AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

74ರ ಪ್ರಾಯದ ರಣಧೀರ್​ ಕಪೂರ್​ಗೆ ಕೊವಿಡ್​; ಕರೀನಾ ಕುಟುಂಬದಲ್ಲಿ ಹೆಚ್ಚಿದ ಆತಂಕ

ರಣಧೀರ್​ ಕಪೂರ್​​ ಅವರ ವಯಸ್ಸಿನ ಕಾರಣದಿಂದ ಕುಟುಂಬಸ್ಥರಲ್ಲಿ ಆತಂಕ ಮನೆ ಮಾಡುವಂತಾಗಿದೆ. ಈಗ ರಣಧೀರ್​ಗೆ 74 ವರ್ಷ ವಯಸ್ಸು. ಇದು ಅವರ ಅಭಿಮಾನಿಗಳನ್ನೂ ಚಿಂತೆಗೆ ಈಡುಮಾಡಿದೆ.

74ರ ಪ್ರಾಯದ ರಣಧೀರ್​ ಕಪೂರ್​ಗೆ ಕೊವಿಡ್​; ಕರೀನಾ ಕುಟುಂಬದಲ್ಲಿ ಹೆಚ್ಚಿದ ಆತಂಕ
ರಣಧೀರ್​ ಕಪೂರ್​
ಮದನ್​ ಕುಮಾರ್​
|

Updated on: Apr 30, 2021 | 8:11 AM

Share

ಬಾಲಿವುಡ್​ನ ಹಿರಿಯ ನಟ ರಣಧೀರ್​ ಕಪೂರ್​ ಅವರಿಗೆ ಕೊರೊನಾ ವೈರಸ್​ ತಗುಲಿರುವುದು ದೃಢಪಟ್ಟಿದೆ. ಅವರನ್ನು ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹಿಂದಿ ಚಿತ್ರರಂಗದ ಖ್ಯಾತ ನಟಿಯರಾದ ಕರೀನಾ ಕಪೂರ್​ ಮತ್ತು ಕರೀಷ್ಮಾ ಕಪೂರ್​ ಅವರ ತಂದೆ ರಣಧೀರ್​ ಕಪೂರ್​. ಅವರು ಬೇಗ ಗುಣಮುಖರಾಗಲಿ ಎಂದು ಎಲ್ಲರೂ ಪ್ರಾರ್ಥಿಸುತ್ತಿದ್ದಾರೆ. ಮುಂಬೈನಲ್ಲಿ ಕೊರೊನಾ ಹಾವಳಿ ಮಿತಿಮೀರುತ್ತಿರುವುದರಿಂದ ಸಹಜವಾಗಿಯೇ ಎಲ್ಲೆಡೆ ಆತಂಕದ ವಾತಾವರಣ ನಿರ್ಮಾಣ ಆಗಿದೆ.

ರಣಧೀರ್​ ಕಪೂರ್​ ಅವರನ್ನು ಗುರುವಾರ (ಏ.30) ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅವರ ಆರೋಗ್ಯ ಸ್ಥಿರವಾಗಿದೆ. ಹೆದರುವ ಅವಶ್ಯಕತೆ ಇಲ್ಲ ಎಂದು ವೈದ್ಯರು ಹೇಳಿದ್ದಾರೆ. ಆದರೆ ರಣಧೀರ್​ ಅವರ ವಯಸ್ಸಿನ ಕಾರಣದಿಂದ ಕುಟುಂಬಸ್ಥರಲ್ಲಿ ಆತಂಕ ಮನೆ ಮಾಡುವಂತಾಗಿದೆ. ಈಗ ರಣಧೀರ್​ಗೆ 74 ವರ್ಷ ವಯಸ್ಸು. ಇದು ಅವರ ಅಭಿಮಾನಿಗಳನ್ನೂ ಚಿಂತೆಗೆ ಈಡುಮಾಡಿದೆ.

ರಣಧೀರ್​ ಈಗಾಗಲೇ ಎರಡು ಬಾರಿ ವ್ಯಾಕ್ಸಿನ್​ ಪಡೆದುಕೊಂಡಿದ್ದಾರೆ. ಹಾಗಿದ್ದರೂ ಅವರಿಗೆ ಕೊರೊನಾ ಪಾಸಿಟಿವ್​ ಆಗಿರುವುದಕ್ಕೆ ಸ್ವತಃ ಅವರು ಅಚ್ಚರಿ ವ್ಯಕ್ತಪಡಿಸಿದ್ದಾರೆ. ‘ನನಗೆ ಹೇಗೆ ಕೊರೊನಾ ಬಂತು ಅಂತ ತಿಳಿಯುತ್ತಿಲ್ಲ. ನನ್ನ ಜೊತೆ ಇದ್ದ ಐವರು ಸಿಬ್ಬಂದಿಗೂ ಪಾಸಿಟಿವ್​ ಆಗಿದೆ. ಅವರು ಕೂಡ ನನ್ನೊಂದಿಗೆ ಆಸ್ಪತ್ರೆಗೆ ದಾಖಲಾಗಿದ್ದಾರೆ’ ಎಂದು ಮಾಧ್ಯಮವೊಂದಕ್ಕೆ ರಣಧೀರ್​ ಕಪೂರ್​ ಪ್ರತಿಕ್ರಿಯೆ ನೀಡಿದ್ದಾರೆ.

ಬಾಲಿವುಡ್​ನ ಲೆಜೆಂಡರಿ ನಟ ರಾಜ್ ಕಪೂರ್​ ಅವರ ಮೊದಲ ಪುತ್ರ ರಣಧೀರ್​ ಕಪೂರ್​. ಕಳೆದ ಒಂದು ವರ್ಷದಿಂದ ಕಪೂರ್​ ಕುಟುಂಬಕ್ಕೆ ಒಂದರ ಹಿಂದೊಂದು ಕಹಿ ಸುದ್ದಿ ಕೇಳಿಬರುತ್ತಲೇ ಇದೆ. ಕಳೆದ ವರ್ಷ ರಣಧೀರ್​ ಅವರ ಸಹೋದರ, ಖ್ಯಾತ ನಟ ರಿಷಿ ಕಪೂರ್​ ನಿಧನರಾದರು. ಆ ನೋವು ಮರೆಯುವ ಮುನ್ನವೇ 2021ರ ಫೆಬ್ರವರಿಯಲ್ಲಿ ಮತ್ತೋರ್ವ ಸಹೋದರ ರಾಜೀವ್​ ಕಪೂರ್​ ಅವರು ಹೃದಯಾಘಾತದಿಂದ ಮೃತಪಟ್ಟರು.

ಇದನ್ನೂ ಓದಿ: Ramu Death: ನಿಧನಕ್ಕೂ ಮುನ್ನ ಫೋನ್​ನಲ್ಲಿ ಕೊವಿಡ್​ ಕಷ್ಟ ವಿವರಿಸಿದ್ದ ಕೋಟಿ ರಾಮು

Ramu Kanagal: ಪುಟ್ಟಣ್ಣ ಕಣಗಾಲ್ ಪುತ್ರ ರಾಮು ಕಣಗಾಲ್ ಕೊರೊನಾದಿಂದ ನಿಧನ

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು