AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪೋಷಕರು ಕಬ್ಬಡಿ ಆಡೋದು ನೋಡಿ ಮಕ್ಕಳು ಮಲಗ್ತಾರೆ’; ರಣವೀರ್ ಬಳಿಕ ಇಕ್ಕಟಿಗೆ ಸಿಲುಕಿದ ಕಪಿಲ್ ಶರ್ಮಾ

ರಣವೀರ್ ಅಲಾಹಾಬಾದಿಯಾ ಅವರ ಇತ್ತೀಚಿನ ವಿವಾದಾತ್ಮಕ ಹೇಳಿಕೆ ದೇಶಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿದೆ. ಕಪಿಲ್ ಶರ್ಮಾ ಅವರ ಹಿಂದಿನ ಹೋಲುವ ಹೇಳಿಕೆಯೂ ಚರ್ಚೆ ಹುಟ್ಟುಹಾಕಿದೆ. ಇದಕ್ಕೆ ಸೋಶಿಯಲ್ ಮೀಡಿಯಾದಲ್ಲಿ ಟೀಕೆಗಳು ವ್ಯಕ್ತವಾಗಿವೆ. ‘ನೀವು ರಣವೀರ್ ಹಾಗೂ ಸಮಯ್ ರೈನಾ ಬಗ್ಗೆ ಟೀಕೆ ಹೊರ ಹಾಕುತ್ತೀರಿ ಎಂದಾದರೆ ಕಪಿಲ್ ಶರ್ಮಾ ಅವರನ್ನು ಬ್ಯಾನ್ ಮಾಡಿ’ ಎಂದು ಕೆಲವರು ಹೇಳಿದ್ದಾರೆ.

‘ಪೋಷಕರು ಕಬ್ಬಡಿ ಆಡೋದು ನೋಡಿ ಮಕ್ಕಳು ಮಲಗ್ತಾರೆ’; ರಣವೀರ್ ಬಳಿಕ ಇಕ್ಕಟಿಗೆ ಸಿಲುಕಿದ ಕಪಿಲ್ ಶರ್ಮಾ
ಕಪಿಲ್-ರಣವೀರ್
ರಾಜೇಶ್ ದುಗ್ಗುಮನೆ
|

Updated on: Feb 14, 2025 | 7:28 AM

Share

ಇತ್ತೀಚೆಗೆ ರಣವೀರ್ ಅಲಾಹಾಬಾದಿಯಾ ಅವರು ‘ಇಂಡಿಯಾಸ್ ಗಾಟ್ ಲೇಟೆಂಟ್’ ಶೋನಲ್ಲಿ ನೀಡಿದ ಹೇಳಿಕೆಯಿಂದ ಸಾಕಷ್ಟು ಚರ್ಚೆಗೆ ಒಳಗಾದರು. ‘ತಂದೆ ತಾಯಿ ಲೈಂಗಿಕೆ ಕ್ರಿಯೆ ನಡೆಸೋದನ್ನು ನೋಡುತ್ತ ಇರುತ್ತೀರಾ ಅಥವಾ ಒಮ್ಮೆ ಹೋಗಿ ಅದನ್ನು ಸ್ಟಾಪ್ ಮಾಡ್ತೀರಾ’ ಎಂದು ಕೇಳವು ಮೂಲಕ ಸೆನ್ಸೇಷನ್ ಸೃಷ್ಟಿ ಮಾಡಿದ್ದರು. ಈ ಮೊದಲು ಕಪಿಲ್ ಶರ್ಮಾ ಅವರು ಕೂಡ ಇದೇ ರೀತಿಯ ಹೇಳಿಕೆ ನೀಡಿದ್ದರು. ಈ ವಿಚಾರವನ್ನು ಮುನ್ನೆಲೆಗೆ ತಂದು ಟ್ರೋಲ್ ಮಾಡಲಾಗುತ್ತಿದೆ.

ಸೋಶಿಯಲ್ ಮೀಡಿಯಾದಲ್ಲಿ ಕಪಿಲ್ ಶರ್ಮಾ ಅವರ ಹಳೆಯ ವಿಡಿಯೋ ವೈರಲ್ ಮಾಡಲಾಗಿದೆ. ಮುಂಜಾನೆ ಕ್ರಿಕೆಟ್ ಮ್ಯಾಚ್ ಇದ್ದರೆ ಏನಾಗುತ್ತದೆ ಎಂಬುದನ್ನು ಕಪಿಲ್ ಶರ್ಮಾ ಅವರು ವಿವರಿಸಿದ್ದರು. ‘ಬೆಳಿಗ್ಗೆ ನಾಲ್ಕು ಗಂಟೆಗೆ ಕ್ರಿಕೆಟ್ ಮ್ಯಾಚ್ ಶುರು ಆಗುತ್ತದೆ. ಆದರೆ, ಮಕ್ಕಳು ತಂದೆ-ತಾಯಿ ಆಡೋ ಕಬ್ಬಡಿ ಮ್ಯಾಚ್ ನೋಡಿ ಮಲಗುತ್ತಾರೆ’ ಎಂದು ಹೇಳಿದ್ದರು.

ಇದಕ್ಕೆ ಸೋಶಿಯಲ್ ಮೀಡಿಯಾದಲ್ಲಿ ಟೀಕೆಗಳು ವ್ಯಕ್ತವಾಗಿವೆ. ‘ನೀವು ರಣವೀರ್ ಹಾಗೂ ಸಮಯ್ ರೈನಾ ಬಗ್ಗೆ ಟೀಕೆ ಹೊರ ಹಾಕುತ್ತೀರಿ ಎಂದಾದರೆ ಕಪಿಲ್ ಶರ್ಮಾ ಅವರನ್ನು ಬ್ಯಾನ್ ಮಾಡಿ’ ಎಂದು ಕೆಲವರು ಹೇಳಿದ್ದಾರೆ. ಇನ್ನೂ ಕೆಲವರು ಕಪಿಲ್ ಶರ್ಮಾ ಪರ ಬ್ಯಾಟ್ ಬೀಸಿದ್ದಾರೆ.

‘ಇಲ್ಲಿ ಕಬ್ಬಡಿ ಎಂದರೆ ನೀವು ಬೇರೆ ಅರ್ಥವನ್ನು ಏಕೆ ಕಲ್ಪಿಸಿಕೊಳ್ಳುತ್ತೀರಿ? ಅದು ಫೈಟ್ ಕೂಡ ಇರಬಹುದಲ್ಲ. ಇದು ಬ್ಯಾಡ್ ಜೋಕ್ ಅಲ್ಲ’ ಎಂದು ಕೆಲವರು ಹೇಳಿದ್ದಾರೆ. ಇನ್ನೂ ಕೆಲವರು ‘ಈ ರೀತಿಯ ಹಾಸ್ಯಗಳು ಇಷ್ಟ ಆಗದೆ ಇದ್ದರೆ ನೀವು ಇದರಿಂದ ದೂರವೇ ಇರಿ’ ಎಂದು ಕೆಲವರು ಸೂಚನೆ ಕೊಟ್ಟಿದ್ದಾರೆ.

ಇದನ್ನೂ ಓದಿ: ಪೋಷಕರ ಲೈಂಗಿಕತೆ ಬಗ್ಗೆ ಅಶ್ಲೀಲ ಹೇಳಿಕೆ; ಬ್ರೇಕಪ್​ನಲ್ಲಿ ಕೊನೆ ಆಯ್ತು ರಣವೀರ್ ಅಲಾಹಾಬಾದಿಯಾ ಪ್ರೀತಿ?

ರಣವೀರ್ ಅಲಾಹಾಬಾದಿಯಾ ವಿವಾದದ ಬಳಿಕ ಎಆರ್ ರೆಹಮಾನ್, ಬೋನಿ ಕಪೂರ್, ರಾಜ್​ಪಾಲ್ ಯಾದವ್​, ವೀರ್ ದಾಸ್ ಮೊದಲಾದವರು ತಮ್ಮ ಅಭಿಪ್ರಾಯ ನೀಡಿದ್ದಾರೆ. ಬಹುತೇಕ ಎಲ್ಲರೂ ರಣವೀರ್ ಬಗ್ಗೆ ಟೀಕೆ ಹೊರಹಾಕಿದ್ದಾರೆ. ಇದರಿಂದ ರಣವೀರ್ ಸಾಕಷ್ಟು ಹಿನ್ನಡೆ ಅನುಭವಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು