AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೀಪಿಕಾ, ಕತ್ರಿನಾ ಮಾತ್ರವಲ್ಲ, ಅನುಷ್ಕಾ ಶೆಟ್ಟಿ ಮೇಲೂ ಕಣ್ಣಿಟ್ಟಿದ್ದ ರಣಬೀರ್; ಬಹಿರಂಗವಾಗಿ ಹೇಳಿಕೊಂಡಿದ್ದ ನಟ

Anushka Shetty: ಬಾಹುಬಲಿ ಸಿನಿಮಾ ಬಳಿಕ ಅನುಷ್ಕಾ ಶೆಟ್ಟಿ ಖ್ಯಾತಿ ವಿಶ್ವಾದ್ಯಂತ ಹಬ್ಬಿತು. ಬಾಲಿವುಡ್​ ಮಂದಿ ಕೂಡ ಆ ಚಿತ್ರವನ್ನು ಮುಗಿಬಿದ್ದು ನೋಡಿದ್ದರು. ಅದರಲ್ಲಿ ದೇವಸೇನಾ ಪಾತ್ರ ಮಾಡಿದ್ದ ಅನುಷ್ಕಾ ಅವರನ್ನು ಕಂಡು ರಣಬೀರ್​ ಕಪೂರ್​ ಫಿದಾ ಆಗಿದ್ದರು.

ದೀಪಿಕಾ, ಕತ್ರಿನಾ ಮಾತ್ರವಲ್ಲ, ಅನುಷ್ಕಾ ಶೆಟ್ಟಿ ಮೇಲೂ ಕಣ್ಣಿಟ್ಟಿದ್ದ ರಣಬೀರ್; ಬಹಿರಂಗವಾಗಿ ಹೇಳಿಕೊಂಡಿದ್ದ ನಟ
ರಣಬೀರ್​ ಕಪೂರ್​ - ಅನುಷ್ಕಾ ಶೆಟ್ಟಿ
ಮದನ್​ ಕುಮಾರ್​
|

Updated on: May 17, 2021 | 9:28 AM

Share

ಸಿನಿಮಾ ಮಾತ್ರವಲ್ಲದೆ, ವೈಯಕ್ತಿಕ ಜೀವನದ ಕಾರಣಕ್ಕಾಗಿ ನಟ ರಣಬೀರ್​ ಕಪೂರ್​ ಆಗಾಗ ಸುದ್ದಿ ಆಗುತ್ತಲೇ ಇರುತ್ತಾರೆ. ಆದರಲ್ಲೂ ಅವರ ಲವ್ ​ಲೈಫ್​ ಬಗ್ಗೆ ಸದಾ ಚರ್ಚೆ ಆಗುತ್ತಲೇ ಇರುತ್ತದೆ. ಮೊದಲು ದೀಪಿಕಾ ಪಡುಕೋಣೆ, ನಂತರ ಕತ್ರಿನಾ ಕೈಫ್​ ಜೊತೆ ರಣಬೀರ್​ ಪ್ರೀತಿಯಲ್ಲಿ ಮುಳುಗಿದ್ದರು. ಆದರೆ ಇಬ್ಬರ ಜೊತೆಗೂ ಅವರ ಸಂಬಂಧ ಮುಂದುವರಿಯಲಿಲ್ಲ. ಈಗ ಅವರು ಆಲಿಯಾ ಭಟ್​ ಜೊತೆ ಮದುವೆಯಾಗಲು ತಯಾರಿ ನಡೆಸುತ್ತಿದ್ದಾರೆ. ಈ ನಡುವೆ ಅವರು ದಕ್ಷಿಣ ಭಾರತದ ಸ್ಟಾರ್​ ನಟಿ ಅನುಷ್ಕಾ ಶೆಟ್ಟಿ ಮೇಲೂ ಕಣ್ಣಿಟ್ಟಿದ್ದರು ಎಂಬುದು ಅಚ್ಚರಿಯ ವಿಚಾರ.

ಬಾಹುಬಲಿ ಸಿನಿಮಾ ಬಳಿಕ ಅನುಷ್ಕಾ ಶೆಟ್ಟಿ ಖ್ಯಾತಿ ವಿಶ್ವಾದ್ಯಂತ ಹಬ್ಬಿತು. ಬಾಲಿವುಡ್​ ಮಂದಿ ಕೂಡ ಆ ಚಿತ್ರವನ್ನು ಮುಗಿಬಿದ್ದು ನೋಡಿದ್ದರು. ಅದರಲ್ಲಿ ದೇವಸೇನಾ ಪಾತ್ರ ಮಾಡಿದ್ದ ಅನುಷ್ಕಾ ಅವರನ್ನು ಕಂಡು ರಣಬೀರ್​ ಕಪೂರ್​ ಫಿದಾ ಆಗಿದ್ದರು. ಆ ಬಗ್ಗೆ ಅವರು 2017ರ ಸೈಮಾ ಅವಾರ್ಡ್ಸ್​ ಕಾರ್ಯಕ್ರಮದಲ್ಲಿ ಹೇಳಿಕೊಂಡಿದ್ದರು. ಕತ್ರಿನಾ ಕೈಫ್​ ಜೊತೆಗೆ ರಣಬೀರ್​ ಕಪೂರ್​ ರೆಡ್​ ಕಾರ್ಪೆಟ್​ ಮೇಲೆ ಹೆಜ್ಜೆ ಹಾಕುತ್ತಿದ್ದಾಗ ಅವರು ಈ ವಿಚಾರದ ಬಗ್ಗೆ ಬಾಯಿ ಬಿಟ್ಟಿದ್ದರು.

ದಕ್ಷಿಣ ಭಾರತದ ಯಾವ ನಟಿಯ ಜೊತೆಗೆ ನಟಿಸಲು ನಿಮಗೆ ಆಸೆ ಇದೆ ಎಂದು ಕೇಳಿದ ಪ್ರಶ್ನೆಗೆ ರಣಬೀರ್​ ಅವರು ಅನುಷ್ಕಾ ಶೆಟ್ಟಿ ಹೆಸರು ಹೇಳಿದರು. ‘ಇಲ್ಲಿನ ಅನೇಕ ನಟಿಯರ ಜೊತೆ ಕೆಲಸ ಮಾಡುಬೇಕು ಎಂಬುದು ನನ್ನ ಆಸೆ. ಆದರೆ ಬಾಹುಬಲಿ ಸಿನಿಮಾ ಬಂದ ಬಳಿಕ ನನಗೆ ಅನುಷ್ಕಾ ಶೆಟ್ಟಿ ಮೇಲೆ ಮಿನಿ ಕ್ರಶ್​ ಆಗಿದೆ. ಅವರ ಜೊತೆ ನಟಿಸಲು ನಾನು ಖಂಡಿತಾ ಇಷ್ಟಪಡುತ್ತೇನೆ’ ಎಂದು ರಣಬೀರ್​ ಹೇಳಿದ್ದರು. ಆದರೆ ಈವರೆಗೂ ಅವರ ಆಸೆ ಈಡೇರಿಲ್ಲ. ಪಕ್ಕದಲ್ಲೇ ಇದ್ದ ಕತ್ರಿನಾ ಕೈಫ್​ ಅವರು, ‘ನಾನು ಪ್ರಭಾಸ್​ ಜೊತೆ ನಟಿಸಬೇಕು’ ಎಂದು ಹೇಳಿದ್ದರು.

ಸದ್ಯಕ್ಕೆ ಅನುಷ್ಕಾ ಶೆಟ್ಟಿ ಸಿನಿಮಾ ಕೆಲಸಗಳಿಗೆ ಬ್ರೇಕ್​ ಹಾಕಿದಂತಿದೆ. ಈ ನಡುವೆ ಅವರ ಮದುವೆ ಸುದ್ದಿಗಳೂ ಜೋರಾಗಿ ಕೇಳಿಬರುತ್ತಿವೆ. ಆದರೆ ಅದ್ಯಾವುದಕ್ಕೂ ಅವರು ಪ್ರತಿಕ್ರಿಯೆ ನೀಡಿಲ್ಲ. ಸದ್ಯದಲ್ಲೇ ಅವರು ದಾಂಪತ್ಯ ಜೀವಕ್ಕೆ ಕಾಲಿಟ್ಟರೂ ಅಚ್ಚರಿ ಏನಿಲ್ಲ.

ಇದನ್ನೂ ಓದಿ:

Anushka Shetty: ನಟಿ ಅನುಷ್ಕಾ ಶೆಟ್ಟಿ ಹೀಗಾಗಿದ್ದೇಕೆ? ಫೋಟೋ ನೋಡಿ ಫ್ಯಾನ್ಸ್​ ಶಾಕ್​

Anushka Shetty Wedding: ಅನುಷ್ಕಾ ಶೆಟ್ಟಿಗೆ ಕಂಕಣ ಭಾಗ್ಯ? ಮದುವೆ ಆಗ್ತಿರೋ ಹುಡುಗ ಯಾರು?

Follow Us
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!