ರಜನಿಕಾಂತ್-ರಾಣಾ ದಗ್ಗುಬಾಟಿ ಒಟ್ಟಿಗೆ ನೋಡಲು ಹೋದ ಫ್ಯಾನ್ಸ್​ಗೆ ನಿರಾಸೆ

ರಜನಿಕಾಂತ್ ಜೊತೆ ಇರೋ ಸೆಲ್ಫಿ ಹಂಚಿಕೊಂಡಿದ್ದರು ರಾಣಾ ದಗ್ಗುಬಾಟಿ. ಇದನ್ನು ನೋಡಿದ ಫ್ಯಾನ್ಸ್ ಇದು ಹೈದರಾಬಾದ್​ನ ಅನುಪಮಾ ಸ್ಟುಡಿಯೋ ಎಂದು ಭಾವಿಸಿದರು. ಹೀಗಾಗಿ ಅಭಿಮಾನಿಗಳು ದಂಡು ಅಲ್ಲಿಗೆ ತೆರಳಿತು. ರಜನಿ ಹಾಗೂ ರಾಣಾ ಜೊತೆ ಒಟ್ಟಿಗೆ ಸೆಲ್ಫಿ ತೆಗೆದುಕೊಳ್ಳಬಹುದು ಎಂಬುದು ಅಭಿಮಾನಿಗಳ ಆಲೋಚನೆ ಆಗಿತ್ತು. ಆದರೆ, ಅಲ್ಲಿ ಅನೇಕರನ್ನು ಒಳಗೆ ಬಿಟ್ಟಿಲ್ಲ.

ರಜನಿಕಾಂತ್-ರಾಣಾ ದಗ್ಗುಬಾಟಿ ಒಟ್ಟಿಗೆ ನೋಡಲು ಹೋದ ಫ್ಯಾನ್ಸ್​ಗೆ ನಿರಾಸೆ
ರಜನಿ-ರಾಣಾ
Follow us
|

Updated on:Mar 06, 2024 | 7:38 AM

ನಟ ರಜನಿಕಾಂತ್ (Rajinikanth) ಅವರಿಗೆ ಸಾಕಷ್ಟು ಜನಪ್ರಿಯತೆ ಇದೆ. ಕಳೆದ ವರ್ಷ ರಿಲೀಸ್ ಆದ ‘ಜೈಲರ್’ ಸಿನಿಮಾ ಸೂಪರ್ ಹಿಟ್ ಆದ ಬಳಿಕ ರಜನಿಕಾಂತ್ ಅವರ ಪವರ್ ಹೆಚ್ಚಿದೆ. ಸದ್ಯ ಅವರು ‘ವೆಟ್ಟೈಯನ್’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈ ಚಿತ್ರದಲ್ಲಿ ರಜನಿಕಾಂತ್ ಜೊತೆ ರಾಣಾ ದಗ್ಗುಬಾಟಿ ಕೂಡ ನಟಿಸುತ್ತಿದ್ದಾರೆ. ಇತ್ತೀಚೆಗೆ ರಾಣಾ ಅವರು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಒಂದನ್ನು ಹಂಚಿಕೊಂಡಿದ್ದಾರೆ. ಇದನ್ನು ನೋಡಿ ಫ್ಯಾನ್ಸ್ ಎಗ್ಸೈಟ್ ಆಗಿದ್ದಾರೆ.

ರಜನಿಕಾಂತ್ ಜೊತೆ ಇರೋ ಸೆಲ್ಫಿ ಹಂಚಿಕೊಂಡಿದ್ದರು ರಾಣಾ ದಗ್ಗುಬಾಟಿ. ಇದನ್ನು ನೋಡಿದ ಫ್ಯಾನ್ಸ್ ಇದು ಹೈದರಾಬಾದ್​ನ ಅನುಪಮಾ ಸ್ಟುಡಿಯೋ ಎಂದು ಭಾವಿಸಿದರು. ಹೀಗಾಗಿ ಅಭಿಮಾನಿಗಳು ದಂಡು ಅಲ್ಲಿಗೆ ತೆರಳಿತು. ರಜನಿ ಹಾಗೂ ರಾಣಾ ಜೊತೆ ಒಟ್ಟಿಗೆ ಸೆಲ್ಫಿ ತೆಗೆದುಕೊಳ್ಳಬಹುದು ಎಂಬುದು ಅಭಿಮಾನಿಗಳ ಆಲೋಚನೆ ಆಗಿತ್ತು. ಆದರೆ, ಅಲ್ಲಿ ಅನೇಕರನ್ನು ಒಳಗೆ ಬಿಟ್ಟಿಲ್ಲ. ಇದರ ಜೊತೆಗೆ ರಜನಿಕಾಂತ್ ಅಲ್ಲಿಲ್ಲ ಎನ್ನುವ ವಿಚಾರವೂ ಗೊತ್ತಾಗಿದೆ.

‘ಜೈ ಭೀಮ್’ ಚಿತ್ರದ ಮೂಲಕ ಖ್ಯಾತಿ ಹೆಚ್ಚಿಸಿಕೊಂಡವರು ನಿರ್ದೇಶಕ ಟಿಜಿ ಜ್ಞಾನವೇಲ್​. ಅವರು ‘ವೆಟ್ಟೈಯನ್’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಅವರು ರಾಣಾ ಭಾಗದ ಶೂಟಿಂಗ್​ನ ಪೂರ್ಣಗೊಳಿಸಿದ್ದಾರೆ. ಇದರ ಜೊತೆಗೆ ಆ ಸಂದರ್ಭದಲ್ಲಿ ರಜನಿಕಾಂತ್ ಅವರು ಅಲ್ಲಿ ಇರಲೇ ಇಲ್ಲ. ನಿಜ ವಿಚಾರ ತಿಳಿದು ಫ್ಯಾನ್ಸ್ ಬೇಸರಗೊಂಡಿದ್ದಾರೆ.

ರಾಣಾ ಅವರು ‘ವೆಟ್ಟೈಯನ್’ ಸಿನಿಮಾದಲ್ಲಿ ವಿಲನ್ ಪಾತ್ರ ಮಾಡುತ್ತಿದ್ದಾರೆ ಎನ್ನಲಾಗಿದೆ. ಅವರು ‘ಬಾಹುಬಲಿ’ ಚಿತ್ರದಲ್ಲಿ ಖಡಕ್ ವಿಲನ್ ಪಾತ್ರ ಮಾಡಿದ್ದರು. ಪವನ್ ಕಲ್ಯಾಣ್ ಎದುರು ಕೂಡ ತೊಡೆ ತಟ್ಟಿದ್ದರು. ರಜನಿಕಾಂತ್ ಎದುರು ಅವರು ಯಾವ ರೀತಿ ಕಾಣಿಸಿಕೊಳ್ಳಲಿದ್ದಾರೆ ಎನ್ನುವ ಕುತೂಹಲ ಮೂಡಿದೆ.

ಇದನ್ನೂ ಓದಿ: Viral Video: ರಜನಿಕಾಂತ್ ಅಭಿಯಾನದ ಮುತ್ತು ಚಿತ್ರದ ʼಒರುವನ್ ಒರುವನ್ʼ ಹಾಡನ್ನು ಹಾಡಿದ 77ರ ವಿದೇಶಿ ವೃದ್ಧ 

ರಜನಿಕಾಂತ್ ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ. ಈ ವರ್ಷ ಅವರ ನಟನೆಯ ‘ಲಾಲ್ ಸಲಾಮ್’ ಸಿನಿಮಾ ರಿಲೀಸ್ ಆಯಿತು. ಆದರೆ, ಈ ಚಿತ್ರ ದೊಡ್ಡ ಮಟ್ಟದಲ್ಲಿ ಗೆಲುವು ಕಾಣಲೇ ಇಲ್ಲ. ಈ ಚಿತ್ರದಲ್ಲಿ ರಜನಿಕಾಂತ್ ಅವರದ್ದು ಅತಿಥಿ ಪಾತ್ರ ಆಗಿತ್ತು. 40 ನಿಮಿಷಗಳ ಪಾತ್ರಕ್ಕೆ ಇವರು 40 ಕೋಟಿ ರೂಪಾಯಿ ಪಡೆದುಕೊಂಡಿದ್ದರು ಎನ್ನಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:38 am, Wed, 6 March 24

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!