AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Randeep Hooda: ಮಾಯಾವತಿ ಬಗ್ಗೆ ಕೀಳು ಜೋಕ್​; ‘ರಾಧೆ’ ನಟ ರಣದೀಪ್​ ಹೂಡಾಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಛೀಮಾರಿ

ಇತ್ತೀಚೆಗೆ ತೆರೆಕಂಡ ಸಲ್ಮಾನ್​ ಖಾನ್​ ನಾಯಕತ್ವದ ರಾಧೆ ಸಿನಿಮಾದಲ್ಲಿ ರಣದೀಪ್​ ಹೂಡ ಅವರು ಖಳನಾಯಕನಾಗಿ ನಟಿಸಿದ್ದಾರೆ. ವಿವಾದದ ಕಾರಣದಿಂದ ಅವರು ರಿಯಲ್​ ಲೈಫ್​ನಲ್ಲಿಯೂ ಬ್ಯಾಡ್​ ಬಾಯ್​ ಆಗಿದ್ದಾರೆ.

Randeep Hooda: ಮಾಯಾವತಿ ಬಗ್ಗೆ ಕೀಳು ಜೋಕ್​; ‘ರಾಧೆ’ ನಟ ರಣದೀಪ್​ ಹೂಡಾಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಛೀಮಾರಿ
ರಣದೀಪ್​ ಹೂಡಾ - ಮಾಯಾಮತಿ
ಮದನ್​ ಕುಮಾರ್​
| Edited By: |

Updated on: May 29, 2021 | 3:39 PM

Share

ಸೆಲೆಬ್ರಿಟಿಗಳು ಸಾರ್ವಜನಿಕವಾಗಿ ಮಾತನಾಡುವಾಗ ತುಂಬಾ ಹುಷಾರಾಗಿ ಇರಬೇಕು. ಎಷ್ಟೇ ಒಳ್ಳೆಯ ಸಿನಿಮಾ ಮಾಡಿದ್ದರೂ ಕೂಡ ಅವರು ನಿಜಜೀವನದಲ್ಲಿ ಹೇಗೆ ನಡೆದುಕೊಳ್ಳುತ್ತಾರೆ ಎಂಬುದರ ಮೇಲೆ ಅವರಿಗೆ ಸಿಗುವ ಗೌರವದ ಪ್ರಮಾಣ ನಿರ್ಧಾರ ಆಗಿರುತ್ತದೆ. ಇಷ್ಟು ದಿನ ಪ್ರೇಕ್ಷಕರಿಂದ ಭೇಷ್​ ಎನಿಸಿಕೊಳ್ಳುತ್ತಿದ್ದ ಬಾಲಿವುಡ್​ ನಟ ರಣದೀಪ್​ ಹೂಡಾ ಅವರು ಈಗ ಎಲ್ಲರಿಂದಲೂ ಛೀಮಾರಿ ಹಾಕಿಸಿಕೊಳ್ಳುತ್ತಿದ್ದಾರೆ. ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ ಮಾಯಾವತಿ ಬಗ್ಗೆ ಅವರು ಹೇಳಿದ ಒಂದು ಕೀಳುಮಟ್ಟದ ಜೋಕ್​ನ ಕಾರಣದಿಂದಾಗಿ ವಿವಾದ ಭುಗಿಲೆದ್ದಿದೆ. ಭಾರತದಲ್ಲಿ ಮಾತ್ರವಲ್ಲದೇ ಅಂತಾರಾಷ್ಟ್ರೀಯ ಮಟ್ಟದಲ್ಲಿ ರಣದೀಪ್​ ಹೂಡಾ ಅವರಿಗೆ ಮುಖಭಂಗ ಆಗಿದೆ.

ರಣದೀಪ್​ ಹೂಡಾ ಅವರು ತಮ್ಮ ಜನಪ್ರಿಯತೆಯ ಕಾರಣದಿಂದ ವಿಶ್ವಸಂಸ್ಥೆಯ ವನ್ಯಜೀವಿಗಳ ಸಂರಕ್ಷಣೆಯ ಕಾರ್ಯಕ್ರಮಗಳಿಗೆ ರಾಯಭಾರಿ ಆಗಿದ್ದರು. ಆದರೆ ಈಗ ಅವರು ಮಾಯಾವತಿ ಬಗ್ಗೆ ಹೇಳಿದ ಕೆಟ್ಟ ಜೋಕ್​ನ ಪರಿಣಾಮ ಎಲ್ಲೆಡೆ ಅವರಿಗೆ ವಿರೋಧ ವ್ಯಕ್ತವಾಗಿರುವುರಿಂದ ಅವರನ್ನು ರಾಯಭಾರಿ ಸ್ಥಾನದಿಂದ ಕೆಳಗಿಳಿಸಲಾಗಿದೆ. ಆ ಮೂಲಕ ಅವರು ಅಂತಾರಾಷ್ಟ್ರೀಯ ಮಟ್ಟದಲ್ಲಿ ಹಿನ್ನೆಡೆ ಅನುಭವಿಸುವಂತಾಗಿದೆ. ಇತ್ತೀಚೆಗೆ ತೆರೆಕಂಡ ಸಲ್ಮಾನ್​ ಖಾನ್​ ನಾಯಕತ್ವದ ರಾಧೆ ಸಿನಿಮಾದಲ್ಲಿ ರಣದೀಪ್​ ಹೂಡ ಅವರು ಖಳನಾಯಕನಾಗಿ ನಟಿಸಿದ್ದಾರೆ. ವಿವಾದದ ಕಾರಣದಿಂದ ಅವರು ರಿಯಲ್​ ಲೈಫ್​ನಲ್ಲಿಯೂ ಬ್ಯಾಡ್​ ಬಾಯ್​ ಆಗಿದ್ದಾರೆ.

ಮಾಯಾವತಿ ಬಗ್ಗೆ ರಣದೀಪ್​ ಹೂಡಾ ಕೆಟ್ಟ ಜೋಕ್​ ಹೇಳಿರುವುದು ಇತ್ತೀಚೆಗಲ್ಲ. ಹಲವು ವರ್ಷಗಳ ಹಿಂದೆಯೇ ಖಾಸಗಿ ಟಿವಿ ವಾಹಿನಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ರಣದೀಪ್​ ಹೂಡಾ ಭಾಗವಹಿಸಿದ್ದರು. ಆ ಸಂದರ್ಭದಲ್ಲಿ ಅವರು ಮಾಯಾವತಿ ಕುರಿತಂತೆ ಕೆಟ್ಟದಾಗಿ ಜೋಕ್​ ಮಾಡಿದ್ದರು. ಆ ವಿಡಿಯೋವನ್ನು ನೆಟ್ಟಿಗರೊಬ್ಬರು ಕೆಲವೇ ದಿನಗಳ ಹಿಂದೆ ಟ್ವಿಟರ್​ನಲ್ಲಿ ಶೇರ್​ ಮಾಡಿಕೊಂಡು ರಣದೀಪ್​ಗೆ ಛೀಮಾರಿ ಹಾಕಿದ್ದಾರೆ. ಬಳಿಕ ಅದು ಎಲ್ಲೆಡೆ ವೈರಲ್​ ಆಯಿತು. ರಣದೀಪ್​ ಕ್ಷಮೆ ಕೇಳಬೇಕು ಎಂದು ಒತ್ತಾಯಿಸಲಾಗುತ್ತಿದೆ.

‘ಒಬ್ಬ ಮಹಿಳೆ ಮೇಲೆ ನೀವು ಇಂಥ ಕೆಟ್ಟ ಮಾತುಗಳನ್ನು ಆಡುತ್ತೀರಿ ಎನ್ನುವುದಾದರೆ ನಿಮ್ಮ ಮನಸ್ಸಲ್ಲಿ ಎಷ್ಟು ಕೆಟ್ಟತನ ಇದೆ ಎಂಬುದು ಗೊತ್ತಾಗುತ್ತದೆ. ಇದನ್ನು ಸಹಿಸಲು ಸಾಧ್ಯವಿಲ್ಲ’ ಎಂದು ವಿಡಿಯೋ ನೋಡಿದ ಅನೇಕರು ರಣದೀಪ್​ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.

ಇದನ್ನೂ ಓದಿ:

ಯುಪಿ ಮಾಜಿ ಸಿಎಂ ಮಾಯಾವತಿ ಬಗ್ಗೆ ಕೀಳು ಜೋಕ್​ ಹೇಳಿ ಟ್ರೋಲ್​ ಆಗುತ್ತಿರುವ ‘ರಾಧೆ’ ನಟ ರಣದೀಪ್​ ಹೂಡಾ

ರಾಧೆ ಸಿನಿಮಾ ಕಳಪೆ ಎಂದ ನಟನ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ ಸಲ್ಮಾನ್​ ಖಾನ್​

ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ