Ramya Divya Spandana: ಪಾಕ್​ ವಿರುದ್ಧ ಭಾರತದ ಗೆಲುವಿಗೆ ರಮ್ಯಾ ಸಂಭ್ರಮ: ಆದರೂ ಅವರಿಗೆ ಇದೆ ಒಂದು ಬೇಸರ; ಏನದು?

|

Updated on: Oct 15, 2023 | 7:47 AM

Ind Vs Pak World Cup: ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ರಮ್ಯಾ ದಿವ್ಯ ಸ್ಪಂದನಾ ಅವರು ಗೆಳೆಯರ ಜೊತೆ ಸೇರಿ ಭಾರತ ವರ್ಸಸ್​ ಪಾಕಿಸ್ತಾನ ವಿಶ್ವಕಪ್​ ಪಂದ್ಯವನ್ನು ವೀಕ್ಷಣೆ ಮಾಡಿದ್ದಾರೆ. ಈ ವೇಳೆ ಸ್ಪೇಡಿಯಂನಲ್ಲಿ ಕ್ಲಿಕ್ಕಿಸಿದ ಸೆಲ್ಫಿಯನ್ನು ಅವರು ಪೋಸ್ಟ್​ ಮಾಡಿದ್ದಾರೆ. ಕ್ರಿಕೆಟ್​ ನೋಡಲು ಬಂದ ಜನರು ನಡೆದುಕೊಂಡ ರೀತಿ ರಮ್ಯಾಗೆ ಇಷ್ಟ ಆಗಿಲ್ಲ.

Ramya Divya Spandana: ಪಾಕ್​ ವಿರುದ್ಧ ಭಾರತದ ಗೆಲುವಿಗೆ ರಮ್ಯಾ ಸಂಭ್ರಮ: ಆದರೂ ಅವರಿಗೆ ಇದೆ ಒಂದು ಬೇಸರ; ಏನದು?
ರಮ್ಯಾ ದಿವ್ಯ ಸ್ಪಂದನಾ
Follow us on

ವಿಶ್ವಕಪ್​ ಕದನದಲ್ಲಿ ಭಾರತ ವರ್ಸಸ್​ ಪಾಕಿಸ್ತಾನ (Ind Vs Pak) ಪಂದ್ಯ ಇದ್ದರೆ ಜನಸಾಮಾನ್ಯರು ಮಾತ್ರವಲ್ಲದೇ ಸೆಲೆಬ್ರಿಟಿಗಳು ಕೂಡ ಅಲರ್ಟ್​ ಆಗುತ್ತಾರೆ. ನಟಿ ರಮ್ಯಾ ದಿವ್ಯ ಸ್ಪಂದನಾ (Ramya Divya Spandana) ಕೂಡ ಕ್ರಿಕೆಟ್​ಪ್ರಿಯೆ. ಶನಿವಾರ (ಅಕ್ಟೋಬರ್​ 14) ಗುಜರಾತ್​ನ ಅಹಮದಾಬಾದ್​ನಲ್ಲಿ ನಡೆದ ಹಣಾಹಣಿಯಲ್ಲಿ ಟೀಮ್​ ಇಂಡಿಯಾ ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯವನ್ನು ರಮ್ಯಾ (Ramya) ಅವರು ವೀಕ್ಷಿಸಿದ್ದಾರೆ. ಭಾರತ ಗೆಲ್ಲುತ್ತಿದ್ದಂತೆಯೇ ಎಲ್ಲರೂ ಸಂಭ್ರಮಿಸಿದ್ದಾರೆ. ರಮ್ಯಾ ಕೂಡ ಸೋಶಿಯಲ್​ ಮೀಡಿಯಾದಲ್ಲಿ ಫೋಟೋ ಹಂಚಿಕೊಂಡು ಖುಷಿ ವ್ಯಕ್ತಪಡಿಸಿದ್ದಾರೆ. ಆದರೆ ಈ ಸಂಭ್ರಮದ ನಡುವೆಯೂ ಅವರು ಒಂದು ಬೇಸರವನ್ನು ತೋಡಿಕೊಂಡಿದ್ದಾರೆ. ಅದಕ್ಕೆ ಸಂಬಂಧಿಸಿದಂತೆ ಒಂದು ವಿಡಿಯೋವನ್ನೂ ಅವರು ಹಂಚಿಕೊಂಡಿದ್ದಾರೆ.

ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಟಿ ರಮ್ಯಾ ದಿವ್ಯ ಸ್ಪಂದನಾ ಅವರು ಗೆಳೆಯರ ಜೊತೆ ಸೇರಿ ಭಾರತ ವರ್ಸಸ್​ ಪಾಕಿಸ್ತಾನ ವಿಶ್ವಕಪ್​ ಪಂದ್ಯವನ್ನು ವೀಕ್ಷಣೆ ಮಾಡಿದ್ದಾರೆ. ಈ ವೇಳೆ ಸ್ಪೇಡಿಯಂನಲ್ಲಿ ಕ್ಲಿಕ್ಕಿಸಿದ ಸೆಲ್ಫಿಯನ್ನು ಅವರು ಪೋಸ್ಟ್​ ಮಾಡಿದ್ದಾರೆ. ಕ್ರಿಕೆಟ್​ ನೋಡಲು ಬಂದ ಜನರು ನಡೆದುಕೊಂಡ ರೀತಿ ರಮ್ಯಾಗೆ ಇಷ್ಟ ಆಗಿಲ್ಲ. ಎಲ್ಲೆಂದರಲ್ಲಿ ಕಸ ಎಸೆದಿರುವುದನ್ನು ಅವರು ಖಂಡಿಸಿದ್ದಾರೆ. ಅವರ ಈ ಪೋಸ್ಟ್​ಗೆ ಜನರು ಬಗೆಬಗೆಯಲ್ಲಿ ಕಮೆಂಟ್​ ಮಾಡಿದ್ದಾರೆ.

‘ಇದೊಂದು ಉತ್ತಮ ಪಂದ್ಯವಾಗಿತ್ತು. ನಾವು ಗೆದ್ದೆವು. ಎಂದಿನಂತೆ ಅಹಮದಾಬಾದ್​ ನಮಗೆ ನಿರಾಸೆ ಮಾಡಿಲ್ಲ. ಆಹಾರ ಚೆನ್ನಾಗಿತ್ತು. ಈ ವಿಡಿಯೋ ನೋಡಿ ನನಗೆ ನಿರಾಸೆ ಆಯಿತು. ಯಾಕೆ ಇಂಡಿಯಾ ಯಾಕೆ? ಎಲ್ಲಿದೆ ಸ್ವಚ್ಛತೆ’ ಎಂದು ರಮ್ಯಾ ಅವರು ಇನ್​ಸ್ಟಾಗ್ರಾಮ್​ನಲ್ಲಿ ಬರೆದುಕೊಂಡಿದ್ದಾರೆ. ಅಭಿಮಾನಿಗಳ ವಲಯದಲ್ಲಿ ಈ ಪೋಸ್ಟ್​ ವೈರಲ್​ ಆಗಿದೆ. ‘ನಾವು ವಾತಾವರಣವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಲು ಆಗದೇ ಇರುವುದು ಬೇಸರದ ಸಂಗತಿ’ ಎಂದು ನೆಟ್ಟಿಗರು ಕಮೆಂಟ್​ ಮಾಡಿದ್ದಾರೆ.

ಇದನ್ನೂ ಓದಿ: Actress Ramya: ರಮ್ಯಾಗೆ ಹೃದಯಾಘಾತ ಆಗಿದೆ ಎಂಬ ಸುದ್ದಿ ಸುಳ್ಳು; ಈ ಫೇಕ್​ ನ್ಯೂಸ್ ಹುಟ್ಟಿದ್ದು ಹೇಗೆ?

ಸಿನಿಮಾ ಮತ್ತು ರಾಜಕೀಯ ಎರಡೂ ಕ್ಷೇತ್ರದಲ್ಲಿ ಬ್ಯುಸಿ ಆಗಿದ್ದವರು ರಮ್ಯಾ. ಆದರೆ ಈಗ ಅವರು ರಾಜಕೀಯದಿಂದ ಅಂತರ ಕಾಯ್ದುಕೊಂಡಿದ್ದಾರೆ. ಮತ್ತೆ ಸಿನಿಮಾ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಅವರು ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡ ‘ಹಾಸ್ಟೆಲ್​ ಹುಡುಗರು ಬೇಕಾಗಿದ್ದಾರೆ’ ಸಿನಿಮಾ ಈ ವರ್ಷ ಬಿಡುಗಡೆ ಆಗಿ ಗೆಲುವು ಸಾಧಿಸಿತು. ಡಾಲಿ ಧನಂಜಯ್​ ಜೊತೆ ‘ಉತ್ತರಕಾಂಡ’ ಸಿನಿಮಾದಲ್ಲಿ ರಮ್ಯಾ ನಟಿಸುತ್ತಿದ್ದಾರೆ. ಈ ಸಿನಿಮಾ ಮೇಲೆ ಬಹಳ ನಿರೀಕ್ಷೆ ಇದೆ. ಅಲ್ಲದೇ, ತಮ್ಮದೇ ನಿರ್ಮಾಣ ಸಂಸ್ಥೆಯನ್ನು ಆರಂಭಿಸಿರುವ ರಮ್ಯಾ ಅವರು ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.