AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಜನಿಕಾಂತ್-ರಾಣಾ ದಗ್ಗುಬಾಟಿ ಒಟ್ಟಿಗೆ ನೋಡಲು ಹೋದ ಫ್ಯಾನ್ಸ್​ಗೆ ನಿರಾಸೆ

ರಜನಿಕಾಂತ್ ಜೊತೆ ಇರೋ ಸೆಲ್ಫಿ ಹಂಚಿಕೊಂಡಿದ್ದರು ರಾಣಾ ದಗ್ಗುಬಾಟಿ. ಇದನ್ನು ನೋಡಿದ ಫ್ಯಾನ್ಸ್ ಇದು ಹೈದರಾಬಾದ್​ನ ಅನುಪಮಾ ಸ್ಟುಡಿಯೋ ಎಂದು ಭಾವಿಸಿದರು. ಹೀಗಾಗಿ ಅಭಿಮಾನಿಗಳು ದಂಡು ಅಲ್ಲಿಗೆ ತೆರಳಿತು. ರಜನಿ ಹಾಗೂ ರಾಣಾ ಜೊತೆ ಒಟ್ಟಿಗೆ ಸೆಲ್ಫಿ ತೆಗೆದುಕೊಳ್ಳಬಹುದು ಎಂಬುದು ಅಭಿಮಾನಿಗಳ ಆಲೋಚನೆ ಆಗಿತ್ತು. ಆದರೆ, ಅಲ್ಲಿ ಅನೇಕರನ್ನು ಒಳಗೆ ಬಿಟ್ಟಿಲ್ಲ.

ರಜನಿಕಾಂತ್-ರಾಣಾ ದಗ್ಗುಬಾಟಿ ಒಟ್ಟಿಗೆ ನೋಡಲು ಹೋದ ಫ್ಯಾನ್ಸ್​ಗೆ ನಿರಾಸೆ
ರಜನಿ-ರಾಣಾ
ರಾಜೇಶ್ ದುಗ್ಗುಮನೆ
|

Updated on:Mar 06, 2024 | 7:38 AM

Share

ನಟ ರಜನಿಕಾಂತ್ (Rajinikanth) ಅವರಿಗೆ ಸಾಕಷ್ಟು ಜನಪ್ರಿಯತೆ ಇದೆ. ಕಳೆದ ವರ್ಷ ರಿಲೀಸ್ ಆದ ‘ಜೈಲರ್’ ಸಿನಿಮಾ ಸೂಪರ್ ಹಿಟ್ ಆದ ಬಳಿಕ ರಜನಿಕಾಂತ್ ಅವರ ಪವರ್ ಹೆಚ್ಚಿದೆ. ಸದ್ಯ ಅವರು ‘ವೆಟ್ಟೈಯನ್’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈ ಚಿತ್ರದಲ್ಲಿ ರಜನಿಕಾಂತ್ ಜೊತೆ ರಾಣಾ ದಗ್ಗುಬಾಟಿ ಕೂಡ ನಟಿಸುತ್ತಿದ್ದಾರೆ. ಇತ್ತೀಚೆಗೆ ರಾಣಾ ಅವರು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಒಂದನ್ನು ಹಂಚಿಕೊಂಡಿದ್ದಾರೆ. ಇದನ್ನು ನೋಡಿ ಫ್ಯಾನ್ಸ್ ಎಗ್ಸೈಟ್ ಆಗಿದ್ದಾರೆ.

ರಜನಿಕಾಂತ್ ಜೊತೆ ಇರೋ ಸೆಲ್ಫಿ ಹಂಚಿಕೊಂಡಿದ್ದರು ರಾಣಾ ದಗ್ಗುಬಾಟಿ. ಇದನ್ನು ನೋಡಿದ ಫ್ಯಾನ್ಸ್ ಇದು ಹೈದರಾಬಾದ್​ನ ಅನುಪಮಾ ಸ್ಟುಡಿಯೋ ಎಂದು ಭಾವಿಸಿದರು. ಹೀಗಾಗಿ ಅಭಿಮಾನಿಗಳು ದಂಡು ಅಲ್ಲಿಗೆ ತೆರಳಿತು. ರಜನಿ ಹಾಗೂ ರಾಣಾ ಜೊತೆ ಒಟ್ಟಿಗೆ ಸೆಲ್ಫಿ ತೆಗೆದುಕೊಳ್ಳಬಹುದು ಎಂಬುದು ಅಭಿಮಾನಿಗಳ ಆಲೋಚನೆ ಆಗಿತ್ತು. ಆದರೆ, ಅಲ್ಲಿ ಅನೇಕರನ್ನು ಒಳಗೆ ಬಿಟ್ಟಿಲ್ಲ. ಇದರ ಜೊತೆಗೆ ರಜನಿಕಾಂತ್ ಅಲ್ಲಿಲ್ಲ ಎನ್ನುವ ವಿಚಾರವೂ ಗೊತ್ತಾಗಿದೆ.

‘ಜೈ ಭೀಮ್’ ಚಿತ್ರದ ಮೂಲಕ ಖ್ಯಾತಿ ಹೆಚ್ಚಿಸಿಕೊಂಡವರು ನಿರ್ದೇಶಕ ಟಿಜಿ ಜ್ಞಾನವೇಲ್​. ಅವರು ‘ವೆಟ್ಟೈಯನ್’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಅವರು ರಾಣಾ ಭಾಗದ ಶೂಟಿಂಗ್​ನ ಪೂರ್ಣಗೊಳಿಸಿದ್ದಾರೆ. ಇದರ ಜೊತೆಗೆ ಆ ಸಂದರ್ಭದಲ್ಲಿ ರಜನಿಕಾಂತ್ ಅವರು ಅಲ್ಲಿ ಇರಲೇ ಇಲ್ಲ. ನಿಜ ವಿಚಾರ ತಿಳಿದು ಫ್ಯಾನ್ಸ್ ಬೇಸರಗೊಂಡಿದ್ದಾರೆ.

ರಾಣಾ ಅವರು ‘ವೆಟ್ಟೈಯನ್’ ಸಿನಿಮಾದಲ್ಲಿ ವಿಲನ್ ಪಾತ್ರ ಮಾಡುತ್ತಿದ್ದಾರೆ ಎನ್ನಲಾಗಿದೆ. ಅವರು ‘ಬಾಹುಬಲಿ’ ಚಿತ್ರದಲ್ಲಿ ಖಡಕ್ ವಿಲನ್ ಪಾತ್ರ ಮಾಡಿದ್ದರು. ಪವನ್ ಕಲ್ಯಾಣ್ ಎದುರು ಕೂಡ ತೊಡೆ ತಟ್ಟಿದ್ದರು. ರಜನಿಕಾಂತ್ ಎದುರು ಅವರು ಯಾವ ರೀತಿ ಕಾಣಿಸಿಕೊಳ್ಳಲಿದ್ದಾರೆ ಎನ್ನುವ ಕುತೂಹಲ ಮೂಡಿದೆ.

ಇದನ್ನೂ ಓದಿ: Viral Video: ರಜನಿಕಾಂತ್ ಅಭಿಯಾನದ ಮುತ್ತು ಚಿತ್ರದ ʼಒರುವನ್ ಒರುವನ್ʼ ಹಾಡನ್ನು ಹಾಡಿದ 77ರ ವಿದೇಶಿ ವೃದ್ಧ 

ರಜನಿಕಾಂತ್ ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ. ಈ ವರ್ಷ ಅವರ ನಟನೆಯ ‘ಲಾಲ್ ಸಲಾಮ್’ ಸಿನಿಮಾ ರಿಲೀಸ್ ಆಯಿತು. ಆದರೆ, ಈ ಚಿತ್ರ ದೊಡ್ಡ ಮಟ್ಟದಲ್ಲಿ ಗೆಲುವು ಕಾಣಲೇ ಇಲ್ಲ. ಈ ಚಿತ್ರದಲ್ಲಿ ರಜನಿಕಾಂತ್ ಅವರದ್ದು ಅತಿಥಿ ಪಾತ್ರ ಆಗಿತ್ತು. 40 ನಿಮಿಷಗಳ ಪಾತ್ರಕ್ಕೆ ಇವರು 40 ಕೋಟಿ ರೂಪಾಯಿ ಪಡೆದುಕೊಂಡಿದ್ದರು ಎನ್ನಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:38 am, Wed, 6 March 24

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು