Ramoji Rao: ರಾಮೋಜಿ ಫಿಲ್ಮ್​ ಸಿಟಿ ಸ್ಥಾಪಕ ರಾಮೋಜಿ ರಾವ್ ನಿಧನ; ಸಂತಾಪ ಕೋರಿದ ಚಿತ್ರರಂಗ

ರಾಮೋಜಿ ರಾವ್ ನಿಧನ: ರಾಮೋಜಿ ಫಿಲ್ಮ್​ ಸಿಟಿಯಲ್ಲಿ ‘ಬಾಹುಬಲಿ’ ಸೇರಿ ಅನೇಕ ಸೂಪರ್ ಹಿಟ್ ಚಿತ್ರಗಳ ಶೂಟಿಂಗ್ ಆಗಿದೆ. 1996ರಲ್ಲಿ ಇದನ್ನು ರಾಮೋಜಿ ರಾವ್ ಸ್ಥಾಪಿಸಿದರು. ಹೈದರಾಬಾದ್​ನಲ್ಲಿರುವ ಈ ಪ್ರದೇಶ 1,666 ಎಕರೆ ಪ್ರದೇಶದಲ್ಲಿ ಇದೆ. ವಿಶ್ವದಲ್ಲೇ ಇದು ಅತಿ ದೊಡ್ಡ ಸ್ಟುಡಿಯೋ ಎನ್ನುವ ಖ್ಯಾತಿ ಇದೆ.

Ramoji Rao: ರಾಮೋಜಿ ಫಿಲ್ಮ್​ ಸಿಟಿ ಸ್ಥಾಪಕ ರಾಮೋಜಿ ರಾವ್ ನಿಧನ; ಸಂತಾಪ ಕೋರಿದ ಚಿತ್ರರಂಗ
Follow us
|

Updated on:Jun 08, 2024 | 8:44 AM

ರಾಮೋಜಿ ಫಿಲ್ಮ್​ ಸಿಟಿ (Ramoji Film City) ನಿರ್ಮಿಸಿದ್ದ ರಾಮೋಜಿ ರಾವ್ ಅವರು ಇಂದು (ಜೂನ್ 8) ನಿಧನ ಹೊಂದಿದ್ದಾರೆ. ಅವರಿಗೆ 87 ವರ್ಷ ವಯಸ್ಸಾಗಿತ್ತು. ಹಲವು ವರ್ಷಗಳಿಂದ ಅವರು ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಇದಕ್ಕಾಗಿ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೂಡ ಪಡೆಯುತ್ತಿದ್ದರು. ಅವರ ನಿಧನ ವಾರ್ತೆ ಅನೇಕರಿಗೆ ದುಃಖ ತಂದಿದೆ. ಟಾಲಿವುಡ್​ನ ಅನೇಕ ಸೆಲೆಬ್ರಿಟಿಗಳು ಇವರ ಸಾವಿಗೆ ಸಂತಾಪ ಸೂಚಿಸಿದ್ದಾರೆ.

ರಾಮೋಜಿ ಫಿಲ್ಮ್​ ಸಿಟಿಯಲ್ಲಿ ‘ಬಾಹುಬಲಿ’ ಸೇರಿ ಅನೇಕ ಸೂಪರ್ ಹಿಟ್ ಚಿತ್ರಗಳ ಶೂಟಿಂಗ್ ಆಗಿದೆ. 1996ರಲ್ಲಿ ಇದನ್ನು ರಾಮೋಜಿ ರಾವ್ ಸ್ಥಾಪಿಸಿದರು. ಹೈದರಾಬಾದ್​ನಲ್ಲಿರುವ ಈ ಪ್ರದೇಶ 1,666 ಎಕರೆ ಪ್ರದೇಶದಲ್ಲಿ ಇದೆ. ವಿಶ್ವದಲ್ಲೇ ಇದು ಅತಿ ದೊಡ್ಡ ಸ್ಟುಡಿಯೋ ಎನ್ನುವ ಖ್ಯಾತಿ ಇದೆ. ಇದು ವಿಶ್ವ ದಾಖಲೆ ಪಟ್ಟಿಯಲ್ಲೂ ಇದೆ. ರಾಮೋಜಿ ರಾವ್ ಅವರು ಚಿತ್ರರಂಗಕ್ಕೆ ನೀಡಿದ ಕೊಡುಗೆ ಆಧರಿಸಿ ಅವರಿಗೆ ಪದ್ಮ ವಿಭೂಷಣ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

ರಾಮೋಜಿ ರಾವ್ ಅವರು ಜನಿಸಿದ್ದು 1936ರಲ್ಲಿ. 1984ರಲ್ಲಿ ಅವರು ಸಿನಿಮಾ ನಿರ್ಮಾಣಕ್ಕೆ ಇಳಿದರು. 2015ರವರೆಗೂ ಅವರು ಸಿನಿಮಾಗಳನ್ನು ನಿರ್ಮಿಸುತ್ತಿದ್ದರು. ಆ ಬಳಿಕ ಅವರು ನಿರ್ಮಾಣದಿಂದ ದೂರವೇ ಇದ್ದರು. ರಾಮೋಜಿ ಫಿಲ್ಮ್ ಸಿಟಿಯಲ್ಲಿ ಕನ್ನಡದ ಹಲವು ಸಿನಿಮಾಗೆ ಸೆಟ್​ ಹಾಕಲಾಗಿತ್ತು.

ತೆಲುಗಿನ ‘ಬಾಹುಬಲಿ’, ಬೆಂಗಾಲ್ ಟೈಗರ್, ಗಬ್ಬರ್ ಸಿಂಗ್, ಹನುಮಾನ್, ಕಲ್ಕಿ 2898 ಎಡಿ, ಪುಷ್ಪ, ಆರ್​ಆರ್​ಆರ್, ಹಿಂದಿಯ ಚೆನ್ನೈ ಎಕ್ಸ್​ಪ್ರೆಸ್, ಕನ್ನಡದ ಜಾಗ್ವಾರ್, ಕೆಜಿಎಫ್ 2, ರಾಜಕುಮಾರ, ತಮಿಳಿನ ಲಿಯೋ ಸೇರಿ ಅನೇಕ ಸಿನಿಮಾಗಳು ಇಲ್ಲಿ ಶೂಟ್ ಆಗಿವೆ.

ಇದನ್ನೂ ಓದಿ: SP ಬಾಲುನನ್ನು ಎತ್ತರೆತ್ತರಕ್ಕೆ ಬೆಳೆಸಿದ ರಾಮೋಜಿ ರಾವ್, ಬಾಲುಗೆ ನೀಡಿದ್ದ ಹಿತವಚನ ಏನು?

ರಾಮೋಜಿ ರಾವ್ ನಿಧನಕ್ಕೆ ಅನೇಕರು ಸಂತಾಪ ಸೂಚಿಸಿದ್ದಾರೆ. ತೆಲಂಗಾಣ ಬಿಜಿಪಿ ಮುಖ್ಯಸ್ಥ ಹಾಗೂ ಪಾರ್ಟಿ ಸಂಸದ ಜಿ ಕೃಷ್ಣನ್ ರೆಡ್ಡಿ ಅವರು ಸಂತಾಪ ಸೂಚಿಸಿದ್ದಾರೆ. ಇದರ ಜೊತೆಗೆ ಅನೇಕ ಸೆಲೆಬ್ರಿಟಿಗಳು ಈ ಬಗ್ಗೆ ಸಂತಾಪ ಕೋರಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 8:30 am, Sat, 8 June 24

ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ