AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘RRR, ಬಾಹುಬಲಿ ಕೂಡ ಮಾಡಿರದ ಸಾಧನೆಯನ್ನು ‘ಪ್ರಾಜೆಕ್ಟ್​ ಕೆ’ ಸಿನಿಮಾ ಮಾಡಲಿದೆ’: ಭವಿಷ್ಯ ನುಡಿದ ರಾಣಾ ದಗ್ಗುಬಾಟಿ

Rana Daggubati: ಪ್ರಭಾಸ್​ ಅವರು ‘ಪ್ರಾಜೆಕ್ಟ್​ ಕೆ’ ಚಿತ್ರದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಈ ಸಿನಿಮಾ ಕುರಿತು ರಾಣಾ ದಗ್ಗುಬಾಟಿ ಅವರು ಮಾತನಾಡಿದ್ದಾರೆ. ಈ ಸಿನಿಮಾಗಾಗಿ ಇಡೀ ತೆಲುಗು ಚಿತ್ರರಂಗ ಎಗ್ಸೈಟ್​ ಆಗಿದೆ ಎಂದು ಅವರು ಹೇಳಿದ್ದಾರೆ.

‘RRR, ಬಾಹುಬಲಿ ಕೂಡ ಮಾಡಿರದ ಸಾಧನೆಯನ್ನು ‘ಪ್ರಾಜೆಕ್ಟ್​ ಕೆ’ ಸಿನಿಮಾ ಮಾಡಲಿದೆ’: ಭವಿಷ್ಯ ನುಡಿದ ರಾಣಾ ದಗ್ಗುಬಾಟಿ
ಪ್ರಾಜೆಕ್ಟ್​ ಕೆ
Follow us
ಮದನ್​ ಕುಮಾರ್​
|

Updated on: Jun 02, 2023 | 2:38 PM

ಭಾರತೀಯ ಸಿನಿಮಾಗಳು ಜಾಗತಿಕ ಮಟ್ಟದಲ್ಲಿ ಸದ್ದು ಮಾಡುತ್ತಿವೆ. ಅದರಲ್ಲೂ ತೆಲುಗು ಚಿತ್ರಗಳು ಆಸ್ಕರ್​ ಪ್ರಶಸ್ತಿ ಪಡೆಯುವ ಹಂತಕ್ಕೆ ಬೆಳೆದಿವೆ. ಹಾಗಾಗಿ ಮುಂಬರುವ ಚಿತ್ರಗಳ ಮೇಲೆ ಹೆಚ್ಚಿನ ನಿರೀಕ್ಷೆ ಸೃಷ್ಟಿಯಾಗಿದೆ. ಪ್ರಭಾಸ್​ (Prabhas) ಅವರು ‘ಪ್ರಾಜೆಕ್ಟ್​ ಕೆ’ ಚಿತ್ರದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಈ ಸಿನಿಮಾ ಕುರಿತು ನಟ ರಾಣಾ ದಗ್ಗುಬಾಟಿ ಅವರು ಮಾತನಾಡಿದ್ದಾರೆ. ಈ ಸಿನಿಮಾಗಾಗಿ ಇಡೀ ತೆಲುಗು ಚಿತ್ರರಂಗ ಎಗ್ಸೈಟ್​ ಆಗಿದೆ ಎಂದು ಅವರು ಹೇಳಿದ್ದಾರೆ. ‘ಇಂಡಿಯಾ ಟುಡೇ ಕಾನ್​ಕ್ಲೇವ್​ ಸೌತ್​ 2023’ ವೇದಿಕೆಯಲ್ಲಿ ಅವರು ಈ ವಿಚಾರಗಳನ್ನು ಹಂಚಿಕೊಂಡಿದ್ದಾರೆ. ರಾಣಾ ದಗ್ಗುಬಾಟಿ (Rana Daggubati) ಅವರ ಮಾತುಗಳನ್ನು ಕೇಳಿದ ಬಳಿಕ ‘ಪ್ರಾಜೆಕ್ಟ್​ ಕೆ’ ಸಿನಿಮಾ (Project K Movie) ಬಗ್ಗೆ ನಿರೀಕ್ಷೆ ಹೆಚ್ಚುವಂತಾಗಿದೆ. ಈ ಸಿನಿಮಾದಲ್ಲಿ ದೀಪಿಕಾ ಪಡುಕೋಣೆ, ಅಮಿತಾಭ್​ ಬಚ್ಚನ್​ ಮುಂತಾದವರು ಈ ಚಿತ್ರದಲ್ಲಿ ನಟಿಸುತ್ತಿದ್ದಾರೆ.

ರಾಣಾ ದಗ್ಗುಬಾಟಿ ಹೇಳಿದ್ದೇನು?

‘ನಾವು ಸಂಪೂರ್ಣವಾಗಿ ಪ್ರತಿಯೊಬ್ಬರ ಸಿನಿಮಾವನ್ನು ಸೆಲೆಬ್ರೇಟ್​ ಮಾಡುತ್ತೇವೆ. ಪ್ರಾಜೆಕ್ಟ್​ ಕೆ ಸಿನಿಮಾಗೆ ನಾಗ್​ ಅಶ್ವಿನ್​ ನಿರ್ದೇಶನ ಮಾಡುತ್ತಿದ್ದಾರೆ. ತೆಲುಗಿನಲ್ಲಿ ಈ ಸಿನಿಮಾಗಾಗಿ ನಾವೆಲ್ಲರೂ ಕಾಯುತ್ತಿದ್ದೇವೆ. ಆರ್​ಆರ್​ಆರ್​ ಮತ್ತು ಬಾಹುಬಲಿ ಸಿನಿಮಾಗಳು ಮೀರಲು ಸಾಧ್ಯವಾಗದಂತಹ ಗಡಿಗಳನ್ನು ಪ್ರಾಜೆಕ್ಟ್​ ಕೆ ಚಿತ್ರ ಮೀರಲಿದೆ. ಅದು ಜಾಗತಿಕ ಮಟ್ಟದಲ್ಲಿ ಹಿಟ್​ ಆಗಲಿದೆ’ ಎಂದು ರಾಣಾ ದಗ್ಗುಬಾಟಿ ಹೇಳಿದ್ದಾರೆ. ತೆಲುಗಿನ ಪ್ರತಿಷ್ಠಿತ ನಿರ್ಮಾಣ ಸಂಸ್ಥೆಯಾಗಿ ‘ವೈಜಯಂತಿ ಮೂವೀಸ್​’ ಮೂಲಕ ‘ಪ್ರಾಜೆಕ್ಟ್​ ಕೆ’ ಸಿನಿಮಾ ಸಿದ್ಧವಾಗುತ್ತಿದೆ. ಈ ಚಿತ್ರಕ್ಕೆ ಬಹುಕೋಟಿ ರೂಪಾಯಿ ಬಂಡವಾಳ ಸುರಿಯಲಾಗಿದೆ.

ಇದನ್ನೂ ಓದಿ: ಗೋವಾದಲ್ಲಿ ನಡೆದ ಅಂತಾರಾಷ್ಟ್ರೀಯ ಸಿನಿಮೋತ್ಸವದಲ್ಲಿ ‘ಕೆಜಿಎಫ್​’ ಚಿತ್ರವನ್ನು ಹಾಡಿ ಹೊಗಳಿದ ರಾಣಾ ದಗ್ಗುಬಾಟಿ

ಪ್ಯಾನ್​ ಇಂಡಿಯಾ ಸ್ಟಾರ್​ ಪ್ರಭಾಸ್​ ಅವರು ಸಿನಿಮಾ ಕೆಲಸಗಳಲ್ಲಿ ಚುರುಕಾಗಿದ್ದಾರೆ. ‘ಬಾಹುಬಲಿ’ ಸಿನಿಮಾಗೋಸ್ಕರ ಹಲವು ವರ್ಷ ಮೀಸಲಿಟ್ಟಿದ್ದ ಅವರು ಆ ನಂತರ ಸಾಲು ಸಾಲು ಸಿನಿಮಾ ಒಪ್ಪಿಕೊಳ್ಳಲು ಆರಂಭಿಸಿದರು. ಈಗ ‘ಸಲಾರ್​’, ‘ಆದಿಪುರುಷ್​’, ‘ಪ್ರಾಜೆಕ್ಟ್​ ಕೆ’ ಸಿನಿಮಾಗಳಲ್ಲಿ ಅವರು ಬ್ಯುಸಿ ಆಗಿದ್ದಾರೆ. ಈ ಎಲ್ಲ ಸಿನಿಮಾಗಳ ಮೇಲೆ ಅಭಿಮಾನಿಗಳಿಗೆ ಸಖತ್​ ನಿರೀಕ್ಷೆ ಇದೆ. ಇತ್ತೀಚೆಗೆ ‘ಪ್ರಾಜೆಕ್ಟ್​ ಕೆ’ ಚಿತ್ರತಂಡದವರು ಹೊಸದೊಂದು ವಿಡಿಯೋ ಹಂಚಿಕೊಳ್ಳುವ ಮೂಲಕ ನಿರೀಕ್ಷೆಯನ್ನು ಹೆಚ್ಚಿಸುವ ಕೆಲಸ ಮಾಡಿದ್ದರು. ಸಿನಿಮಾದಲ್ಲಿನ ಪ್ರತಿ ಪಾತ್ರದ ಕಾಸ್ಟ್ಯೂಮ್​ ಕೂಡ ಡಿಫರೆಂಟ್​​ ಆಗಿರಲಿದೆ. ಅದನ್ನು ತೋರಿಸುವ ಸಲುವಾಗಿ ಚಿಕ್ಕ ವಿಡಿಯೋ ಹಂಚಿಕೊಳ್ಳಲಾಗಿತ್ತು.

ಇದನ್ನೂ ಓದಿ: ರಾಣಾ ದಗ್ಗುಬಾಟಿ ಆಫೀಸ್​ನಲ್ಲಿ ಅಪ್ಪು​ ಪುತ್ಥಳಿ; ಫೋಟೋ ತೋರಿಸಿ ಹೆಮ್ಮೆಯಿಂದ ಹೇಳಿಕೊಂಡ ನಟ

ಇದು ಸೈನ್ಸ್​ ಫಿಕ್ಷನ್​ ಶೈಲಿಯ ಸಿನಿಮಾ ಆಗಿದ್ದು, ಅದಕ್ಕೆ ತಕ್ಕಂತೆಯೇ ಕಾಸ್ಟ್ಯೂಮ್​ ಡಿಸೈನ್​ ಮಾಡಲಾಗಿದೆ. ಸಿನಿಮಾದಲ್ಲಿ ಬರುವ ರೇಡರ್ಸ್​ ಎಂಬ ಪಾತ್ರಗಳಿಗೆ ಹೇಗೆ ವಸ್ತ್ರ ವಿನ್ಯಾಸ ಮಾಡಲಾಗಿದೆ ಎಂಬುದನ್ನು ತಿಳಿಸುವ ಸಲುವಾಗಿ ಈ ವಿಡಿಯೋ ಹಂಚಿಕೊಳ್ಳಲಾಗಿದೆ. ಸೈನ್ಸ್​ ಫಿಕ್ಷನ್​ ಸಿನಿಮಾಗಳನ್ನು ಮಾಡುವಲ್ಲಿ ಹಾಲಿವುಡ್​ ಮಂದಿ ಸದಾ ಮುಂಚೂಣಿಯಲ್ಲಿ ಇರುತ್ತಾರೆ. ಈಗ ‘ಪ್ರಾಜೆಕ್ಟ್​ ಕೆ’ ಚಿತ್ರತಂಡದವರು ಹಾಲಿವುಡ್​ಗೂ ಪೈಪೋಟಿ ನೀಡಲು ಸಜ್ಜಾದಂತಿದೆ. ಸದ್ಯಕ್ಕೆ ಹೊರಬಂದಿರುವುದು ಚಿಕ್ಕ ಮೇಕಿಂಗ್​ ವಿಡಿಯೋ ಮಾತ್ರ. ಇನ್ನೂ ಹಲವು ವಿಡಿಯೋಗಳನ್ನು ರಿಲೀಸ್​ ಮಾಡಲಾಗುತ್ತದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ದೆಹಲಿಯ ಅಕ್ಷರಧಾಮದಲ್ಲಿ ಮಾಕ್ ಡ್ರಿಲ್; ಮತ್ತೆ ಹೊತ್ತಿದ ದೀಪಗಳು
ದೆಹಲಿಯ ಅಕ್ಷರಧಾಮದಲ್ಲಿ ಮಾಕ್ ಡ್ರಿಲ್; ಮತ್ತೆ ಹೊತ್ತಿದ ದೀಪಗಳು
ನಗರದ ಹಲವಾರು ಏರಿಯಾಗಳ ನಿವಾಸಿಗಳಿಗೆ ಸೈರನ್ ಕೇಳಿಸಿಲ್ಲ
ನಗರದ ಹಲವಾರು ಏರಿಯಾಗಳ ನಿವಾಸಿಗಳಿಗೆ ಸೈರನ್ ಕೇಳಿಸಿಲ್ಲ
ಭಾರತದ ದಾಳಿಗೆ ಬಲಿಯಾದ ಉಗ್ರರಿಗೆ ಪಾಕಿಸ್ತಾನದ ಧ್ವಜ ಹೊದಿಸಿ ಅಂತ್ಯಕ್ರಿಯೆ
ಭಾರತದ ದಾಳಿಗೆ ಬಲಿಯಾದ ಉಗ್ರರಿಗೆ ಪಾಕಿಸ್ತಾನದ ಧ್ವಜ ಹೊದಿಸಿ ಅಂತ್ಯಕ್ರಿಯೆ
ರಾಜತಾಂತ್ರಿಕವಾಗಿಯೂ ಭಾರತ ಪಾಕಿಸ್ತಾನದ ವಿರುದ್ಧ ಗೆದ್ದಿದೆ: ಡಾ ಮಂಜುನಾಥ್
ರಾಜತಾಂತ್ರಿಕವಾಗಿಯೂ ಭಾರತ ಪಾಕಿಸ್ತಾನದ ವಿರುದ್ಧ ಗೆದ್ದಿದೆ: ಡಾ ಮಂಜುನಾಥ್
ಬೆಂಗಳೂರಿನಲ್ಲಿ ಬ್ಲ್ಯಾಕ್ ಔಟ್: ಕಗ್ಗತ್ತಲಾದ ರಾಜಧಾನಿ, ವಿಡಿಯೋ ನೋಡಿ
ಬೆಂಗಳೂರಿನಲ್ಲಿ ಬ್ಲ್ಯಾಕ್ ಔಟ್: ಕಗ್ಗತ್ತಲಾದ ರಾಜಧಾನಿ, ವಿಡಿಯೋ ನೋಡಿ
ಆಪರೇಷನ್​ ಸಿಂಧೂರ್: ಭಾರತ ವಿವೇಕಯುತದಿಂದ ಹೆಜ್ಜೆ ಇಟ್ಟಿದೆ, ​ಗುರೂಜಿ
ಆಪರೇಷನ್​ ಸಿಂಧೂರ್: ಭಾರತ ವಿವೇಕಯುತದಿಂದ ಹೆಜ್ಜೆ ಇಟ್ಟಿದೆ, ​ಗುರೂಜಿ
ಸೇನೆ ಮತ್ತು ಪ್ರಧಾನಿ ಮೋದಿಯವರಿಗೆ ಅಭಿನಂದನೆಗಳು: ಮುತಾಲಿಕ್
ಸೇನೆ ಮತ್ತು ಪ್ರಧಾನಿ ಮೋದಿಯವರಿಗೆ ಅಭಿನಂದನೆಗಳು: ಮುತಾಲಿಕ್
ಪಾಕಿಸ್ತಾನ ನಾಶವಾಗಬೇಕು; ಕರ್ನಲ್ ಸೋಫಿಯಾ ಖುರೇಷಿ ತಂದೆಯ ಭಾವುಕ ನುಡಿಯಿದು
ಪಾಕಿಸ್ತಾನ ನಾಶವಾಗಬೇಕು; ಕರ್ನಲ್ ಸೋಫಿಯಾ ಖುರೇಷಿ ತಂದೆಯ ಭಾವುಕ ನುಡಿಯಿದು
ನಮ್ಮ ಸರ್ಕಾರ ಮತ್ತು ಪಕ್ಷ ಕೇಂದ್ರ ಸರ್ಕಾರದೊಂದಿಗಿವೆ: ಶಿವಕುಮಾರ್
ನಮ್ಮ ಸರ್ಕಾರ ಮತ್ತು ಪಕ್ಷ ಕೇಂದ್ರ ಸರ್ಕಾರದೊಂದಿಗಿವೆ: ಶಿವಕುಮಾರ್
ನಮ್ಮ ಮುಗ್ಧರನ್ನು ಕೊಂದವರನ್ನು ಮಾತ್ರ ಕೊಂದಿದ್ದೇವೆ; ರಾಜನಾಥ್ ಸಿಂಗ್
ನಮ್ಮ ಮುಗ್ಧರನ್ನು ಕೊಂದವರನ್ನು ಮಾತ್ರ ಕೊಂದಿದ್ದೇವೆ; ರಾಜನಾಥ್ ಸಿಂಗ್