Ramya Divya Spandana: ಪಾಕ್​ ವಿರುದ್ಧ ಭಾರತದ ಗೆಲುವಿಗೆ ರಮ್ಯಾ ಸಂಭ್ರಮ: ಆದರೂ ಅವರಿಗೆ ಇದೆ ಒಂದು ಬೇಸರ; ಏನದು?

Ind Vs Pak World Cup: ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ರಮ್ಯಾ ದಿವ್ಯ ಸ್ಪಂದನಾ ಅವರು ಗೆಳೆಯರ ಜೊತೆ ಸೇರಿ ಭಾರತ ವರ್ಸಸ್​ ಪಾಕಿಸ್ತಾನ ವಿಶ್ವಕಪ್​ ಪಂದ್ಯವನ್ನು ವೀಕ್ಷಣೆ ಮಾಡಿದ್ದಾರೆ. ಈ ವೇಳೆ ಸ್ಪೇಡಿಯಂನಲ್ಲಿ ಕ್ಲಿಕ್ಕಿಸಿದ ಸೆಲ್ಫಿಯನ್ನು ಅವರು ಪೋಸ್ಟ್​ ಮಾಡಿದ್ದಾರೆ. ಕ್ರಿಕೆಟ್​ ನೋಡಲು ಬಂದ ಜನರು ನಡೆದುಕೊಂಡ ರೀತಿ ರಮ್ಯಾಗೆ ಇಷ್ಟ ಆಗಿಲ್ಲ.

Ramya Divya Spandana: ಪಾಕ್​ ವಿರುದ್ಧ ಭಾರತದ ಗೆಲುವಿಗೆ ರಮ್ಯಾ ಸಂಭ್ರಮ: ಆದರೂ ಅವರಿಗೆ ಇದೆ ಒಂದು ಬೇಸರ; ಏನದು?
ರಮ್ಯಾ ದಿವ್ಯ ಸ್ಪಂದನಾ
Follow us
|

Updated on: Oct 15, 2023 | 7:47 AM

ವಿಶ್ವಕಪ್​ ಕದನದಲ್ಲಿ ಭಾರತ ವರ್ಸಸ್​ ಪಾಕಿಸ್ತಾನ (Ind Vs Pak) ಪಂದ್ಯ ಇದ್ದರೆ ಜನಸಾಮಾನ್ಯರು ಮಾತ್ರವಲ್ಲದೇ ಸೆಲೆಬ್ರಿಟಿಗಳು ಕೂಡ ಅಲರ್ಟ್​ ಆಗುತ್ತಾರೆ. ನಟಿ ರಮ್ಯಾ ದಿವ್ಯ ಸ್ಪಂದನಾ (Ramya Divya Spandana) ಕೂಡ ಕ್ರಿಕೆಟ್​ಪ್ರಿಯೆ. ಶನಿವಾರ (ಅಕ್ಟೋಬರ್​ 14) ಗುಜರಾತ್​ನ ಅಹಮದಾಬಾದ್​ನಲ್ಲಿ ನಡೆದ ಹಣಾಹಣಿಯಲ್ಲಿ ಟೀಮ್​ ಇಂಡಿಯಾ ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯವನ್ನು ರಮ್ಯಾ (Ramya) ಅವರು ವೀಕ್ಷಿಸಿದ್ದಾರೆ. ಭಾರತ ಗೆಲ್ಲುತ್ತಿದ್ದಂತೆಯೇ ಎಲ್ಲರೂ ಸಂಭ್ರಮಿಸಿದ್ದಾರೆ. ರಮ್ಯಾ ಕೂಡ ಸೋಶಿಯಲ್​ ಮೀಡಿಯಾದಲ್ಲಿ ಫೋಟೋ ಹಂಚಿಕೊಂಡು ಖುಷಿ ವ್ಯಕ್ತಪಡಿಸಿದ್ದಾರೆ. ಆದರೆ ಈ ಸಂಭ್ರಮದ ನಡುವೆಯೂ ಅವರು ಒಂದು ಬೇಸರವನ್ನು ತೋಡಿಕೊಂಡಿದ್ದಾರೆ. ಅದಕ್ಕೆ ಸಂಬಂಧಿಸಿದಂತೆ ಒಂದು ವಿಡಿಯೋವನ್ನೂ ಅವರು ಹಂಚಿಕೊಂಡಿದ್ದಾರೆ.

ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಟಿ ರಮ್ಯಾ ದಿವ್ಯ ಸ್ಪಂದನಾ ಅವರು ಗೆಳೆಯರ ಜೊತೆ ಸೇರಿ ಭಾರತ ವರ್ಸಸ್​ ಪಾಕಿಸ್ತಾನ ವಿಶ್ವಕಪ್​ ಪಂದ್ಯವನ್ನು ವೀಕ್ಷಣೆ ಮಾಡಿದ್ದಾರೆ. ಈ ವೇಳೆ ಸ್ಪೇಡಿಯಂನಲ್ಲಿ ಕ್ಲಿಕ್ಕಿಸಿದ ಸೆಲ್ಫಿಯನ್ನು ಅವರು ಪೋಸ್ಟ್​ ಮಾಡಿದ್ದಾರೆ. ಕ್ರಿಕೆಟ್​ ನೋಡಲು ಬಂದ ಜನರು ನಡೆದುಕೊಂಡ ರೀತಿ ರಮ್ಯಾಗೆ ಇಷ್ಟ ಆಗಿಲ್ಲ. ಎಲ್ಲೆಂದರಲ್ಲಿ ಕಸ ಎಸೆದಿರುವುದನ್ನು ಅವರು ಖಂಡಿಸಿದ್ದಾರೆ. ಅವರ ಈ ಪೋಸ್ಟ್​ಗೆ ಜನರು ಬಗೆಬಗೆಯಲ್ಲಿ ಕಮೆಂಟ್​ ಮಾಡಿದ್ದಾರೆ.

‘ಇದೊಂದು ಉತ್ತಮ ಪಂದ್ಯವಾಗಿತ್ತು. ನಾವು ಗೆದ್ದೆವು. ಎಂದಿನಂತೆ ಅಹಮದಾಬಾದ್​ ನಮಗೆ ನಿರಾಸೆ ಮಾಡಿಲ್ಲ. ಆಹಾರ ಚೆನ್ನಾಗಿತ್ತು. ಈ ವಿಡಿಯೋ ನೋಡಿ ನನಗೆ ನಿರಾಸೆ ಆಯಿತು. ಯಾಕೆ ಇಂಡಿಯಾ ಯಾಕೆ? ಎಲ್ಲಿದೆ ಸ್ವಚ್ಛತೆ’ ಎಂದು ರಮ್ಯಾ ಅವರು ಇನ್​ಸ್ಟಾಗ್ರಾಮ್​ನಲ್ಲಿ ಬರೆದುಕೊಂಡಿದ್ದಾರೆ. ಅಭಿಮಾನಿಗಳ ವಲಯದಲ್ಲಿ ಈ ಪೋಸ್ಟ್​ ವೈರಲ್​ ಆಗಿದೆ. ‘ನಾವು ವಾತಾವರಣವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಲು ಆಗದೇ ಇರುವುದು ಬೇಸರದ ಸಂಗತಿ’ ಎಂದು ನೆಟ್ಟಿಗರು ಕಮೆಂಟ್​ ಮಾಡಿದ್ದಾರೆ.

ಇದನ್ನೂ ಓದಿ: Actress Ramya: ರಮ್ಯಾಗೆ ಹೃದಯಾಘಾತ ಆಗಿದೆ ಎಂಬ ಸುದ್ದಿ ಸುಳ್ಳು; ಈ ಫೇಕ್​ ನ್ಯೂಸ್ ಹುಟ್ಟಿದ್ದು ಹೇಗೆ?

ಸಿನಿಮಾ ಮತ್ತು ರಾಜಕೀಯ ಎರಡೂ ಕ್ಷೇತ್ರದಲ್ಲಿ ಬ್ಯುಸಿ ಆಗಿದ್ದವರು ರಮ್ಯಾ. ಆದರೆ ಈಗ ಅವರು ರಾಜಕೀಯದಿಂದ ಅಂತರ ಕಾಯ್ದುಕೊಂಡಿದ್ದಾರೆ. ಮತ್ತೆ ಸಿನಿಮಾ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಅವರು ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡ ‘ಹಾಸ್ಟೆಲ್​ ಹುಡುಗರು ಬೇಕಾಗಿದ್ದಾರೆ’ ಸಿನಿಮಾ ಈ ವರ್ಷ ಬಿಡುಗಡೆ ಆಗಿ ಗೆಲುವು ಸಾಧಿಸಿತು. ಡಾಲಿ ಧನಂಜಯ್​ ಜೊತೆ ‘ಉತ್ತರಕಾಂಡ’ ಸಿನಿಮಾದಲ್ಲಿ ರಮ್ಯಾ ನಟಿಸುತ್ತಿದ್ದಾರೆ. ಈ ಸಿನಿಮಾ ಮೇಲೆ ಬಹಳ ನಿರೀಕ್ಷೆ ಇದೆ. ಅಲ್ಲದೇ, ತಮ್ಮದೇ ನಿರ್ಮಾಣ ಸಂಸ್ಥೆಯನ್ನು ಆರಂಭಿಸಿರುವ ರಮ್ಯಾ ಅವರು ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಉಡುಪಿಯ ಹೆಬ್ರಿಯಲ್ಲಿ ಮೇಘಸ್ಫೋಟ; ಭೀಕರ ಪ್ರವಾಹ ಸೃಷ್ಟಿ
ಉಡುಪಿಯ ಹೆಬ್ರಿಯಲ್ಲಿ ಮೇಘಸ್ಫೋಟ; ಭೀಕರ ಪ್ರವಾಹ ಸೃಷ್ಟಿ
ಉತ್ತರ ಕನ್ನಡ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಉತ್ತರ ಕನ್ನಡ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು
ಅಕ್ಟೋಬರ್ 07 ರಿಂದ 13 ರವರೆಗಿನ ವಾರ ಭವಿಷ್ಯ ತಿಳಿಯಿರಿ
ಅಕ್ಟೋಬರ್ 07 ರಿಂದ 13 ರವರೆಗಿನ ವಾರ ಭವಿಷ್ಯ ತಿಳಿಯಿರಿ
Navratri 2024 4th Day: ನವರಾತ್ರಿ 4ನೇ ದಿನ ಕುಷ್ಮಾಂಡ ದೇವಿಯ ಮಹತ್ವವೇನು?
Navratri 2024 4th Day: ನವರಾತ್ರಿ 4ನೇ ದಿನ ಕುಷ್ಮಾಂಡ ದೇವಿಯ ಮಹತ್ವವೇನು?