AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ramoji Rao: ರಾಮೋಜಿ ಫಿಲ್ಮ್​ ಸಿಟಿ ಸ್ಥಾಪಕ ರಾಮೋಜಿ ರಾವ್ ನಿಧನ; ಸಂತಾಪ ಕೋರಿದ ಚಿತ್ರರಂಗ

ರಾಮೋಜಿ ರಾವ್ ನಿಧನ: ರಾಮೋಜಿ ಫಿಲ್ಮ್​ ಸಿಟಿಯಲ್ಲಿ ‘ಬಾಹುಬಲಿ’ ಸೇರಿ ಅನೇಕ ಸೂಪರ್ ಹಿಟ್ ಚಿತ್ರಗಳ ಶೂಟಿಂಗ್ ಆಗಿದೆ. 1996ರಲ್ಲಿ ಇದನ್ನು ರಾಮೋಜಿ ರಾವ್ ಸ್ಥಾಪಿಸಿದರು. ಹೈದರಾಬಾದ್​ನಲ್ಲಿರುವ ಈ ಪ್ರದೇಶ 1,666 ಎಕರೆ ಪ್ರದೇಶದಲ್ಲಿ ಇದೆ. ವಿಶ್ವದಲ್ಲೇ ಇದು ಅತಿ ದೊಡ್ಡ ಸ್ಟುಡಿಯೋ ಎನ್ನುವ ಖ್ಯಾತಿ ಇದೆ.

Ramoji Rao: ರಾಮೋಜಿ ಫಿಲ್ಮ್​ ಸಿಟಿ ಸ್ಥಾಪಕ ರಾಮೋಜಿ ರಾವ್ ನಿಧನ; ಸಂತಾಪ ಕೋರಿದ ಚಿತ್ರರಂಗ
ರಾಜೇಶ್ ದುಗ್ಗುಮನೆ
|

Updated on:Jun 08, 2024 | 8:44 AM

Share

ರಾಮೋಜಿ ಫಿಲ್ಮ್​ ಸಿಟಿ (Ramoji Film City) ನಿರ್ಮಿಸಿದ್ದ ರಾಮೋಜಿ ರಾವ್ ಅವರು ಇಂದು (ಜೂನ್ 8) ನಿಧನ ಹೊಂದಿದ್ದಾರೆ. ಅವರಿಗೆ 87 ವರ್ಷ ವಯಸ್ಸಾಗಿತ್ತು. ಹಲವು ವರ್ಷಗಳಿಂದ ಅವರು ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಇದಕ್ಕಾಗಿ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೂಡ ಪಡೆಯುತ್ತಿದ್ದರು. ಅವರ ನಿಧನ ವಾರ್ತೆ ಅನೇಕರಿಗೆ ದುಃಖ ತಂದಿದೆ. ಟಾಲಿವುಡ್​ನ ಅನೇಕ ಸೆಲೆಬ್ರಿಟಿಗಳು ಇವರ ಸಾವಿಗೆ ಸಂತಾಪ ಸೂಚಿಸಿದ್ದಾರೆ.

ರಾಮೋಜಿ ಫಿಲ್ಮ್​ ಸಿಟಿಯಲ್ಲಿ ‘ಬಾಹುಬಲಿ’ ಸೇರಿ ಅನೇಕ ಸೂಪರ್ ಹಿಟ್ ಚಿತ್ರಗಳ ಶೂಟಿಂಗ್ ಆಗಿದೆ. 1996ರಲ್ಲಿ ಇದನ್ನು ರಾಮೋಜಿ ರಾವ್ ಸ್ಥಾಪಿಸಿದರು. ಹೈದರಾಬಾದ್​ನಲ್ಲಿರುವ ಈ ಪ್ರದೇಶ 1,666 ಎಕರೆ ಪ್ರದೇಶದಲ್ಲಿ ಇದೆ. ವಿಶ್ವದಲ್ಲೇ ಇದು ಅತಿ ದೊಡ್ಡ ಸ್ಟುಡಿಯೋ ಎನ್ನುವ ಖ್ಯಾತಿ ಇದೆ. ಇದು ವಿಶ್ವ ದಾಖಲೆ ಪಟ್ಟಿಯಲ್ಲೂ ಇದೆ. ರಾಮೋಜಿ ರಾವ್ ಅವರು ಚಿತ್ರರಂಗಕ್ಕೆ ನೀಡಿದ ಕೊಡುಗೆ ಆಧರಿಸಿ ಅವರಿಗೆ ಪದ್ಮ ವಿಭೂಷಣ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

ರಾಮೋಜಿ ರಾವ್ ಅವರು ಜನಿಸಿದ್ದು 1936ರಲ್ಲಿ. 1984ರಲ್ಲಿ ಅವರು ಸಿನಿಮಾ ನಿರ್ಮಾಣಕ್ಕೆ ಇಳಿದರು. 2015ರವರೆಗೂ ಅವರು ಸಿನಿಮಾಗಳನ್ನು ನಿರ್ಮಿಸುತ್ತಿದ್ದರು. ಆ ಬಳಿಕ ಅವರು ನಿರ್ಮಾಣದಿಂದ ದೂರವೇ ಇದ್ದರು. ರಾಮೋಜಿ ಫಿಲ್ಮ್ ಸಿಟಿಯಲ್ಲಿ ಕನ್ನಡದ ಹಲವು ಸಿನಿಮಾಗೆ ಸೆಟ್​ ಹಾಕಲಾಗಿತ್ತು.

ತೆಲುಗಿನ ‘ಬಾಹುಬಲಿ’, ಬೆಂಗಾಲ್ ಟೈಗರ್, ಗಬ್ಬರ್ ಸಿಂಗ್, ಹನುಮಾನ್, ಕಲ್ಕಿ 2898 ಎಡಿ, ಪುಷ್ಪ, ಆರ್​ಆರ್​ಆರ್, ಹಿಂದಿಯ ಚೆನ್ನೈ ಎಕ್ಸ್​ಪ್ರೆಸ್, ಕನ್ನಡದ ಜಾಗ್ವಾರ್, ಕೆಜಿಎಫ್ 2, ರಾಜಕುಮಾರ, ತಮಿಳಿನ ಲಿಯೋ ಸೇರಿ ಅನೇಕ ಸಿನಿಮಾಗಳು ಇಲ್ಲಿ ಶೂಟ್ ಆಗಿವೆ.

ಇದನ್ನೂ ಓದಿ: SP ಬಾಲುನನ್ನು ಎತ್ತರೆತ್ತರಕ್ಕೆ ಬೆಳೆಸಿದ ರಾಮೋಜಿ ರಾವ್, ಬಾಲುಗೆ ನೀಡಿದ್ದ ಹಿತವಚನ ಏನು?

ರಾಮೋಜಿ ರಾವ್ ನಿಧನಕ್ಕೆ ಅನೇಕರು ಸಂತಾಪ ಸೂಚಿಸಿದ್ದಾರೆ. ತೆಲಂಗಾಣ ಬಿಜಿಪಿ ಮುಖ್ಯಸ್ಥ ಹಾಗೂ ಪಾರ್ಟಿ ಸಂಸದ ಜಿ ಕೃಷ್ಣನ್ ರೆಡ್ಡಿ ಅವರು ಸಂತಾಪ ಸೂಚಿಸಿದ್ದಾರೆ. ಇದರ ಜೊತೆಗೆ ಅನೇಕ ಸೆಲೆಬ್ರಿಟಿಗಳು ಈ ಬಗ್ಗೆ ಸಂತಾಪ ಕೋರಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 8:30 am, Sat, 8 June 24

ಮುಂದುವರಿದ ಡಿನ್ನರ್ ಮೀಟಿಂಗ್: ಆರೋಗ್ಯ ಸರಿ ಇಲ್ಲದಿದ್ದರೂ ಸಿಎಂ ಭಾಗಿ
ಮುಂದುವರಿದ ಡಿನ್ನರ್ ಮೀಟಿಂಗ್: ಆರೋಗ್ಯ ಸರಿ ಇಲ್ಲದಿದ್ದರೂ ಸಿಎಂ ಭಾಗಿ
ಡಿಕೆಶಿ​ ಪಿಎಸ್ ಕಾರು ಅಪಘಾತ: ಬೈಕ್​ ಸವಾರ ಸಾವು, ಕಾರು ಪಲ್ಟಿ
ಡಿಕೆಶಿ​ ಪಿಎಸ್ ಕಾರು ಅಪಘಾತ: ಬೈಕ್​ ಸವಾರ ಸಾವು, ಕಾರು ಪಲ್ಟಿ
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು