ದೀಪಿಕಾ, ಕತ್ರಿನಾ ಮಾತ್ರವಲ್ಲ, ಅನುಷ್ಕಾ ಶೆಟ್ಟಿ ಮೇಲೂ ಕಣ್ಣಿಟ್ಟಿದ್ದ ರಣಬೀರ್; ಬಹಿರಂಗವಾಗಿ ಹೇಳಿಕೊಂಡಿದ್ದ ನಟ

Anushka Shetty: ಬಾಹುಬಲಿ ಸಿನಿಮಾ ಬಳಿಕ ಅನುಷ್ಕಾ ಶೆಟ್ಟಿ ಖ್ಯಾತಿ ವಿಶ್ವಾದ್ಯಂತ ಹಬ್ಬಿತು. ಬಾಲಿವುಡ್​ ಮಂದಿ ಕೂಡ ಆ ಚಿತ್ರವನ್ನು ಮುಗಿಬಿದ್ದು ನೋಡಿದ್ದರು. ಅದರಲ್ಲಿ ದೇವಸೇನಾ ಪಾತ್ರ ಮಾಡಿದ್ದ ಅನುಷ್ಕಾ ಅವರನ್ನು ಕಂಡು ರಣಬೀರ್​ ಕಪೂರ್​ ಫಿದಾ ಆಗಿದ್ದರು.

ದೀಪಿಕಾ, ಕತ್ರಿನಾ ಮಾತ್ರವಲ್ಲ, ಅನುಷ್ಕಾ ಶೆಟ್ಟಿ ಮೇಲೂ ಕಣ್ಣಿಟ್ಟಿದ್ದ ರಣಬೀರ್; ಬಹಿರಂಗವಾಗಿ ಹೇಳಿಕೊಂಡಿದ್ದ ನಟ
ರಣಬೀರ್​ ಕಪೂರ್​ - ಅನುಷ್ಕಾ ಶೆಟ್ಟಿ

Updated on: May 17, 2021 | 9:28 AM

ಸಿನಿಮಾ ಮಾತ್ರವಲ್ಲದೆ, ವೈಯಕ್ತಿಕ ಜೀವನದ ಕಾರಣಕ್ಕಾಗಿ ನಟ ರಣಬೀರ್​ ಕಪೂರ್​ ಆಗಾಗ ಸುದ್ದಿ ಆಗುತ್ತಲೇ ಇರುತ್ತಾರೆ. ಆದರಲ್ಲೂ ಅವರ ಲವ್ ​ಲೈಫ್​ ಬಗ್ಗೆ ಸದಾ ಚರ್ಚೆ ಆಗುತ್ತಲೇ ಇರುತ್ತದೆ. ಮೊದಲು ದೀಪಿಕಾ ಪಡುಕೋಣೆ, ನಂತರ ಕತ್ರಿನಾ ಕೈಫ್​ ಜೊತೆ ರಣಬೀರ್​ ಪ್ರೀತಿಯಲ್ಲಿ ಮುಳುಗಿದ್ದರು. ಆದರೆ ಇಬ್ಬರ ಜೊತೆಗೂ ಅವರ ಸಂಬಂಧ ಮುಂದುವರಿಯಲಿಲ್ಲ. ಈಗ ಅವರು ಆಲಿಯಾ ಭಟ್​ ಜೊತೆ ಮದುವೆಯಾಗಲು ತಯಾರಿ ನಡೆಸುತ್ತಿದ್ದಾರೆ. ಈ ನಡುವೆ ಅವರು ದಕ್ಷಿಣ ಭಾರತದ ಸ್ಟಾರ್​ ನಟಿ ಅನುಷ್ಕಾ ಶೆಟ್ಟಿ ಮೇಲೂ ಕಣ್ಣಿಟ್ಟಿದ್ದರು ಎಂಬುದು ಅಚ್ಚರಿಯ ವಿಚಾರ.

ಬಾಹುಬಲಿ ಸಿನಿಮಾ ಬಳಿಕ ಅನುಷ್ಕಾ ಶೆಟ್ಟಿ ಖ್ಯಾತಿ ವಿಶ್ವಾದ್ಯಂತ ಹಬ್ಬಿತು. ಬಾಲಿವುಡ್​ ಮಂದಿ ಕೂಡ ಆ ಚಿತ್ರವನ್ನು ಮುಗಿಬಿದ್ದು ನೋಡಿದ್ದರು. ಅದರಲ್ಲಿ ದೇವಸೇನಾ ಪಾತ್ರ ಮಾಡಿದ್ದ ಅನುಷ್ಕಾ ಅವರನ್ನು ಕಂಡು ರಣಬೀರ್​ ಕಪೂರ್​ ಫಿದಾ ಆಗಿದ್ದರು. ಆ ಬಗ್ಗೆ ಅವರು 2017ರ ಸೈಮಾ ಅವಾರ್ಡ್ಸ್​ ಕಾರ್ಯಕ್ರಮದಲ್ಲಿ ಹೇಳಿಕೊಂಡಿದ್ದರು. ಕತ್ರಿನಾ ಕೈಫ್​ ಜೊತೆಗೆ ರಣಬೀರ್​ ಕಪೂರ್​ ರೆಡ್​ ಕಾರ್ಪೆಟ್​ ಮೇಲೆ ಹೆಜ್ಜೆ ಹಾಕುತ್ತಿದ್ದಾಗ ಅವರು ಈ ವಿಚಾರದ ಬಗ್ಗೆ ಬಾಯಿ ಬಿಟ್ಟಿದ್ದರು.

ದಕ್ಷಿಣ ಭಾರತದ ಯಾವ ನಟಿಯ ಜೊತೆಗೆ ನಟಿಸಲು ನಿಮಗೆ ಆಸೆ ಇದೆ ಎಂದು ಕೇಳಿದ ಪ್ರಶ್ನೆಗೆ ರಣಬೀರ್​ ಅವರು ಅನುಷ್ಕಾ ಶೆಟ್ಟಿ ಹೆಸರು ಹೇಳಿದರು. ‘ಇಲ್ಲಿನ ಅನೇಕ ನಟಿಯರ ಜೊತೆ ಕೆಲಸ ಮಾಡುಬೇಕು ಎಂಬುದು ನನ್ನ ಆಸೆ. ಆದರೆ ಬಾಹುಬಲಿ ಸಿನಿಮಾ ಬಂದ ಬಳಿಕ ನನಗೆ ಅನುಷ್ಕಾ ಶೆಟ್ಟಿ ಮೇಲೆ ಮಿನಿ ಕ್ರಶ್​ ಆಗಿದೆ. ಅವರ ಜೊತೆ ನಟಿಸಲು ನಾನು ಖಂಡಿತಾ ಇಷ್ಟಪಡುತ್ತೇನೆ’ ಎಂದು ರಣಬೀರ್​ ಹೇಳಿದ್ದರು. ಆದರೆ ಈವರೆಗೂ ಅವರ ಆಸೆ ಈಡೇರಿಲ್ಲ. ಪಕ್ಕದಲ್ಲೇ ಇದ್ದ ಕತ್ರಿನಾ ಕೈಫ್​ ಅವರು, ‘ನಾನು ಪ್ರಭಾಸ್​ ಜೊತೆ ನಟಿಸಬೇಕು’ ಎಂದು ಹೇಳಿದ್ದರು.

ಸದ್ಯಕ್ಕೆ ಅನುಷ್ಕಾ ಶೆಟ್ಟಿ ಸಿನಿಮಾ ಕೆಲಸಗಳಿಗೆ ಬ್ರೇಕ್​ ಹಾಕಿದಂತಿದೆ. ಈ ನಡುವೆ ಅವರ ಮದುವೆ ಸುದ್ದಿಗಳೂ ಜೋರಾಗಿ ಕೇಳಿಬರುತ್ತಿವೆ. ಆದರೆ ಅದ್ಯಾವುದಕ್ಕೂ ಅವರು ಪ್ರತಿಕ್ರಿಯೆ ನೀಡಿಲ್ಲ. ಸದ್ಯದಲ್ಲೇ ಅವರು ದಾಂಪತ್ಯ ಜೀವಕ್ಕೆ ಕಾಲಿಟ್ಟರೂ ಅಚ್ಚರಿ ಏನಿಲ್ಲ.

ಇದನ್ನೂ ಓದಿ:

Anushka Shetty: ನಟಿ ಅನುಷ್ಕಾ ಶೆಟ್ಟಿ ಹೀಗಾಗಿದ್ದೇಕೆ? ಫೋಟೋ ನೋಡಿ ಫ್ಯಾನ್ಸ್​ ಶಾಕ್​

Anushka Shetty Wedding: ಅನುಷ್ಕಾ ಶೆಟ್ಟಿಗೆ ಕಂಕಣ ಭಾಗ್ಯ? ಮದುವೆ ಆಗ್ತಿರೋ ಹುಡುಗ ಯಾರು?

Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Follow Us