AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬನ್ಸಾಲಿ ಹೊಸ ಚಿತ್ರಕ್ಕೆ ರಣಬೀರ್ ಕಪೂರ್ ಹೀರೋ; ಶೂಟಿಂಗ್​ಗೂ ಮೊದಲೇ ಷರತ್ತುಗಳ ಪಟ್ಟಿ ಇಟ್ಟ ನಟ

ಬನ್ಸಾಲಿ ಅವರು ರಣಬೀರ್ ಕಪೂರ್​ಗೆ ಈ ಮೊದಲು ‘ಬೈಜು ಬವ್ರಾ’ ಸಿನಿಮಾ ಆಫರ್​ನ ನೀಡಿದ್ದರು. ಆದರೆ, ಈ ಕಥೆ ಅವರಿಗೆ ಎಗ್ಸೈಟಿಂಗ್ ಅನಿಸಲಿಲ್ಲ. ಆ ಬಳಿಕ ‘ಲವ್ ಆ್ಯಂಡ್ ವಾರ್’ ಚಿತ್ರದ ಆಫರ್ ನೀಡಲಾಯಿತು. ಈ ಸಿನಿಮಾನ ರಣಬೀರ್ ಒಪ್ಪಿದ್ದಾರೆ.

ಬನ್ಸಾಲಿ ಹೊಸ ಚಿತ್ರಕ್ಕೆ ರಣಬೀರ್ ಕಪೂರ್ ಹೀರೋ; ಶೂಟಿಂಗ್​ಗೂ ಮೊದಲೇ ಷರತ್ತುಗಳ ಪಟ್ಟಿ ಇಟ್ಟ ನಟ
ರಣಬೀರ್-ಬನ್ಸಾಲಿ
 ಶ್ರೀಲಕ್ಷ್ಮೀ ಎಚ್
| Edited By: |

Updated on: Jan 31, 2024 | 7:58 AM

Share

ಸಂಜಯ್ ಲೀಲಾ ಬನ್ಸಾಲಿ ಸಿನಿಮಾದಲ್ಲಿ ಕೆಲಸ ಮಾಡೋ ಅವಕಾಶ ಎಲ್ಲರಿಗೂ ಸಿಗುವುದಿಲ್ಲ. ಈ ರೀತಿ ಅವಕಾಶ ಸಿಕ್ಕಾಗ ಹೀರೋಗಳು ಮುಂದೆ ಬಂದು ಖುಷಿಖುಷಿಯಿಂದ ಸಿನಿಮಾ ಮಾಡುತ್ತಾರೆ. ಈಗ ಸಂಜಯ್ ಲೀಲಾ ಬನ್ಸಾಲಿ ಹಾಗೂ ರಣಬೀರ್ ಕಪೂರ್ ಒಟ್ಟಾಗಿ ಸಿನಿಮಾ ಮಾಡುತ್ತಿದ್ದಾರೆ. ಈ ಚಿತ್ರಕ್ಕೆ ‘ಲವ್ ಆ್ಯಂಡ್ ವಾರ್’ (Love & War) ಎನ್ನುವ ಶೀರ್ಷಿಕೆ ಇಡಲಾಗಿದೆ. ಈ ಸಿನಿಮಾದ ಶೂಟಿಂಗ್ ಆರಂಭಕ್ಕೂ ಮೊದಲೇ ರಣಬೀರ್ ಕಪೂರ್ ಅವರು ಒಂದಷ್ಟು ಷರತ್ತುಗಳನ್ನು ಹಾಕಿದ್ದಾರೆ. ಈ ಷರತ್ತನ್ನು ಪೂರೈಸಲು ಬನ್ಸಾಲಿ ಸಮ್ಮತಿ ಕೊಟ್ಟಿದ್ದಾರೆ.

ಬನ್ಸಾಲಿ ಹಾಗೂ ರಣಬೀರ್ ಕಪೂರ್ ಈ ಮೊದಲು ‘ಸಾವರಿಯಾ’ ಸಿನಿಮಾದಲ್ಲಿ ಒಟ್ಟಾಗಿ ಕೆಲಸ ಮಾಡಿದ್ದರು. ಈ ಸಿನಿಮಾ ರಿಲೀಸ್ ಆಗಿದ್ದು 2007ರಲ್ಲಿ. ಇದಾದ ಹಲವು ವರ್ಷಗಳ ಬಳಿಕ ಇಬ್ಬರೂ ಮತ್ತೆ ಒಂದಾಗಿದ್ದಾರೆ. ‘ಸಾವರಿಯಾ’ ಮಾಡುವಾಗ ರಣಬೀರ್ ಕಪೂರ್ ಇನ್ನೂ ಯಂಗ್ ಆಗಿದ್ದರು. ಈಗ ಅವರು ಸೂಪರ್​ಸ್ಟಾರ್. ಇತ್ತೀಚೆಗೆ ರಿಲೀಸ್ ಆದ ‘ಅನಿಮಲ್’ ಸಿನಿಮಾದಿಂದ ಅವರು ದೊಡ್ಡ ಗೆಲುವು ಕಂಡಿದ್ದಾರೆ. ಹೀಗಾಗಿ ಬನ್ಸಾಲಿಗೆ ಕಂಡೀಷನ್ ಹಾಕಿದ್ದಾರೆ. ‘ಸಾವರಿಯಾ’ ಸಂದರ್ಭದಲ್ಲಿ ಆದ ಕೆಲವು ತಪ್ಪುಗಳು ಈಗ ಆಗದಂತೆ ನೋಡಿಕೊಳ್ಳಲು ಮುಂದಾಗಿದ್ದಾರೆ.

ರಣಬೀರ್ ಕಪೂರ್ ಅವರಿಗೆ ಈ ಮೊದಲು ‘ಬೈಜು ಬವ್ರಾ’ ಸಿನಿಮಾ ಆಫರ್​ನ ನೀಡಿದ್ದರು ಬನ್ಸಾಲಿ. ಆದರೆ, ಈ ಕಥೆ ಅವರಿಗೆ ಎಗ್ಸೈಟಿಂಗ್ ಅನಿಸಲಿಲ್ಲ. ಆ ಬಳಿಕ ‘ಲವ್ ಆ್ಯಂಡ್ ವಾರ್’ ಚಿತ್ರದ ಆಫರ್ ನೀಡಲಾಯಿತು. ಈ ಚಿತ್ರವನ್ನು ರಣಬೀರ್ ಒಪ್ಪಿದ್ದಾರೆ. ಈ ಸಿನಿಮಾದಲ್ಲಿ ಆಲಿಯಾ ಭಟ್ ಹಾಗೂ ವಿಕ್ಕಿ ಕೌಶಲ್ ಕೂಡ ನಟಿಸಲಿದ್ದಾರೆ.

ಸಂಜಯ್ ಲೀಲಾ ಬನ್ಸಾಲಿ ಸಿನಿಮಾ ಶೂಟಿಂಗ್ ಆರಂಭಿಸಿದರೆ ಅದು ಪೂರ್ಣಗೊಳ್ಳೋಕೆ ಸಾಕಷ್ಟು ಸಮಯ ಹಿಡಿಯುತ್ತದೆ. ಅವರು ಅಂದುಕೊಂಡ ದಿನಾಂಕದಂದು ಶೂಟಿಂಗ್ ಪೂರ್ಣಗೊಳಿಸಲ್ಲ. ಆದರೆ, ಈ ಬಾರಿ ಹಾಗಾಗಬಾರದು ಅನ್ನೋದು ರಣಬೀರ್ ಕಪೂರ್ ಷರತ್ತು. ಅವರು 270 ದಿನಗಳ ಕಾಲ್​ಶೀಟ್ ನೀಡಿದ್ದಾರೆ. ಈ ವರ್ಷ ನವೆಂಬರ್​ನಲ್ಲಿ ಸಿನಿಮಾ ಶೂಟಿಂಗ್ ಆರಂಭಿಸಿ, 2025ರ ಜುಲೈ​ನಲ್ಲಿ ಸಿನಿಮಾ ಪೂರ್ಣಗೊಳಿಸುವ ಸೂಚನೆ ನೀಡಿದ್ದಾರೆ. 2025ರ ಆಗಸ್ಟ್ ತಿಂಗಳಲ್ಲಿ ಬೇರೆ ಕಮಿಟ್​ಮೆಂಟ್ ಆರಂಭಿಸಲಿದ್ದಾರೆ.

ಇನ್ನು, ಶೂಟಿಂಗ್ ಸಮಯವನ್ನು ಸರಿಯಾಗಿ ಫಿಕ್ಸ್ ಮಾಡಲು ರಣಬೀರ್ ಕಪೂರ್ ಸೂಚಿಸಿದ್ದಾರೆ. ‘ಸಾವರಿಯಾ’ ಸಿನಿಮಾ ಶೂಟಿಂಗ್ ಸಂದರ್ಭದಲ್ಲಿ ಅವರು ಹೆಚ್ಚುವರಿಯಾಗಿ ಕೆಲಸ ಮಾಡಬೇಕಿತ್ತು. ಆದರೆ, ಈ ಬಾರಿ ಆ ರೀತಿ ಆಗದಂತೆ ನೋಡಿಕೊಳ್ಳಲು ಅವರು ಮುಂದಾಗಿದ್ದಾರೆ. ಇನ್ನು, ಸೆಟ್​ನಲ್ಲಿ ಶಿಸ್ತು ಇರುವಂತೆ ಅವರು ಸೂಚಿಸಿದ್ದಾರೆ. ಇದೆಲ್ಲಾ ಷರತ್ತಿಗೆ ಸಂಜಯ್ ಲೀಲಾ ಬನ್ಸಾಲಿ ಒಪ್ಪಿಗೆ ಸೂಚಿಸಿದ್ದಾರೆ.

ಇದನ್ನೂ ಓದಿ: 2024ನೇ ಸಾಲಿನ ಫಿಲ್ಮ್​ಫೇರ್ ಅವಾರ್ಡ್: ರಣಬೀರ್ ಅತ್ಯುತ್ತಮ ನಟ, ಆಲಿಯಾ ಅತ್ಯುತ್ತಮ ನಟಿ

ರಣಬೀರ್ ಕಪೂರ್ ಹಾಗೂ ಆಲಿಯಾ ಭಟ್ ‘ಬ್ರಹ್ಮಾಸ್ತ್ರ’ ಸಿನಿಮಾದಲ್ಲಿ ಒಟ್ಟಾಗಿ ನಟಿಸಿದ್ದರು. ಈಗ ಈ ಜೋಡಿ ಮತ್ತೆ ಹೊಸ ಚಿತ್ರಕ್ಕಾಗಿ ಒಂದಾಗಿದೆ. ಇವರಿಬ್ಬರನ್ನು ಮತ್ತೊಮ್ಮೆ ತೆರೆಮೇಲೆ ನೋಡಲು ಫ್ಯಾನ್ಸ್ ಕಾದಿದ್ದಾರೆ. ‘ಲವ್ ಆ್ಯಂಡ್ ವಾರ್’ ಸಿನಿಮಾ ನವೆಂಬರ್​ನಲ್ಲಿ ಆರಂಭ ಆಗಲಿದೆ. 2025ರ ಕೊನೆಯಲ್ಲಿ ಈ ಚಿತ್ರ ರಿಲೀಸ್ ಆಗೋ ಸಾಧ್ಯತೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
 ಶ್ರೀಲಕ್ಷ್ಮೀ ಎಚ್
ಶ್ರೀಲಕ್ಷ್ಮೀ ಎಚ್

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
ಮನೆಗೆ ಹಾವು ಬಂದ್ರೆ ಕೊಲ್ಲಬಾರದು ಯಾಕೆ?
ಮನೆಗೆ ಹಾವು ಬಂದ್ರೆ ಕೊಲ್ಲಬಾರದು ಯಾಕೆ?
ಇಂದು ಈ ರಾಶಿಯವರು ಕೆಲಸಗಳಲ್ಲಿ ಅವಸರ ಮಾಡಬೇಡಿ
ಇಂದು ಈ ರಾಶಿಯವರು ಕೆಲಸಗಳಲ್ಲಿ ಅವಸರ ಮಾಡಬೇಡಿ
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗೆ ಮರು ಅರ್ಜಿ: ಸಿಎಂ ಡಿಕೆಶಿ ಮಾಹಿತಿ
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗೆ ಮರು ಅರ್ಜಿ: ಸಿಎಂ ಡಿಕೆಶಿ ಮಾಹಿತಿ
ನಿರುದ್ಯೋಗಿಗಳಿಗೆ ಗುಡ್​ನ್ಯೂಸ್​​ ನೀಡಿದ ಸಿಎಂ ಡಿಕೆ ಶಿವಕುಮಾರ್​
ನಿರುದ್ಯೋಗಿಗಳಿಗೆ ಗುಡ್​ನ್ಯೂಸ್​​ ನೀಡಿದ ಸಿಎಂ ಡಿಕೆ ಶಿವಕುಮಾರ್​
ವೆನೆಜುವೆಲಾ ದರೋಡೆಕೋರನ ಮೇಲಿನ ವೈಮಾನಿಕ ದಾಳಿಯ ವಿಡಿಯೋ ಹಂಚಿಕೊಂಡ ಟ್ರಂಪ್
ವೆನೆಜುವೆಲಾ ದರೋಡೆಕೋರನ ಮೇಲಿನ ವೈಮಾನಿಕ ದಾಳಿಯ ವಿಡಿಯೋ ಹಂಚಿಕೊಂಡ ಟ್ರಂಪ್
ಬೆಳಗ್ಗೆ 10 ಗಂಟೆಗೆ ಕಚೇರಿಯಲ್ಲಿ ಹಾಜರಿರಬೇಕು: ಅಧಿಕಾರಿಗಳಿಗೆ ಸಿಎಂ ಸೂಚನೆ
ಬೆಳಗ್ಗೆ 10 ಗಂಟೆಗೆ ಕಚೇರಿಯಲ್ಲಿ ಹಾಜರಿರಬೇಕು: ಅಧಿಕಾರಿಗಳಿಗೆ ಸಿಎಂ ಸೂಚನೆ
ಮತ್ತೆ ವಿದೇಶಕ್ಕೆ ತೆರಳಿದ ಪ್ರಧಾನಿ ಮೋದಿ; ಫ್ರಾನ್ಸ್​, ಸ್ಲೋವಾಕಿಯಾಗೆ ಭೇಟಿ
ಮತ್ತೆ ವಿದೇಶಕ್ಕೆ ತೆರಳಿದ ಪ್ರಧಾನಿ ಮೋದಿ; ಫ್ರಾನ್ಸ್​, ಸ್ಲೋವಾಕಿಯಾಗೆ ಭೇಟಿ
ಮನಾಲಿಗೆ ಹೊರಟ ಪ್ರವಾಸಿಗರಿಂದ ಕುಲು-ಮಂಡಿ ಮಾರ್ಗದಲ್ಲಿ ಟ್ರಾಫಿಕ್ ಜಾಮ್
ಮನಾಲಿಗೆ ಹೊರಟ ಪ್ರವಾಸಿಗರಿಂದ ಕುಲು-ಮಂಡಿ ಮಾರ್ಗದಲ್ಲಿ ಟ್ರಾಫಿಕ್ ಜಾಮ್
ಪ್ರಥಮ ದರ್ಜೆ ನೌಕರನಿಗೆ ಚಪ್ಪಲಿ ಏಟು ಕೊಟ್ಟ ರೈತ! ಯಾಕೆ ಗೊತ್ತಾ?
ಪ್ರಥಮ ದರ್ಜೆ ನೌಕರನಿಗೆ ಚಪ್ಪಲಿ ಏಟು ಕೊಟ್ಟ ರೈತ! ಯಾಕೆ ಗೊತ್ತಾ?
ಬಿಡದಿ ಟೌನ್​ಶಿಪ್​ ಯೋಜನೆ ವಿರೋಧಿಸಿ ಜೂನ್ 22ರಂದು ಬೃಹತ್ ಪ್ರತಿಭಟನೆ!
ಬಿಡದಿ ಟೌನ್​ಶಿಪ್​ ಯೋಜನೆ ವಿರೋಧಿಸಿ ಜೂನ್ 22ರಂದು ಬೃಹತ್ ಪ್ರತಿಭಟನೆ!