AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಭೀಮ್ಲಾ ನಾಯಕ್’ ಸಿನಿಮಾಗೆ ರಾಣಾ ದಗ್ಗುಬಾಟಿ ಪಡೆಯುತ್ತಿರುವ ಸಂಭಾವನೆ ಇಷ್ಟೊಂದಾ?

ಮಲಯಾಳಂನ ‘ಅಯ್ಯಪ್ಪನುಮ್​ ಕೋಶಿಯುಮ್​’ ಸಿನಿಮಾದ ರಿಮೇಕ್​ ‘ಭೀಮ್ಲಾ ನಾಯಕ್’. ಪೊಲೀಸ್​ ಹಾಗೂ ಮಾಜಿ ಸೈನಿಕನ ನಡುವೆ ನಡೆಯುವ ಅಹಂನ ಕಥೆ ಇದಾಗಿದೆ. ಈ ಸಿನಿಮಾ ಮಲಯಾಳಂನಲ್ಲಿ ಮೆಚ್ಚುಗೆ ಪಡೆದುಕೊಂಡಿತ್ತು.

‘ಭೀಮ್ಲಾ ನಾಯಕ್’ ಸಿನಿಮಾಗೆ ರಾಣಾ ದಗ್ಗುಬಾಟಿ ಪಡೆಯುತ್ತಿರುವ ಸಂಭಾವನೆ ಇಷ್ಟೊಂದಾ?
ರಾಣಾ ದಗ್ಗುಬಾಟಿ
TV9 Web
| Edited By: |

Updated on: Sep 25, 2021 | 7:26 AM

Share

ರಾಣಾ ದಗ್ಗುಬಾಟಿ ಟಾಲಿವುಡ್​ನಲ್ಲಿ ದೊಡ್ಡ ಮಟ್ಟದಲ್ಲಿ ಹವಾ ಸೃಷ್ಟಿ ಮಾಡಿದ್ದಾರೆ. ‘ಬಾಹುಬಲಿ’ ಸಿನಿಮಾದಲ್ಲಿ ಅವರು ನಿರ್ವಹಿಸಿದ ಪಾತ್ರವನ್ನು ಮೆಚ್ಚಿಕೊಳ್ಳದವರೇ ಇಲ್ಲ. ಈ ಸಿನಿಮಾ ತೆರೆಕಂಡ ನಂತರದಲ್ಲಿ ರಾಣಾಗೆ ಬೇಡಿಕೆ ಹೆಚ್ಚಿದೆ. ಹೀರೋ ಆಗಿ ಅಥವಾ ಖಳ ನಟನಾಗಿ ಒಟ್ಟಿನಲ್ಲಿ ಒಳ್ಳೆಯ ಪಾತ್ರ ಸಿಕ್ಕರೆ ಸಿನಿಮಾ ಒಪ್ಪಿಕೊಳ್ಳುತ್ತಾರೆ ಅವರು. ಈಗ ‘ಭೀಮ್ಲಾ ನಾಯಕ್’​ ಸಿನಿಮಾದಲ್ಲಿ ರಾಣಾ ನಟಿಸುತ್ತಿದ್ದಾರೆ. ಈ ಸಿನಿಮಾಗಾಗಿ ಅವರು ದೊಡ್ಡ ಮೊತ್ತದ ಸಂಭಾವನೆ ಪಡೆಯುತ್ತಿದ್ದಾರೆ ಎನ್ನಲಾಗಿದೆ.

ಮಲಯಾಳಂನ ‘ಅಯ್ಯಪ್ಪನುಮ್​ ಕೋಶಿಯುಮ್​’ ಸಿನಿಮಾದ ರಿಮೇಕ್​ ‘ಭೀಮ್ಲಾ ನಾಯಕ್’. ಪೊಲೀಸ್​ ಹಾಗೂ ಮಾಜಿ ಸೈನಿಕನ ನಡುವೆ ನಡೆಯುವ ಅಹಂನ ಕಥೆ ಇದಾಗಿದೆ. ಈ ಸಿನಿಮಾ ಮಲಯಾಳಂನಲ್ಲಿ ಮೆಚ್ಚುಗೆ ಪಡೆದುಕೊಂಡಿತ್ತು. ಪೃಥ್ವಿರಾಜ್​ ಹಾಗೂ ಬಿಜು ಮೆನನ್​ ಈ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದರು. ಪೃಥ್ವಿರಾಜ್​ ಪಾತ್ರವನ್ನು ರಾಣಾ ದಗ್ಗುಬಾಟಿ ಹಾಗೂ ಬಿಜು ಮಾಡಿದ್ದ ಪಾತ್ರವನ್ನು ಪವನ್​ ಕಲ್ಯಾಣ್​ ನಿರ್ವಹಿಸುತ್ತಿದ್ದಾರೆ. ಎರಡೂ ಪಾತ್ರಗಳಿಗೆ ಸಮಾನ ತೂಕವಿದೆ.

ಡ್ಯಾನಿಯಲ್​ ಶೇಖರ್​ ಪಾತ್ರದಲ್ಲಿ ರಾಣಾ ಕಾಣಿಸಿಕೊಳ್ಳಲಿದ್ದಾರೆ. ಈ ಸಿನಿಮಾಗಾಗಿ ಅವರು 25 ದಿನಗಳ ಕಾಲ್​ಶೀಟ್​ ನೀಡಿದ್ದಾರೆ. ಈ ಅವಧಿಯಲ್ಲಿ ಅವರ ಪಾರ್ಟ್​ನ ಶೂಟಿಂಗ್​ ಪೂರ್ಣಗೊಳ್ಳಲಿದೆ. ವಿಶೇಷ ಎಂದರೆ, 25 ದಿನಕ್ಕಾಗಿ ಅವರು ಬರೋಬ್ಬರಿ 4 ಕೋಟಿ ರೂಪಾಯಿ ಕೇಳಿದ್ದಾರೆ. ಚಿತ್ರತಂಡ ಇಷ್ಟು ದೊಡ್ಡ ಮೊತ್ತದ ಹಣವನ್ನು ಅವರಿಗೆ ನೀಡೋಕೆ ಒಪ್ಪಿದೆ.

ರಾಣಾ ಖಡಕ್​ ಪಾತ್ರದಲ್ಲಿ ಕಾಣಿಸಿಕೊಂಡರೆ ವೀಕ್ಷಕರಿಗೆ ಇಷ್ಟವಾಗುತ್ತದೆ. ಈ ಸಿನಿಮಾದಲ್ಲಿ ಅವರಿಗೆ ನೀಡಿರುವ ಪಾತ್ರಕ್ಕೆ ನ್ಯಾಯ ಒದಗಿಸುವುದರಲ್ಲಿ ಯಾವುದೇ ಅನುಮಾನವಿಲ್ಲ. ಈ ಕಾರಣಕ್ಕೆ ರಾಣಾಗೆ ಇಷ್ಟು ದೊಡ್ಡ ಮೊತ್ತದ ಸಂಭಾವನೆ ನೀಡೋಕೆ ನಿರ್ಮಾಪಕರು ಹಿಂದೇಟು ಹಾಕಿಲ್ಲ.

ಸೆಪ್ಟೆಂಬರ್​ 20ರಂದು ರಾಣಾ ಫಸ್ಟ್​ ಲುಕ್​ ಜತೆಗೆ ಸಣ್ಣ ವಿಡಿಯೋ ಕೂಡ ರಿಲೀಸ್​ ಆಗಿತ್ತು. ರಾಣಾ ಸಖತ್​ ಮಾಸ್​ ಆಗಿ ಕಾಣಿಸಿಕೊಂಡಿದ್ದರು. ಪವನ್​ ಕಲ್ಯಾಣ್​ ಹಾಗೂ ರಾಣಾ ಮುಖಾಮುಖಿ ಆಗುತ್ತಿರುವ ವಿಚಾರ ಸಾಕಷ್ಟು ಕುತೂಹಲ ಮೂಡಿಸಿದೆ. ‘ಬಾಹುಬಲಿ’ ಸಿನಿಮಾದಲ್ಲಿ ರಾಣಾ ನೆಗೆಟಿವ್​ ರೋಲ್​ನಲ್ಲಿ ಕಾಣಿಸಿಕೊಂಡು ಗಮನ ಸೆಳೆದಿದ್ದರು. ಈಗ ಅವರು ಮತ್ತೊಂದು ಖಡಕ್​ ಪಾತ್ರ ಆಯ್ಕೆ ಮಾಡಿಕೊಂಡಂತಾಗಿದೆ.

ಇದನ್ನೂ ಓದಿ: ಸೆಟ್ಟೇರಿತು ಶಾರುಖ್- ನಯನತಾರಾ ನಟನೆಯ ನೂತನ ಚಿತ್ರ; ಬಣ್ಣಹಚ್ಚಲಿದ್ದಾರಾ ಪ್ರಿಯಾಮಣಿ, ರಾಣಾ ದಗ್ಗುಬಾಟಿ?

ತೆಲುಗಿನ ‘ಭೀಮ್ಲಾ ನಾಯಕ್’​ ಸಿನಿಮಾಗೆ ಪುನೀತ್​ ರಾಜ್​ಕುಮಾರ್​ ಬೆಂಬಲ; ಧನ್ಯವಾದ ಹೇಳಿದ ಪವನ್ ​ಕಲ್ಯಾಣ್​ ಫ್ಯಾನ್ಸ್

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ