AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಜಯ್​ ಲೀಲಾ ಬನ್ಸಾಲಿ ಸಿನಿಮಾಗೆ ಗುಡ್​ ಬೈ ಹೇಳಿದ ರಣಬೀರ್​; ಕಾರಣವೇನು?

ರಾಜ್​ಕುಮಾರ್​ ಹಿರಾನಿ ನಿರ್ದೇಶನದ ‘ಸಂಜು’ ಸಿನಿಮಾದಲ್ಲಿ ನಟಿಸಿದ್ದರು ರಣಬೀರ್​ ಕಪೂರ್​. 2018ರಲ್ಲಿ ತೆರೆಗೆ ಬಂದ ಈ ಚಿತ್ರದಲ್ಲಿ ನಟ ಸಂಜಯ್​ ದತ್​ ಪಾತ್ರದಲ್ಲಿ ರಣಬೀರ್ ಕಾಣಿಸಿಕೊಂಡಿದ್ದರು.

ಸಂಜಯ್​ ಲೀಲಾ ಬನ್ಸಾಲಿ ಸಿನಿಮಾಗೆ ಗುಡ್​ ಬೈ ಹೇಳಿದ ರಣಬೀರ್​; ಕಾರಣವೇನು?
ರಣಬೀರ್ ಕಪೂರ್
TV9 Web
| Edited By: |

Updated on: Jul 18, 2021 | 2:29 PM

Share

ನಟ ರಣಬೀರ್​ ಕಪೂರ್​ ಸದ್ಯ ‘ಬ್ರಹ್ಮಾಸ್ತ್ರ’ ಸಿನಿಮಾದ ಶೂಟಿಂಗ್​ನಲ್ಲಿ ಬ್ಯುಸಿ ಇದ್ದಾರೆ. ಈ ಸಿನಿಮಾದಲ್ಲಿ ಪ್ರೇಯಸಿ ಆಲಿಯಾ ಭಟ್​ ಜತೆ ರಣಬೀರ್​ ತೆರೆ ಹಂಚಿಕೊಳ್ಳುತ್ತಿದ್ದಾರೆ. ಇವರ ಕಾಂಬಿನೇಷನ್​ ನೋಡೋಕೆ ಅಭಿಮಾನಿಗಳು ತುದಿಗಾಲಿನಲ್ಲಿದ್ದಾರೆ. ಈ ಮಧ್ಯೆ ರಣಬೀರ್​ ಫ್ಯಾನ್ಸ್​ಗೆ ಕಹಿ ಸುದ್ದಿಯೊಂದು ಸಿಕ್ಕಿದೆ. 2019ರಲ್ಲಿ ಘೋಷಣೆ ಆದ ‘ಬೈಜು ಬವ್ರಾ’ ಸಿನಿಮಾದಿಂದ ರಣಬೀರ್​ ಹಿಂದೆ ಸರಿದಿದ್ದಾರಂತೆ. ಈ ಮೂಲಕ ಸಂಜಯ್​ ಲೀಲಾ ಬನ್ಸಾಲಿ ಸಿನಿಮಾಗೆ ರಣಬೀರ್​ ಗುಡ್​ಬೈ ಹೇಳಿದ್ದಾರೆ ಎನ್ನುವ ಮಾತು ಹರಿದಾಡಿದೆ.

ರಾಜ್​ಕುಮಾರ್​ ಹಿರಾನಿ ನಿರ್ದೇಶನದ ‘ಸಂಜು’ ಸಿನಿಮಾದಲ್ಲಿ ನಟಿಸಿದ್ದರು ರಣಬೀರ್​ ಕಪೂರ್​. 2018ರಲ್ಲಿ ತೆರೆಗೆ ಬಂದ ಈ ಚಿತ್ರದಲ್ಲಿ ನಟ ಸಂಜಯ್​ ದತ್​ ಪಾತ್ರದಲ್ಲಿ ರಣಬೀರ್ ಕಾಣಿಸಿಕೊಂಡಿದ್ದರು. ಈ ಸಿನಿಮಾ ದೊಡ್ಡ ಮಟ್ಟದಲ್ಲಿ ಹಿಟ್​ ಆಗಿತ್ತು. ಈ ಕಾರಣಕ್ಕೆ ರಣಬೀರ್​ ಸಿನಿಮಾ ಆಯ್ಕೆಯಲ್ಲಿ ತುಂಬಾನೇ ಎಚ್ಚರಿಕೆ ವಹಿಸುತ್ತಿದ್ದಾರೆ.

ಯಂಗ್​ ಮ್ಯೂಸೀಷಿಯನ್ ಬೈಜು ಬವ್ರಾ ಅವರ ಬಯೋಪಿಕ್​​ಗೆ​ ‘ಬೈಜು ಬವ್ರಾ’ ಎಂದು ಹೆಸರಿಡಲಾಗದೆ. ಈ ಚಿತ್ರದಲ್ಲಿ ರಣಬೀರ್​ ಹಾಗೂ ಸಂಜಯ್​ ದತ್​ ಒಟ್ಟಾಗಿ ಕೆಲಸ ಮಾಡಬೇಕಿತ್ತು. ಆದರೆ, ಸಿನಿಮಾದ ಸ್ಕ್ರಿಪ್ಟ್​ ರಣಬೀರ್​ಗೆ ಇಷ್ಟವಾಗಿಲ್ಲ. ಈ ಕಾರಣಕ್ಕೆ ಅವರು ಸಿನಿಮಾದಿಂದ ಹೊರಗುಳಿದಿದ್ದಾರೆ ಎನ್ನಲಾಗುತ್ತಿದೆ.

‘ರಣಬೀರ್​ ಕಪೂರ್​ ಅವರು ಸಂಜಯ್​ ಲೀಲಾ ಬನ್ಸಾಲಿ ಹಾಗೂ ಅವರ ಟೀಮ್​ ಬಗ್ಗೆ ಸಾಕಷ್ಟು ಕನ್​ಫ್ಯೂಷನ್​ ಹೊಂದಿದ್ದಾರೆ.  ಇದು ಪರಿಹಾರವಾಗದ ಕಾರಣ ಸಿನಿಮಾದಿಂದ ಹಿಂದೆ ಸರಿಯುವ ನಿರ್ಧಾರವನ್ನು ರಣಬೀರ್​ ತೆಗೆದುಕೊಂಡಿದ್ದಾರೆ ಎನ್ನುತ್ತಿವೆ ಮೂಲಗಳು.

ರಣಬೀರ್​ ಕಪೂರ್​ ಮೊದಲ ಸಿನಿಮಾ ‘ಸಾವರಿಯಾ’ಗೆ ಬನ್ಸಾಲಿ ನಿರ್ದೇಶನ ಮಾಡಿದ್ದರು. ಈ ಸಿನಿಮಾ ಹೇಳಿಕೊಳ್ಳುವಂತಹ ಹೆಸರು ಮಾಡಿರಲಿಲ್ಲ. ಈಗ ಮತ್ತೊಮ್ಮೆ ಇಬ್ಬರೂ ಒಂದಾಗಲಿದ್ದಾರೆ ಎನ್ನಲಾಗಿತ್ತು. ಆದರೆ, ಅದು ಸಾಧ್ಯವಾಗಿಲ್ಲ.

ಇನ್ನು, ಈ ಚಿತ್ರಕ್ಕೆ ನಟ ಕಾರ್ತಿಕ್​ ಆರ್ಯನ್​ ಅವರು ಆಯ್ಕೆಯಾಗಿದ್ದಾರೆ ಎನ್ನಲಾಗುತ್ತಿದೆ. ಇತ್ತೀಚೆಗೆ ಬನ್ಸಾಲಿ ಆಫೀಸ್​ಗೆ ಕಾರ್ತಿಕ್​ ಆರ್ಯನ್​ ಭೇಟಿ ಮಾಡಿದ್ದರು. ಇದು ಈ ವದಂತಿಗೆ ಮತ್ತಷ್ಟು ಪುಷ್ಟಿ ನೀಡಿದೆ. ಸದ್ಯ, ಈ ಬಗ್ಗೆ ಅಧಿಕೃತ ಘೋಷಣೆ ಬಾಕಿ ಇದೆ ಎನ್ನಲಾಗಿದೆ.

ಇದನ್ನೂ ಓದಿ: Sourav Ganguly Biopic: ಬಯೋಪಿಕ್​ಗೆ ​ಅನುಮತಿ ನೀಡಿದ ಸೌರವ್​ ಗಂಗೂಲಿ; ದಾದಾ ಪಾತ್ರಕ್ಕೆ ರಣಬೀರ್​ ಕಪೂರ್​?

ರಣಬೀರ್- ಆಲಿಯಾ ಡಿವೋರ್ಸ್?; ಮದುವೆ ಮುನ್ನವೇ ಶಾಕಿಂಗ್ ಭವಿಷ್ಯ ನುಡಿದ ಕಮಾಲ್ ಆರ್ ಖಾನ್

Follow Us
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿ
ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿ
ಭಾರತ ಮತ್ತು ಇಲ್ಲಿನ ಜನರ ಪ್ರೀತಿ ಅದ್ಭುತ: ಇರಾನ್ ಮೂಲದ ಪೈಲ್ವಾನ್ ಮಿರ್ಜಾ
ಭಾರತ ಮತ್ತು ಇಲ್ಲಿನ ಜನರ ಪ್ರೀತಿ ಅದ್ಭುತ: ಇರಾನ್ ಮೂಲದ ಪೈಲ್ವಾನ್ ಮಿರ್ಜಾ