AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

74ರ ಪ್ರಾಯದ ರಣಧೀರ್​ ಕಪೂರ್​ಗೆ ಕೊವಿಡ್​; ಕರೀನಾ ಕುಟುಂಬದಲ್ಲಿ ಹೆಚ್ಚಿದ ಆತಂಕ

ರಣಧೀರ್​ ಕಪೂರ್​​ ಅವರ ವಯಸ್ಸಿನ ಕಾರಣದಿಂದ ಕುಟುಂಬಸ್ಥರಲ್ಲಿ ಆತಂಕ ಮನೆ ಮಾಡುವಂತಾಗಿದೆ. ಈಗ ರಣಧೀರ್​ಗೆ 74 ವರ್ಷ ವಯಸ್ಸು. ಇದು ಅವರ ಅಭಿಮಾನಿಗಳನ್ನೂ ಚಿಂತೆಗೆ ಈಡುಮಾಡಿದೆ.

74ರ ಪ್ರಾಯದ ರಣಧೀರ್​ ಕಪೂರ್​ಗೆ ಕೊವಿಡ್​; ಕರೀನಾ ಕುಟುಂಬದಲ್ಲಿ ಹೆಚ್ಚಿದ ಆತಂಕ
ರಣಧೀರ್​ ಕಪೂರ್​
ಮದನ್​ ಕುಮಾರ್​
|

Updated on: Apr 30, 2021 | 8:11 AM

Share

ಬಾಲಿವುಡ್​ನ ಹಿರಿಯ ನಟ ರಣಧೀರ್​ ಕಪೂರ್​ ಅವರಿಗೆ ಕೊರೊನಾ ವೈರಸ್​ ತಗುಲಿರುವುದು ದೃಢಪಟ್ಟಿದೆ. ಅವರನ್ನು ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹಿಂದಿ ಚಿತ್ರರಂಗದ ಖ್ಯಾತ ನಟಿಯರಾದ ಕರೀನಾ ಕಪೂರ್​ ಮತ್ತು ಕರೀಷ್ಮಾ ಕಪೂರ್​ ಅವರ ತಂದೆ ರಣಧೀರ್​ ಕಪೂರ್​. ಅವರು ಬೇಗ ಗುಣಮುಖರಾಗಲಿ ಎಂದು ಎಲ್ಲರೂ ಪ್ರಾರ್ಥಿಸುತ್ತಿದ್ದಾರೆ. ಮುಂಬೈನಲ್ಲಿ ಕೊರೊನಾ ಹಾವಳಿ ಮಿತಿಮೀರುತ್ತಿರುವುದರಿಂದ ಸಹಜವಾಗಿಯೇ ಎಲ್ಲೆಡೆ ಆತಂಕದ ವಾತಾವರಣ ನಿರ್ಮಾಣ ಆಗಿದೆ.

ರಣಧೀರ್​ ಕಪೂರ್​ ಅವರನ್ನು ಗುರುವಾರ (ಏ.30) ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅವರ ಆರೋಗ್ಯ ಸ್ಥಿರವಾಗಿದೆ. ಹೆದರುವ ಅವಶ್ಯಕತೆ ಇಲ್ಲ ಎಂದು ವೈದ್ಯರು ಹೇಳಿದ್ದಾರೆ. ಆದರೆ ರಣಧೀರ್​ ಅವರ ವಯಸ್ಸಿನ ಕಾರಣದಿಂದ ಕುಟುಂಬಸ್ಥರಲ್ಲಿ ಆತಂಕ ಮನೆ ಮಾಡುವಂತಾಗಿದೆ. ಈಗ ರಣಧೀರ್​ಗೆ 74 ವರ್ಷ ವಯಸ್ಸು. ಇದು ಅವರ ಅಭಿಮಾನಿಗಳನ್ನೂ ಚಿಂತೆಗೆ ಈಡುಮಾಡಿದೆ.

ರಣಧೀರ್​ ಈಗಾಗಲೇ ಎರಡು ಬಾರಿ ವ್ಯಾಕ್ಸಿನ್​ ಪಡೆದುಕೊಂಡಿದ್ದಾರೆ. ಹಾಗಿದ್ದರೂ ಅವರಿಗೆ ಕೊರೊನಾ ಪಾಸಿಟಿವ್​ ಆಗಿರುವುದಕ್ಕೆ ಸ್ವತಃ ಅವರು ಅಚ್ಚರಿ ವ್ಯಕ್ತಪಡಿಸಿದ್ದಾರೆ. ‘ನನಗೆ ಹೇಗೆ ಕೊರೊನಾ ಬಂತು ಅಂತ ತಿಳಿಯುತ್ತಿಲ್ಲ. ನನ್ನ ಜೊತೆ ಇದ್ದ ಐವರು ಸಿಬ್ಬಂದಿಗೂ ಪಾಸಿಟಿವ್​ ಆಗಿದೆ. ಅವರು ಕೂಡ ನನ್ನೊಂದಿಗೆ ಆಸ್ಪತ್ರೆಗೆ ದಾಖಲಾಗಿದ್ದಾರೆ’ ಎಂದು ಮಾಧ್ಯಮವೊಂದಕ್ಕೆ ರಣಧೀರ್​ ಕಪೂರ್​ ಪ್ರತಿಕ್ರಿಯೆ ನೀಡಿದ್ದಾರೆ.

ಬಾಲಿವುಡ್​ನ ಲೆಜೆಂಡರಿ ನಟ ರಾಜ್ ಕಪೂರ್​ ಅವರ ಮೊದಲ ಪುತ್ರ ರಣಧೀರ್​ ಕಪೂರ್​. ಕಳೆದ ಒಂದು ವರ್ಷದಿಂದ ಕಪೂರ್​ ಕುಟುಂಬಕ್ಕೆ ಒಂದರ ಹಿಂದೊಂದು ಕಹಿ ಸುದ್ದಿ ಕೇಳಿಬರುತ್ತಲೇ ಇದೆ. ಕಳೆದ ವರ್ಷ ರಣಧೀರ್​ ಅವರ ಸಹೋದರ, ಖ್ಯಾತ ನಟ ರಿಷಿ ಕಪೂರ್​ ನಿಧನರಾದರು. ಆ ನೋವು ಮರೆಯುವ ಮುನ್ನವೇ 2021ರ ಫೆಬ್ರವರಿಯಲ್ಲಿ ಮತ್ತೋರ್ವ ಸಹೋದರ ರಾಜೀವ್​ ಕಪೂರ್​ ಅವರು ಹೃದಯಾಘಾತದಿಂದ ಮೃತಪಟ್ಟರು.

ಇದನ್ನೂ ಓದಿ: Ramu Death: ನಿಧನಕ್ಕೂ ಮುನ್ನ ಫೋನ್​ನಲ್ಲಿ ಕೊವಿಡ್​ ಕಷ್ಟ ವಿವರಿಸಿದ್ದ ಕೋಟಿ ರಾಮು

Ramu Kanagal: ಪುಟ್ಟಣ್ಣ ಕಣಗಾಲ್ ಪುತ್ರ ರಾಮು ಕಣಗಾಲ್ ಕೊರೊನಾದಿಂದ ನಿಧನ

Follow Us
ಮಹಿಳಾ ಮೀಸಲಾತಿಗೆ ಬಹುಮತ ಸಿಗದಿದ್ದಕ್ಕೆ ಸಂಸತ್​​ನಲ್ಲಿ ಎನ್​ಡಿಎ ಪ್ರತಿಭಟನೆ
ಮಹಿಳಾ ಮೀಸಲಾತಿಗೆ ಬಹುಮತ ಸಿಗದಿದ್ದಕ್ಕೆ ಸಂಸತ್​​ನಲ್ಲಿ ಎನ್​ಡಿಎ ಪ್ರತಿಭಟನೆ
ರಾಹುಲ್ ಗಾಂಧಿ ವಿಪಕ್ಷ ನಾಯಕನಾಗಲು ಯೋಗ್ಯರಲ್ಲ; ಚಿರಾಗ್ ಪಾಸ್ವಾನ್ ಟೀಕೆ
ರಾಹುಲ್ ಗಾಂಧಿ ವಿಪಕ್ಷ ನಾಯಕನಾಗಲು ಯೋಗ್ಯರಲ್ಲ; ಚಿರಾಗ್ ಪಾಸ್ವಾನ್ ಟೀಕೆ
ವಿನಯ್ ಕುಲಕರ್ಣಿ ಸೇರಿ 16 ಮಂದಿಗೆ ಜೀವಾವಧಿ ಶಿಕ್ಷೆ: ಲಾಯರ್ ಹೇಳಿದ್ದಿಷ್ಟು
ವಿನಯ್ ಕುಲಕರ್ಣಿ ಸೇರಿ 16 ಮಂದಿಗೆ ಜೀವಾವಧಿ ಶಿಕ್ಷೆ: ಲಾಯರ್ ಹೇಳಿದ್ದಿಷ್ಟು
ಶಿಕ್ಷೆ ಪ್ರಕಟವಾಗುತ್ತಿದ್ದಂತೆಯೇ ಸ್ಫೋಟಕ ವಿಚಾರ ಬಿಚ್ಚಿಟ್ಟ ಹೋರಾಟಗಾರ
ಶಿಕ್ಷೆ ಪ್ರಕಟವಾಗುತ್ತಿದ್ದಂತೆಯೇ ಸ್ಫೋಟಕ ವಿಚಾರ ಬಿಚ್ಚಿಟ್ಟ ಹೋರಾಟಗಾರ
ದರ್ಶನ್ ಅಂದು ಆ ಮಾತು ಹೇಳಲು ಬಿಡಲಿಲ್ಲ: ಮಾಜಿ ಮ್ಯಾನೇಜರ್
ದರ್ಶನ್ ಅಂದು ಆ ಮಾತು ಹೇಳಲು ಬಿಡಲಿಲ್ಲ: ಮಾಜಿ ಮ್ಯಾನೇಜರ್
ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ: ನನ್ನ ಮಾತು ಸತ್ಯವಾಗಿದೆ ಎಂದ BSY
ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ: ನನ್ನ ಮಾತು ಸತ್ಯವಾಗಿದೆ ಎಂದ BSY
ರಾಹುಲ್ ಗಾಂಧಿಯ ಭಾಷಣವೇ ದೊಡ್ಡ ತಲೆನೋವು; ಕಂಗನಾ ರಣಾವತ್ ಟೀಕೆ
ರಾಹುಲ್ ಗಾಂಧಿಯ ಭಾಷಣವೇ ದೊಡ್ಡ ತಲೆನೋವು; ಕಂಗನಾ ರಣಾವತ್ ಟೀಕೆ
ಜಮಖಂಡಿ ಕಾರಾಗೃಹಕ್ಕೆ ಎಡಿಜಿಪಿ ಭೇಟಿ: ಏನೇನೆಲ್ಲ ಪರಿಶೀಲಿಸಿದ್ರು ನೋಡಿ
ಜಮಖಂಡಿ ಕಾರಾಗೃಹಕ್ಕೆ ಎಡಿಜಿಪಿ ಭೇಟಿ: ಏನೇನೆಲ್ಲ ಪರಿಶೀಲಿಸಿದ್ರು ನೋಡಿ
ಗಾಜಿಯಾಬಾದ್‌ನಲ್ಲಿ ಗುಡಿಸಲುಗಳು ಬೆಂಕಿಗಾಹುತಿ; ಪೆಟಾದಿಂದ ಪ್ರಾಣಿಗಳ ರಕ್ಷಣೆ
ಗಾಜಿಯಾಬಾದ್‌ನಲ್ಲಿ ಗುಡಿಸಲುಗಳು ಬೆಂಕಿಗಾಹುತಿ; ಪೆಟಾದಿಂದ ಪ್ರಾಣಿಗಳ ರಕ್ಷಣೆ
ಮೈಮೇಲೆ ಸೊಳ್ಳೆ ಪರದೆ ಹಾಕಿಕೊಂಡು ನೈಟ್ ಡ್ಯೂಟಿ ಮಾಡಿದ ಸೆಕ್ಯೂರಿಟಿ ಗಾರ್ಡ್
ಮೈಮೇಲೆ ಸೊಳ್ಳೆ ಪರದೆ ಹಾಕಿಕೊಂಡು ನೈಟ್ ಡ್ಯೂಟಿ ಮಾಡಿದ ಸೆಕ್ಯೂರಿಟಿ ಗಾರ್ಡ್