Randeep Hooda: ಮಾಯಾವತಿ ಬಗ್ಗೆ ಕೀಳು ಜೋಕ್​; ‘ರಾಧೆ’ ನಟ ರಣದೀಪ್​ ಹೂಡಾಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಛೀಮಾರಿ

ಇತ್ತೀಚೆಗೆ ತೆರೆಕಂಡ ಸಲ್ಮಾನ್​ ಖಾನ್​ ನಾಯಕತ್ವದ ರಾಧೆ ಸಿನಿಮಾದಲ್ಲಿ ರಣದೀಪ್​ ಹೂಡ ಅವರು ಖಳನಾಯಕನಾಗಿ ನಟಿಸಿದ್ದಾರೆ. ವಿವಾದದ ಕಾರಣದಿಂದ ಅವರು ರಿಯಲ್​ ಲೈಫ್​ನಲ್ಲಿಯೂ ಬ್ಯಾಡ್​ ಬಾಯ್​ ಆಗಿದ್ದಾರೆ.

Randeep Hooda: ಮಾಯಾವತಿ ಬಗ್ಗೆ ಕೀಳು ಜೋಕ್​; ‘ರಾಧೆ’ ನಟ ರಣದೀಪ್​ ಹೂಡಾಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಛೀಮಾರಿ
ರಣದೀಪ್​ ಹೂಡಾ - ಮಾಯಾಮತಿ
Follow us
| Updated By: ರಾಜೇಶ್ ದುಗ್ಗುಮನೆ

Updated on: May 29, 2021 | 3:39 PM

ಸೆಲೆಬ್ರಿಟಿಗಳು ಸಾರ್ವಜನಿಕವಾಗಿ ಮಾತನಾಡುವಾಗ ತುಂಬಾ ಹುಷಾರಾಗಿ ಇರಬೇಕು. ಎಷ್ಟೇ ಒಳ್ಳೆಯ ಸಿನಿಮಾ ಮಾಡಿದ್ದರೂ ಕೂಡ ಅವರು ನಿಜಜೀವನದಲ್ಲಿ ಹೇಗೆ ನಡೆದುಕೊಳ್ಳುತ್ತಾರೆ ಎಂಬುದರ ಮೇಲೆ ಅವರಿಗೆ ಸಿಗುವ ಗೌರವದ ಪ್ರಮಾಣ ನಿರ್ಧಾರ ಆಗಿರುತ್ತದೆ. ಇಷ್ಟು ದಿನ ಪ್ರೇಕ್ಷಕರಿಂದ ಭೇಷ್​ ಎನಿಸಿಕೊಳ್ಳುತ್ತಿದ್ದ ಬಾಲಿವುಡ್​ ನಟ ರಣದೀಪ್​ ಹೂಡಾ ಅವರು ಈಗ ಎಲ್ಲರಿಂದಲೂ ಛೀಮಾರಿ ಹಾಕಿಸಿಕೊಳ್ಳುತ್ತಿದ್ದಾರೆ. ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ ಮಾಯಾವತಿ ಬಗ್ಗೆ ಅವರು ಹೇಳಿದ ಒಂದು ಕೀಳುಮಟ್ಟದ ಜೋಕ್​ನ ಕಾರಣದಿಂದಾಗಿ ವಿವಾದ ಭುಗಿಲೆದ್ದಿದೆ. ಭಾರತದಲ್ಲಿ ಮಾತ್ರವಲ್ಲದೇ ಅಂತಾರಾಷ್ಟ್ರೀಯ ಮಟ್ಟದಲ್ಲಿ ರಣದೀಪ್​ ಹೂಡಾ ಅವರಿಗೆ ಮುಖಭಂಗ ಆಗಿದೆ.

ರಣದೀಪ್​ ಹೂಡಾ ಅವರು ತಮ್ಮ ಜನಪ್ರಿಯತೆಯ ಕಾರಣದಿಂದ ವಿಶ್ವಸಂಸ್ಥೆಯ ವನ್ಯಜೀವಿಗಳ ಸಂರಕ್ಷಣೆಯ ಕಾರ್ಯಕ್ರಮಗಳಿಗೆ ರಾಯಭಾರಿ ಆಗಿದ್ದರು. ಆದರೆ ಈಗ ಅವರು ಮಾಯಾವತಿ ಬಗ್ಗೆ ಹೇಳಿದ ಕೆಟ್ಟ ಜೋಕ್​ನ ಪರಿಣಾಮ ಎಲ್ಲೆಡೆ ಅವರಿಗೆ ವಿರೋಧ ವ್ಯಕ್ತವಾಗಿರುವುರಿಂದ ಅವರನ್ನು ರಾಯಭಾರಿ ಸ್ಥಾನದಿಂದ ಕೆಳಗಿಳಿಸಲಾಗಿದೆ. ಆ ಮೂಲಕ ಅವರು ಅಂತಾರಾಷ್ಟ್ರೀಯ ಮಟ್ಟದಲ್ಲಿ ಹಿನ್ನೆಡೆ ಅನುಭವಿಸುವಂತಾಗಿದೆ. ಇತ್ತೀಚೆಗೆ ತೆರೆಕಂಡ ಸಲ್ಮಾನ್​ ಖಾನ್​ ನಾಯಕತ್ವದ ರಾಧೆ ಸಿನಿಮಾದಲ್ಲಿ ರಣದೀಪ್​ ಹೂಡ ಅವರು ಖಳನಾಯಕನಾಗಿ ನಟಿಸಿದ್ದಾರೆ. ವಿವಾದದ ಕಾರಣದಿಂದ ಅವರು ರಿಯಲ್​ ಲೈಫ್​ನಲ್ಲಿಯೂ ಬ್ಯಾಡ್​ ಬಾಯ್​ ಆಗಿದ್ದಾರೆ.

ಮಾಯಾವತಿ ಬಗ್ಗೆ ರಣದೀಪ್​ ಹೂಡಾ ಕೆಟ್ಟ ಜೋಕ್​ ಹೇಳಿರುವುದು ಇತ್ತೀಚೆಗಲ್ಲ. ಹಲವು ವರ್ಷಗಳ ಹಿಂದೆಯೇ ಖಾಸಗಿ ಟಿವಿ ವಾಹಿನಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ರಣದೀಪ್​ ಹೂಡಾ ಭಾಗವಹಿಸಿದ್ದರು. ಆ ಸಂದರ್ಭದಲ್ಲಿ ಅವರು ಮಾಯಾವತಿ ಕುರಿತಂತೆ ಕೆಟ್ಟದಾಗಿ ಜೋಕ್​ ಮಾಡಿದ್ದರು. ಆ ವಿಡಿಯೋವನ್ನು ನೆಟ್ಟಿಗರೊಬ್ಬರು ಕೆಲವೇ ದಿನಗಳ ಹಿಂದೆ ಟ್ವಿಟರ್​ನಲ್ಲಿ ಶೇರ್​ ಮಾಡಿಕೊಂಡು ರಣದೀಪ್​ಗೆ ಛೀಮಾರಿ ಹಾಕಿದ್ದಾರೆ. ಬಳಿಕ ಅದು ಎಲ್ಲೆಡೆ ವೈರಲ್​ ಆಯಿತು. ರಣದೀಪ್​ ಕ್ಷಮೆ ಕೇಳಬೇಕು ಎಂದು ಒತ್ತಾಯಿಸಲಾಗುತ್ತಿದೆ.

‘ಒಬ್ಬ ಮಹಿಳೆ ಮೇಲೆ ನೀವು ಇಂಥ ಕೆಟ್ಟ ಮಾತುಗಳನ್ನು ಆಡುತ್ತೀರಿ ಎನ್ನುವುದಾದರೆ ನಿಮ್ಮ ಮನಸ್ಸಲ್ಲಿ ಎಷ್ಟು ಕೆಟ್ಟತನ ಇದೆ ಎಂಬುದು ಗೊತ್ತಾಗುತ್ತದೆ. ಇದನ್ನು ಸಹಿಸಲು ಸಾಧ್ಯವಿಲ್ಲ’ ಎಂದು ವಿಡಿಯೋ ನೋಡಿದ ಅನೇಕರು ರಣದೀಪ್​ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.

ಇದನ್ನೂ ಓದಿ:

ಯುಪಿ ಮಾಜಿ ಸಿಎಂ ಮಾಯಾವತಿ ಬಗ್ಗೆ ಕೀಳು ಜೋಕ್​ ಹೇಳಿ ಟ್ರೋಲ್​ ಆಗುತ್ತಿರುವ ‘ರಾಧೆ’ ನಟ ರಣದೀಪ್​ ಹೂಡಾ

ರಾಧೆ ಸಿನಿಮಾ ಕಳಪೆ ಎಂದ ನಟನ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ ಸಲ್ಮಾನ್​ ಖಾನ್​

ದೇವನಹಳ್ಳಿ: ಕಾಲುವೆ ನೀರಿನಲ್ಲಿ ಕೊಚ್ಚಿಹೋದ ಕಾರುಗಳು!
ದೇವನಹಳ್ಳಿ: ಕಾಲುವೆ ನೀರಿನಲ್ಲಿ ಕೊಚ್ಚಿಹೋದ ಕಾರುಗಳು!
ಬ್ರಿಕ್ಸ್​​ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾಗೆ ತೆರಳಿದ ಪ್ರಧಾನಿ ಮೋದಿ
ಬ್ರಿಕ್ಸ್​​ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾಗೆ ತೆರಳಿದ ಪ್ರಧಾನಿ ಮೋದಿ
ಕಾಶ್ಮೀರವನ್ನು ಪಾಕಿಸ್ತಾನವಾಗಲು ಬಿಡುವುದಿಲ್ಲ: ಫಾರೂಕ್ ಅಬ್ದುಲ್ಲಾ
ಕಾಶ್ಮೀರವನ್ನು ಪಾಕಿಸ್ತಾನವಾಗಲು ಬಿಡುವುದಿಲ್ಲ: ಫಾರೂಕ್ ಅಬ್ದುಲ್ಲಾ
ಚನ್ನಪಟ್ಟಣ ಉಪ ಚುನಾವಣೆ: ಕಾಂಗ್ರೆಸ್ ಟಿಕೆಟ್ ಆಫರ್ ಬಗ್ಗೆ ಯೋಗೇಶ್ವರ್ ಮಾತು
ಚನ್ನಪಟ್ಟಣ ಉಪ ಚುನಾವಣೆ: ಕಾಂಗ್ರೆಸ್ ಟಿಕೆಟ್ ಆಫರ್ ಬಗ್ಗೆ ಯೋಗೇಶ್ವರ್ ಮಾತು
Daily Devotional: ವೀಳ್ಯದೆಲೆಯ ಮಹತ್ವ ಹಾಗೂ ಅದರ ಉಪಯೋಗಗಳು ತಿಳಿಯಿರಿ
Daily Devotional: ವೀಳ್ಯದೆಲೆಯ ಮಹತ್ವ ಹಾಗೂ ಅದರ ಉಪಯೋಗಗಳು ತಿಳಿಯಿರಿ
ಈ ರಾಶಿಯ ಮಹಿಳೆಯರು ಇಂದು ಹೂಡಿಕೆ ಮಾಡಿದರೆ ಒಳ್ಳೆ ಲಾಭ ಬರುವುದು
ಈ ರಾಶಿಯ ಮಹಿಳೆಯರು ಇಂದು ಹೂಡಿಕೆ ಮಾಡಿದರೆ ಒಳ್ಳೆ ಲಾಭ ಬರುವುದು
ತನ್ನ ತಲೆಗಿಂತ 2 ಪಟ್ಟು ದೊಡ್ಡ ಮೊಟ್ಟೆಯನ್ನು ನುಂಗಿದ ಹಾವಿನ ಮರಿ!
ತನ್ನ ತಲೆಗಿಂತ 2 ಪಟ್ಟು ದೊಡ್ಡ ಮೊಟ್ಟೆಯನ್ನು ನುಂಗಿದ ಹಾವಿನ ಮರಿ!
ಯೋಗೇಶ್ವರ್ ಅವರನ್ನು ಕಡೆಗಣಿಸುವ ಉದ್ದೇಶ ಖಂಡಿತ ನಮಗಿರಲಿಲ್ಲ: ನಿಖಿಲ್
ಯೋಗೇಶ್ವರ್ ಅವರನ್ನು ಕಡೆಗಣಿಸುವ ಉದ್ದೇಶ ಖಂಡಿತ ನಮಗಿರಲಿಲ್ಲ: ನಿಖಿಲ್
ಗಾಜಾದಲ್ಲಿ ಜೀವ ಉಳಿಸಿಕೊಳ್ಳಲು ತಂಗಿಯನ್ನು ಹೊತ್ತು 2 ಕಿ.ಮೀ ನಡೆದ ಬಾಲಕಿ
ಗಾಜಾದಲ್ಲಿ ಜೀವ ಉಳಿಸಿಕೊಳ್ಳಲು ತಂಗಿಯನ್ನು ಹೊತ್ತು 2 ಕಿ.ಮೀ ನಡೆದ ಬಾಲಕಿ
ಜಮೀರ್ ಅಹ್ಮದ್ ವಿರುದ್ಧ ಪ್ರಾಸಿಕ್ಯೂಷನ್​​​​ಗೆ ಅನುಮತಿ ಕೋರಿದ ಅಬ್ರಹಾಂ
ಜಮೀರ್ ಅಹ್ಮದ್ ವಿರುದ್ಧ ಪ್ರಾಸಿಕ್ಯೂಷನ್​​​​ಗೆ ಅನುಮತಿ ಕೋರಿದ ಅಬ್ರಹಾಂ