AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಹೀರೋ ಜೊತೆ ನಟಿಸೋಕೆ ರಮ್ಯಾ ಕೃಷ್ಣಗೆ ಸಖತ್ ಭಯ

‘ಬಾಹುಬಲಿ’ ಚಿತ್ರದಲ್ಲಿ ರಾಜಮಾತೆ ಶಿವಗಾಮಿ ಪಾತ್ರದಲ್ಲಿ ಅದ್ಭುತವಾಗಿ ನಟಿಸಿದ್ದರು ರಮ್ಯಾ ಕೃಷ್ಣ. ಈ ಪಾತ್ರ ಸಖತ್ ಪವರ್​ಫುಲ್ ಆಗಿತ್ತು. ಈಗ ಸಿನಿಮಾಗಳಲ್ಲಿ ಅವರು ಪೋಷಕ ಪಾತ್ರಗಳ ಮೂಲಕ ಮಿಂಚುತ್ತಿದ್ದಾರೆ. ಈ ನಡುವೆ ರಮ್ಯಾ ಕೃಷ್ಣ ಈ ಹಿಂದೆ ಮಾಡಿದ ಕಾಮೆಂಟ್‌ಗಳು ಈಗ ವೈರಲ್ ಆಗುತ್ತಿವೆ.

ಈ ಹೀರೋ ಜೊತೆ ನಟಿಸೋಕೆ ರಮ್ಯಾ ಕೃಷ್ಣಗೆ ಸಖತ್ ಭಯ
ರಮ್ಯಾ ಕೃಷ್ಣ
 ಶ್ರೀಲಕ್ಷ್ಮೀ ಎಚ್
| Edited By: |

Updated on: Nov 30, 2024 | 7:39 AM

Share

ರಮ್ಯಾ ಕೃಷ್ಣ ಒಂದು ಕಾಲದಲ್ಲಿ ತಮ್ಮ ಸೌಂದರ್ಯ ಮತ್ತು ನಟನೆಯಿಂದ ಮೆಚ್ಚುಗೆ ಪಡೆದವರು. ಅವರು ಅನೇಕ ಸೂಪರ್ ಹಿಟ್ ಸಿನಿಮಾಗಳಲ್ಲಿ ನಟಿಸಿದ್ದಾರೆ. ರಮ್ಯಾ ಕೃಷ್ಣ ಅವರು ಕನ್ನಡದಲ್ಲೂ ನಟಿಸಿ ಭೇಷ್ ಎನಿಸಿಕೊಂಡಿದ್ದಾರೆ. ಇದರ ಜೊತೆಗೆ ತೆಲುಗು ಮತ್ತು ತಮಿಳು ಭಾಷೆಗಳಲ್ಲಿ ಸ್ಟಾರ್ ಆಗಿ ಮಿಂಚಿದ್ದಾರೆ. ಹಲವು ಸ್ಟಾರ್ ಹೀರೋಗಳ ಎದುರು ನಟಿಸಿರುವ ರಮ್ಯಾ ಕೃಷ್ಣ ಈಗಲೂ ಅಷ್ಟೇ ಸುಂದರವಾಗಿದ್ದಾರೆ. ಹಲವು ಸಿನಿಮಾಗಳಲ್ಲಿ ನಾಯಕಿಯಾಗಿ ನಟಿಸಿದ್ದ ರಮ್ಯಾ ಕೃಷ್ಣ ನೆಗೆಟಿವ್ ಪಾತ್ರಗಳಲ್ಲೂ ರಂಜಿಸಿದ್ದಾರೆ. ವಿಶೇಷವಾಗಿ ರಮ್ಯಾ ಕೃಷ್ಣ ಅವರು ಒಂದು ಅಪರೂಪದ ವಿಚಾರ ಹಂಚಿಕೊಂಡಿದ್ದಾರೆ. ಅವರಿಗೆ ಓರ್ವ ಹೀರೋ ಜೊತೆ ನಟಿಸಲು ಭಯವಾಗಿತ್ತಂತೆ.

‘ಬಾಹುಬಲಿ’ ಚಿತ್ರದಲ್ಲಿ ರಾಜಮಾತೆ ಶಿವಗಾಮಿ ಪಾತ್ರದಲ್ಲಿ ಅದ್ಭುತವಾಗಿ ನಟಿಸಿದ್ದರು ರಮ್ಯಾ ಕೃಷ್ಣ. ಈ ಪಾತ್ರ ಸಖತ್ ಪವರ್​ಫುಲ್ ಆಗಿತ್ತು. ಈಗ ಸಿನಿಮಾಗಳಲ್ಲಿ ಅವರು ಪೋಷಕ ಪಾತ್ರಗಳ ಮೂಲಕ ಮಿಂಚುತ್ತಿದ್ದಾರೆ. ಈ ನಡುವೆ ರಮ್ಯಾ ಕೃಷ್ಣ ಈ ಹಿಂದೆ ಮಾಡಿದ ಕಾಮೆಂಟ್‌ಗಳು ಈಗ ವೈರಲ್ ಆಗುತ್ತಿವೆ. ತಮಿಳು, ತೆಲುಗು, ಮಲಯಾಳಂ, ಕನ್ನಡ ಮತ್ತು ಹಿಂದಿ ಭಾಷೆಗಳಲ್ಲಿ ನಟಿಸಿರುವ ರಮ್ಯಾ ಕೃಷ್ಣ, ಕಮಲ್ ಹಾಸನ್ ಬಗ್ಗೆ ಮಾತನಾಡಿದ್ದ ಮಾತು ಎಲ್ಲರ ಗಮನ ಸೆಳೆದಿದೆ.

‘ಕಮಲ್ ಸರ್ ಜೊತೆ ನಟಿಸಲು ನನಗೆ ಭಯವಾಗಿತ್ತು. ಯಾವುದೇ ಕಲಾವಿದರಿಗೆ ಅವರೊಂದಿಗೆ ನೇರ ಸಂಭಾಷಣೆ ನಡೆಸಲು ಭಯವಾಗುತ್ತದೆ’ ಎಂದು ರಮ್ಯಾ ಕೃಷ್ಣ ಅವರು ಹೇಳಿದ್ದರು. ‘ಕಮಲ್ ಹಾಸನ್ ಅವರೇ ನನ್ನ ಗುರು. ನಾನು ಅವರನ್ನೇ ಹಿಂಬಾಲಿಸುತ್ತೇನೆ’ ಎಂದು ಕೂಡ ಕಮಲ್ ಹಾಸನ್ ಅವರು ಹೇಳಿದ್ದರು.

ಈ ಮೊದಲು ಕಮಲ್ ಹಾಸನ್ ಅವರಿಗೆ ಕೊವಿಡ್ ಆಗಿತ್ತು. ಆ ಸಂದರ್ಭದಲ್ಲಿ ರಮ್ಯಾ ಕೃಷ್ಣ ಅವರು ಬಿಗ್ ಬಾಸ್ ನಡೆಸಿಕೊಟ್ಟಿದ್ದರು. ಆಗ ಅವರು ಖಡಕ್ ಆಗಿ ಬಿಗ್ ಬಾಸ್ ನಡೆಸಿಕೊಟ್ಟು ಗಮನ ಸೆಳೆದಿದ್ದರು.

ಇದನ್ನೂ ಓದಿ: ರಮ್ಯಾ ಕೃಷ್ಣಗೆ ವಯಸ್ಸೇ ಆಗುತ್ತಿಲ್ಲವೇ? ಅಂದಹಾಗೆ ಈ ನಟಿಯ ವಯಸ್ಸೆಷ್ಟು?

ರಮ್ಯಾ ಕೃಷ್ಣ ಅವರು ಕನ್ನಡದಲ್ಲಿ ನಟಿಸಿದ ಮೊದಲ ಸಿನಿಮಾ 1988ರ ‘ಶಕ್ತಿ’. ಆ ಬಳಿಕ ಅವರು ‘ನೀಲಾಂಬರಿ’ ಚಿತ್ರದಲ್ಲಿ ನೀಲಾಂಬರಿ ಪಾತ್ರ ಮಾಡಿ ಗಮನ ಸೆಳೆದರು. 2016ರ ‘ಜಾಗ್ವಾರ್’ ಸಿನಿಮಾದಲ್ಲಿ ಅವರು ನಟಿಸಿದ್ದರು. ಪುನೀತ್ ನಟನೆಯ ‘ಅಂಜನಿ ಪುತ್ರ’ದಲ್ಲಿ ನಟಿಸಿದ್ದರು. ಇದಾದ ಬಳಿಕ ಅವರು ಕನ್ನಡಕ್ಕೆ ಬಂದಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್​​ಗೆ ಶಾಕ್​​ ಕೊಟ್ಟ ಲೋಕಾಯುಕ್ತ
ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್​​ಗೆ ಶಾಕ್​​ ಕೊಟ್ಟ ಲೋಕಾಯುಕ್ತ
RCB ಅಭಿಮಾನಿಗಳಿಗೆ ಸರ್ಕಾರದಿಂದ ಇಂದೇ ಸಿಗುತ್ತಾ ಸಿಹಿ ಸುದ್ದಿ?
RCB ಅಭಿಮಾನಿಗಳಿಗೆ ಸರ್ಕಾರದಿಂದ ಇಂದೇ ಸಿಗುತ್ತಾ ಸಿಹಿ ಸುದ್ದಿ?
ರಸ್ತೆ ಮಧ್ಯೆ ಕೆಟ್ಟು ನಿಂತ ಕೆಎಸ್‌ಆರ್‌ಟಿಸಿ ಬಸ್
ರಸ್ತೆ ಮಧ್ಯೆ ಕೆಟ್ಟು ನಿಂತ ಕೆಎಸ್‌ಆರ್‌ಟಿಸಿ ಬಸ್