AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rana Daggubati: ದೇವಸ್ಥಾನದಲ್ಲಿ ಸೆಲ್ಫೀ ಕೇಳಲು ಬಂದ ಅಭಿಮಾನಿಯ​ ಮೊಬೈಲ್ ಕಿತ್ತುಕೊಂಡ ನಟ ರಾಣಾ ದಗ್ಗುಬಾಟಿ; ವೈರಲ್ ಆಯ್ತು ವಿಡಿಯೋ

ಫ್ಯಾನ್ಸ್​ ತಮ್ಮ ಅಭಿಮಾನವನ್ನು ಎಲ್ಲೆಂದರಲ್ಲಿ ವ್ಯಕ್ತಪಡಿಸಲು ಮುಂದಾಗುತ್ತಾರೆ. ಇದರಿಂದ ಸೆಲೆಬ್ರಿಟಿಗಳಿಗೆ ಸಿಟ್ಟು ಬರುತ್ತದೆ. ಈ ವೇಳೆ ಅನೇಕರು ಮೊಬೈಲ್ ಕಿತ್ತುಕೊಂಡ ಉದಾಹರಣೆ ಇದೆ.

Rana Daggubati: ದೇವಸ್ಥಾನದಲ್ಲಿ ಸೆಲ್ಫೀ ಕೇಳಲು ಬಂದ ಅಭಿಮಾನಿಯ​ ಮೊಬೈಲ್ ಕಿತ್ತುಕೊಂಡ ನಟ ರಾಣಾ ದಗ್ಗುಬಾಟಿ; ವೈರಲ್ ಆಯ್ತು ವಿಡಿಯೋ
ರಾಣಾ
TV9 Web
| Edited By: |

Updated on: Sep 20, 2022 | 6:30 AM

Share

ನಟ ರಾಣಾ ದಗ್ಗುಬಾಟಿ (Rana Daggubati) ಅವರು ‘ಬಾಹುಬಲಿ’ ಸರಣಿಯ ಚಿತ್ರದಿಂದ ದೊಡ್ಡ ಮಟ್ಟದ ಖ್ಯಾತಿ ಪಡೆದುಕೊಂಡರು. ಈ ಸಿನಿಮಾ ಸೂಪರ್ ಹಿಟ್ ಆಯಿತು. ರಾಣಾ ನಿರ್ವಹಿಸಿದ ನೆಗೆಟಿವ್​ ಶೇಡ್​ನ ಪಾತ್ರದಿಂದ ಅವರ ಖ್ಯಾತಿ ದುಪ್ಪಟ್ಟಾಯಿತು. ಈ ಕಾರಣದಿಂದಲೂ ಅವರು ಅನೇಕರಿಗೆ ಇಷ್ಟವಾದರು. ‘ಬಾಹುಬಲಿ 2’ (Bahubali 2) ಬಳಿಕ ಹಲವು ಸಿನಿಮಾಗಳಲ್ಲಿ ರಾಣಾ ನಟಿಸಿದ್ದಾರೆ. ಹಲವು ಪಾತ್ರಗಳನ್ನು ಅವರು ಮಾಡಿದ್ದಾರೆ. ಇತ್ತೀಚೆಗೆ ರಾಣಾ ಅವರು ತಿರುಪತಿಗೆ ಭೇಟಿ ನೀಡಿದ್ದರು. ಈ ವೇಳೆ ಸೆಲ್ಫಿ ಕೇಳಲು ಬಂದ ಅಭಿಮಾನಿಯ ಮೊಬೈಲ್​ ಅನ್ನು ಕಸಿದುಕೊಂಡಿದ್ದಾರೆ. ಈ ವಿಡಿಯೋ ಸಾಕಷ್ಟು ವೈರಲ್ ಆಗುತ್ತದೆ.

ಸೆಲೆಬ್ರಿಟಿಗಳು ಕಂಡಾಗ ಫ್ಯಾನ್ಸ್ ಸೆಲ್ಫಿ ತೆಗೆದುಕೊಳ್ಳಲು ಮುಂದೆ ಬರುತ್ತಾರೆ. ಆದರೆ, ಸೆಲೆಬ್ರಿಟಿಗಳ ಮೂಡ್ ಎಲ್ಲಾ ಸಮಯದಲ್ಲೂ ಒಂದೇ ರೀತಿ ಇರುವುದಿಲ್ಲ. ಕೆಲ ಸ್ಥಳಗಳಲ್ಲಿ ಸೆಲ್ಫಿ ಕೊಡೋಕೆ ಅವರು ಒಪ್ಪುವುದಿಲ್ಲ. ಆದರೂ ಫ್ಯಾನ್ಸ್​ ತಮ್ಮ ಅಭಿಮಾನವನ್ನು ಎಲ್ಲೆಂದರಲ್ಲಿ ವ್ಯಕ್ತಪಡಿಸಲು ಮುಂದಾಗುತ್ತಾರೆ. ಇದರಿಂದ ಸೆಲೆಬ್ರಿಟಿಗಳಿಗೆ ಸಿಟ್ಟು ಬರುತ್ತದೆ. ಈ ವೇಳೆ ಅನೇಕರು ಮೊಬೈಲ್ ಕಿತ್ತುಕೊಂಡ ಉದಾಹರಣೆ ಇದೆ.

ರಾಣಾ ದಗ್ಗುಬಾಟಿ ಅವರು ಇತ್ತೀಚೆಗೆ ತಿರುಪತಿ ದೇವಾಲಯಕ್ಕೆ ತೆರಳಿದ್ದರು. ಅವರ ಫ್ಯಾಮಿಲಿಯವರು ರಾಣಾಗೆ ಸಾಥ್ ನೀಡಿದ್ದರು. ದೇವಸ್ಥಾನದ ಅಧಿಕಾರಿಗಳ ಜತೆ ರಾಣಾ ನಡೆದು ಬರುತ್ತಿದ್ದರು. ಈ ಸಂದರ್ಭದಲ್ಲಿ ಸೆಲ್ಫಿ ತೆಗೆಯದಂತೆ ಅವರು ಕೋರುತ್ತಿದ್ದರು. ಆದಾಗ್ಯೂ ಅಭಿಮಾನಿಯೋರ್ವ ಸೆಲ್ಫಿ ತೆಗೆದುಕೊಳ್ಳಲು ಮುಂದೆ ಬಂದಿದ್ದ. ಈ ವೇಳೆ ಮೊಬೈಲ್​ಅನ್ನು ಕಿತ್ತುಕೊಂಡಿದ್ದಾರೆ ರಾಣಾ.

ಇದನ್ನೂ ಓದಿ
Image
Rana Daggubati: ರಾಣಾ ದಗ್ಗುಬಾಟಿ ಸಂಸಾರದಲ್ಲಿ ಬಿರುಕು? ಎಲ್ಲ ಪೋಸ್ಟ್​ ಡಿಲೀಟ್​ ಮಾಡಿದ ‘ಬಲ್ಲಾಳ ದೇವ’
Image
ಶಾರುಖ್ ಖಾನ್ ಚಿತ್ರದಿಂದ ಹೊರ ನಡೆದ ರಾಣಾ ದಗ್ಗುಬಾಟಿ; ವಿಜಯ್ ಸೇತುಪತಿಗೆ ಸಿಕ್ತು ಚಾನ್ಸ್
Image
‘ಗರುಡ ಗಮನ..’ ಚಿತ್ರಕ್ಕೆ ರಾಣಾ ದಗ್ಗುಬಾಟಿ ಫಿದಾ; ಕನ್ನಡ ಸಿನಿಮಾ ಬಗ್ಗೆ ಒಂದೇ ಮಾತಲ್ಲಿ ಅವರು ಹೇಳಿದ್ದೇನು?
Image
Rana Daggubati: ರಾಣಾ ದಗ್ಗುಬಾಟಿ ಕುರಿತ ಈ ಸಂಗತಿಗಳು ಬಹುತೇಕರಿಗೆ ತಿಳಿದೇ ಇಲ್ಲ!; ಇಲ್ಲಿದೆ ಕುತೂಹಲಕರ ಮಾಹಿತಿ

ರಾಣಾ ರಿಯಾಕ್ಷನ್ ನೋಡಿ ಅಭಿಮಾನಿ ಕಂಗಾಲಾಗಿದ್ದಾನೆ. ಮರುಕ್ಷಣವೇ ಮೊಬೈಲ್​ ಅನ್ನು ರಾಣಾ ಹಿಂದಿರುಗಿಸಿದ್ದಾರೆ. ಜತೆಗೆ ‘ದೇವಸ್ಥಾನದಲ್ಲಿ ಸೆಲ್ಫಿ ತೆಗೆಯಬಾರದು’ ಎಂದು ಹೇಳಿ ನಕ್ಕಿದ್ದಾರೆ ರಾಣಾ. ನಟನ ಮುಖದಲ್ಲಿ ನಗು ನೋಡಿ ಅಭಿಮಾನಿ ನಿಟ್ಟುಸಿರು ಬಿಟ್ಟಿದ್ದಾನೆ.

ಇದನ್ನೂ ಓದಿ:  ರಾಣಾ ದಗ್ಗುಬಾಟಿ ಸಂಸಾರದಲ್ಲಿ ಬಿರುಕು? ಎಲ್ಲ ಪೋಸ್ಟ್​ ಡಿಲೀಟ್​ ಮಾಡಿದ ‘ಬಲ್ಲಾಳ ದೇವ’

ರಾಣಾ ನಟನೆಯ ‘ವಿರಾಟಪರ್ವಂ’ ಸಿನಿಮಾ ಇತ್ತೀಚೆಗೆ ತೆರೆಗೆ ಬಂತು. ಈ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ ಅಬ್ಬರಿಸೋಕೆ ವಿಫಲವಾಯಿತು. ಸಾಯಿ ಪಲ್ಲವಿ ಈ ಚಿತ್ರಕ್ಕೆ ನಾಯಕಿ ಆಗಿದ್ದರು. ಈ ಚಿತ್ರ ಒಟಿಟಿಯಲ್ಲಿ ಅಬ್ಬರಿಸಿದೆ. ಇತ್ತೀಚೆಗೆ ‘ಕಬ್ಜ’ ಸಿನಿಮಾದ ಟೀಸರ್ ಲಾಂಚ್ ಮಾಡಲು ಅವರು ಬೆಂಗಳೂರಿಗೆ ಬಂದಿದ್ದರು. ಟೀಸರ್ ನೋಡಿ ರಾಣಾ ಮೆಚ್ಚುಗೆ ವ್ಯಕ್ತಪಡಿಸಿದ್ದರು.

Follow Us
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ