AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

74ರ ಪ್ರಾಯದ ರಣಧೀರ್​ ಕಪೂರ್​ಗೆ ಕೊವಿಡ್​; ಕರೀನಾ ಕುಟುಂಬದಲ್ಲಿ ಹೆಚ್ಚಿದ ಆತಂಕ

ರಣಧೀರ್​ ಕಪೂರ್​​ ಅವರ ವಯಸ್ಸಿನ ಕಾರಣದಿಂದ ಕುಟುಂಬಸ್ಥರಲ್ಲಿ ಆತಂಕ ಮನೆ ಮಾಡುವಂತಾಗಿದೆ. ಈಗ ರಣಧೀರ್​ಗೆ 74 ವರ್ಷ ವಯಸ್ಸು. ಇದು ಅವರ ಅಭಿಮಾನಿಗಳನ್ನೂ ಚಿಂತೆಗೆ ಈಡುಮಾಡಿದೆ.

74ರ ಪ್ರಾಯದ ರಣಧೀರ್​ ಕಪೂರ್​ಗೆ ಕೊವಿಡ್​; ಕರೀನಾ ಕುಟುಂಬದಲ್ಲಿ ಹೆಚ್ಚಿದ ಆತಂಕ
ರಣಧೀರ್​ ಕಪೂರ್​
ಮದನ್​ ಕುಮಾರ್​
|

Updated on: Apr 30, 2021 | 8:11 AM

Share

ಬಾಲಿವುಡ್​ನ ಹಿರಿಯ ನಟ ರಣಧೀರ್​ ಕಪೂರ್​ ಅವರಿಗೆ ಕೊರೊನಾ ವೈರಸ್​ ತಗುಲಿರುವುದು ದೃಢಪಟ್ಟಿದೆ. ಅವರನ್ನು ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹಿಂದಿ ಚಿತ್ರರಂಗದ ಖ್ಯಾತ ನಟಿಯರಾದ ಕರೀನಾ ಕಪೂರ್​ ಮತ್ತು ಕರೀಷ್ಮಾ ಕಪೂರ್​ ಅವರ ತಂದೆ ರಣಧೀರ್​ ಕಪೂರ್​. ಅವರು ಬೇಗ ಗುಣಮುಖರಾಗಲಿ ಎಂದು ಎಲ್ಲರೂ ಪ್ರಾರ್ಥಿಸುತ್ತಿದ್ದಾರೆ. ಮುಂಬೈನಲ್ಲಿ ಕೊರೊನಾ ಹಾವಳಿ ಮಿತಿಮೀರುತ್ತಿರುವುದರಿಂದ ಸಹಜವಾಗಿಯೇ ಎಲ್ಲೆಡೆ ಆತಂಕದ ವಾತಾವರಣ ನಿರ್ಮಾಣ ಆಗಿದೆ.

ರಣಧೀರ್​ ಕಪೂರ್​ ಅವರನ್ನು ಗುರುವಾರ (ಏ.30) ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅವರ ಆರೋಗ್ಯ ಸ್ಥಿರವಾಗಿದೆ. ಹೆದರುವ ಅವಶ್ಯಕತೆ ಇಲ್ಲ ಎಂದು ವೈದ್ಯರು ಹೇಳಿದ್ದಾರೆ. ಆದರೆ ರಣಧೀರ್​ ಅವರ ವಯಸ್ಸಿನ ಕಾರಣದಿಂದ ಕುಟುಂಬಸ್ಥರಲ್ಲಿ ಆತಂಕ ಮನೆ ಮಾಡುವಂತಾಗಿದೆ. ಈಗ ರಣಧೀರ್​ಗೆ 74 ವರ್ಷ ವಯಸ್ಸು. ಇದು ಅವರ ಅಭಿಮಾನಿಗಳನ್ನೂ ಚಿಂತೆಗೆ ಈಡುಮಾಡಿದೆ.

ರಣಧೀರ್​ ಈಗಾಗಲೇ ಎರಡು ಬಾರಿ ವ್ಯಾಕ್ಸಿನ್​ ಪಡೆದುಕೊಂಡಿದ್ದಾರೆ. ಹಾಗಿದ್ದರೂ ಅವರಿಗೆ ಕೊರೊನಾ ಪಾಸಿಟಿವ್​ ಆಗಿರುವುದಕ್ಕೆ ಸ್ವತಃ ಅವರು ಅಚ್ಚರಿ ವ್ಯಕ್ತಪಡಿಸಿದ್ದಾರೆ. ‘ನನಗೆ ಹೇಗೆ ಕೊರೊನಾ ಬಂತು ಅಂತ ತಿಳಿಯುತ್ತಿಲ್ಲ. ನನ್ನ ಜೊತೆ ಇದ್ದ ಐವರು ಸಿಬ್ಬಂದಿಗೂ ಪಾಸಿಟಿವ್​ ಆಗಿದೆ. ಅವರು ಕೂಡ ನನ್ನೊಂದಿಗೆ ಆಸ್ಪತ್ರೆಗೆ ದಾಖಲಾಗಿದ್ದಾರೆ’ ಎಂದು ಮಾಧ್ಯಮವೊಂದಕ್ಕೆ ರಣಧೀರ್​ ಕಪೂರ್​ ಪ್ರತಿಕ್ರಿಯೆ ನೀಡಿದ್ದಾರೆ.

ಬಾಲಿವುಡ್​ನ ಲೆಜೆಂಡರಿ ನಟ ರಾಜ್ ಕಪೂರ್​ ಅವರ ಮೊದಲ ಪುತ್ರ ರಣಧೀರ್​ ಕಪೂರ್​. ಕಳೆದ ಒಂದು ವರ್ಷದಿಂದ ಕಪೂರ್​ ಕುಟುಂಬಕ್ಕೆ ಒಂದರ ಹಿಂದೊಂದು ಕಹಿ ಸುದ್ದಿ ಕೇಳಿಬರುತ್ತಲೇ ಇದೆ. ಕಳೆದ ವರ್ಷ ರಣಧೀರ್​ ಅವರ ಸಹೋದರ, ಖ್ಯಾತ ನಟ ರಿಷಿ ಕಪೂರ್​ ನಿಧನರಾದರು. ಆ ನೋವು ಮರೆಯುವ ಮುನ್ನವೇ 2021ರ ಫೆಬ್ರವರಿಯಲ್ಲಿ ಮತ್ತೋರ್ವ ಸಹೋದರ ರಾಜೀವ್​ ಕಪೂರ್​ ಅವರು ಹೃದಯಾಘಾತದಿಂದ ಮೃತಪಟ್ಟರು.

ಇದನ್ನೂ ಓದಿ: Ramu Death: ನಿಧನಕ್ಕೂ ಮುನ್ನ ಫೋನ್​ನಲ್ಲಿ ಕೊವಿಡ್​ ಕಷ್ಟ ವಿವರಿಸಿದ್ದ ಕೋಟಿ ರಾಮು

Ramu Kanagal: ಪುಟ್ಟಣ್ಣ ಕಣಗಾಲ್ ಪುತ್ರ ರಾಮು ಕಣಗಾಲ್ ಕೊರೊನಾದಿಂದ ನಿಧನ

ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ
ಚಲಿಸುತ್ತಿರುವ ರೈಲಿಂದ ಬಿದ್ದ ಮಹಿಳೆಯನ್ನು ದೇವರಂತೆ ಬಂದು ಕಾಪಾಡಿದ ಟಿಸಿ
ಚಲಿಸುತ್ತಿರುವ ರೈಲಿಂದ ಬಿದ್ದ ಮಹಿಳೆಯನ್ನು ದೇವರಂತೆ ಬಂದು ಕಾಪಾಡಿದ ಟಿಸಿ