AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Randeep Hooda: ಮಾಯಾವತಿ ಬಗ್ಗೆ ಕೀಳು ಜೋಕ್​; ‘ರಾಧೆ’ ನಟ ರಣದೀಪ್​ ಹೂಡಾಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಛೀಮಾರಿ

ಇತ್ತೀಚೆಗೆ ತೆರೆಕಂಡ ಸಲ್ಮಾನ್​ ಖಾನ್​ ನಾಯಕತ್ವದ ರಾಧೆ ಸಿನಿಮಾದಲ್ಲಿ ರಣದೀಪ್​ ಹೂಡ ಅವರು ಖಳನಾಯಕನಾಗಿ ನಟಿಸಿದ್ದಾರೆ. ವಿವಾದದ ಕಾರಣದಿಂದ ಅವರು ರಿಯಲ್​ ಲೈಫ್​ನಲ್ಲಿಯೂ ಬ್ಯಾಡ್​ ಬಾಯ್​ ಆಗಿದ್ದಾರೆ.

Randeep Hooda: ಮಾಯಾವತಿ ಬಗ್ಗೆ ಕೀಳು ಜೋಕ್​; ‘ರಾಧೆ’ ನಟ ರಣದೀಪ್​ ಹೂಡಾಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಛೀಮಾರಿ
ರಣದೀಪ್​ ಹೂಡಾ - ಮಾಯಾಮತಿ
ಮದನ್​ ಕುಮಾರ್​
| Edited By: |

Updated on: May 29, 2021 | 3:39 PM

Share

ಸೆಲೆಬ್ರಿಟಿಗಳು ಸಾರ್ವಜನಿಕವಾಗಿ ಮಾತನಾಡುವಾಗ ತುಂಬಾ ಹುಷಾರಾಗಿ ಇರಬೇಕು. ಎಷ್ಟೇ ಒಳ್ಳೆಯ ಸಿನಿಮಾ ಮಾಡಿದ್ದರೂ ಕೂಡ ಅವರು ನಿಜಜೀವನದಲ್ಲಿ ಹೇಗೆ ನಡೆದುಕೊಳ್ಳುತ್ತಾರೆ ಎಂಬುದರ ಮೇಲೆ ಅವರಿಗೆ ಸಿಗುವ ಗೌರವದ ಪ್ರಮಾಣ ನಿರ್ಧಾರ ಆಗಿರುತ್ತದೆ. ಇಷ್ಟು ದಿನ ಪ್ರೇಕ್ಷಕರಿಂದ ಭೇಷ್​ ಎನಿಸಿಕೊಳ್ಳುತ್ತಿದ್ದ ಬಾಲಿವುಡ್​ ನಟ ರಣದೀಪ್​ ಹೂಡಾ ಅವರು ಈಗ ಎಲ್ಲರಿಂದಲೂ ಛೀಮಾರಿ ಹಾಕಿಸಿಕೊಳ್ಳುತ್ತಿದ್ದಾರೆ. ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ ಮಾಯಾವತಿ ಬಗ್ಗೆ ಅವರು ಹೇಳಿದ ಒಂದು ಕೀಳುಮಟ್ಟದ ಜೋಕ್​ನ ಕಾರಣದಿಂದಾಗಿ ವಿವಾದ ಭುಗಿಲೆದ್ದಿದೆ. ಭಾರತದಲ್ಲಿ ಮಾತ್ರವಲ್ಲದೇ ಅಂತಾರಾಷ್ಟ್ರೀಯ ಮಟ್ಟದಲ್ಲಿ ರಣದೀಪ್​ ಹೂಡಾ ಅವರಿಗೆ ಮುಖಭಂಗ ಆಗಿದೆ.

ರಣದೀಪ್​ ಹೂಡಾ ಅವರು ತಮ್ಮ ಜನಪ್ರಿಯತೆಯ ಕಾರಣದಿಂದ ವಿಶ್ವಸಂಸ್ಥೆಯ ವನ್ಯಜೀವಿಗಳ ಸಂರಕ್ಷಣೆಯ ಕಾರ್ಯಕ್ರಮಗಳಿಗೆ ರಾಯಭಾರಿ ಆಗಿದ್ದರು. ಆದರೆ ಈಗ ಅವರು ಮಾಯಾವತಿ ಬಗ್ಗೆ ಹೇಳಿದ ಕೆಟ್ಟ ಜೋಕ್​ನ ಪರಿಣಾಮ ಎಲ್ಲೆಡೆ ಅವರಿಗೆ ವಿರೋಧ ವ್ಯಕ್ತವಾಗಿರುವುರಿಂದ ಅವರನ್ನು ರಾಯಭಾರಿ ಸ್ಥಾನದಿಂದ ಕೆಳಗಿಳಿಸಲಾಗಿದೆ. ಆ ಮೂಲಕ ಅವರು ಅಂತಾರಾಷ್ಟ್ರೀಯ ಮಟ್ಟದಲ್ಲಿ ಹಿನ್ನೆಡೆ ಅನುಭವಿಸುವಂತಾಗಿದೆ. ಇತ್ತೀಚೆಗೆ ತೆರೆಕಂಡ ಸಲ್ಮಾನ್​ ಖಾನ್​ ನಾಯಕತ್ವದ ರಾಧೆ ಸಿನಿಮಾದಲ್ಲಿ ರಣದೀಪ್​ ಹೂಡ ಅವರು ಖಳನಾಯಕನಾಗಿ ನಟಿಸಿದ್ದಾರೆ. ವಿವಾದದ ಕಾರಣದಿಂದ ಅವರು ರಿಯಲ್​ ಲೈಫ್​ನಲ್ಲಿಯೂ ಬ್ಯಾಡ್​ ಬಾಯ್​ ಆಗಿದ್ದಾರೆ.

ಮಾಯಾವತಿ ಬಗ್ಗೆ ರಣದೀಪ್​ ಹೂಡಾ ಕೆಟ್ಟ ಜೋಕ್​ ಹೇಳಿರುವುದು ಇತ್ತೀಚೆಗಲ್ಲ. ಹಲವು ವರ್ಷಗಳ ಹಿಂದೆಯೇ ಖಾಸಗಿ ಟಿವಿ ವಾಹಿನಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ರಣದೀಪ್​ ಹೂಡಾ ಭಾಗವಹಿಸಿದ್ದರು. ಆ ಸಂದರ್ಭದಲ್ಲಿ ಅವರು ಮಾಯಾವತಿ ಕುರಿತಂತೆ ಕೆಟ್ಟದಾಗಿ ಜೋಕ್​ ಮಾಡಿದ್ದರು. ಆ ವಿಡಿಯೋವನ್ನು ನೆಟ್ಟಿಗರೊಬ್ಬರು ಕೆಲವೇ ದಿನಗಳ ಹಿಂದೆ ಟ್ವಿಟರ್​ನಲ್ಲಿ ಶೇರ್​ ಮಾಡಿಕೊಂಡು ರಣದೀಪ್​ಗೆ ಛೀಮಾರಿ ಹಾಕಿದ್ದಾರೆ. ಬಳಿಕ ಅದು ಎಲ್ಲೆಡೆ ವೈರಲ್​ ಆಯಿತು. ರಣದೀಪ್​ ಕ್ಷಮೆ ಕೇಳಬೇಕು ಎಂದು ಒತ್ತಾಯಿಸಲಾಗುತ್ತಿದೆ.

‘ಒಬ್ಬ ಮಹಿಳೆ ಮೇಲೆ ನೀವು ಇಂಥ ಕೆಟ್ಟ ಮಾತುಗಳನ್ನು ಆಡುತ್ತೀರಿ ಎನ್ನುವುದಾದರೆ ನಿಮ್ಮ ಮನಸ್ಸಲ್ಲಿ ಎಷ್ಟು ಕೆಟ್ಟತನ ಇದೆ ಎಂಬುದು ಗೊತ್ತಾಗುತ್ತದೆ. ಇದನ್ನು ಸಹಿಸಲು ಸಾಧ್ಯವಿಲ್ಲ’ ಎಂದು ವಿಡಿಯೋ ನೋಡಿದ ಅನೇಕರು ರಣದೀಪ್​ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.

ಇದನ್ನೂ ಓದಿ:

ಯುಪಿ ಮಾಜಿ ಸಿಎಂ ಮಾಯಾವತಿ ಬಗ್ಗೆ ಕೀಳು ಜೋಕ್​ ಹೇಳಿ ಟ್ರೋಲ್​ ಆಗುತ್ತಿರುವ ‘ರಾಧೆ’ ನಟ ರಣದೀಪ್​ ಹೂಡಾ

ರಾಧೆ ಸಿನಿಮಾ ಕಳಪೆ ಎಂದ ನಟನ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ ಸಲ್ಮಾನ್​ ಖಾನ್​

Follow Us
ಪ್ರಿಯಕರನಿಗೆ ಬೆಂಕಿ ಇಟ್ಟ ಪ್ರೇಯಸಿ: ಸ್ಫೋಟಕ ಅಂಶ ಬಿಚ್ಚಿಟ್ಟ ಎಸ್ಪಿ
ಪ್ರಿಯಕರನಿಗೆ ಬೆಂಕಿ ಇಟ್ಟ ಪ್ರೇಯಸಿ: ಸ್ಫೋಟಕ ಅಂಶ ಬಿಚ್ಚಿಟ್ಟ ಎಸ್ಪಿ
ಸೈಕಲ್ ಸವಾರನಿಂದಲ್ಲೂ 25 ರೂ. ಟೋಲ್ ವಸೂಲಿ ಮಾಡಿದ ಸಿಬ್ಬಂದಿ
ಸೈಕಲ್ ಸವಾರನಿಂದಲ್ಲೂ 25 ರೂ. ಟೋಲ್ ವಸೂಲಿ ಮಾಡಿದ ಸಿಬ್ಬಂದಿ
ಕೋಲಾರ: ಇಟ್ಟಿಗೆ ಫ್ಯಾಕ್ಟರಿಯಲ್ಲಿ ಜೀತಕ್ಕಿದ್ದ 10 ಕಾರ್ಮಿಕರ ರಕ್ಷಣೆ
ಕೋಲಾರ: ಇಟ್ಟಿಗೆ ಫ್ಯಾಕ್ಟರಿಯಲ್ಲಿ ಜೀತಕ್ಕಿದ್ದ 10 ಕಾರ್ಮಿಕರ ರಕ್ಷಣೆ
ದಾವಣಗೆರೆ ಉಪಚುನಾವಣೆ ಫಲಿತಾಂಶ ಬಂದ್ಮೇಲೆ ಜಮೀರ್ ಭವಿಷ್ಯ ನಿರ್ಧಾರ?
ದಾವಣಗೆರೆ ಉಪಚುನಾವಣೆ ಫಲಿತಾಂಶ ಬಂದ್ಮೇಲೆ ಜಮೀರ್ ಭವಿಷ್ಯ ನಿರ್ಧಾರ?
ಈ ಆವೃತ್ತಿಯ 3ನೇ ಅರ್ಧಶತಕ ಚಚ್ಚಿದ ಅಭಿಷೇಕ್
ಈ ಆವೃತ್ತಿಯ 3ನೇ ಅರ್ಧಶತಕ ಚಚ್ಚಿದ ಅಭಿಷೇಕ್
ಸಿಎಂಗೆ ಕಾಂಪ್ರಾಮೈಸ್ ಪಾಲಿಟಿಕ್ಸ್ ಅನಿವಾರ್ಯ: ಜಾರಕಿಹೊಳಿ ಅಚ್ಚರಿ ಹೇಳಿಕೆ!
ಸಿಎಂಗೆ ಕಾಂಪ್ರಾಮೈಸ್ ಪಾಲಿಟಿಕ್ಸ್ ಅನಿವಾರ್ಯ: ಜಾರಕಿಹೊಳಿ ಅಚ್ಚರಿ ಹೇಳಿಕೆ!
ಪಹಲ್ಗಾಮ್ ಅಟ್ಯಾಕ್ ನಲ್ಲಿ ಪ್ರಾಣ ಬಿಟ್ಟಿದ್ದ ಭರತ್ ನೆನೆದು ಪೋಷಕರು ಕಣ್ಣೀರು
ಪಹಲ್ಗಾಮ್ ಅಟ್ಯಾಕ್ ನಲ್ಲಿ ಪ್ರಾಣ ಬಿಟ್ಟಿದ್ದ ಭರತ್ ನೆನೆದು ಪೋಷಕರು ಕಣ್ಣೀರು
ವರುಣ್ ಧವನ್ ಜೊತೆಗೆ ಕುಣಿದು-ಕುಪ್ಪಳಿಸಿದ ಮೃಣಾಲ್ ಠಾಕೂರ್: ವಿಡಿಯೋ
ವರುಣ್ ಧವನ್ ಜೊತೆಗೆ ಕುಣಿದು-ಕುಪ್ಪಳಿಸಿದ ಮೃಣಾಲ್ ಠಾಕೂರ್: ವಿಡಿಯೋ
ಎರಡು ಭಿನ್ನ ಆರ್ಕೆಸ್ಟ್ರಾ, ‘ರಾಮಾಯಣ’ಕ್ಕಾಗಿ ರೆಹಮಾನ್ ಸಾಹಸ ನೋಡಿ
ಎರಡು ಭಿನ್ನ ಆರ್ಕೆಸ್ಟ್ರಾ, ‘ರಾಮಾಯಣ’ಕ್ಕಾಗಿ ರೆಹಮಾನ್ ಸಾಹಸ ನೋಡಿ
ಶಾಸಕ ಎನ್.ಎ. ಹ್ಯಾರಿಸ್ ನಿವಾಸದಲ್ಲಿ 37 ಲಕ್ಷ ನಗದು ಪತ್ತೆ!
ಶಾಸಕ ಎನ್.ಎ. ಹ್ಯಾರಿಸ್ ನಿವಾಸದಲ್ಲಿ 37 ಲಕ್ಷ ನಗದು ಪತ್ತೆ!