AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದರ್ಶನ್​ಗೆ ಜೀವಾವಧಿ ಶಿಕ್ಷೆ ಅಥವಾ ಮರಣದಂಡನೆ, ರೀಟ್ವೀಟ್ ಮಾಡಿದ ನಟಿ ರಮ್ಯಾ

ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಬಂಧನವಾಗಿದೆ. ದರ್ಶನ್​ಗೆ ಈ ಪ್ರಕರಣದಲ್ಲಿ ಕಾನೂನು ರೀತ್ಯ ಜೀವಾವಧಿ ಅಥವಾ ಮರಣ ದಂಡನ ಶಿಕ್ಷೆ ಆಗಲಿದೆ, ತಪ್ಪು ಮಾಡಿದ ವ್ಯಕ್ತಿಗೆ ಕಾನೂನು ರೀತಿ ಶಿಕ್ಷೆ ಆಗಲೇ ಬೇಕು ಎಂದು ಮಾಡಲಾಗಿರುವ ಟ್ವೀಟ್ ಒಂದನ್ನು ನಟಿ ರಮ್ಯಾ ರೀಟ್ವೀಟ್ ಮಾಡುವ ಮೂಲಕ ಸಂತ್ರಸ್ತ ವ್ಯಕ್ತಿಯ ಕುಟುಂಬದ ಪರ ನಿಂತಿದ್ದಾರೆ.

ದರ್ಶನ್​ಗೆ ಜೀವಾವಧಿ ಶಿಕ್ಷೆ ಅಥವಾ ಮರಣದಂಡನೆ, ರೀಟ್ವೀಟ್ ಮಾಡಿದ ನಟಿ ರಮ್ಯಾ
ಮಂಜುನಾಥ ಸಿ.
|

Updated on:Jun 11, 2024 | 1:47 PM

Share

ರೇಣುಕಾ ಸ್ವಾಮಿ (Renuka Swamy) ಎಂಬುವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ (Darshan Thoogudeepa) ಅನ್ನು ಪೊಲೀಸರು ಬಂಧಿಸಿದ್ದಾರೆ. ದರ್ಶನ್ ವಿಚಾರಣೆ ನಡೆಯುತ್ತಿದ್ದು ಇಂದೇ ದರ್ಶನ್ ಅನ್ನು ನ್ಯಾಯಾಲಯಕ್ಕೆ ಹಾಜರುಪಡಿಸುವ ನಿರೀಕ್ಷೆ ಇದೆ. ದರ್ಶನ್ ಮೇಲೆ ಯಾವ ಸೆಕ್ಷನ್​ಗಳ ಅಡಿ ಪ್ರಕರಣ ದಾಖಲಿಸಲಾಗಿದೆ ಎಂಬುದರ ಮಾಹಿತಿ ಇನ್ನೂ ಲಭ್ಯವಾಗಬೇಕಿದೆ. ಸೆಕ್ಷನ್ 302 (ಕೊಲೆ), 369 (ಅಪಹರಣ) ಇನ್ನೂ ಕೆಲವು ಸೆಕ್ಷನ್​ಗಳನ್ನು ಹೇರುವುದು ಖಾಯಂ ಎನ್ನಲಾಗುತ್ತಿದೆ.

ಇದರ ನಡುವೆ ನಟಿ ರಮ್ಯಾ, ದರ್ಶನ್​ಗೆ ಯಾವ ರೀತಿಯ ಶಿಕ್ಷೆ ಆಗಲಿದೆ ಎಂಬ ಬಗ್ಗೆ ಮಾಡಲಾಗಿರುವ ಟ್ವೀಟ್ ಒಂದನ್ನು ರೀಟ್ವೀಟ್ ಮಾಡಿದ್ದಾರೆ. ಕರ್ನಾಟಕ ಬಾಕ್ಸ್ ಆಫೀಸ್ ಹೆಸರಿನ ಟ್ವಿಟ್ಟರ್ ಖಾತೆಯಿಂದ ‘ದರ್ಶನ್​ಗೆ ಸೆಕ್ಷನ್ 302ರ ಅಡಿಯಲ್ಲಿ ಜೀವಾವಧಿ ಶಿಕ್ಷೆ ಅಥವಾ ಮರಣ ದಂಡನೆ ಶಿಕ್ಷೆ ವಿಧಿಸಲಾಗುತ್ತದೆ. ಒಂದೊಮ್ಮೆ ಈ ಪ್ರಕರಣದಲ್ಲಿ ದರ್ಶನ್​ಗೆ ಶಿಕ್ಷೆ ಆಗದಿದ್ದಲ್ಲಿ ಹಣದ ಪ್ರಭಾವ ಕೆಲಸ ಮಾಡಿದೆ ಎಂದರ್ಥ ಹಾಗೂ ಭಾರತೀಯ ಕಾನೂನು ವ್ಯವಸ್ಥೆ ಎಷ್ಟು ದುರ್ಬಲವಾಗಿದೆ ಎಂದು ತೋರಿದಂತಾಗುತ್ತದೆ. ಸಂತ್ರಸ್ತರಿಗೆ ಸಿಗಬೇಕಾದ ನ್ಯಾಯ ಸಿಗುತ್ತದೆ ಎಂದು ಆಶಿಸುತ್ತೇವೆ’ ಎಂದು ಟ್ವೀಟ್ ಮಾಡಲಾಗಿದೆ. ಈ ಟ್ವೀಟ್ ಅನ್ನು ನಟಿ ರಮ್ಯಾ ರೀಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ:ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಬಂಧನ, ಕೊಲೆಯಾದ ರೇಣುಕಾಸ್ವಾಮಿ ಯಾರು? ಹಿನ್ನೆಲೆ ಏನು?

ನಟಿ ರಮ್ಯಾ ವಿರುದ್ಧ ದರ್ಶನ್ ಅಭಿಮಾನಿಗಳು ಕೆಲವು ಬಾರಿ ಖ್ಯಾತೆ ತೆರೆದಿದ್ದರು. ದರ್ಶನ್ ಮೇಲೆ ಚಪ್ಪಲಿ ಎಸೆದ ಪ್ರಕರಣ ನಡೆದಾಗ ರಮ್ಯಾ, ಸ್ಟಾರ್ ನಟರು ತಮ್ಮ ಅಭಿಮಾನಿಗಳಿಗೆ ಬುದ್ಧಿವಾದ ಹೇಳಬೇಕು ಎಂದಿದ್ದರು. ಅವರ ಸಂದೇಶ ದರ್ಶನ್ ಅಭಿಮಾನಿಗಳ ಅತಿರೇಕದ ವರ್ತನೆಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದಂತಿತ್ತು. ಈ ಕಾರಣಕ್ಕೆ ದರ್ಶನ್ ಅಭಿಮಾನಿಗಳು ರಮ್ಯಾ ವಿರುದ್ಧ ಟ್ರೋಲ್ ಮಾಡಿದ್ದರು.

ರಮ್ಯಾ ಹಾಗೂ ದರ್ಶನ್ ‘ದತ್ತ’ ಸಿನಿಮಾದಲ್ಲಿ ಒಟ್ಟಿಗೆ ನಟಿಸಿದ್ದರು. ಈ ಸಿನಿಮಾ ದೊಡ್ಡ ಹಿಟ್ ಆಗಿತ್ತು. ಆದರೆ ದರ್ಶನ್ ಹಾಗೂ ರಮ್ಯಾ ಒಳ್ಳೆಯ ಸ್ನೇಹಿತರೇನೂ ಆಗಿರಲಿಲ್ಲ. ದರ್ಶನ್​ರ ಅಭಿಮಾನಿಗಳ ಅತಿರೇಕದ ವರ್ತನೆಯನ್ನು, ಆ ಅತಿರೇಕದ ವರ್ತನೆಗೆ ದರ್ಶನ್ ನೀಡುವ ಬೆಂಬಲವನ್ನು ಪರೋಕ್ಷವಾಗಿ ಟೀಕಿಸಿದ್ದರು ನಟಿ ರಮ್ಯಾ. ಈಗ ದರ್ಶನ್ ಮೇಲೆ ಕೊಲೆ ಆರೋಪ ಬಂದಿರುವ ಹಿನ್ನೆಲೆಯಲ್ಲಿ ದರ್ಶನ್​ಗೆ ತಪ್ಪಿಗೆ ಶಿಕ್ಷೆಯಾಗಲಿ ಎಂಬ ಸಂದೇಶವನ್ನು ರೀಟ್ವೀಟ್ ಮಾಡಿ, ಸಂತ್ರಸ್ತನ ಕುಟುಂಬದ ಪರವಾಗಿ ನಿಂತಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:30 pm, Tue, 11 June 24

ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!