AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಹೀರೋ ಜೊತೆ ನಟಿಸೋಕೆ ರಮ್ಯಾ ಕೃಷ್ಣಗೆ ಸಖತ್ ಭಯ

‘ಬಾಹುಬಲಿ’ ಚಿತ್ರದಲ್ಲಿ ರಾಜಮಾತೆ ಶಿವಗಾಮಿ ಪಾತ್ರದಲ್ಲಿ ಅದ್ಭುತವಾಗಿ ನಟಿಸಿದ್ದರು ರಮ್ಯಾ ಕೃಷ್ಣ. ಈ ಪಾತ್ರ ಸಖತ್ ಪವರ್​ಫುಲ್ ಆಗಿತ್ತು. ಈಗ ಸಿನಿಮಾಗಳಲ್ಲಿ ಅವರು ಪೋಷಕ ಪಾತ್ರಗಳ ಮೂಲಕ ಮಿಂಚುತ್ತಿದ್ದಾರೆ. ಈ ನಡುವೆ ರಮ್ಯಾ ಕೃಷ್ಣ ಈ ಹಿಂದೆ ಮಾಡಿದ ಕಾಮೆಂಟ್‌ಗಳು ಈಗ ವೈರಲ್ ಆಗುತ್ತಿವೆ.

ಈ ಹೀರೋ ಜೊತೆ ನಟಿಸೋಕೆ ರಮ್ಯಾ ಕೃಷ್ಣಗೆ ಸಖತ್ ಭಯ
ರಮ್ಯಾ ಕೃಷ್ಣ
 ಶ್ರೀಲಕ್ಷ್ಮೀ ಎಚ್
| Edited By: |

Updated on: Nov 30, 2024 | 7:39 AM

Share

ರಮ್ಯಾ ಕೃಷ್ಣ ಒಂದು ಕಾಲದಲ್ಲಿ ತಮ್ಮ ಸೌಂದರ್ಯ ಮತ್ತು ನಟನೆಯಿಂದ ಮೆಚ್ಚುಗೆ ಪಡೆದವರು. ಅವರು ಅನೇಕ ಸೂಪರ್ ಹಿಟ್ ಸಿನಿಮಾಗಳಲ್ಲಿ ನಟಿಸಿದ್ದಾರೆ. ರಮ್ಯಾ ಕೃಷ್ಣ ಅವರು ಕನ್ನಡದಲ್ಲೂ ನಟಿಸಿ ಭೇಷ್ ಎನಿಸಿಕೊಂಡಿದ್ದಾರೆ. ಇದರ ಜೊತೆಗೆ ತೆಲುಗು ಮತ್ತು ತಮಿಳು ಭಾಷೆಗಳಲ್ಲಿ ಸ್ಟಾರ್ ಆಗಿ ಮಿಂಚಿದ್ದಾರೆ. ಹಲವು ಸ್ಟಾರ್ ಹೀರೋಗಳ ಎದುರು ನಟಿಸಿರುವ ರಮ್ಯಾ ಕೃಷ್ಣ ಈಗಲೂ ಅಷ್ಟೇ ಸುಂದರವಾಗಿದ್ದಾರೆ. ಹಲವು ಸಿನಿಮಾಗಳಲ್ಲಿ ನಾಯಕಿಯಾಗಿ ನಟಿಸಿದ್ದ ರಮ್ಯಾ ಕೃಷ್ಣ ನೆಗೆಟಿವ್ ಪಾತ್ರಗಳಲ್ಲೂ ರಂಜಿಸಿದ್ದಾರೆ. ವಿಶೇಷವಾಗಿ ರಮ್ಯಾ ಕೃಷ್ಣ ಅವರು ಒಂದು ಅಪರೂಪದ ವಿಚಾರ ಹಂಚಿಕೊಂಡಿದ್ದಾರೆ. ಅವರಿಗೆ ಓರ್ವ ಹೀರೋ ಜೊತೆ ನಟಿಸಲು ಭಯವಾಗಿತ್ತಂತೆ.

‘ಬಾಹುಬಲಿ’ ಚಿತ್ರದಲ್ಲಿ ರಾಜಮಾತೆ ಶಿವಗಾಮಿ ಪಾತ್ರದಲ್ಲಿ ಅದ್ಭುತವಾಗಿ ನಟಿಸಿದ್ದರು ರಮ್ಯಾ ಕೃಷ್ಣ. ಈ ಪಾತ್ರ ಸಖತ್ ಪವರ್​ಫುಲ್ ಆಗಿತ್ತು. ಈಗ ಸಿನಿಮಾಗಳಲ್ಲಿ ಅವರು ಪೋಷಕ ಪಾತ್ರಗಳ ಮೂಲಕ ಮಿಂಚುತ್ತಿದ್ದಾರೆ. ಈ ನಡುವೆ ರಮ್ಯಾ ಕೃಷ್ಣ ಈ ಹಿಂದೆ ಮಾಡಿದ ಕಾಮೆಂಟ್‌ಗಳು ಈಗ ವೈರಲ್ ಆಗುತ್ತಿವೆ. ತಮಿಳು, ತೆಲುಗು, ಮಲಯಾಳಂ, ಕನ್ನಡ ಮತ್ತು ಹಿಂದಿ ಭಾಷೆಗಳಲ್ಲಿ ನಟಿಸಿರುವ ರಮ್ಯಾ ಕೃಷ್ಣ, ಕಮಲ್ ಹಾಸನ್ ಬಗ್ಗೆ ಮಾತನಾಡಿದ್ದ ಮಾತು ಎಲ್ಲರ ಗಮನ ಸೆಳೆದಿದೆ.

‘ಕಮಲ್ ಸರ್ ಜೊತೆ ನಟಿಸಲು ನನಗೆ ಭಯವಾಗಿತ್ತು. ಯಾವುದೇ ಕಲಾವಿದರಿಗೆ ಅವರೊಂದಿಗೆ ನೇರ ಸಂಭಾಷಣೆ ನಡೆಸಲು ಭಯವಾಗುತ್ತದೆ’ ಎಂದು ರಮ್ಯಾ ಕೃಷ್ಣ ಅವರು ಹೇಳಿದ್ದರು. ‘ಕಮಲ್ ಹಾಸನ್ ಅವರೇ ನನ್ನ ಗುರು. ನಾನು ಅವರನ್ನೇ ಹಿಂಬಾಲಿಸುತ್ತೇನೆ’ ಎಂದು ಕೂಡ ಕಮಲ್ ಹಾಸನ್ ಅವರು ಹೇಳಿದ್ದರು.

ಈ ಮೊದಲು ಕಮಲ್ ಹಾಸನ್ ಅವರಿಗೆ ಕೊವಿಡ್ ಆಗಿತ್ತು. ಆ ಸಂದರ್ಭದಲ್ಲಿ ರಮ್ಯಾ ಕೃಷ್ಣ ಅವರು ಬಿಗ್ ಬಾಸ್ ನಡೆಸಿಕೊಟ್ಟಿದ್ದರು. ಆಗ ಅವರು ಖಡಕ್ ಆಗಿ ಬಿಗ್ ಬಾಸ್ ನಡೆಸಿಕೊಟ್ಟು ಗಮನ ಸೆಳೆದಿದ್ದರು.

ಇದನ್ನೂ ಓದಿ: ರಮ್ಯಾ ಕೃಷ್ಣಗೆ ವಯಸ್ಸೇ ಆಗುತ್ತಿಲ್ಲವೇ? ಅಂದಹಾಗೆ ಈ ನಟಿಯ ವಯಸ್ಸೆಷ್ಟು?

ರಮ್ಯಾ ಕೃಷ್ಣ ಅವರು ಕನ್ನಡದಲ್ಲಿ ನಟಿಸಿದ ಮೊದಲ ಸಿನಿಮಾ 1988ರ ‘ಶಕ್ತಿ’. ಆ ಬಳಿಕ ಅವರು ‘ನೀಲಾಂಬರಿ’ ಚಿತ್ರದಲ್ಲಿ ನೀಲಾಂಬರಿ ಪಾತ್ರ ಮಾಡಿ ಗಮನ ಸೆಳೆದರು. 2016ರ ‘ಜಾಗ್ವಾರ್’ ಸಿನಿಮಾದಲ್ಲಿ ಅವರು ನಟಿಸಿದ್ದರು. ಪುನೀತ್ ನಟನೆಯ ‘ಅಂಜನಿ ಪುತ್ರ’ದಲ್ಲಿ ನಟಿಸಿದ್ದರು. ಇದಾದ ಬಳಿಕ ಅವರು ಕನ್ನಡಕ್ಕೆ ಬಂದಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Shreelaxmi H
Shreelaxmi H

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ