Mahesh Babu: ‘ಗುಂಟೂರು ಖಾರಂ’ ಚಿತ್ರದಲ್ಲಿ ಮಹೇಶ್​ ಬಾಬು ಜೊತೆ ನಟಿಸ್ತಾರಾ ಶಿವಗಾಮಿ ಅಲಿಯಾಸ್ ರಮ್ಯಾ ಕೃಷ್ಣನ್​?

Guntur Kaaram Movie: ನಿರ್ದೇಶಕ ತ್ರಿವಿಕ್ರಮ್​ ಶ್ರೀನಿವಾಸ್​ ಅವರು ‘ಗುಂಟೂರು ಖಾರಂ’ ಸಿನಿಮಾದ ಸ್ಕ್ರಿಪ್ಟ್​ನಲ್ಲಿ ಒಂದಷ್ಟು ಬದಲಾವಣೆಗಳನ್ನು ಮಾಡಿದ್ದಾರೆ. ಅದರಿಂದಾಗಿ ಶೂಟಿಂಗ್​ ದಿನಾಂಕ ಬದಲಾಗಿದೆ.

Mahesh Babu: ‘ಗುಂಟೂರು ಖಾರಂ’ ಚಿತ್ರದಲ್ಲಿ ಮಹೇಶ್​ ಬಾಬು ಜೊತೆ ನಟಿಸ್ತಾರಾ ಶಿವಗಾಮಿ ಅಲಿಯಾಸ್ ರಮ್ಯಾ ಕೃಷ್ಣನ್​?
ಮಹೇಶ್​ ಬಾಬು, ರಮ್ಯಾ ಕೃಷ್ಣನ್​
Follow us
|

Updated on: Jun 22, 2023 | 7:00 AM

ಟಾಲಿವುಡ್​ ನಟ ಮಹೇಶ್​ ಬಾಬು (Mahesh Babu) ಅವರು ಈಗ ‘ಗುಂಟೂರು ಖಾರಂ’ ಸಿನಿಮಾದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಕೆಲವೇ ದಿನಗಳ ಹಿಂದೆ ಈ ಸಿನಿಮಾದ ಟೈಟಲ್​ ಅನೌನ್ಸ್​ ಆಯಿತು. ಫಸ್ಟ್​ ಲುಕ್​ ಕೂಡ ಅನಾವರಣವಾಗಿ ಗಮನ ಸೆಳೆಯಿತು. ಈ ಚಿತ್ರದ ಶೀರ್ಷಿಕೆ ಖಡಕ್​ ಆಗಿದೆ. ಎಲ್ಲವೂ ಚೆನ್ನಾಗಿಯೇ ನಡೆಯುತ್ತಿದೆ ಎನ್ನುವಾಗ ಚಿತ್ರದ ನಾಯಕಿ ಪೂಜಾ ಹೆಗ್ಡೆ (Pooja Hegde) ಅವರು ಚಿತ್ರತಂಡದಿಂದ ಹೊರನಡೆದಿದ್ದಾರೆ ಎಂಬ ಸುದ್ದಿ ಕೇಳಿಬಂತು. ಅಷ್ಟೇ ಅಲ್ಲದೇ ಪಾತ್ರವರ್ಗದಲ್ಲಿ ಇನ್ನೂ ಕೆಲವು ಬದಲಾವಣೆಗಳು ಆಗುತ್ತಿವೆ. ‘ಗುಂಟೂರು ಖಾರಂ’ ಸಿನಿಮಾದಲ್ಲಿ ಮಹೇಶ್​ ಬಾಬು ಅವರ ಜೊತೆ ರಮ್ಯಾ ಕೃಷ್ಣನ್​ (Ramya Krishnan) ಅವರು ನಟಿಸಲಿದ್ದಾರೆ ಎಂದು ಹೇಳಲಾಗುತ್ತಿದೆ. ಈ ವಿಚಾರದ ಬಗ್ಗೆ ಟಾಲಿವುಡ್​ ಅಂಗಳದಲ್ಲಿ ಗುಸುಗುಸು ಕೇಳಿಬರುತ್ತಿದೆ. ‘ಗುಂಟೂರು ಖಾರಂ’ ಚಿತ್ರದ ಮೇಲೆ ಮಹೇಶ್​ ಬಾಬು ಫ್ಯಾನ್ಸ್​ ಭಾರಿ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಈ ಚಿತ್ರಕ್ಕೆ ತ್ರಿವಿಕ್ರಮ್​ ಶ್ರೀನಿವಾಸ್​ ಅವರು ನಿರ್ದೇಶನ ಮಾಡುತ್ತಿದ್ದಾರೆ.

ದಕ್ಷಿಣ ಭಾರತದಲ್ಲಿ ರಮ್ಯಾ ಕೃಷ್ಣನ್​ ಅವರಿಗೆ ತುಂಬ ಬೇಡಿಕೆ ಇದೆ. ಪೋಷಕ ಪಾತ್ರಗಳ ಮೂಲಕ ಅವರು ತಮ್ಮ ಛಾಪು ಮೂಡಿಸಿದ್ದಾರೆ. ‘ಬಾಹುಬಲಿ’ ಸಿನಿಮಾದಲ್ಲಿ ಅವರು ಪ್ರಭಾಸ್​ಗೆ ತಾಯಿಯಾಗಿ ನಟಿಸಿದ್ದರು. ಅವರು ಮಾಡಿದ್ದ ರಾಜಮಾತಾ ಶಿವಗಾಮಿ ಪಾತ್ರವನ್ನು ಅಭಿಮಾನಿಗಳು ತುಂಬ ಮೆಚ್ಚಿಕೊಂಡಿದ್ದರು. ಈಗ ‘ಗುಂಟೂರು ಖಾರಂ’ ಸಿನಿಮಾದಲ್ಲಿ ಮಹೇಶ್​ ಬಾಬುಗೆ ತಾಯಿಯಾಗಿ ರಮ್ಯಾ ಕೃಷ್ಣನ್​ ಅವರು ನಟಿಸಲಿದ್ದಾರೆ ಎಂಬ ಮಾತು ಕೇಳಿಬರುತ್ತಿದೆ. ಆದರೆ ಈ ವಿಚಾರದ ಬಗ್ಗೆ ಚಿತ್ರತಂಡದಿಂದ ಅಧಿಕೃತವಾಗಿ ಯಾವುದೇ ಮಾಹಿತಿ ಹೊರಬಿದ್ದಿಲ್ಲ.

ಇದನ್ನೂ ಓದಿ: ‘ಗುಂಟೂರು ಖಾರಂ’ ಬಳಿಕ ಮೂರು ವರ್ಷ ಮಹೇಶ್ ಬಾಬು ಹೊಸ ಸಿನಿಮಾ ಒಪ್ಪಿಕೊಳ್ಳಲ್ಲ

ನಟಿ ಪೂಜಾ ಹೆಗ್ಡೆ ಅವರಿಗೆ ಸಖತ್​ ಡಿಮ್ಯಾಂಡ್​ ಇದೆ. ಡೇಟ್ಸ್​ ಹೊಂದಾಣಿಕೆಯ ಸಮಸ್ಯೆಯಿಂದಾಗಿ ಅವರು ‘ಗುಂಟೂರು ಖಾರಂ’ ಸಿನಿಮಾದಿಂದ ಹೊರನಡೆದಿದ್ದಾರೆ ಎಂಬ ಸುದ್ದಿ ಹರಡಿದೆ. ತ್ರಿವಿಕ್ರಮ್​ ಶ್ರೀನಿವಾಸ್​ ಅವರು ಈ ಸಿನಿಮಾದ ಸ್ಕ್ರಿಪ್ಟ್​ನಲ್ಲಿ ಒಂದಷ್ಟು ಬದಲಾವಣೆಗಳನ್ನು ಮಾಡಿದ್ದಾರೆ. ಅದರಿಂದಾಗಿ ಶೂಟಿಂಗ್​ ದಿನಾಂಕ ಬದಲಾಗಿದೆ. ಅದಕ್ಕೆ ಅನುಗುಣವಾಗಿ ಕಲಾವಿದರು ಕೂಡ ಬದಲಾಗುತ್ತಿದ್ದಾರೆ ಎಂದು ಹೇಳಲಾಗಿದೆ. ಈ ಬಗ್ಗೆ ನಿರ್ದೇಶಕರೇ ಹೇಳಿಕೆ ನೀಡಬೇಕಿದೆ.

ಇದನ್ನೂ ಓದಿ: ಮಹೇಶ್ ಬಾಬು ಸಿನಿಮಾದಿಂದ ಪೂಜಾ ಹೆಗ್ಡೆ ಹೊರಕ್ಕೆ: ಶ್ರೀಲೀಲಾ ಕಾರಣವೇ?

ಪೂಜಾ ಹೆಗ್ಡೆ ಅವರು ‘ಗುಂಟೂರು ಖಾರಂ’ ಚಿತ್ರತಂಡದಿಂದ ಹೊರನಡೆದಿರುವುದರಿಂದ ಅವರ ಜಾಗಕ್ಕೆ ಬೇರೆ ಯಾವ ನಟಿ ಬರುತ್ತಾರೆ ಎಂಬ ಪ್ರಶ್ನೆ ಮೂಡಿದೆ. ಈ ಸಿನಿಮಾದಲ್ಲಿನ ಮತ್ತೋರ್ವ ನಾಯಕಿ ಪಾತ್ರದಲ್ಲಿ ಕನ್ನಡದ ಹುಡುಗಿ ಶ್ರೀಲೀಲಾ ನಟಿಸುತ್ತಿದ್ದಾರೆ. ಖ್ಯಾತ ನಟ ಜಗಪತಿ ಬಾಬು ಕೂಡ ಒಂದು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಮಹೇಶ್​ ಬಾಬು ಅವರಿಗೆ ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಅಭಿಮಾನಿಗಳು ಇದ್ದಾರೆ. ಎಲ್ಲರೂ ಈ ಸಿನಿಮಾಗಾಗಿ ಕಾಯುತ್ತಿದ್ದಾರೆ. ಸ್ಕ್ರಿಪ್ಟ್​ ಮತ್ತು ಚಿತ್ರೀಕರಣದ ಪ್ಲಾನಿಂಗ್​ನಲ್ಲಿ ಬದಲಾವಣೆ ಆಗಿರುವುದರಿಂದ ರಿಲೀಸ್​ ದಿನಾಂಕ ಮುಂದಕ್ಕೆ ಹೋಗಬಹುದು ಎಂದು ಅಂದಾಜಿಸಲಾಗಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ