AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಹೀರೋ ಜೊತೆ ನಟಿಸೋಕೆ ರಮ್ಯಾ ಕೃಷ್ಣಗೆ ಸಖತ್ ಭಯ

‘ಬಾಹುಬಲಿ’ ಚಿತ್ರದಲ್ಲಿ ರಾಜಮಾತೆ ಶಿವಗಾಮಿ ಪಾತ್ರದಲ್ಲಿ ಅದ್ಭುತವಾಗಿ ನಟಿಸಿದ್ದರು ರಮ್ಯಾ ಕೃಷ್ಣ. ಈ ಪಾತ್ರ ಸಖತ್ ಪವರ್​ಫುಲ್ ಆಗಿತ್ತು. ಈಗ ಸಿನಿಮಾಗಳಲ್ಲಿ ಅವರು ಪೋಷಕ ಪಾತ್ರಗಳ ಮೂಲಕ ಮಿಂಚುತ್ತಿದ್ದಾರೆ. ಈ ನಡುವೆ ರಮ್ಯಾ ಕೃಷ್ಣ ಈ ಹಿಂದೆ ಮಾಡಿದ ಕಾಮೆಂಟ್‌ಗಳು ಈಗ ವೈರಲ್ ಆಗುತ್ತಿವೆ.

ಈ ಹೀರೋ ಜೊತೆ ನಟಿಸೋಕೆ ರಮ್ಯಾ ಕೃಷ್ಣಗೆ ಸಖತ್ ಭಯ
ರಮ್ಯಾ ಕೃಷ್ಣ
 ಶ್ರೀಲಕ್ಷ್ಮೀ ಎಚ್
| Updated By: ರಾಜೇಶ್ ದುಗ್ಗುಮನೆ|

Updated on: Nov 30, 2024 | 7:39 AM

Share

ರಮ್ಯಾ ಕೃಷ್ಣ ಒಂದು ಕಾಲದಲ್ಲಿ ತಮ್ಮ ಸೌಂದರ್ಯ ಮತ್ತು ನಟನೆಯಿಂದ ಮೆಚ್ಚುಗೆ ಪಡೆದವರು. ಅವರು ಅನೇಕ ಸೂಪರ್ ಹಿಟ್ ಸಿನಿಮಾಗಳಲ್ಲಿ ನಟಿಸಿದ್ದಾರೆ. ರಮ್ಯಾ ಕೃಷ್ಣ ಅವರು ಕನ್ನಡದಲ್ಲೂ ನಟಿಸಿ ಭೇಷ್ ಎನಿಸಿಕೊಂಡಿದ್ದಾರೆ. ಇದರ ಜೊತೆಗೆ ತೆಲುಗು ಮತ್ತು ತಮಿಳು ಭಾಷೆಗಳಲ್ಲಿ ಸ್ಟಾರ್ ಆಗಿ ಮಿಂಚಿದ್ದಾರೆ. ಹಲವು ಸ್ಟಾರ್ ಹೀರೋಗಳ ಎದುರು ನಟಿಸಿರುವ ರಮ್ಯಾ ಕೃಷ್ಣ ಈಗಲೂ ಅಷ್ಟೇ ಸುಂದರವಾಗಿದ್ದಾರೆ. ಹಲವು ಸಿನಿಮಾಗಳಲ್ಲಿ ನಾಯಕಿಯಾಗಿ ನಟಿಸಿದ್ದ ರಮ್ಯಾ ಕೃಷ್ಣ ನೆಗೆಟಿವ್ ಪಾತ್ರಗಳಲ್ಲೂ ರಂಜಿಸಿದ್ದಾರೆ. ವಿಶೇಷವಾಗಿ ರಮ್ಯಾ ಕೃಷ್ಣ ಅವರು ಒಂದು ಅಪರೂಪದ ವಿಚಾರ ಹಂಚಿಕೊಂಡಿದ್ದಾರೆ. ಅವರಿಗೆ ಓರ್ವ ಹೀರೋ ಜೊತೆ ನಟಿಸಲು ಭಯವಾಗಿತ್ತಂತೆ.

‘ಬಾಹುಬಲಿ’ ಚಿತ್ರದಲ್ಲಿ ರಾಜಮಾತೆ ಶಿವಗಾಮಿ ಪಾತ್ರದಲ್ಲಿ ಅದ್ಭುತವಾಗಿ ನಟಿಸಿದ್ದರು ರಮ್ಯಾ ಕೃಷ್ಣ. ಈ ಪಾತ್ರ ಸಖತ್ ಪವರ್​ಫುಲ್ ಆಗಿತ್ತು. ಈಗ ಸಿನಿಮಾಗಳಲ್ಲಿ ಅವರು ಪೋಷಕ ಪಾತ್ರಗಳ ಮೂಲಕ ಮಿಂಚುತ್ತಿದ್ದಾರೆ. ಈ ನಡುವೆ ರಮ್ಯಾ ಕೃಷ್ಣ ಈ ಹಿಂದೆ ಮಾಡಿದ ಕಾಮೆಂಟ್‌ಗಳು ಈಗ ವೈರಲ್ ಆಗುತ್ತಿವೆ. ತಮಿಳು, ತೆಲುಗು, ಮಲಯಾಳಂ, ಕನ್ನಡ ಮತ್ತು ಹಿಂದಿ ಭಾಷೆಗಳಲ್ಲಿ ನಟಿಸಿರುವ ರಮ್ಯಾ ಕೃಷ್ಣ, ಕಮಲ್ ಹಾಸನ್ ಬಗ್ಗೆ ಮಾತನಾಡಿದ್ದ ಮಾತು ಎಲ್ಲರ ಗಮನ ಸೆಳೆದಿದೆ.

‘ಕಮಲ್ ಸರ್ ಜೊತೆ ನಟಿಸಲು ನನಗೆ ಭಯವಾಗಿತ್ತು. ಯಾವುದೇ ಕಲಾವಿದರಿಗೆ ಅವರೊಂದಿಗೆ ನೇರ ಸಂಭಾಷಣೆ ನಡೆಸಲು ಭಯವಾಗುತ್ತದೆ’ ಎಂದು ರಮ್ಯಾ ಕೃಷ್ಣ ಅವರು ಹೇಳಿದ್ದರು. ‘ಕಮಲ್ ಹಾಸನ್ ಅವರೇ ನನ್ನ ಗುರು. ನಾನು ಅವರನ್ನೇ ಹಿಂಬಾಲಿಸುತ್ತೇನೆ’ ಎಂದು ಕೂಡ ಕಮಲ್ ಹಾಸನ್ ಅವರು ಹೇಳಿದ್ದರು.

ಈ ಮೊದಲು ಕಮಲ್ ಹಾಸನ್ ಅವರಿಗೆ ಕೊವಿಡ್ ಆಗಿತ್ತು. ಆ ಸಂದರ್ಭದಲ್ಲಿ ರಮ್ಯಾ ಕೃಷ್ಣ ಅವರು ಬಿಗ್ ಬಾಸ್ ನಡೆಸಿಕೊಟ್ಟಿದ್ದರು. ಆಗ ಅವರು ಖಡಕ್ ಆಗಿ ಬಿಗ್ ಬಾಸ್ ನಡೆಸಿಕೊಟ್ಟು ಗಮನ ಸೆಳೆದಿದ್ದರು.

ಇದನ್ನೂ ಓದಿ: ರಮ್ಯಾ ಕೃಷ್ಣಗೆ ವಯಸ್ಸೇ ಆಗುತ್ತಿಲ್ಲವೇ? ಅಂದಹಾಗೆ ಈ ನಟಿಯ ವಯಸ್ಸೆಷ್ಟು?

ರಮ್ಯಾ ಕೃಷ್ಣ ಅವರು ಕನ್ನಡದಲ್ಲಿ ನಟಿಸಿದ ಮೊದಲ ಸಿನಿಮಾ 1988ರ ‘ಶಕ್ತಿ’. ಆ ಬಳಿಕ ಅವರು ‘ನೀಲಾಂಬರಿ’ ಚಿತ್ರದಲ್ಲಿ ನೀಲಾಂಬರಿ ಪಾತ್ರ ಮಾಡಿ ಗಮನ ಸೆಳೆದರು. 2016ರ ‘ಜಾಗ್ವಾರ್’ ಸಿನಿಮಾದಲ್ಲಿ ಅವರು ನಟಿಸಿದ್ದರು. ಪುನೀತ್ ನಟನೆಯ ‘ಅಂಜನಿ ಪುತ್ರ’ದಲ್ಲಿ ನಟಿಸಿದ್ದರು. ಇದಾದ ಬಳಿಕ ಅವರು ಕನ್ನಡಕ್ಕೆ ಬಂದಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ