AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅನಿಮಲ್​’ ಸಿನಿಮಾ ವೈಲೆಂಟ್ ಆಗಿದೆ ಎಂಬ ಆರೋಪಕ್ಕೆ ಆರ್​ಜಿವಿ ಕೊಟ್ರು ತಿರುಗೇಟು

Ranbir Kapoor: ‘ಅನಿಮಲ್’ ಸಿನಿಮಾದುದ್ದಕ್ಕೂ ರಣಬಿರ್ ಕಪೂರ್ ಅವರ ಪಾತ್ರ ಹೈಲೈಟ್ ಆಗಿದೆ. ಆರ್​ಜಿವಿ ಅವರಿಗೆ ಈ ಪಾತ್ರ ಸಾಕಷ್ಟು ಇಷ್ಟ ಆಗಿದೆ. ಅವರು ರಣಬೀರ್ ಕಪೂರ್ ಅವರನ್ನು ಹಾಡಿ ಹೊಗಳಿದ್ದಾರೆ.

‘ಅನಿಮಲ್​’ ಸಿನಿಮಾ ವೈಲೆಂಟ್ ಆಗಿದೆ ಎಂಬ ಆರೋಪಕ್ಕೆ ಆರ್​ಜಿವಿ ಕೊಟ್ರು ತಿರುಗೇಟು
ರಣಬೀರ್-ಆರ್​ಜಿವಿ
ರಾಜೇಶ್ ದುಗ್ಗುಮನೆ
|

Updated on: Dec 08, 2023 | 7:09 AM

Share

ರಣಬೀರ್ ಕಪೂರ್ (Ranbir Kapoor) ನಟನೆಯ ‘ಅನಿಮಲ್’ ಸಿನಿಮಾ ಸೂಪರ್ ಹಿಟ್ ಆಗಿದೆ. ಈ ಚಿತ್ರ ಥಿಯೇಟರ್​ಗಳಲ್ಲಿ ಅಬ್ಬರಿಸುತ್ತಿದೆ. ಭಾರತದ ಬಾಕ್ಸ್ ಆಫೀಸ್​ನಲ್ಲಿ ಈ ಚಿತ್ರ 300 ಕೋಟಿ ರೂಪಾಯಿಗೂ ಅಧಿಕ ಗಳಿಕೆ ಮಾಡಿದೆ. ಈ ಸಿನಿಮಾನ ಕೆಲವರು ಟ್ರೋಲ್ ಮಾಡುತ್ತಿದ್ದಾರೆ. ಈ ಸಿನಿಮಾದಲ್ಲಿ ಹೆಚ್ಚು ವೈಲೆನ್ಸ್ ತೋರಿಸಲಾಗಿದೆ ಎಂದು ಕೆಲವರು ಆರೋಪಿಸುತ್ತಿದ್ದಾರೆ. ‘ಈ ರೀತಿಯ ಆರೋಪ ಸಖತ್ ಫನ್ನಿ ಆಗಿ ಕಾಣಿಸುತ್ತಿದೆ’ ಎಂದಿದ್ದಾರೆ ತೆಲುಗು ನಿರ್ದೇಶಕ ರಾಮ್​ ಗೋಪಾಲ್ ವರ್ಮಾ. ಅವರು ಚಿತ್ರವನ್ನು ಹಾಡಿಹೊಗಳಿದ್ದಾರೆ.

‘ವೈಲೆಂಟ್ ಸಿನಿಮಾದ ನೇಚರ್ ಅದು. ಸಿನಿಮಾದಲ್ಲಿ ವೈಲೆನ್ಸ್ ಹೆಚ್ಚಿದೆ ಎಂದು ನಿರ್ದೇಶಕರು ಮೊದಲಿನಿಂದಲೂ ಎಚ್ಚರಿಸುತ್ತಲೇ ಬರುತ್ತಿದ್ದಾರೆ. ಟ್ರೇಲರ್​ನಲ್ಲಿ ಹಾಗೂ ಸಂದರ್ಶನಗಳಲ್ಲಿ ಮೊದಲೇ ಈ ಬಗ್ಗೆ ಹೇಳಲಾಗಿದೆ. ಆದಾಗ್ಯೂ ಇದನ್ನು ವೈಲೆಂಟ್ ಸಿನಿಮಾ ಎಂದು ಕರೆಯುವುದು ನನಗೆ ಫನ್ನಿ ಎನಿಸುತ್ತದೆ. ಶಾಕ್​ಗೆ ಒಳಗಾಗುವುದು ಕೂಡ ಒಂದು ಭಾವನೆ. ಈ ಭಾವನೆಯನ್ನು ಕೆರಳಿಸೋದು ಈ ಸಿನಿಮಾದ ಉದ್ದೇಶ’ ಎಂದು ರಾಮ್ ಗೋಪಾಲ್ ವರ್ಮಾ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ.

‘ಸಿನಿಮಾದಲ್ಲಿ ಅನೇಕ ಬಾರಿ ಆಶ್ಚರ್ಯವಾಗುವ ಘಟನೆ ನಡೆದಿತ್ತು. ಆದರೆ ಇದು ಕೆಲವರಿಗೆ ಅಹಿತಕರ ಆಶ್ಚರ್ಯವನ್ನು ಉಂಟುಮಾಡಿರಬಹುದು. ಹಠಾತ್ ಆಘಾತದ ದೃಶ್ಯ ಬಂದಾಗ ಅದು ಅವರನ್ನು ದಿಗ್ಭ್ರಮೆಗೊಳಿಸುತ್ತದೆ’ ಎಂದಿದ್ದಾರೆ ರಾಮ್ ಗೋಪಾಲ್ ವರ್ಮಾ.

‘ಅನಿಮಲ್’ ಸಿನಿಮಾದುದ್ದಕ್ಕೂ ರಣಬಿರ್ ಕಪೂರ್ ಅವರ ಪಾತ್ರ ಹೈಲೈಟ್ ಆಗಿದೆ. ಆರ್​ಜಿವಿ ಅವರಿಗೆ ಈ ಪಾತ್ರ ಸಾಕಷ್ಟು ಇಷ್ಟ ಆಗಿದೆ. ಅವರು ರಣಬೀರ್ ಕಪೂರ್ ಅವರನ್ನು ಹಾಡಿ ಹೊಗಳಿದ್ದಾರೆ. ನಿರ್ದೇಶಕರ ಶ್ರಮವನ್ನು ಕೂಡ ಮೆಚ್ಚಿದ್ದಾರೆ. ಈ ಚಿತ್ರದಲ್ಲಿ ತೃಪ್ತಿ ದಿಮ್ರಿ ನಟಿಸಿದ್ದಾರೆ. ಅವರು ಸಖತ್ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ. ಅವರ ಪಾತ್ರವೂ ಆರ್​ಜಿವಿ ಅವರ ಗಮನ ಸೆಳೆದಿದೆ.

ಇದನ್ನೂ ಓದಿ: ‘ಅನಿಮಲ್’ ಸಿನಿಮಾದ ವಾರ್ ಮಷಿನ್ ಡಿಸೈನ್ ಮಾಡಿದ ಕನ್ನಡಿಗ ಇವರೆ

‘ಅನಿಮಲ್’ ಸಿನಿಮಾ ಹಿಂದಿ ಮಾತ್ರವಲ್ಲದೆ ಕನ್ನಡ, ತೆಲುಗು ಮೊದಲಾದ ಭಾಷೆಗಳಲ್ಲಿ ರಿಲೀಸ್ ಆಗಿ ಮೆಚ್ಚುಗೆ ಪಡೆದಿದೆ. ಈ ಚಿತ್ರ ಭಾರತದ ಬಾಕ್ಸ್ ಆಫೀಸ್​ನಲ್ಲಿ 300 ಕೋಟಿಗೂ ಅಧಿಕ ಗಳಿಕೆ ಮಾಡಿದೆ. ಎರಡನೇ ವೀಕೆಂಡ್​ನಲ್ಲೂ ಸಿನಿಮಾ ಒಳ್ಳೆಯ ಕಲೆಕ್ಷನ್ ಮಾಡುವ ನಿರೀಕ್ಷೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ