AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Arun Govil: ರಾಮನ ಪಾತ್ರ ಮಾಡಿದ್ದ ನಟನ ಕಾಲಿಗೆ ಬಿದ್ದು ಮಗುವನ್ನು ಉಳಿಸುವಂತೆ ಬೇಡಿಕೊಂಡಿದ್ದ ಮಹಿಳೆ: ನಂತರ ಆಗಿದ್ದೇನು?

Adipurush Controversy: ‘ಧರ್ಮದ ಬಗ್ಗೆ ಸಿನಿಮಾ ಮಾಡಿದಾಗ ದೇವರ ಬಗ್ಗೆ ಚಿತ್ರತಂಡದರಿಗೆ ನಂಬಿಕೆ ಇರಬೇಕು’ ಎಂದು ಅರುಣ್​ ಗೋವಿಲ್​ ಹೇಳಿದ್ದಾರೆ. ಒಂದು ಅಪರೂಪದ ಘಟನೆಯನ್ನು ಅವರು ನೆನೆಪು ಮಾಡಿಕೊಂಡಿದ್ದಾರೆ.

Arun Govil: ರಾಮನ ಪಾತ್ರ ಮಾಡಿದ್ದ ನಟನ ಕಾಲಿಗೆ ಬಿದ್ದು ಮಗುವನ್ನು ಉಳಿಸುವಂತೆ ಬೇಡಿಕೊಂಡಿದ್ದ ಮಹಿಳೆ: ನಂತರ ಆಗಿದ್ದೇನು?
ಅರುಣ್​ ಗೋವಿಲ್​
ಮದನ್​ ಕುಮಾರ್​
|

Updated on: Jun 24, 2023 | 7:15 AM

Share

ಪ್ರಭಾಸ್​ ನಟನೆಯ ‘ಆದಿಪುರುಷ್​​’ ಸಿನಿಮಾ (Adipurush Movie) ಸಖತ್​ ಟ್ರೋಲ್​ ಆಗುತ್ತಿದೆ. ಜನಸಾಮಾನ್ಯರು ಅಷ್ಟೇ ಅಲ್ಲದೇ ಸೆಲೆಬ್ರಿಟಿಗಳು ಕೂಡ ಈ ಚಿತ್ರವನ್ನು ಟೀಕಿಸಿದ್ದಾರೆ. ಇದು ರಾಮಾಯಣದ ಕಥೆಯನ್ನು ಆಧರಿಸಿದ ಸಿನಿಮಾ. ಇದರಲ್ಲಿ ರಾಮನಾಗಿ ಪ್ರಭಾಸ್​ ನಟಿಸಿದ್ದಾರೆ. ಸೀತೆಯ ಪಾತ್ರಕ್ಕೆ ಕೃತಿ ಸನೋನ್​ ಬಣ್ಣ ಹಚ್ಚಿದ್ದಾರೆ. ಆದರೆ ಒಟ್ಟಾರೆ ಸಿನಿಮಾ ಸರಿಯಾಗಿ ಮೂಡಿಬಂದಿಲ್ಲ ಎಂಬ ಕಾರಣಕ್ಕೆ ನಿರ್ದೇಶಕ ಓಂ ರಾವತ್ (Om Raut)​ ಅವರನ್ನು ಎಲ್ಲರೂ ತರಾಟೆಗೆ ತೆಗೆದುಕೊಳ್ಳುತ್ತಿದ್ದಾರೆ. ಜನರ ನಂಬಿಕೆ ಜೊತೆ ಆಟ ಆಡಬಾರದು ಎಂಬುದು ಬಹುತೇಕರ ಅಭಿಪ್ರಾಯ. ಈ ಸಂದರ್ಭದಲ್ಲಿ ಹಿರಿಯ ನಟ ಅರುಣ್​ ಗೋವಿಲ್​ ಅವರು ಒಂದು ಹಳೇ ಘಟನೆಯನ್ನು ನೆನಪಿಸಿಕೊಂಡಿದ್ದಾರೆ. ಈ ಹಿಂದೆ ಪ್ರಸಾರವಾದ ‘ರಾಮಾಯಣ’ ಧಾರಾವಾಹಿಯಲ್ಲಿ ಅರುಣ್​ ಗೋವಿಲ್​ (Arun Govil) ಅವರು ರಾಮನ ಪಾತ್ರ ಮಾಡಿದ್ದರು.

ಜೀ ನ್ಯೂಸ್​ಗೆ ನೀಡಿದ ಸಂದರ್ಶನದಲ್ಲಿ ಅರುಣ್​ ಗೋವಿಲ್​ ಒಂದು ಅಪರೂಪದ ಘಟನೆ ನೆನಪಿಸಿಕೊಂಡಿದ್ದಾರೆ. ‘ರಾಮಾಯಣ ಸೀರಿಯಲ್​ ಶೂಟಿಂಗ್​ ವೇಳೆ ನಾನು ಮೇಕಪ್​ ಹಾಕಿಕೊಂಡು ಕುಳಿತಿದ್ದೆ. ಟಿ-ಶರ್ಟ್​ ಮತ್ತು ಶಾರ್ಟ್ಸ್​ ಧರಿಸಿದ್ದೆ. ಆಗ ಓರ್ವ ಮಹಿಳೆ ತನ್ನ ಮಗುವನ್ನು ಕರೆದುಕೊಂಡ ಬಂದಳು. ಆಕೆ ಅಳುತ್ತಿದ್ದಳು. ಮಗುವನ್ನು ನನ್ನ ಕಾಲಿನ ಮೇಲೆ ಹಾಕಿ, ದಯವಿಟ್ಟು ಅದರ ಜೀವ ಉಳಿಸುವಂತೆ ಬೇಡಿಕೊಂಡಳು. ಮೊದಲು ಆ ಮಗುವನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗುವಂತೆ ಆಕೆಗೆ ಹೇಳಿದೆ. ಅಂದು ನಾನು ಕೂಡ ಆ ಮಗುವಿಗಾಗಿ ಪ್ರಾರ್ಥಿಸಿದೆ. ನನ್ನ ಕೈಯನ್ನು ತೆಗೆದುಕೊಂಡು ಮಗುವಿನ ತಲೆಯ ಮೇಲೆ ಆಕೆ ಇರಿಸಿದಳು’ ಎಂದು ಅರುಣ್​ ಗೋವಿಲ್​ ಅವರು ನೆನಪಿನ ಪುಟ ತೆರೆದಿದ್ದಾರೆ.

ಇದನ್ನೂ ಓದಿ: Kriti Sanon: ಟ್ರೋಲ್​ಗಳ ನಡುವೆಯೂ ಶಾಲೆ ಮಕ್ಕಳಿಗೆ ಉಚಿತವಾಗಿ ‘ಆದಿಪುರುಷ್​’ ಚಿತ್ರ ತೋರಿಸಲು ಮುಂದಾದ ಕೃತಿ ಸನೋನ್​

‘ಮೂರು ದಿನಗಳ ಬಳಿಕ ಆಕೆ ಮತ್ತೆ ಬಂದಳು. ಮಗ ಗುಣಮುಖನಾಗಿ ಆಕೆಯ ಪಕ್ಕದಲ್ಲಿ ನಡೆದುಕೊಂಡು ಬಂದ. ಇದರಲ್ಲಿ ನನ್ನ ಪಾಲು ಏನೂ ಇಲ್ಲ. ಅದೆಲ್ಲವೂ ಆಗಿದ್ದು ಆಕೆ ರಾಮನಲ್ಲಿ ಇಟ್ಟಿದ್ದ ನಂಬಿಕೆಯಿಂದ. ಇದು ನಮ್ಮ ನಂಬಿಕೆ, ಭಕ್ತಿ. ಧರ್ಮದ ಬಗ್ಗೆ ಸಿನಿಮಾ ಮಾಡಿದಾಗ ದೇವರ ಬಗ್ಗೆ ಚಿತ್ರತಂಡದರಿಗೆ ಇಷ್ಟೇ ನಂಬಿಕೆ ಇರಬೇಕು’ ಎಂದು ಅರುಣ್​ ಗೋವಿಲ್​ ಹೇಳಿದ್ದಾರೆ.

ಇದನ್ನೂ ಓದಿ: Om Raut: ಕೊಲೆ ಬೆದರಿಕೆ ಹಿನ್ನೆಲೆಯಲ್ಲಿ ‘ಆದಿಪುರುಷ್​’ ನಿರ್ದೇಶಕ ಓಂ ರಾವತ್​ಗೆ ಮುಂಬೈ ಪೊಲೀಸರಿಂದ​ ಭದ್ರತೆ?

ಭಾರಿ ಟೀಕೆ ಎದುರಾಗಿದ್ದರಿಂದ ‘ಆದಿಪುರುಷ್​’ ಸಿನಿಮಾದ ಕಲೆಕ್ಷನ್​ ತಗ್ಗುತ್ತಿದೆ. ಪ್ರಭಾಸ್​ ಅವರು ಸಂಪೂರ್ಣ ಮೌನಕ್ಕೆ ಶರಣಾಗಿದ್ದಾರೆ. ರಾವಣನ ಪಾತ್ರ ಮಾಡಿದ ಸೈಫ್​ ಅಲಿ ಖಾನ್​ ಅವರ ಮೊದಲಿನಿಂದಲೂ ಈ ಸಿನಿಮಾ ಬಗ್ಗೆ ಏನನ್ನೂ ಮಾತನಾಡುತ್ತಿಲ್ಲ. ಎಲ್ಲ ವಿವಾದಗಳಿಂದ ಅವರು ದೂರವೇ ಉಳಿದುಕೊಂಡಿದ್ದಾರೆ. ಚಿತ್ರದ ನಿರ್ದೇಶಕ ಓಂ ರಾವತ್​ ಹಾಗೂ ಸಂಭಾಷಣಕಾರ ಮನೋಜ್​ ಮುಂತಶೀರ್​ ಅವರು ಸಮರ್ಥನೆ ನೀಡಲು ಹೋಗಿ ಇನ್ನಷ್ಟು ಟ್ರೋಲ್​ಗೆ ಒಳಗಾಗಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!