AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನ್ಯಾಯಾಲಯದಲ್ಲಿ ನರೇಶ್-ಪವಿತ್ರಾಗೆ ಗೆಲುವು, ರಮ್ಯಾ ರಘುಪತಿ ಅರ್ಜಿ ವಜಾ

Naresh-Pavithra Lokesh: ನಟ ನರೇಶ್ ಹಾಗೂ ಪವಿತ್ರಾ ಲೋಕೇಶ್​ರ ಸಿನಿಮಾ ವಿರುದ್ಧ ರಮ್ಯಾ ರಘುಪತಿ ಸಲ್ಲಿಸಿದ್ದ ಅರ್ಜಿ ವಜಾಗೊಂಡಿದೆ.

ನ್ಯಾಯಾಲಯದಲ್ಲಿ ನರೇಶ್-ಪವಿತ್ರಾಗೆ ಗೆಲುವು, ರಮ್ಯಾ ರಘುಪತಿ ಅರ್ಜಿ ವಜಾ
ನರೇಶ್-ಪವಿತ್ರಾ-ರಮ್ಯಾ ರಘುಪತಿ
Follow us
ಮಂಜುನಾಥ ಸಿ.
|

Updated on: Aug 02, 2023 | 3:52 PM

ತೆಲುಗು ನಟ ನರೇಶ್ (Naresh) ಹಾಗೂ ನಟಿ ಪವಿತ್ರಾ ಲೋಕೇಶ್ (Pavitra Lokesh) ಸಂಬಂಧದ ಕುರಿತು ಕಳೆದ ವರ್ಷ ಹಲವು ರೀತಿಯ ಸುದ್ದಿಗಳು ಹರಿದಾಡಿದ್ದವು. ನರೇಶ್ ತಮ್ಮ ಮೂರನೇ ಪತ್ನಿ ರಮ್ಯಾ ರಘುಪತಿಗೆ (Ramya Raghupathi) ವಿಚ್ಛೇದನ ನೀಡದೆ ಪವಿತ್ರಾ ಲೋಕೇಶ್ ಅವರನ್ನು ಕಾನೂನು ಬಾಹಿರವಾಗಿ ವಿವಾಹವಾಗಿದ್ದಾರೆಂದು, ತಮಗೆ ಅನ್ಯಾಯ ಮಾಡಿದ್ದಾರೆಂದು ರಮ್ಯಾ ರಘುಪತಿ ಸುದ್ದಿಗೋಷ್ಠಿ ನಡೆಸಿ ಅಳಲು ತೋಡಿಕೊಂಡಿದ್ದರು. ಅದಕ್ಕೆ ಪ್ರತಿಯಾಗಿ ನಟ ನರೇಶ್ ಸಹ ಸುದ್ದಿಗೋಷ್ಠಿ ನಡೆಸಿ ರಮ್ಯಾ ವಿರುದ್ಧ ಆರೋಪಗಳ ಸುರಿಮಳೆ ಮಾಡಿದ್ದರು. ಬಳಿಕ ನರೇಶ್ ಹಾಗೂ ಪವಿತ್ರಾ ಒಟ್ಟಿಗಿದ್ದ ಹೋಟೆಲ್​ ಬಳಿ ಹೋಗಿ ರಮ್ಯಾ ಜಗಳ ಮಾಡಿದ್ದರು.

ಅದಾದ ಬಳಿಕ ನರೇಶ್ ಹಾಗೂ ಪವಿತ್ರಾ ತಮ್ಮದೇ ಬದುಕಿನಲ್ಲಿ ನಡೆದಿರುವ ಘಟನೆಗಳನ್ನೇ ಆಧರಿಸಿ ‘ಮಳ್ಳಿ ಪೆಳ್ಳಿ’ ಸಿನಿಮಾ ಮಾಡಿದರು. ಈ ಸಿನಿಮಾದಲ್ಲಿ ರಮ್ಯಾ ರಘುಪತಿ ಪಾತ್ರವನ್ನು ಪರಮ ಸ್ಯಾಡಿಸ್ಟ್ ರೀತಿಯಲ್ಲಿಯೂ, ಮಹಾನ್ ಜಗಳಗಂಟಿ ರೀತಿಯಲ್ಲಿಯೂ ಚಿತ್ರಿಸಲಾಗಿತ್ತು. ಸಿನಿಮಾ ಬಿಡುಗಡೆ ಆದ ಬಳಿಕ ಸಿನಿಮಾದ ವಿರುದ್ಧ ರಮ್ಯಾ ನ್ಯಾಯಾಲಯದ ಮೆಟ್ಟಿಲೇರಿದ್ದರು. ಸಿನಿಮಾದ ಒಟಿಟಿ ಬಿಡುಗಡೆಗೆ ತಡೆ ನೀಡಬೇಕೆಂದು ರಮ್ಯಾ ಕೋರಿದ್ದರು. ಆದರೆ ಆ ಅರ್ಜಿಯನ್ನು ನ್ಯಾಯಾಲಯ ತಳ್ಳಿ ಹಾಕಿದೆ. ಅಸಲಿಗೆ ಸಿನಿಮಾ ಒಟಿಟಿಗೆ ಬಂದು ಬಹಳ ದಿನಗಳೇ ಕಳೆದುಬಿಟ್ಟಿದೆ. ಸಿನಿಮಾದ ಬಿಡುಗಡೆ ತಡೆಯಾಜ್ಞೆ ನೀಡಲು ನ್ಯಾಯಾಲಯ ಒಪ್ಪಿರಲಿಲ್ಲವಾದರೂ ಅರ್ಜಿಯ ವಿಚಾರಣೆ ಜಾರಿಯಲ್ಲಿಟ್ಟಿತ್ತು, ಇದೀಗ ಅರ್ಜಿಯನ್ನು ವಜಾಗೊಳಿಸಿದೆ.

ಇದನ್ನೂ ಓದಿ:‘ನನ್ನ ಖುಷಿಯಿಂದ ನೋಡಿಕೊಂಡ್ರೆ ಸಾಕು ಎಂದಿದ್ದೆ’; ನರೇಶ್ ಕೇಳಿದ್ದ ಮೊದಲ ಪ್ರಶ್ನೆಗೆ ಪವಿತ್ರಾ ಲೋಕೇಶ್ ಉತ್ತರ

ಇದರ ಹೊರತಾಗಿ ನರೇಶ್ ಹಾಗೂ ಕುಟುಂಬದವರು ತಮ್ಮ ನಿವಾಸಕ್ಕೆ ರಮ್ಯಾರ ಅಕ್ರಮ ಪ್ರವೇಶವನ್ನು ನಿಷೇಧಿಸುವಂತೆ ಕೋರಿ ನ್ಯಾಯಾಲಯದ ಮೆಟ್ಟಿಲೇರಿದ್ದರು, ಈ ಪ್ರಕರಣದಲ್ಲಿ ನರೇಶ್ ಪರ ಆದೇಶ ಬಂದಿದೆ. ಅಕ್ರಮವಾಗಿ ರಮ್ಯಾ, ನರೇಶ್​ರ ನಿವಾಸ ಪ್ರವೇಶಕ್ಕೆ ನಿರ್ಬಂಧ ಹೇರಿದೆ. ಅಲ್ಲದೆ, ಕಳೆದ ಆರು ವರ್ಷಗಳಿಂದಲೂ ರಮ್ಯಾ ಹಾಗೂ ನರೇಶ್ ಪರಸ್ಪರ ಪ್ರತ್ಯೇಕವಾಗಿಯೇ ವಾಸಿಸುತ್ತಿರುವ ಕಾರಣ ಇಬ್ಬರ ಮದುವೆ ಅನೂರ್ಜಿತಗೊಳಿಸಬಹುದಾಗಿದೆ ಎಂದು ನ್ಯಾಯಾಲಯ ಅಭಿಪ್ರಾಯ ಪಟ್ಟಿದೆ.

ತೆಲುಗು ನಟ ನರೇಶ್ ಕರ್ನಾಟಕ ಮೂಲದ ರಮ್ಯಾ ರಘುಪತಿ ಸೇರಿದಂತೆ ಮೂವರನ್ನು ಮದುವೆಯಾಗಿದ್ದರು. ಮೂರನೇ ಪತ್ನಿ ರಮ್ಯಾ ರಘುಪತಿಗೆ ವಿಚ್ಛೇದನ ನೀಡಿರಲಿಲ್ಲವಾದರೂ ಈ ಇಬ್ಬರೂ ಕೆಲವಾರು ವರ್ಷಗಳಿಂದಲೂ ಒಟ್ಟಿಗಿರಲಿಲ್ಲ. ಆದರೆ 2022ರ ಜೂನ್ ತಿಂಗಳಲ್ಲಿ ಹಠಾತ್ತನೆ ಕರ್ನಾಟಕದ ಮಾಧ್ಯಮಗಳ ಮುಂದೆ ಬಂದಿದ್ದ ರಮ್ಯಾ ರಘುಪತಿ, ನಟ ನರೇಶ್ ತನಗೆ ಮೋಸ ಮಾಡಿದ್ದಾನೆಂದು, ವಿಚ್ಛೇದನ ನೀಡದೆ ಪವಿತ್ರಾ ಲೋಕೇಶ್ ಅನ್ನು ವರಿಸಿದ್ದಾನೆಂದು ಅಥವಾ ಅವರೊಟ್ಟಿಗೆ ಕಾನೂನು ಬಾಹಿರ ಸಂಬಂಧ ಇರಿಸಿಕೊಂಡಿದ್ದಾನೆಂದು ಆರೋಪಿಸಿದ್ದರು.

ನಟಿ ಪವಿತ್ರಾ ಲೋಕೇಶ್​ ಸಹ ಈ ಮೊದಲು ಎರಡು ಮದುವೆಯಾಗಿದ್ದರು. ಅವರೂ ಸಹ ಎರಡನೇ ಪತಿ ನಟ ಸುಚಿತೇಂದ್ರ ಪ್ರಸಾದ್​ಗೆ ವಿಚ್ಛೇದನ ನೀಡದೆ ನರೇಶ್ ಜೊತೆ ಲಿವಿನ್ ರಿಲೇಶನ್​ಷಿಪ್​ನಲ್ಲಿದ್ದರು. ಈಗಲೂ ನರೇಶ್ ಹಾಗೂ ಪವಿತ್ರಾ ಲಿವಿನ್ ರಿಲೇಷನ್​ನಲ್ಲಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಹೊತ್ತಿ ಉರಿದ ಗೋದಾಮು, 60ಕ್ಕೂ ಹೆಚ್ಚು ಗಾಡಿ ನೀರು ಹಾಕಿದ್ರೂ ಆರದ ಬೆಂಕಿ
ಹೊತ್ತಿ ಉರಿದ ಗೋದಾಮು, 60ಕ್ಕೂ ಹೆಚ್ಚು ಗಾಡಿ ನೀರು ಹಾಕಿದ್ರೂ ಆರದ ಬೆಂಕಿ
ಸಾಮಾನ್ಯ ಸಂಗತಿಯೆಂಬಂತೆ ಘಟನೆ ವಿವರಿಸಿದ ಮೃತ ಬಾಲಕನ ತಂದೆ
ಸಾಮಾನ್ಯ ಸಂಗತಿಯೆಂಬಂತೆ ಘಟನೆ ವಿವರಿಸಿದ ಮೃತ ಬಾಲಕನ ತಂದೆ
ಮದುವೆಗೆಂದು ಮಂಗಳೂರಿಗೆ ಹೊರಟ್ಟಿದ್ದ ಬಸ್ ಶಿರಾಡಿ ಘಾಟಿನಲ್ಲಿ ಪಲ್ಟಿ
ಮದುವೆಗೆಂದು ಮಂಗಳೂರಿಗೆ ಹೊರಟ್ಟಿದ್ದ ಬಸ್ ಶಿರಾಡಿ ಘಾಟಿನಲ್ಲಿ ಪಲ್ಟಿ
ಆದಂಪುರ ಏರ್​ಬೇಸ್​​ ಭೇಟಿ ಬಳಿಕ ಮೋದಿ ಮಾತು: ಇಲ್ಲಿದೆ ನೇರಪ್ರಸಾರ
ಆದಂಪುರ ಏರ್​ಬೇಸ್​​ ಭೇಟಿ ಬಳಿಕ ಮೋದಿ ಮಾತು: ಇಲ್ಲಿದೆ ನೇರಪ್ರಸಾರ
ಇಡೀ ವಿಶ್ವವೇ ಭಾರತೀಯ ಸೈನಿಕರ ಕಾರ್ಯವನ್ನು ಕೊಂಡಾಡುತ್ತಿದೆ: ಶಾಸಕ
ಇಡೀ ವಿಶ್ವವೇ ಭಾರತೀಯ ಸೈನಿಕರ ಕಾರ್ಯವನ್ನು ಕೊಂಡಾಡುತ್ತಿದೆ: ಶಾಸಕ
ನಾಗರಿಕರ ಹೆಸರಿನಲ್ಲಿ ರಾಜ್ಯಾದ್ಯಂತ ತಿರಂಗಾ ಯಾತ್ರೆ: ಆರ್ ಅಶೋಕ್
ನಾಗರಿಕರ ಹೆಸರಿನಲ್ಲಿ ರಾಜ್ಯಾದ್ಯಂತ ತಿರಂಗಾ ಯಾತ್ರೆ: ಆರ್ ಅಶೋಕ್
ನಮ್ಮ ಸರ್ಕಾರದ ಸಾಧನೆಗಳ ಬಗ್ಗೆ ಬಿಜೆಪಿ ಮಾತಾಡಲ್ಲ: ಶಿವಲಿಂಗೇಗೌಡ
ನಮ್ಮ ಸರ್ಕಾರದ ಸಾಧನೆಗಳ ಬಗ್ಗೆ ಬಿಜೆಪಿ ಮಾತಾಡಲ್ಲ: ಶಿವಲಿಂಗೇಗೌಡ
ಶೋಪಿಯಾನ್​ನಲ್ಲಿ ಲಷ್ಕರ್​​ನ ಮೋಸ್ಟ್ ವಾಂಟೆಡ್ ಉಗ್ರ ಸೇರಿ ಮೂವರ ಎನ್​ಕೌಂಟರ್
ಶೋಪಿಯಾನ್​ನಲ್ಲಿ ಲಷ್ಕರ್​​ನ ಮೋಸ್ಟ್ ವಾಂಟೆಡ್ ಉಗ್ರ ಸೇರಿ ಮೂವರ ಎನ್​ಕೌಂಟರ್
ಎಲ್ಲ ಸಂದೇಹಗಳನ್ನು ಪ್ರಧಾನಿ ಮೋದಿ ದೂರ ಮಾಡಿದ್ದಾರೆ: ವಿಜಯೇಂದ್ರ
ಎಲ್ಲ ಸಂದೇಹಗಳನ್ನು ಪ್ರಧಾನಿ ಮೋದಿ ದೂರ ಮಾಡಿದ್ದಾರೆ: ವಿಜಯೇಂದ್ರ
ನಿಮಗೆ ಇಂಗ್ಲಿಷ್ ಬರದಿದ್ದರೆ ಸುಮ್ಮನಿರಿ, ಪಾಕ್​ ರಕ್ಷಣಾ ಸಚಿವಗೆ ತರಾಟೆ
ನಿಮಗೆ ಇಂಗ್ಲಿಷ್ ಬರದಿದ್ದರೆ ಸುಮ್ಮನಿರಿ, ಪಾಕ್​ ರಕ್ಷಣಾ ಸಚಿವಗೆ ತರಾಟೆ