೀತಿ: ಅಪ್ಸೆಟ್ ಆದ ಭಾರತೀಯ ಅಭಿಮಾನಿಗಳು

ವಿದೇಶದಲ್ಲಿ ಎರಡು ದಿನ ಮುಂಚಿತವಾಗಿ ಸಿನಿಮಾ ರಿಲೀಸ್ ಆಗುತ್ತಿರುವುದು ಭಾರತೀಯ ಅಭಿಮಾನಿಗಳ ಅಸಮಾಧಾನಕ್ಕೆ ಕಾರಣವಾಗಿದೆ. ಚಿತ್ರದ ದೃಶ್ಯಗಳು ಎಚ್‌ಡಿ ರೂಪದಲ್ಲಿ ಲೀಕ್ ಆಗಬಹುದು ಹಾಗೂ ಸೋಶಿಯಲ್ ಮೀಡಿಯಾದಲ್ಲಿ ಸ್ಪಾಯ್ಲರ್‌ಗಳು ಹರಿದಾಡಬಹುದು ಎಂಬ ಭಯ ಫ್ಯಾನ್ಸ್‌ನಲ್ಲಿದೆ. ಈ ಕಾರಣಕ್ಕೆ ಪ್ರಪಂಚದಾದ್ಯಂತ ಒಂದೇ ದಿನ ಸಿನಿಮಾವನ್ನು ಬಿಡುಗಡೆ ಮಾಡಿ ಎಂದು ಅಭಿಮಾನಿಗಳು ನಿರ್ಮಾಪಕರಲ್ಲಿ ಮನವಿ ಮಾಡುತ್ತಿದ್ದಾರೆ.

ಇದನ್ನೂ ಓದಿ: ‘ಆಸ್ಕರ್ ಸಿಗಲೇ ಬೇಕು’: ‘ರಾಮಾಯಣ’ ಸಿನಿಮಾವನ್ನು ಕೊಂಡಾಡಿದ ಮಹಾರಾಷ್ಟ್ರ ಸಿಎಂ

ನಿತೇಶ್ ತಿವಾರಿ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಈ ಚಿತ್ರದ ಟ್ರೇಲರ್ ಇತ್ತೀಚೆಗಷ್ಟೇ ಬಿಡುಗಡೆಯಾಗಿ, ಕೇವಲ ಐದೇ ದಿನಗಳಲ್ಲಿ 100 ಕೋಟಿಗೂ ಹೆಚ್ಚು ವೀಕ್ಷಣೆ ಪಡೆದು ಜಾಗತಿಕ ಮಟ್ಟದಲ್ಲಿ ದಾಖಲೆ ಬರೆದಿದೆ.  ಈ ಚಿತ್ರದಲ್ಲಿ ಯಶ್ ಅವರು ರಾವಣನ ಪಾತ್ರ ಮಾಡಿದ್ದಾರೆ. ರಣಬೀರ್ ರಾಮ, ಸಾಯಿ ಪಲ್ಲವಿ ಸೀತೆ ಪಾತ್ರ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮೆಟ್ರೋ ಕಾಮಗಾರಿ ವೇಳೆ ನೆಲಕ್ಕೆ ಬಿದ್ದ ಬೃಹತ್ ಶೀಟ್: ತಪ್ಪಿದ ಭಾರಿ ದುರಂತ
ಮೆಟ್ರೋ ಕಾಮಗಾರಿ ವೇಳೆ ನೆಲಕ್ಕೆ ಬಿದ್ದ ಬೃಹತ್ ಶೀಟ್: ತಪ್ಪಿದ ಭಾರಿ ದುರಂತ
ಕರ್ನಾಟಕ ಎಸ್‌ಐಆರ್ ಅವಧಿ ಆಗಸ್ಟ್ 8ರ ಬದಲು ಆಗಸ್ಟ್ 17ರ ತನಕ ವಿಸ್ತರಣೆ
ಕರ್ನಾಟಕ ಎಸ್‌ಐಆರ್ ಅವಧಿ ಆಗಸ್ಟ್ 8ರ ಬದಲು ಆಗಸ್ಟ್ 17ರ ತನಕ ವಿಸ್ತರಣೆ
ವೃಷಭ ರಾಶಿ ರೋಹಿಣಿ ನಕ್ಷತ್ರದಲ್ಲಿ ಚಂದ್ರನ ಸಂಚಾರ: 12 ರಾಶಿಗಳ ದಿನ ಭವಿಷ್ಯ
ವೃಷಭ ರಾಶಿ ರೋಹಿಣಿ ನಕ್ಷತ್ರದಲ್ಲಿ ಚಂದ್ರನ ಸಂಚಾರ: 12 ರಾಶಿಗಳ ದಿನ ಭವಿಷ್ಯ
ಒಡಿಶಾದಲ್ಲಿ ಕೈಮಗ್ಗದ ಬಟ್ಟೆ ಖರೀದಿಸಿದ ಪ್ರಲ್ಹಾದ್ ಜೋಶಿ
ಒಡಿಶಾದಲ್ಲಿ ಕೈಮಗ್ಗದ ಬಟ್ಟೆ ಖರೀದಿಸಿದ ಪ್ರಲ್ಹಾದ್ ಜೋಶಿ
‘ಬಾಸ್’ ಸಿನಿಮಾ ನೋಡಿದ ದರ್ಶನ್ ಅಭಿಮಾನಿಗಳು ಹೀಗೆಂದರಂತೆ
‘ಬಾಸ್’ ಸಿನಿಮಾ ನೋಡಿದ ದರ್ಶನ್ ಅಭಿಮಾನಿಗಳು ಹೀಗೆಂದರಂತೆ
ಕೈ ಮುಖಂಡನ ಮೇಲೆ ಗುಂಡಿನ ದಾಳಿ ನಡೆಸಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಕೈ ಮುಖಂಡನ ಮೇಲೆ ಗುಂಡಿನ ದಾಳಿ ನಡೆಸಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ದೆಹಲಿಯಲ್ಲಿ ಭಾರೀ ಮಳೆ; ರಸ್ತೆಯಲ್ಲಿ ನಿಂತ ನೀರಲ್ಲಿ ಈಜಾಡಿದ ಮಕ್ಕಳು
ದೆಹಲಿಯಲ್ಲಿ ಭಾರೀ ಮಳೆ; ರಸ್ತೆಯಲ್ಲಿ ನಿಂತ ನೀರಲ್ಲಿ ಈಜಾಡಿದ ಮಕ್ಕಳು
5 ಸ್ಟಾರ್ ಹೋಟೆಲ್​​ಗಳಲ್ಲಿ ಕೊಳೆತ ತರಕಾರಿ, ಮಾಂಸ ಪತ್ತೆ: ಕಠಿಣ ಕ್ರಮ
5 ಸ್ಟಾರ್ ಹೋಟೆಲ್​​ಗಳಲ್ಲಿ ಕೊಳೆತ ತರಕಾರಿ, ಮಾಂಸ ಪತ್ತೆ: ಕಠಿಣ ಕ್ರಮ
ಕಬಿನಿ ನದಿ ಪಾತ್ರದಲ್ಲಿರುವ ಸಾರ್ವಜನಿಕರು ಎಚ್ಚರಿಕೆಯಿಂದ ಇರಲು ಸೂಚನೆ
ಕಬಿನಿ ನದಿ ಪಾತ್ರದಲ್ಲಿರುವ ಸಾರ್ವಜನಿಕರು ಎಚ್ಚರಿಕೆಯಿಂದ ಇರಲು ಸೂಚನೆ
ರಸ್ತೆ ಮಧ್ಯೆ ದೊಡ್ಡ ಕಂದಕ; ಇದು 'ನರಕದ ಹಾದಿ' ಎಂದು ನೆಟ್ಟಿಗರ ಆಕ್ರೋಶ
ರಸ್ತೆ ಮಧ್ಯೆ ದೊಡ್ಡ ಕಂದಕ; ಇದು 'ನರಕದ ಹಾದಿ' ಎಂದು ನೆಟ್ಟಿಗರ ಆಕ್ರೋಶ