AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ramya Divya Spandana: ಪಾಕ್​ ವಿರುದ್ಧ ಭಾರತದ ಗೆಲುವಿಗೆ ರಮ್ಯಾ ಸಂಭ್ರಮ: ಆದರೂ ಅವರಿಗೆ ಇದೆ ಒಂದು ಬೇಸರ; ಏನದು?

Ind Vs Pak World Cup: ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ರಮ್ಯಾ ದಿವ್ಯ ಸ್ಪಂದನಾ ಅವರು ಗೆಳೆಯರ ಜೊತೆ ಸೇರಿ ಭಾರತ ವರ್ಸಸ್​ ಪಾಕಿಸ್ತಾನ ವಿಶ್ವಕಪ್​ ಪಂದ್ಯವನ್ನು ವೀಕ್ಷಣೆ ಮಾಡಿದ್ದಾರೆ. ಈ ವೇಳೆ ಸ್ಪೇಡಿಯಂನಲ್ಲಿ ಕ್ಲಿಕ್ಕಿಸಿದ ಸೆಲ್ಫಿಯನ್ನು ಅವರು ಪೋಸ್ಟ್​ ಮಾಡಿದ್ದಾರೆ. ಕ್ರಿಕೆಟ್​ ನೋಡಲು ಬಂದ ಜನರು ನಡೆದುಕೊಂಡ ರೀತಿ ರಮ್ಯಾಗೆ ಇಷ್ಟ ಆಗಿಲ್ಲ.

Ramya Divya Spandana: ಪಾಕ್​ ವಿರುದ್ಧ ಭಾರತದ ಗೆಲುವಿಗೆ ರಮ್ಯಾ ಸಂಭ್ರಮ: ಆದರೂ ಅವರಿಗೆ ಇದೆ ಒಂದು ಬೇಸರ; ಏನದು?
ರಮ್ಯಾ ದಿವ್ಯ ಸ್ಪಂದನಾ
ಮದನ್​ ಕುಮಾರ್​
|

Updated on: Oct 15, 2023 | 7:47 AM

Share

ವಿಶ್ವಕಪ್​ ಕದನದಲ್ಲಿ ಭಾರತ ವರ್ಸಸ್​ ಪಾಕಿಸ್ತಾನ (Ind Vs Pak) ಪಂದ್ಯ ಇದ್ದರೆ ಜನಸಾಮಾನ್ಯರು ಮಾತ್ರವಲ್ಲದೇ ಸೆಲೆಬ್ರಿಟಿಗಳು ಕೂಡ ಅಲರ್ಟ್​ ಆಗುತ್ತಾರೆ. ನಟಿ ರಮ್ಯಾ ದಿವ್ಯ ಸ್ಪಂದನಾ (Ramya Divya Spandana) ಕೂಡ ಕ್ರಿಕೆಟ್​ಪ್ರಿಯೆ. ಶನಿವಾರ (ಅಕ್ಟೋಬರ್​ 14) ಗುಜರಾತ್​ನ ಅಹಮದಾಬಾದ್​ನಲ್ಲಿ ನಡೆದ ಹಣಾಹಣಿಯಲ್ಲಿ ಟೀಮ್​ ಇಂಡಿಯಾ ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯವನ್ನು ರಮ್ಯಾ (Ramya) ಅವರು ವೀಕ್ಷಿಸಿದ್ದಾರೆ. ಭಾರತ ಗೆಲ್ಲುತ್ತಿದ್ದಂತೆಯೇ ಎಲ್ಲರೂ ಸಂಭ್ರಮಿಸಿದ್ದಾರೆ. ರಮ್ಯಾ ಕೂಡ ಸೋಶಿಯಲ್​ ಮೀಡಿಯಾದಲ್ಲಿ ಫೋಟೋ ಹಂಚಿಕೊಂಡು ಖುಷಿ ವ್ಯಕ್ತಪಡಿಸಿದ್ದಾರೆ. ಆದರೆ ಈ ಸಂಭ್ರಮದ ನಡುವೆಯೂ ಅವರು ಒಂದು ಬೇಸರವನ್ನು ತೋಡಿಕೊಂಡಿದ್ದಾರೆ. ಅದಕ್ಕೆ ಸಂಬಂಧಿಸಿದಂತೆ ಒಂದು ವಿಡಿಯೋವನ್ನೂ ಅವರು ಹಂಚಿಕೊಂಡಿದ್ದಾರೆ.

ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಟಿ ರಮ್ಯಾ ದಿವ್ಯ ಸ್ಪಂದನಾ ಅವರು ಗೆಳೆಯರ ಜೊತೆ ಸೇರಿ ಭಾರತ ವರ್ಸಸ್​ ಪಾಕಿಸ್ತಾನ ವಿಶ್ವಕಪ್​ ಪಂದ್ಯವನ್ನು ವೀಕ್ಷಣೆ ಮಾಡಿದ್ದಾರೆ. ಈ ವೇಳೆ ಸ್ಪೇಡಿಯಂನಲ್ಲಿ ಕ್ಲಿಕ್ಕಿಸಿದ ಸೆಲ್ಫಿಯನ್ನು ಅವರು ಪೋಸ್ಟ್​ ಮಾಡಿದ್ದಾರೆ. ಕ್ರಿಕೆಟ್​ ನೋಡಲು ಬಂದ ಜನರು ನಡೆದುಕೊಂಡ ರೀತಿ ರಮ್ಯಾಗೆ ಇಷ್ಟ ಆಗಿಲ್ಲ. ಎಲ್ಲೆಂದರಲ್ಲಿ ಕಸ ಎಸೆದಿರುವುದನ್ನು ಅವರು ಖಂಡಿಸಿದ್ದಾರೆ. ಅವರ ಈ ಪೋಸ್ಟ್​ಗೆ ಜನರು ಬಗೆಬಗೆಯಲ್ಲಿ ಕಮೆಂಟ್​ ಮಾಡಿದ್ದಾರೆ.

‘ಇದೊಂದು ಉತ್ತಮ ಪಂದ್ಯವಾಗಿತ್ತು. ನಾವು ಗೆದ್ದೆವು. ಎಂದಿನಂತೆ ಅಹಮದಾಬಾದ್​ ನಮಗೆ ನಿರಾಸೆ ಮಾಡಿಲ್ಲ. ಆಹಾರ ಚೆನ್ನಾಗಿತ್ತು. ಈ ವಿಡಿಯೋ ನೋಡಿ ನನಗೆ ನಿರಾಸೆ ಆಯಿತು. ಯಾಕೆ ಇಂಡಿಯಾ ಯಾಕೆ? ಎಲ್ಲಿದೆ ಸ್ವಚ್ಛತೆ’ ಎಂದು ರಮ್ಯಾ ಅವರು ಇನ್​ಸ್ಟಾಗ್ರಾಮ್​ನಲ್ಲಿ ಬರೆದುಕೊಂಡಿದ್ದಾರೆ. ಅಭಿಮಾನಿಗಳ ವಲಯದಲ್ಲಿ ಈ ಪೋಸ್ಟ್​ ವೈರಲ್​ ಆಗಿದೆ. ‘ನಾವು ವಾತಾವರಣವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಲು ಆಗದೇ ಇರುವುದು ಬೇಸರದ ಸಂಗತಿ’ ಎಂದು ನೆಟ್ಟಿಗರು ಕಮೆಂಟ್​ ಮಾಡಿದ್ದಾರೆ.

ಇದನ್ನೂ ಓದಿ: Actress Ramya: ರಮ್ಯಾಗೆ ಹೃದಯಾಘಾತ ಆಗಿದೆ ಎಂಬ ಸುದ್ದಿ ಸುಳ್ಳು; ಈ ಫೇಕ್​ ನ್ಯೂಸ್ ಹುಟ್ಟಿದ್ದು ಹೇಗೆ?

ಸಿನಿಮಾ ಮತ್ತು ರಾಜಕೀಯ ಎರಡೂ ಕ್ಷೇತ್ರದಲ್ಲಿ ಬ್ಯುಸಿ ಆಗಿದ್ದವರು ರಮ್ಯಾ. ಆದರೆ ಈಗ ಅವರು ರಾಜಕೀಯದಿಂದ ಅಂತರ ಕಾಯ್ದುಕೊಂಡಿದ್ದಾರೆ. ಮತ್ತೆ ಸಿನಿಮಾ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಅವರು ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡ ‘ಹಾಸ್ಟೆಲ್​ ಹುಡುಗರು ಬೇಕಾಗಿದ್ದಾರೆ’ ಸಿನಿಮಾ ಈ ವರ್ಷ ಬಿಡುಗಡೆ ಆಗಿ ಗೆಲುವು ಸಾಧಿಸಿತು. ಡಾಲಿ ಧನಂಜಯ್​ ಜೊತೆ ‘ಉತ್ತರಕಾಂಡ’ ಸಿನಿಮಾದಲ್ಲಿ ರಮ್ಯಾ ನಟಿಸುತ್ತಿದ್ದಾರೆ. ಈ ಸಿನಿಮಾ ಮೇಲೆ ಬಹಳ ನಿರೀಕ್ಷೆ ಇದೆ. ಅಲ್ಲದೇ, ತಮ್ಮದೇ ನಿರ್ಮಾಣ ಸಂಸ್ಥೆಯನ್ನು ಆರಂಭಿಸಿರುವ ರಮ್ಯಾ ಅವರು ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ಡಿಕೆ, ನಾನು ಹಾಲು ಜೇನು ಇದ್ದಂತೆ ಎಂದ ಸಿದ್ದು ಹೇಳಿಕೆಗೆ ಜೋಶಿ ವ್ಯಂಗ್ಯ
ಡಿಕೆ, ನಾನು ಹಾಲು ಜೇನು ಇದ್ದಂತೆ ಎಂದ ಸಿದ್ದು ಹೇಳಿಕೆಗೆ ಜೋಶಿ ವ್ಯಂಗ್ಯ
ಶಾಲೆಗೆ ಬಂದು ಮುಖ್ಯಶಿಕ್ಷಕನ 2ನೇ ಪತ್ನಿ ಹೈಡ್ರಾಮಾ: ವಿದ್ಯಾರ್ಥಿಗಳು ಕಂಗಾಲು
ಶಾಲೆಗೆ ಬಂದು ಮುಖ್ಯಶಿಕ್ಷಕನ 2ನೇ ಪತ್ನಿ ಹೈಡ್ರಾಮಾ: ವಿದ್ಯಾರ್ಥಿಗಳು ಕಂಗಾಲು
ಜಮ್ಮು ಕಾಶ್ಮೀರ: ಕುಣಿದು ಕುಪ್ಪಳಿಸಿ ಹೋಳಿ ಆಚರಿಸಿದ ಸಿಆರ್​ಪಿಎಫ್ ಯೋಧರು!
ಜಮ್ಮು ಕಾಶ್ಮೀರ: ಕುಣಿದು ಕುಪ್ಪಳಿಸಿ ಹೋಳಿ ಆಚರಿಸಿದ ಸಿಆರ್​ಪಿಎಫ್ ಯೋಧರು!
ಸಿದ್ಧಿ ವಿನಾಯಕ ದೇವಸ್ಥಾನಕ್ಕೆ ಭೇಟಿ ನೀಡಿದ ಟೀಂ ಇಂಡಿಯಾ ಆಟಗಾರರು
ಸಿದ್ಧಿ ವಿನಾಯಕ ದೇವಸ್ಥಾನಕ್ಕೆ ಭೇಟಿ ನೀಡಿದ ಟೀಂ ಇಂಡಿಯಾ ಆಟಗಾರರು
ಮುದ್ದು ಮಗಳ ಹುಟ್ಟುಹಬ್ಬಕ್ಕೆ ಮುದ್ದಾದ ವಿಡಿಯೋ ಹಂಚಿಕೊಂಡ ರಿಷಬ್ ಶೆಟ್ಟಿ
ಮುದ್ದು ಮಗಳ ಹುಟ್ಟುಹಬ್ಬಕ್ಕೆ ಮುದ್ದಾದ ವಿಡಿಯೋ ಹಂಚಿಕೊಂಡ ರಿಷಬ್ ಶೆಟ್ಟಿ
ಹಣ ಡ್ರಾ ಮಾಡಿಕೊಡಿ ಅಂದ್ರೆ ATM ಕಾರ್ಡ್ ಬದಲಿಸಿ 60 ಸಾವಿರ ಎಗರಿಸಿದ್ರು!
ಹಣ ಡ್ರಾ ಮಾಡಿಕೊಡಿ ಅಂದ್ರೆ ATM ಕಾರ್ಡ್ ಬದಲಿಸಿ 60 ಸಾವಿರ ಎಗರಿಸಿದ್ರು!
ಒಬ್ಬರನ್ನೊಬ್ಬರು ತಳ್ಳಿಕೊಂಡು ಕೆಂಡದ ಮೇಲೆ ಬಿದ್ದ ಭಕ್ತರು
ಒಬ್ಬರನ್ನೊಬ್ಬರು ತಳ್ಳಿಕೊಂಡು ಕೆಂಡದ ಮೇಲೆ ಬಿದ್ದ ಭಕ್ತರು
ಗಾಂಜಾ ಅಮಲಿನಲ್ಲಿ ಅಟ್ಟಹಾಸ: ಹೊಸ ಕಾರಿನ ಗ್ಲಾಸ್​​ ಒಡೆದ ಕಿಡಿಗೇಡಿಗಳು
ಗಾಂಜಾ ಅಮಲಿನಲ್ಲಿ ಅಟ್ಟಹಾಸ: ಹೊಸ ಕಾರಿನ ಗ್ಲಾಸ್​​ ಒಡೆದ ಕಿಡಿಗೇಡಿಗಳು
‘ಕರ್ಣ ಧಾರಾವಾಹಿಯಿಂದ ಹೊರ ನಡೆದ ನಾಗಾಭರಣ; ಅಭಿಜಿತ್ ಆಗಮನ
‘ಕರ್ಣ ಧಾರಾವಾಹಿಯಿಂದ ಹೊರ ನಡೆದ ನಾಗಾಭರಣ; ಅಭಿಜಿತ್ ಆಗಮನ
Video: ಮಗುವಿಗೆ ಜನ್ಮಕೊಟ್ಟು ಕಸದ ಬುಟ್ಟಿಗೆ ಎಸೆದು ಹೋದ ಬಾಲಕಿ
Video: ಮಗುವಿಗೆ ಜನ್ಮಕೊಟ್ಟು ಕಸದ ಬುಟ್ಟಿಗೆ ಎಸೆದು ಹೋದ ಬಾಲಕಿ