AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rana Daggubati: ರಾಣಾ ದಗ್ಗುಬಾಟಿ ಸಂಸಾರದಲ್ಲಿ ಬಿರುಕು? ಎಲ್ಲ ಪೋಸ್ಟ್​ ಡಿಲೀಟ್​ ಮಾಡಿದ ‘ಬಲ್ಲಾಳ ದೇವ’

Rana Daggubati | Miheeka Bajaj: ರಾಣಾ ದಗ್ಗುಬಾಟಿ ಈ ರೀತಿ ಮಾಡಿರುವುದು ಎಲ್ಲರಿಗೂ ಅಚ್ಚರಿ ಮೂಡಿಸಿದೆ. ಇಷ್ಟೆಲ್ಲ ಗುಸುಗುಸು ಕೇಳಿಬಂದರೂ ಅವರ ಪತ್ನಿ ಮಿಹೀಕಾ ಬಜಾಜ್​ ತಲೆ ಕೆಡಿಸಿಕೊಂಡಿಲ್ಲ.

Rana Daggubati: ರಾಣಾ ದಗ್ಗುಬಾಟಿ ಸಂಸಾರದಲ್ಲಿ ಬಿರುಕು? ಎಲ್ಲ ಪೋಸ್ಟ್​ ಡಿಲೀಟ್​ ಮಾಡಿದ ‘ಬಲ್ಲಾಳ ದೇವ’
ಮಿಹೀಕಾ ಬಜಾಜ್, ರಾಣಾ ದಗ್ಗುಬಾಟಿ
Follow us
TV9 Web
| Updated By: ಮದನ್​ ಕುಮಾರ್​

Updated on:Aug 09, 2022 | 7:56 AM

ನಟ ರಾಣಾ ದಗ್ಗುಬಾಟಿ (Rana Daggubati) ಅವರು ಸಖತ್ ಬೇಡಿಕೆ ಇರುವಂತಹ ಕಲಾವಿದ. ‘ಬಾಹುಬಲಿ’ ಸಿನಿಮಾದಲ್ಲಿ ಅವರು ಮಾಡಿದ ಬಲ್ಲಾಳ ದೇವ ಎಂಬ ಪಾತ್ರವನ್ನು ಅಭಿಮಾನಿಗಳು ಎಂದಿಗೂ ಮರೆಯುವಂತಿಲ್ಲ. ಅವರು ದಾಂಪತ್ಯ ಜೀವನಕ್ಕೆ ಕಾಲಿಟ್ಟು ಎರಡು ವರ್ಷ ಕಳೆದಿದೆ. ಗೆಳತಿ ಮಿಹೀಕಾ ಬಜಾಜ್​ ಜೊತೆ ಅವರು 2020ರ ಆಗಸ್ಟ್​ 8ರಂದು ಮದುವೆ ಆದರು. ಎರಡನೇ ವರ್ಷದ ವಿವಾಹ ವಾರ್ಷಿಕೋತ್ಸವದ ಈ ಸಂದರ್ಭದಲ್ಲಿ ಅವರ ಸಂಸಾರದ ಬಗ್ಗೆ ದೊಡ್ಡ ಗಾಸಿಪ್​ ಹಬ್ಬಿದೆ. ರಾಣಾ ದಗ್ಗುಬಾಟಿ ಮತ್ತು ಮಿಹೀಕಾ ಬಜಾಜ್​ (Miheeka Bajaj) ನಡುವೆ ವೈಮನಸ್ಸು ಮೂಡಿದೆ ಎನ್ನಲಾಗಿದೆ. ಈ ಬಗ್ಗೆ ಟಾಲಿವುಡ್​ (Tollywood) ಅಂಗಳದಲ್ಲಿ ಗುಸುಗುಸು ಹಬ್ಬಿದೆ. ಇತ್ತೀಚಿನ ದಿನಗಳಲ್ಲಿ ಸೆಲೆಬ್ರಿಟಿಗಳ ವಿಚ್ಛೇದನದ ಸುದ್ದಿ ಬ್ಯಾಕ್​ ಟು ಬ್ಯಾಕ್​ ಕೇಳಿಬರುತ್ತಿರುವುದರಿಂದ ಇಂಥ ಗಾಸಿಪ್​ ಹರಡಿರುವುದಕ್ಕೆ ರಾಣಾ ಅಭಿಮಾನಿಗಳಲ್ಲಿ ಚಿಂತೆ ಮೂಡಿದೆ. ಈ ಬಗ್ಗೆ ಅವರಿಂದಲೇ ಸ್ಪಷ್ಟನೆ ಸಿಗಬೇಕಿದೆ.

ರಾಣಾ ದಗ್ಗುಬಾಟಿ ಮತ್ತು ಮಿಹೀಕಾ ಬಜಾಜ್​ ನಡುವೆ ಯಾವ ಕಾರಣಕ್ಕೆ ವೈಮನಸ್ಸು ಮೂಡಿದೆ ಎಂಬುದು ಸ್ಪಷ್ಟವಾಗಿಲ್ಲ. ಆದರೆ ರಾಣಾ ಅವರ ಒಂದು ನಡೆ ಎಲ್ಲರಿಗೂ ಅಚ್ಚರಿ ಮೂಡಿಸಿದೆ. ಸದ್ಯ ಅವರು ತಮ್ಮ ಇನ್​ಸ್ಟಾಗ್ರಾಮ್​ ಖಾತೆಯಲ್ಲಿದ್ದ ಎಲ್ಲ ಪೋಸ್ಟ್​ಗಳನ್ನು ಡಿಲೀಟ್​ ಮಾಡಿದ್ದಾರೆ. ಒಂದಷ್ಟು ದಿನಗಳ ಕಾಲ ಅವರು ಸೋಶಿಯಲ್​ ಮೀಡಿಯಾದಿಂದ ದೂರ ಉಳಿಯಲು ನಿರ್ಧರಿಸಿದ್ದಾರೆ.

ಇದ್ದಕ್ಕಿದ್ದಂತೆಯೇ ರಾಣಾ ದಗ್ಗುಬಾಟಿ ಅವರು ಈ ರೀತಿ ಮಾಡಿರುವುದು ಎಲ್ಲರಿಗೂ ಅಚ್ಚರಿ ಮೂಡಿಸಿದೆ. ಇಷ್ಟೆಲ್ಲ ಗುಸುಗುಸು ಕೇಳಿಬಂದರೂ ಕೂಡ ರಾಣಾ ಪತ್ನಿ ಮಿಹೀಕಾ ಬಜಾಜ್​ ಅವರು ತಲೆ ಕೆಡಿಸಿಕೊಂಡಿಲ್ಲ. ವಿವಾಹ ವಾರ್ಷಿಕೋತ್ಸವದ ಸಲುವಾಗಿ ಅವರು ತಮ್ಮ ಇನ್​ಸ್ಟಾಗ್ರಾಮ್​ನಲ್ಲಿ ಒಂದಷ್ಟು ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಈ ಮೂಲಕ ವೆಡ್ಡಿಂಗ್​ ಆ್ಯನಿವರ್ಸರಿ ಆಚರಿಸಿದ್ದಾರೆ.

ಇದನ್ನೂ ಓದಿ
Image
ಶಾರುಖ್ ಖಾನ್ ಚಿತ್ರದಿಂದ ಹೊರ ನಡೆದ ರಾಣಾ ದಗ್ಗುಬಾಟಿ; ವಿಜಯ್ ಸೇತುಪತಿಗೆ ಸಿಕ್ತು ಚಾನ್ಸ್
Image
‘ಗರುಡ ಗಮನ..’ ಚಿತ್ರಕ್ಕೆ ರಾಣಾ ದಗ್ಗುಬಾಟಿ ಫಿದಾ; ಕನ್ನಡ ಸಿನಿಮಾ ಬಗ್ಗೆ ಒಂದೇ ಮಾತಲ್ಲಿ ಅವರು ಹೇಳಿದ್ದೇನು?
Image
Rana Daggubati: ರಾಣಾ ದಗ್ಗುಬಾಟಿ ಕುರಿತ ಈ ಸಂಗತಿಗಳು ಬಹುತೇಕರಿಗೆ ತಿಳಿದೇ ಇಲ್ಲ!; ಇಲ್ಲಿದೆ ಕುತೂಹಲಕರ ಮಾಹಿತಿ
Image
‘ಭೀಮ್ಲಾ ನಾಯಕ್’ ಸಿನಿಮಾಗೆ ರಾಣಾ ದಗ್ಗುಬಾಟಿ ಪಡೆಯುತ್ತಿರುವ ಸಂಭಾವನೆ ಇಷ್ಟೊಂದಾ?

ಮಿಹೀಕಾ ಬಜಾಜ್​ ಮತ್ತು ರಾಣಾ ದಗ್ಗುಬಾಟಿ ಸಂಸಾರದಲ್ಲಿ ಯಾವುದೇ ಬಿರುಕು ಮೂಡಿಲ್ಲ ಎಂದು ತೆಲುಗಿನ ಕೆಲವು ಮಾಧ್ಯಮಗಳು ವರದಿ ಮಾಡಿವೆ. ಹಾಗಿದ್ದರೂ ರಾಣಾ ಅವರಿಂದಲೇ ಸ್ಪಷ್ಟನೆ ಸಿಗಲಿ ಎಂದು ಎಲ್ಲರೂ ಕಾಯುತ್ತಿದ್ದಾರೆ. ಇನ್ನು, ಅವರು ನಟಿಸಿದ ‘ವಿರಾಟ ಪರ್ವಂ’ ಸಿನಿಮಾ ಈ ವರ್ಷ ತೆರೆಕಂಡು ಥಿಯೇಟರ್​ನಲ್ಲಿ ಸೋತಿತು. ಆ ಕಾರಣದಿಂದಲೂ ರಾಣಾ ದಗ್ಗುಬಾಟಿ ಅವರು ಬೇಸರದಲ್ಲಿ ಇದ್ದಿರಬಹುದು. ಹೊಸ ಸಿನಿಮಾಗಾಗಿ ಹೆಚ್ಚು ಸಮಯವನ್ನು ನೀಡುವ ಸಲುವಾಗಿ ಅವರು ಸೋಶಿಯಲ್​ ಮೀಡಿಯಾದಿಂದ ದೂರ ಉಳಿದಿದ್ದಾರೆ ಎನ್ನಲಾಗಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 7:28 am, Tue, 9 August 22

ಷಷ್ಠಿಪೂರ್ತಿ ಯಾಕೆ ಆಚರಿಸಬೇಕು ಹಾಗೂ ಇದರ ಮಹತ್ವವೇನು?
ಷಷ್ಠಿಪೂರ್ತಿ ಯಾಕೆ ಆಚರಿಸಬೇಕು ಹಾಗೂ ಇದರ ಮಹತ್ವವೇನು?
ಈ ರಾಶಿಯವರಿಗೆ ಏಳು ಗ್ರಹಗಳ ಅನುಗ್ರಹ, ವ್ಯಾಪಾರದಲ್ಲಿ ಅಧಿಕ ಲಾಭ
ಈ ರಾಶಿಯವರಿಗೆ ಏಳು ಗ್ರಹಗಳ ಅನುಗ್ರಹ, ವ್ಯಾಪಾರದಲ್ಲಿ ಅಧಿಕ ಲಾಭ
ಬೆಂಗಳೂರಿನ ದೊಡ್ಡಕಲ್ಲಸಂದ್ರ ರಸ್ತೆಯ ದುಸ್ಥಿತಿ: ವಿಡಿಯೋ ಮಾಡಿ ತೋರಿಸಿದ ನಟ
ಬೆಂಗಳೂರಿನ ದೊಡ್ಡಕಲ್ಲಸಂದ್ರ ರಸ್ತೆಯ ದುಸ್ಥಿತಿ: ವಿಡಿಯೋ ಮಾಡಿ ತೋರಿಸಿದ ನಟ
ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್
ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್
ತಮಿಳು ಕನ್ನಡದ ತಾಯಿ ಭಾಷೆ ಅಲ್ಲ: ಕಮಲ್ ಹೇಳಿಕೆಗೆ ನಾಗತಿಹಳ್ಳಿ ವಿರೋಧ
ತಮಿಳು ಕನ್ನಡದ ತಾಯಿ ಭಾಷೆ ಅಲ್ಲ: ಕಮಲ್ ಹೇಳಿಕೆಗೆ ನಾಗತಿಹಳ್ಳಿ ವಿರೋಧ
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು