AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ranbir Kapoor: ಆ ಮೂರು ಸಿನಿಮಾಗಳು ನನ್ನ ಮೇಲೆ ಬಹಳ ಪ್ರಭಾವ ಬೀರಿದವು: ರಣಬೀರ್ ಕಪೂರ್

ನಟನಾಗಿ, ಪ್ರೇಕ್ಷಕನಾಗಿ ತಮ್ಮ ಮೇಲೆ ಪರಿಣಾಮ ಬೀರಿದ ಇತ್ತೀಚಿನ ಮೂರು ಸಿನಿಮಾಗಳನ್ನು ಬಾಲಿವುಡ್ ನಟ ರಣಬೀರ್ ಕಪೂರ್ ಹೆಸರಿಸಿದ್ದಾರೆ.

Ranbir Kapoor: ಆ ಮೂರು ಸಿನಿಮಾಗಳು ನನ್ನ ಮೇಲೆ ಬಹಳ ಪ್ರಭಾವ ಬೀರಿದವು: ರಣಬೀರ್ ಕಪೂರ್
ರಣಬೀರ್ ಕಪೂರ್
Follow us
ಮಂಜುನಾಥ ಸಿ.
|

Updated on: Feb 23, 2023 | 5:29 PM

ಬ್ರಹ್ಮಾಸ್ತ್ರ (Brahmastra) ಸಿನಿಮಾದ ಗೆಲುವಿನಿಂದ ಥ್ರಿಲ್ ಆಗಿರುವ ಬಾಲಿವುಡ್ ನಟ ರಣಬೀರ್ ಕಪೂರ್ (Ranbir Kapoor), ತಮ್ಮ ಸಿನಿಮಾ ಆಯ್ಕೆಯ ವಿಧಾನಗಳನ್ನು ಬದಲಿಸಿಕೊಂಡಿರುವ ಬಗ್ಗೆ ಇತ್ತೀಚೆಗೆ ಮಾತನಾಡಿದ್ದರು. ಹಿಂದೆಲ್ಲ ರೊಮ್ಯಾಂಟಿಕ್, ಇಂಟೆಲಿಜೆಂಟ್, ನೈಜತೆ ಹತ್ತಿರವಿರುವಂಥಹಾ ಕತೆಗಳನ್ನು ಹೆಚ್ಚು ಆಯ್ದುಕೊಳ್ಳುತ್ತಿದ್ದ ರಣಬೀರ್ ಕಪೂರ್, ಇತ್ತೀಚೆಗೆ ಮಾಸ್ ಸಿನಿಮಾಗಳತ್ತ ಹೊರಳಿದ್ದಾರೆ.

ಸಿನಿಮಾ ಆಯ್ಕೆಯ ಬಗ್ಗೆ ಹಾಗೂ ಒಟ್ಟಾರೆ ಸಿನಿಮಾಗಳ ಬಗ್ಗೆ ರಣಬೀರ್ ಕಪೂರ್ ಅವರ ದೃಷ್ಟಿಕೋನ ಬದಲಾಗಲು ಇತ್ತೀಚೆಗೆ ಬಿಡುಗಡೆ ಆದ ಮೂರು ಸಿನಿಮಾಗಳು ಪ್ರಮುಖ ಕಾರಣವಂತೆ. ಈ ಬಗ್ಗೆ ಸ್ವತಃ ರಣಬೀರ್ ಕಪೂರ್ ಮಾತನಾಡಿದ್ದಾರೆ.

ತು ಜೂಟಿ ಮೇ ಮಕ್ಕಾರ್ ಹೆಸರಿನ ರೊಮ್ಯಾಂಟಿಕ್ ಕಾಮಿಡಿ ಸಿನಿಮಾದಲ್ಲಿ ನಟಿಸಿರುವ ರಣಬೀರ್ ಕಪೂರ್ ಸಿನಿಮಾದ ಪ್ರಚಾರದಲ್ಲಿ ತೊಡಗಿದ್ದು, ಇದೇ ಸಂದರ್ಭದಲ್ಲಿ ಸಿನಿಮಾದ ಬಗೆಗಿನ ತಮ್ಮ ದೃಷ್ಟಿಕೋನ ಬದಲಿಸಿದ ಮೂರು ಸಿನಿಮಾಗಳ ಬಗ್ಗೆ ಹೇಳಿದ್ದಾರೆ.

ಇತ್ತೀಚೆಗಿನ ಮೂರು ಸಿನಿಮಾಗಳು, ಪ್ರೇಕ್ಷಕನಾಗಿ ಹಾಗೂ ನಟನಾಗಿ ನನ್ನ ಮೇಲೆ ಪರಿಣಾಮ ಬೀರಿದವು. ಅವುಗಳೆಂದರೆ ಅಲ್ಲು ಅರ್ಜುನ್ ನಟನೆಯ ಪುಷ್ಪ, ಆಲಿಯಾ ಭಟ್ ನಟನೆಯ ಗಂಗೂಬಾಯಿ ಕಾಠಿಯಾವಾಡಿ ಹಾಗೂ ಆರ್​ಆರ್​ಆರ್ ಎಂದಿದ್ದಾರೆ ರಣಬೀರ್. ಈ ರೀತಿಯ ಸಿನಿಮಾಗಳು, ಪಾತ್ರಗಳು ನನಗೆ ಸಿಕ್ಕರೆ ಎಷ್ಟು ಚೆನ್ನಾಗಿರುತ್ತದೆ ಎಂದುಕೊಂಡಿದ್ದರಂತೆ ರಣಬೀರ್.

ಇದೀಗ ತು ಜೂಟಿ ಮೇ ಮಕ್ಕಾರ್ ಸಿನಿಮಾದಲ್ಲಿ ನಟಿಸಿರುವ ರಣಬೀರ್ ಕಪೂರ್ ಆ ಬಳಿಕ ಮತ್ತೊಂದು ಪಕ್ಕಾ ಮಾಸ್ ಕಮರ್ಶಿಯಲ್ ಸಿನಿಮಾ ಅನಿಮಲ್ ನಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾದಲ್ಲಿ ರಶ್ಮಿಕಾ ಮಂದಣ್ಣ ನಾಯಕಿ. ಆ ಬಳಿಕ ಬ್ರಹ್ಮಾಸ್ತ್ರ ಸಿನಿಮಾದ ಮುಂದಿನ ಭಾಗ ಕೈಗೆತ್ತಿಕೊಳ್ಳುವ ಸಾಧ್ಯತೆ ಇದೆ.

ಕೆಜಿಎಫ್ 2, ಪುಷ್ಪ, ಆರ್​ಆರ್​ಆರ್ ನಂಥಹಾ ಸಿನಿಮಾಗಳು ದೊಡ್ಡ ಹಿಟ್ ಆಗುತ್ತಿದ್ದಂತೆ, ಬಾಲಿವುಡ್ ಮಂದಿಯೂ ಸಹ ಕಮರ್ಶಿಯಲ್, ಮಾಸ್ ಮಸಾಲಾ ಸಿನಿಮಾಗಳ ಕಡೆ ತಿರುಗಿದ್ದಾರೆ. ರಣಬೀರ್ ಕಪೂರ್ ಮಾತ್ರವೇ ಅಲ್ಲದೆ, ಝೀರೋ, ಜಿಂದಗಿ ನಾ ಮಿಲೇಗಿ ದುಬಾರಾ ದಂತಹಾ ಪ್ರಯೋಗಾತ್ಮಕ ಸಿನಿಮಾಗಳನ್ನು ಮಾಡಿದ್ದ ಶಾರುಖ್ ಖಾನ್ ಸಹ ಜವಾನ್ ರೀತಿಯ ಕಮರ್ಶಿಯಲ್ ಸಿನಿಮಾಗಳ ಮೊರೆ ಹೋಗಿದ್ದಾರೆ. ಅಕ್ಷಯ್ ಕುಮಾರ್ ಸಹ ಇದೇ ಹಾದಿಯಲ್ಲಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ದುರಂತಕ್ಕೆ ಕಾರಣ ಮತ್ತು ಪರಿಹಾರದ ಬಗ್ಗೆ ಪ್ರಧಾನಿ ಮೋದಿ ಚರ್ಚೆ
ದುರಂತಕ್ಕೆ ಕಾರಣ ಮತ್ತು ಪರಿಹಾರದ ಬಗ್ಗೆ ಪ್ರಧಾನಿ ಮೋದಿ ಚರ್ಚೆ
ಎಮರ್ಜೆನ್ಸಿ ಎಕ್ಸಿಟ್​ನಿಂದ ಕೆಳಗೆ ಹಾರಿ ಜೀವ ಉಳಿಸಿಕೊಂಡೆ: ರಮೇಶ್
ಎಮರ್ಜೆನ್ಸಿ ಎಕ್ಸಿಟ್​ನಿಂದ ಕೆಳಗೆ ಹಾರಿ ಜೀವ ಉಳಿಸಿಕೊಂಡೆ: ರಮೇಶ್
ವಿಮಾನ ದುರಂತ ಸಂಭವಿಸಿದ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದ ಪ್ರಧಾನಿ ಮೋದಿ
ವಿಮಾನ ದುರಂತ ಸಂಭವಿಸಿದ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದ ಪ್ರಧಾನಿ ಮೋದಿ
ದುರಂತ ನಡೆದ ಸ್ಥಳದಲ್ಲಿ ದಟ್ಟಹೊಗೆ, ಏನೂ ಕಾಣುತ್ತಿರಲಿಲ್ಲ: ಪ್ರತ್ಯಕ್ಷದರ್ಶಿ
ದುರಂತ ನಡೆದ ಸ್ಥಳದಲ್ಲಿ ದಟ್ಟಹೊಗೆ, ಏನೂ ಕಾಣುತ್ತಿರಲಿಲ್ಲ: ಪ್ರತ್ಯಕ್ಷದರ್ಶಿ
ಸಿದ್ದರಾಮಯ್ಯ ಮನೆ ಸಮೀಪವೇ ಕಳ್ಳತನ: ಕಳ್ಳನ ಕೈಚಳಕ ಸಿಸಿಟಿವಿಯಲ್ಲಿ ಸೆರೆ
ಸಿದ್ದರಾಮಯ್ಯ ಮನೆ ಸಮೀಪವೇ ಕಳ್ಳತನ: ಕಳ್ಳನ ಕೈಚಳಕ ಸಿಸಿಟಿವಿಯಲ್ಲಿ ಸೆರೆ
ವಿಮಾನ ದುರಂತದ ಬಗ್ಗೆ ಪ್ರತ್ಯಕ್ಷದರ್ಶಿ ಬಿಚ್ಚಿಟ್ಟ ಭಯಾನಕ ಅನುಭವ ಇಲ್ಲಿದೆ
ವಿಮಾನ ದುರಂತದ ಬಗ್ಗೆ ಪ್ರತ್ಯಕ್ಷದರ್ಶಿ ಬಿಚ್ಚಿಟ್ಟ ಭಯಾನಕ ಅನುಭವ ಇಲ್ಲಿದೆ
Video: ಅಹಮದಾಬಾದ್ ಆಸ್ಪತ್ರೆಗೆ ಪ್ರಧಾನಿ ಮೋದಿ ಭೇಟಿ
Video: ಅಹಮದಾಬಾದ್ ಆಸ್ಪತ್ರೆಗೆ ಪ್ರಧಾನಿ ಮೋದಿ ಭೇಟಿ
Daily Devotional: ಅಕ್ಷತೆ ಇಲ್ಲದ ಮನೆಯಲ್ಲಿ ಐಶ್ವರ್ಯ ಇರೋದಿಲ್ಲ ಯಾಕೆ?
Daily Devotional: ಅಕ್ಷತೆ ಇಲ್ಲದ ಮನೆಯಲ್ಲಿ ಐಶ್ವರ್ಯ ಇರೋದಿಲ್ಲ ಯಾಕೆ?
Daily Horoscope: ಈ ರಾಶಿಯವರ ವೈವಾಹಿಕ ಜೀವನದಲ್ಲಿ ಏರಿಳಿತ ಸಾಧ್ಯತೆ
Daily Horoscope: ಈ ರಾಶಿಯವರ ವೈವಾಹಿಕ ಜೀವನದಲ್ಲಿ ಏರಿಳಿತ ಸಾಧ್ಯತೆ
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ ಡಿಫರೆಂಟ್ ಹೇಗೆ? ವಿವರಿಸಿದ ದಿಗಂತ್
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ ಡಿಫರೆಂಟ್ ಹೇಗೆ? ವಿವರಿಸಿದ ದಿಗಂತ್