AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೀಪಿಕಾ, ಕತ್ರಿನಾ ಮಾತ್ರವಲ್ಲ, ಅನುಷ್ಕಾ ಶೆಟ್ಟಿ ಮೇಲೂ ಕಣ್ಣಿಟ್ಟಿದ್ದ ರಣಬೀರ್; ಬಹಿರಂಗವಾಗಿ ಹೇಳಿಕೊಂಡಿದ್ದ ನಟ

Anushka Shetty: ಬಾಹುಬಲಿ ಸಿನಿಮಾ ಬಳಿಕ ಅನುಷ್ಕಾ ಶೆಟ್ಟಿ ಖ್ಯಾತಿ ವಿಶ್ವಾದ್ಯಂತ ಹಬ್ಬಿತು. ಬಾಲಿವುಡ್​ ಮಂದಿ ಕೂಡ ಆ ಚಿತ್ರವನ್ನು ಮುಗಿಬಿದ್ದು ನೋಡಿದ್ದರು. ಅದರಲ್ಲಿ ದೇವಸೇನಾ ಪಾತ್ರ ಮಾಡಿದ್ದ ಅನುಷ್ಕಾ ಅವರನ್ನು ಕಂಡು ರಣಬೀರ್​ ಕಪೂರ್​ ಫಿದಾ ಆಗಿದ್ದರು.

ದೀಪಿಕಾ, ಕತ್ರಿನಾ ಮಾತ್ರವಲ್ಲ, ಅನುಷ್ಕಾ ಶೆಟ್ಟಿ ಮೇಲೂ ಕಣ್ಣಿಟ್ಟಿದ್ದ ರಣಬೀರ್; ಬಹಿರಂಗವಾಗಿ ಹೇಳಿಕೊಂಡಿದ್ದ ನಟ
ರಣಬೀರ್​ ಕಪೂರ್​ - ಅನುಷ್ಕಾ ಶೆಟ್ಟಿ
Follow us
ಮದನ್​ ಕುಮಾರ್​
|

Updated on: May 17, 2021 | 9:28 AM

ಸಿನಿಮಾ ಮಾತ್ರವಲ್ಲದೆ, ವೈಯಕ್ತಿಕ ಜೀವನದ ಕಾರಣಕ್ಕಾಗಿ ನಟ ರಣಬೀರ್​ ಕಪೂರ್​ ಆಗಾಗ ಸುದ್ದಿ ಆಗುತ್ತಲೇ ಇರುತ್ತಾರೆ. ಆದರಲ್ಲೂ ಅವರ ಲವ್ ​ಲೈಫ್​ ಬಗ್ಗೆ ಸದಾ ಚರ್ಚೆ ಆಗುತ್ತಲೇ ಇರುತ್ತದೆ. ಮೊದಲು ದೀಪಿಕಾ ಪಡುಕೋಣೆ, ನಂತರ ಕತ್ರಿನಾ ಕೈಫ್​ ಜೊತೆ ರಣಬೀರ್​ ಪ್ರೀತಿಯಲ್ಲಿ ಮುಳುಗಿದ್ದರು. ಆದರೆ ಇಬ್ಬರ ಜೊತೆಗೂ ಅವರ ಸಂಬಂಧ ಮುಂದುವರಿಯಲಿಲ್ಲ. ಈಗ ಅವರು ಆಲಿಯಾ ಭಟ್​ ಜೊತೆ ಮದುವೆಯಾಗಲು ತಯಾರಿ ನಡೆಸುತ್ತಿದ್ದಾರೆ. ಈ ನಡುವೆ ಅವರು ದಕ್ಷಿಣ ಭಾರತದ ಸ್ಟಾರ್​ ನಟಿ ಅನುಷ್ಕಾ ಶೆಟ್ಟಿ ಮೇಲೂ ಕಣ್ಣಿಟ್ಟಿದ್ದರು ಎಂಬುದು ಅಚ್ಚರಿಯ ವಿಚಾರ.

ಬಾಹುಬಲಿ ಸಿನಿಮಾ ಬಳಿಕ ಅನುಷ್ಕಾ ಶೆಟ್ಟಿ ಖ್ಯಾತಿ ವಿಶ್ವಾದ್ಯಂತ ಹಬ್ಬಿತು. ಬಾಲಿವುಡ್​ ಮಂದಿ ಕೂಡ ಆ ಚಿತ್ರವನ್ನು ಮುಗಿಬಿದ್ದು ನೋಡಿದ್ದರು. ಅದರಲ್ಲಿ ದೇವಸೇನಾ ಪಾತ್ರ ಮಾಡಿದ್ದ ಅನುಷ್ಕಾ ಅವರನ್ನು ಕಂಡು ರಣಬೀರ್​ ಕಪೂರ್​ ಫಿದಾ ಆಗಿದ್ದರು. ಆ ಬಗ್ಗೆ ಅವರು 2017ರ ಸೈಮಾ ಅವಾರ್ಡ್ಸ್​ ಕಾರ್ಯಕ್ರಮದಲ್ಲಿ ಹೇಳಿಕೊಂಡಿದ್ದರು. ಕತ್ರಿನಾ ಕೈಫ್​ ಜೊತೆಗೆ ರಣಬೀರ್​ ಕಪೂರ್​ ರೆಡ್​ ಕಾರ್ಪೆಟ್​ ಮೇಲೆ ಹೆಜ್ಜೆ ಹಾಕುತ್ತಿದ್ದಾಗ ಅವರು ಈ ವಿಚಾರದ ಬಗ್ಗೆ ಬಾಯಿ ಬಿಟ್ಟಿದ್ದರು.

ದಕ್ಷಿಣ ಭಾರತದ ಯಾವ ನಟಿಯ ಜೊತೆಗೆ ನಟಿಸಲು ನಿಮಗೆ ಆಸೆ ಇದೆ ಎಂದು ಕೇಳಿದ ಪ್ರಶ್ನೆಗೆ ರಣಬೀರ್​ ಅವರು ಅನುಷ್ಕಾ ಶೆಟ್ಟಿ ಹೆಸರು ಹೇಳಿದರು. ‘ಇಲ್ಲಿನ ಅನೇಕ ನಟಿಯರ ಜೊತೆ ಕೆಲಸ ಮಾಡುಬೇಕು ಎಂಬುದು ನನ್ನ ಆಸೆ. ಆದರೆ ಬಾಹುಬಲಿ ಸಿನಿಮಾ ಬಂದ ಬಳಿಕ ನನಗೆ ಅನುಷ್ಕಾ ಶೆಟ್ಟಿ ಮೇಲೆ ಮಿನಿ ಕ್ರಶ್​ ಆಗಿದೆ. ಅವರ ಜೊತೆ ನಟಿಸಲು ನಾನು ಖಂಡಿತಾ ಇಷ್ಟಪಡುತ್ತೇನೆ’ ಎಂದು ರಣಬೀರ್​ ಹೇಳಿದ್ದರು. ಆದರೆ ಈವರೆಗೂ ಅವರ ಆಸೆ ಈಡೇರಿಲ್ಲ. ಪಕ್ಕದಲ್ಲೇ ಇದ್ದ ಕತ್ರಿನಾ ಕೈಫ್​ ಅವರು, ‘ನಾನು ಪ್ರಭಾಸ್​ ಜೊತೆ ನಟಿಸಬೇಕು’ ಎಂದು ಹೇಳಿದ್ದರು.

ಸದ್ಯಕ್ಕೆ ಅನುಷ್ಕಾ ಶೆಟ್ಟಿ ಸಿನಿಮಾ ಕೆಲಸಗಳಿಗೆ ಬ್ರೇಕ್​ ಹಾಕಿದಂತಿದೆ. ಈ ನಡುವೆ ಅವರ ಮದುವೆ ಸುದ್ದಿಗಳೂ ಜೋರಾಗಿ ಕೇಳಿಬರುತ್ತಿವೆ. ಆದರೆ ಅದ್ಯಾವುದಕ್ಕೂ ಅವರು ಪ್ರತಿಕ್ರಿಯೆ ನೀಡಿಲ್ಲ. ಸದ್ಯದಲ್ಲೇ ಅವರು ದಾಂಪತ್ಯ ಜೀವಕ್ಕೆ ಕಾಲಿಟ್ಟರೂ ಅಚ್ಚರಿ ಏನಿಲ್ಲ.

ಇದನ್ನೂ ಓದಿ:

Anushka Shetty: ನಟಿ ಅನುಷ್ಕಾ ಶೆಟ್ಟಿ ಹೀಗಾಗಿದ್ದೇಕೆ? ಫೋಟೋ ನೋಡಿ ಫ್ಯಾನ್ಸ್​ ಶಾಕ್​

Anushka Shetty Wedding: ಅನುಷ್ಕಾ ಶೆಟ್ಟಿಗೆ ಕಂಕಣ ಭಾಗ್ಯ? ಮದುವೆ ಆಗ್ತಿರೋ ಹುಡುಗ ಯಾರು?

ವಾಂಖೆಡೆಯಲ್ಲಿ ರೋಹಿತ್ ಶರ್ಮಾ ಸ್ಟ್ಯಾಂಡ್ ಉದ್ಘಾಟನೆ
ವಾಂಖೆಡೆಯಲ್ಲಿ ರೋಹಿತ್ ಶರ್ಮಾ ಸ್ಟ್ಯಾಂಡ್ ಉದ್ಘಾಟನೆ
ಕಾರಿಗೆ ಅಪರೇಷನ್ ಸಿಂಧೂರ್ ಚಿತ್ರಗಳು, ಗಮನಸೆಳೆದ ಬಿಜೆಪಿ ನಾಯಕನ ಥಾರ್
ಕಾರಿಗೆ ಅಪರೇಷನ್ ಸಿಂಧೂರ್ ಚಿತ್ರಗಳು, ಗಮನಸೆಳೆದ ಬಿಜೆಪಿ ನಾಯಕನ ಥಾರ್
ಚಿಕ್ಕಬಳ್ಳಾಪುರ ಎಸ್​ಪಿ ಕಚೇರಿಗೆ ಬಂದು ಭದ್ರತೆ ಕೋರಿದ ಯುವಕ-ಯುವತಿ
ಚಿಕ್ಕಬಳ್ಳಾಪುರ ಎಸ್​ಪಿ ಕಚೇರಿಗೆ ಬಂದು ಭದ್ರತೆ ಕೋರಿದ ಯುವಕ-ಯುವತಿ
ಪ್ರಧಾನಿ ಮೋದಿ ಪಾದಗಳಿಗೆ ಸೇನೆ ನಮಸ್ಕರಿಸುತ್ತಿದೆ ಎಂದ ಜಗದೀಶ್ ದೇವ್ಡಾ
ಪ್ರಧಾನಿ ಮೋದಿ ಪಾದಗಳಿಗೆ ಸೇನೆ ನಮಸ್ಕರಿಸುತ್ತಿದೆ ಎಂದ ಜಗದೀಶ್ ದೇವ್ಡಾ
ಸಂಪುಟ ಪುನಾರಚನೆಯಾದಾಗ ನನಗೆ ಮಂತ್ರಿ ಸ್ಥಾನ ನೀಡಬಹುದು: ಶಿವಲಿಂಗೇಗೌಡ
ಸಂಪುಟ ಪುನಾರಚನೆಯಾದಾಗ ನನಗೆ ಮಂತ್ರಿ ಸ್ಥಾನ ನೀಡಬಹುದು: ಶಿವಲಿಂಗೇಗೌಡ
ಜಗದೀಶ್ ಶೆಟ್ಟರ್ ಸಿಎಂ ಆದ ನಂತರ ಮಂತ್ರಿಯಾಗಿ ಕೆಲಸ ಮಾಡಿದವರು: ಹೆಬ್ಬಾಳ್ಕರ್
ಜಗದೀಶ್ ಶೆಟ್ಟರ್ ಸಿಎಂ ಆದ ನಂತರ ಮಂತ್ರಿಯಾಗಿ ಕೆಲಸ ಮಾಡಿದವರು: ಹೆಬ್ಬಾಳ್ಕರ್
ಹಿಂದೆ ಬರುತ್ತಿದ್ದ ಸ್ಕೂಟಿ ಮೇಲೆ ಹತ್ತಿದ ಟ್ರಕ್; ಪವಾಡದಂತೆ ಪಾರಾದ ಮಹಿಳೆ
ಹಿಂದೆ ಬರುತ್ತಿದ್ದ ಸ್ಕೂಟಿ ಮೇಲೆ ಹತ್ತಿದ ಟ್ರಕ್; ಪವಾಡದಂತೆ ಪಾರಾದ ಮಹಿಳೆ
ಸಿಂಹರಾಶಿಗೆ ಗುರುಬಲ ಶುರು; ಅದೃಷ್ಟ ಕೂಡಿ ಬರಲಿದೆ!
ಸಿಂಹರಾಶಿಗೆ ಗುರುಬಲ ಶುರು; ಅದೃಷ್ಟ ಕೂಡಿ ಬರಲಿದೆ!
ಕಳೆದ ಚುನಾವಣೆಯಲ್ಲಿ ರೆಡ್ಡಿಗೆ ಸಹಾಯ ಮಾಡಿದ ಮಾತು ಸುಳ್ಳು: ಸಿದ್ದರಾಮಯ್ಯ
ಕಳೆದ ಚುನಾವಣೆಯಲ್ಲಿ ರೆಡ್ಡಿಗೆ ಸಹಾಯ ಮಾಡಿದ ಮಾತು ಸುಳ್ಳು: ಸಿದ್ದರಾಮಯ್ಯ
12ನೇಮನೆಯಲ್ಲಿ ಗುರು ಸಂಚಾರ;ಕಟಕ ರಾಶಿಯವರು ತಿಳಿದುಕೊಳ್ಳಲೇಬೇಕಾದ ವಿಷಯಗಳಿವು
12ನೇಮನೆಯಲ್ಲಿ ಗುರು ಸಂಚಾರ;ಕಟಕ ರಾಶಿಯವರು ತಿಳಿದುಕೊಳ್ಳಲೇಬೇಕಾದ ವಿಷಯಗಳಿವು