AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Randeep Hooda: ಮಾಯಾವತಿ ಬಗ್ಗೆ ಕೀಳು ಜೋಕ್​; ‘ರಾಧೆ’ ನಟ ರಣದೀಪ್​ ಹೂಡಾಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಛೀಮಾರಿ

ಇತ್ತೀಚೆಗೆ ತೆರೆಕಂಡ ಸಲ್ಮಾನ್​ ಖಾನ್​ ನಾಯಕತ್ವದ ರಾಧೆ ಸಿನಿಮಾದಲ್ಲಿ ರಣದೀಪ್​ ಹೂಡ ಅವರು ಖಳನಾಯಕನಾಗಿ ನಟಿಸಿದ್ದಾರೆ. ವಿವಾದದ ಕಾರಣದಿಂದ ಅವರು ರಿಯಲ್​ ಲೈಫ್​ನಲ್ಲಿಯೂ ಬ್ಯಾಡ್​ ಬಾಯ್​ ಆಗಿದ್ದಾರೆ.

Randeep Hooda: ಮಾಯಾವತಿ ಬಗ್ಗೆ ಕೀಳು ಜೋಕ್​; ‘ರಾಧೆ’ ನಟ ರಣದೀಪ್​ ಹೂಡಾಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಛೀಮಾರಿ
ರಣದೀಪ್​ ಹೂಡಾ - ಮಾಯಾಮತಿ
ಮದನ್​ ಕುಮಾರ್​
| Edited By: |

Updated on: May 29, 2021 | 3:39 PM

Share

ಸೆಲೆಬ್ರಿಟಿಗಳು ಸಾರ್ವಜನಿಕವಾಗಿ ಮಾತನಾಡುವಾಗ ತುಂಬಾ ಹುಷಾರಾಗಿ ಇರಬೇಕು. ಎಷ್ಟೇ ಒಳ್ಳೆಯ ಸಿನಿಮಾ ಮಾಡಿದ್ದರೂ ಕೂಡ ಅವರು ನಿಜಜೀವನದಲ್ಲಿ ಹೇಗೆ ನಡೆದುಕೊಳ್ಳುತ್ತಾರೆ ಎಂಬುದರ ಮೇಲೆ ಅವರಿಗೆ ಸಿಗುವ ಗೌರವದ ಪ್ರಮಾಣ ನಿರ್ಧಾರ ಆಗಿರುತ್ತದೆ. ಇಷ್ಟು ದಿನ ಪ್ರೇಕ್ಷಕರಿಂದ ಭೇಷ್​ ಎನಿಸಿಕೊಳ್ಳುತ್ತಿದ್ದ ಬಾಲಿವುಡ್​ ನಟ ರಣದೀಪ್​ ಹೂಡಾ ಅವರು ಈಗ ಎಲ್ಲರಿಂದಲೂ ಛೀಮಾರಿ ಹಾಕಿಸಿಕೊಳ್ಳುತ್ತಿದ್ದಾರೆ. ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ ಮಾಯಾವತಿ ಬಗ್ಗೆ ಅವರು ಹೇಳಿದ ಒಂದು ಕೀಳುಮಟ್ಟದ ಜೋಕ್​ನ ಕಾರಣದಿಂದಾಗಿ ವಿವಾದ ಭುಗಿಲೆದ್ದಿದೆ. ಭಾರತದಲ್ಲಿ ಮಾತ್ರವಲ್ಲದೇ ಅಂತಾರಾಷ್ಟ್ರೀಯ ಮಟ್ಟದಲ್ಲಿ ರಣದೀಪ್​ ಹೂಡಾ ಅವರಿಗೆ ಮುಖಭಂಗ ಆಗಿದೆ.

ರಣದೀಪ್​ ಹೂಡಾ ಅವರು ತಮ್ಮ ಜನಪ್ರಿಯತೆಯ ಕಾರಣದಿಂದ ವಿಶ್ವಸಂಸ್ಥೆಯ ವನ್ಯಜೀವಿಗಳ ಸಂರಕ್ಷಣೆಯ ಕಾರ್ಯಕ್ರಮಗಳಿಗೆ ರಾಯಭಾರಿ ಆಗಿದ್ದರು. ಆದರೆ ಈಗ ಅವರು ಮಾಯಾವತಿ ಬಗ್ಗೆ ಹೇಳಿದ ಕೆಟ್ಟ ಜೋಕ್​ನ ಪರಿಣಾಮ ಎಲ್ಲೆಡೆ ಅವರಿಗೆ ವಿರೋಧ ವ್ಯಕ್ತವಾಗಿರುವುರಿಂದ ಅವರನ್ನು ರಾಯಭಾರಿ ಸ್ಥಾನದಿಂದ ಕೆಳಗಿಳಿಸಲಾಗಿದೆ. ಆ ಮೂಲಕ ಅವರು ಅಂತಾರಾಷ್ಟ್ರೀಯ ಮಟ್ಟದಲ್ಲಿ ಹಿನ್ನೆಡೆ ಅನುಭವಿಸುವಂತಾಗಿದೆ. ಇತ್ತೀಚೆಗೆ ತೆರೆಕಂಡ ಸಲ್ಮಾನ್​ ಖಾನ್​ ನಾಯಕತ್ವದ ರಾಧೆ ಸಿನಿಮಾದಲ್ಲಿ ರಣದೀಪ್​ ಹೂಡ ಅವರು ಖಳನಾಯಕನಾಗಿ ನಟಿಸಿದ್ದಾರೆ. ವಿವಾದದ ಕಾರಣದಿಂದ ಅವರು ರಿಯಲ್​ ಲೈಫ್​ನಲ್ಲಿಯೂ ಬ್ಯಾಡ್​ ಬಾಯ್​ ಆಗಿದ್ದಾರೆ.

ಮಾಯಾವತಿ ಬಗ್ಗೆ ರಣದೀಪ್​ ಹೂಡಾ ಕೆಟ್ಟ ಜೋಕ್​ ಹೇಳಿರುವುದು ಇತ್ತೀಚೆಗಲ್ಲ. ಹಲವು ವರ್ಷಗಳ ಹಿಂದೆಯೇ ಖಾಸಗಿ ಟಿವಿ ವಾಹಿನಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ರಣದೀಪ್​ ಹೂಡಾ ಭಾಗವಹಿಸಿದ್ದರು. ಆ ಸಂದರ್ಭದಲ್ಲಿ ಅವರು ಮಾಯಾವತಿ ಕುರಿತಂತೆ ಕೆಟ್ಟದಾಗಿ ಜೋಕ್​ ಮಾಡಿದ್ದರು. ಆ ವಿಡಿಯೋವನ್ನು ನೆಟ್ಟಿಗರೊಬ್ಬರು ಕೆಲವೇ ದಿನಗಳ ಹಿಂದೆ ಟ್ವಿಟರ್​ನಲ್ಲಿ ಶೇರ್​ ಮಾಡಿಕೊಂಡು ರಣದೀಪ್​ಗೆ ಛೀಮಾರಿ ಹಾಕಿದ್ದಾರೆ. ಬಳಿಕ ಅದು ಎಲ್ಲೆಡೆ ವೈರಲ್​ ಆಯಿತು. ರಣದೀಪ್​ ಕ್ಷಮೆ ಕೇಳಬೇಕು ಎಂದು ಒತ್ತಾಯಿಸಲಾಗುತ್ತಿದೆ.

‘ಒಬ್ಬ ಮಹಿಳೆ ಮೇಲೆ ನೀವು ಇಂಥ ಕೆಟ್ಟ ಮಾತುಗಳನ್ನು ಆಡುತ್ತೀರಿ ಎನ್ನುವುದಾದರೆ ನಿಮ್ಮ ಮನಸ್ಸಲ್ಲಿ ಎಷ್ಟು ಕೆಟ್ಟತನ ಇದೆ ಎಂಬುದು ಗೊತ್ತಾಗುತ್ತದೆ. ಇದನ್ನು ಸಹಿಸಲು ಸಾಧ್ಯವಿಲ್ಲ’ ಎಂದು ವಿಡಿಯೋ ನೋಡಿದ ಅನೇಕರು ರಣದೀಪ್​ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.

ಇದನ್ನೂ ಓದಿ:

ಯುಪಿ ಮಾಜಿ ಸಿಎಂ ಮಾಯಾವತಿ ಬಗ್ಗೆ ಕೀಳು ಜೋಕ್​ ಹೇಳಿ ಟ್ರೋಲ್​ ಆಗುತ್ತಿರುವ ‘ರಾಧೆ’ ನಟ ರಣದೀಪ್​ ಹೂಡಾ

ರಾಧೆ ಸಿನಿಮಾ ಕಳಪೆ ಎಂದ ನಟನ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ ಸಲ್ಮಾನ್​ ಖಾನ್​

Follow Us
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!